Homeಮುಖಪುಟ14 ಬ್ಯಾಂಕುಗಳಿಗೆ 14.5 ಕೋಟಿ ದಂಡ ವಿಧಿಸಿದ ಆರ್‌ಬಿಐ!

14 ಬ್ಯಾಂಕುಗಳಿಗೆ 14.5 ಕೋಟಿ ದಂಡ ವಿಧಿಸಿದ ಆರ್‌ಬಿಐ!

- Advertisement -
- Advertisement -

ಸರ್ಕಾರಿ ಹಾಗೂ ಖಾಸಗಿ ವಲಯದ ಸುಮಾರು 14 ಬ್ಯಾಂಕುಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್​ಬಿಐ) ಭಾರಿ ಮೊತ್ತದ ದಂಡ ವಿಧಿಸಿದೆ. ಈ ಬ್ಯಾಂಕುಗಳು ಆರ್‌‌ಬಿಐ ನೀಡಿದಂತಹ ನಿಮಯಗಳನ್ನು ಉಲ್ಲಂಘಿಸಿದ ಹಿನ್ನಲೆಯಲ್ಲಿ ದಂಡಗಳನ್ನು ವಿಧಿಸಲಾಗಿದೆ.

ಆರ್‌ಬಿಐ ನೀಡಿದಂತಹ ಒಂದಕ್ಕಿಂತ ಹೆಚ್ಚಿನ ನಿಯಮಾವಳಿಗಳನ್ನು ಈ ಬ್ಯಾಂಕುಗಳು ಉಲ್ಲಂಘಿಸಿದ್ದು, ಹಾಗಾಗಿ ಸುಮಾರು 0.5 ಕೋಟಿ ರೂಪಾಯಿಯಿಂದ 2 ಕೋಟಿವರೆಗೆ ದಂಡವನ್ನು ಹಾಕಲಾಗಿದೆ. ಇತ್ತೀಚೆಗೆ ಆರ್‌ಬಿಐ ಕಂಪನಿಗಳ ಅಕೌಂಟ್‌ಗಳನ್ನು ಪರಿಶೀಲಿಸಿದಾಗ ಬ್ಯಾಂಕುಗಳು ಬ್ಯಾಂಕಿನ ನಿಯಂತ್ರಣ ಕಾಯ್ದೆ 1949 ರ ನಿಬಂಧನೆಗಳನ್ನು ಮತ್ತು ನಿಯಮಾವಳಿಗಳನ್ನು ಗಾಳಿಗೆ ತೂರಿ ಅವುಗಳನ್ನು ಉಲ್ಲಂಘಿಸಿದ್ದು ಬೆಳಕಿಗೆ ಬಂದಿತ್ತು.

ಇದನ್ನೂ ಓದಿ: ರಿಲಯನ್ಸ್‌ ಫೈನಾನ್ಸ್‌ಗಳಿಂದ ಬ್ಯಾಂಕಿಂಗ್ ಫ್ರಾಡ್- ಕರ್ನಾಟಕ ಬ್ಯಾಂಕ್‌ಗೆ ವಂಚನೆ

ಆರ್‌ಬಿಐ ಈ ಎಲ್ಲಾ ಬ್ಯಾಂಕುಗಳಿಗೆ ದಂಡ ವಿಧಿಸಿ ನೋಟಿಸ್‌ಗಳನ್ನು ಕಳುಹಿಸಿದ್ದಾರೆ. ದಂಡ ವಿಧಿಸಲಾಗಿರುವಂತಹ ಬ್ಯಾಂಕುಗಳಿಂದ ಬರುವಂತಹ ಪ್ರತ್ಯುತ್ತರಗಳನ್ನೂ ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಆರ್‌ಬಿಐ ಹೇಳಿದ್ದು, ಜೊತೆಗೆ 14 ಬ್ಯಾಂಕುಗಳ ಮೇಲೆ ದಂಡವನ್ನು ವಿಧಿಸುವ ಅಗತ್ಯವಿದೆ ಎಂದು ಅದು ತಿಳಿಸಿದೆ.

