Homeಕರ್ನಾಟಕಬಿಜೆಪಿ ಭ್ರಷ್ಟಾಚಾರಕ್ಕೆ ಬೇಸತ್ತು ಆಮ್‌ ಆದ್ಮಿ ಪಕ್ಷ ಸೇರಿದ ವಿರಾಜಪೇಟೆ ಮಾಜಿ ಶಾಸಕ ಎಚ್. ಡಿ.ಬಸವರಾಜು

ಬಿಜೆಪಿ ಭ್ರಷ್ಟಾಚಾರಕ್ಕೆ ಬೇಸತ್ತು ಆಮ್‌ ಆದ್ಮಿ ಪಕ್ಷ ಸೇರಿದ ವಿರಾಜಪೇಟೆ ಮಾಜಿ ಶಾಸಕ ಎಚ್. ಡಿ.ಬಸವರಾಜು

- Advertisement -
- Advertisement -

ಸ್ವಪಕ್ಷದಲ್ಲಿನ ಭ್ರಷ್ಟಾಚಾರ ಮತ್ತು ಗುಂಪುಗಾರಿಯಿಂದ ಬೇಸತ್ತು ವಿರಾಜ ಪೇಟೆ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಹೆಚ್.ಡಿ.ಬಸವರಾಜು ಇಂದು ಆಮ್ ಆದ್ಮಿ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ಪಕ್ಷ ಭ್ರಷ್ಟರ ಕೂಪವಾಗಿದೆ. ಪಕ್ಷದಲ್ಲಿ ಗುಂಪುಗಾರಿಕೆ, ಸ್ವಜನಪಕ್ಷಪಾತದಿಂದ ಹಿಂದುಳಿದ ಸಮುದಾಯಗಳ ನಾಯಕರನ್ನು ವ್ಯವಸ್ಥಿತವಾಗಿ ತುಳಿಯುವ ಕೆಲಸ ನಡೆಯುತ್ತಿದೆ. ಹೀಗಾಗಿ ಬಿಜೆಪಿ ತೊರೆದು ಆಮ್ ಆದ್ಮಿ ಪಕ್ಷವನ್ನು ಸೇರಿರುವುದಾಗಿ ಅವರು ಇದೇ ಸಂದರ್ಭದಲ್ಲಿ ಹೇಳಿದರು.

ಬಿಜೆಪಿಯ ದುರಾಡಳಿತ, ವಿರೋಧ ಪಕ್ಷಗಳ ಅಸಮರ್ಥತೆಯಿಂದ ಜನರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ.ಲಸಿಕೆ ಸೇರಿದಂತೆ ಕೊರಾನಾ ವಿರುದ್ಧ ಹೋರಾಡುವ ಬದಲು ಬಿಎಸ್‌.ಯಡಿಯೂರಪ್ಪನವರ ಸರ್ಕಾರದ ನಾಯಕರು ಮುಖ್ಯಮಂತ್ರಿ ಕುರ್ಚಿ ಹಿಡಿದು ಎಳೆದಾಡುತ್ತಿದ್ದಾರೆ. ಪ್ರತಿಪಕ್ಷ ಕಾಂಗ್ರೆಸ್‌ ಕಥೆ ಕೂಡ ಇದೇ. ಜನರು ಗೆಲ್ಲಿಸಿ ಆಯ್ಕೆ ಮಾಡಿ ಕಳುಹಿಸಿದ ಜನಪ್ರತಿನಿಧಿಗಳು, ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಗಳು ಅಧಿಕಾರದ ಅಮಲಿನಲ್ಲಿ ತೇಲುತ್ತಿದ್ದಾರೆ ಎಂದು ಅವರು ರಾಜ್ಯ ಹಾಗೂ ಕೇಂದ್ರದಲ್ಲಿನ ಬಿಜೆಪಿ ಸರ್ಕಾರವನ್ನು ಟೀಕಿಸಿದರು.

ಅರವಿಂದ್‌ ಕೇಜ್ರಿವಾಲ್ ನೇತೃತ್ವದಲ್ಲಿ ಆಮ್‌ ಆದ್ಮಿ ಪಾರ್ಟಿ ದೆಹಲಿಯಲ್ಲಿ ಆರಂಭದ ದಿನದಿಂದಲೂ ಪ್ರಾಮಾಣಿಕತೆಯೊಂದಿಗೆ ಯಾವುದೇ ರಾಜಿ ಮಾಡಿಕೊಳ್ಳದೇ ಮುನ್ನಡೆಯುತ್ತಿದೆ. ಕಳಂಕರಹಿತ ಹಾಗೂ ಪಾರದರ್ಶಕ ವ್ಯಕ್ತಿತ್ವವನ್ನು ಮೈಗೂಡಿಸಿಕೊಂಡು ಸಾಮಾನ್ಯ ಜನರ ಧ್ವನಿಯಾಗಿ ದೆಹಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಆಮ್ ಆದ್ಮಿ ಪಕ್ಷದ ಸಿದ್ದಾಂತ ಮತ್ತು ಉದ್ಧೇಶಗಳಿಗನುಗುಣವಾಗಿ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಮುಂದಾಗುತ್ತೇನೆ ಎಂದು ಅವರು ಇದೇ ಸಂದರ್ಭದಲ್ಲಿ ತಮ್ಮ ಮುಂದಿನ ರಾಜಕೀಯ ನಡೆಯನ್ನು ತೆರೆದಿಟ್ಟರು.