ಬ್ಯಾಂಕ್ ಆಫ್ ಬರೋಡಾ ಮೇಲೆ 2 ಕೋಟಿ ರೂಪಾಯಿ ದಂಡವನ್ನು ವಿಧಿಸಿದ್ದು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮೇಲೆ ಅತೀ ಕಡಿಮೆ (0.5 ಕೋಟಿ) ರೂಪಾಯಿ ದಂಡವನ್ನು ವಿಧಿಸಿದೆ. ಇನ್ನುಳಿದಂತಹ 12 ಬ್ಯಾಂಕುಗಳ ಮೇಲೆ ಸಮನಾಗಿ 1 ಕೋಟಿ ರೂಪಾಯಿ ದಂಡವನ್ನು ಆರ್‌ಬಿಐ ವಿಧಿಸಿದೆ.

ಇದನ್ನೂ ಓದಿ: ದುಡ್ಡು ಕಟ್ಟಲಾಗದಿದ್ದರೆ ಸತ್ತೋಗಿ; ಕೊರೊನಾ ಸಮಯದಲ್ಲೂ ರಕ್ತ ಹೀರುತ್ತಿರುವ ಫೈನಾನ್ಸ್‌ಗಳು

ಬ್ಯಾಂಕೇತರ ಹಣಕಾಸು ಕಂಪನಿಗಳಿಗೆ ಸಾಲವನ್ನು ನೀಡುವುದರಲ್ಲಿ ಆರ್‌ಬಿಐ ತಿಳಿಸಿದ ನಿಯಮಗಳನ್ನು ಪಾಲಿಸದಿರುವುದರಿಂದ ಮತ್ತು ಇನ್ನಿತರೆ ಕಾರಣಗಳಲ್ಲಿ ಬ್ಯಾಂಕುಗಳು ನಿಯಮಗಳನ್ನು ಪಾಲಿಸದೆ ಇರುವುದರಿಂದ ಈ ಬ್ಯಾಂಕುಗಳ ಮೇಲೆ ಭಾರಿ ಮೊತ್ತದ ದಂಡವನ್ನು ವಿಧಿಸಲಾಗಿದೆ ಎಂದು ಆರ್‌ಬಿಐ ತಿಳಿಸಿದೆ.

ಬಂಧನ್ ಬ್ಯಾಂಕ್ ಲಿಮಿಟೆಡ್, ಬ್ಯಾಂಕ್ ಆಫ್ ಬರೋಡಾ, ಬ್ಯಾಂಕ್ ಆಫ್ ಮಹಾರಾಷ್ಟ್ರ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಕ್ರೆಡಿಟ್ ಸುಸೇ ಏಜಿ, ಇಂಡಿಯನ್ ಬ್ಯಾಂಕ್, ಇಂಡಸ್ ಇಂಡ್ ಬ್ಯಾಂಕ್ ಲಿಮಿಟೆಡ್, ಕರ್ನಾಟಕ ಬ್ಯಾಂಕ್ ಲಿಮಿಟೆಡ್, ಕರೂರ್ ವೈಶ್ಯ ಬ್ಯಾಂಕ್ ಲಿಮಿಟೆಡ್, ಪಂಜಾಬ್ ಮತ್ತು ಸಿಂಧ್ ಬ್ಯಾಂಕ್, ಸೌತ್ ಇಂಡಿಯನ್ ಬ್ಯಾಂಕ್ ಲಿಮಿಟೆಡ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ದ ಜಮ್ಮು ಆಂಡ್ ಕಾಶ್ಮೀರ್ ಬ್ಯಾಂಕ್ ಲಿಮಿಟೆಡ್ ಮತ್ತು ಉತ್ಕರ್ಷ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಲಿಮಿಟೆಡ್ ಈ ಪಟ್ಟಿಯಲ್ಲಿ ಸೇರಿದೆ.

ಇದನ್ನೂ ಓದಿ: ಕೊರೊನಾ ಕಾಲದಲ್ಲಿಯೂ ಬಡ್ಡಿಗೆ ಬಡ್ಡಿ ಸೇರಿಸಿ ಹಣ ವಸೂಲಿ: ಮುತ್ತೂಟ್ ಫೈನಾನ್ಸ್‌ನಿಂದ ಗ್ರಾಹಕರಿಗೆ ಕಿರುಕುಳ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...