ಇದನ್ನೂ ಓದಿ: ಕಾರ್ಕಳ: ಬಿಜೆಪಿ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್‌‌ ಕಾರ್ಯಕರ್ತನಿಗೆ ಇನ್ಸ್‌ಪೆಕ್ಟರ್‌‌‌ನಿಂದ ಹಲ್ಲೆ ಆರೋಪ

ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್‌ ಹಾಗೂ ಕರ್ನಾಟಕ ಅಹಿಂದ ಪರಿಷತ್‌ನ ಅಧ್ಯಕ್ಷರಾಗಿ ಎಚ್‌.ಡಿ.ಬಸವರಾಜು ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಹಿಂದ ವರ್ಗದ, ವಿಶೇಷವಾಗಿ ಪರಿಶಿಷ್ಟ ಪಂಗಡದ ಹಿರಿಯ ನಾಯಕರಾಗಿರುವ ಡಿ.ಬಸವರಾಜು AAP ಸೇರಿರುವುದರಿಂದ ಪಕ್ಷಕ್ಕೆ ಆನೆಬಲ ಬಂದಂತಾಗಿದೆ. ಅವರನ್ನು ಆಮ್‌ ಆದ್ಮಿ ಪಾರ್ಟಿಯು ತುಂಬು ಹೃದಯದಿಂದ ಬರಮಾಡಿಕೊಳ್ಳುತ್ತಿದೆ ಎಂದು ಪಕ್ಷದ ರಾಜ್ಯ ಸಂಚಾಲಕ ಪ್ರಥ್ವಿ ರೆಡ್ಡಿ ಹರ್ಷ ವ್ಯಕ್ತಪಡಿಸಿದರು. ದೇಶಾದ್ಯಂತ ಅನೇಕ ಸಾಧಕರು, ಗಣ್ಯ ವ್ಯಕ್ತಿಗಳು ಹಾಗೂ ವಿವಿಧ ಪಕ್ಷಗಳು ಮುಖಂಡರು ನಮ್ಮ ಪಕ್ಷವನ್ನು ಸೇರಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ನಮಗೆ ಬೆಂಬಲ ವ್ಯಕ್ತವಾಗಲಿದ್ದು, ಕರ್ನಾಟಕದ ಅನೇಕ ಶಾಸಕರು, ಮಾಜಿ ಶಾಸಕರು ಎಎಪಿಯನ್ನು ಸೇರಲಿದ್ದಾರೆ ಎಂದು ಪ್ರಥ್ವಿ ರೆಡ್ಡಿ ಇದೇ ಸಂದರ್ಭದಲ್ಲಿ ಹೇಳಿದರು.

ಆಮ್‌ ಆದ್ಮಿ ಪಕ್ಷದ ಕರ್ನಾಟಕ ಉಸ್ತುವಾರಿ ರೋಮಿ ಭಾಟಿ ಮಾತನಾಡಿ ಬಿ ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಭೃಷ್ಟಾಚಾರದಲ್ಲಿ ಮುಳುಗಿದೆ. ಕೊರೊನಾ ಸಂತ್ರಸ್ತರ ನೋವಿಗೆ ಸ್ಪಂದಿಸದ ಬಿಜೆಪಿಯ ದುರಾಡಳಿತದಿಂದ ದೇಶದ ಜನರು ಬೇಸತ್ತಿದ್ದಾರೆ. ಬದಲಾವಣೆ ಬಯಸಿರುವ ಜನತೆ ಮುಂದಿನ ಚುನಾವಣೆಗಳಲ್ಲಿ ಅರವಿಂದ್‌ ಕೇಜ್ರಿವಾಲ್ ನೇತೃತ್ವದ ಆಮ್‌ ಆದ್ಮಿ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಎಚ್‌.ಡಿ.ಬಸವರಾಜು 1994ರಲ್ಲಿ ಮತ್ತು 2004ರಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.  2003ರಿಂದ 2005ರ ತನಕ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆರ್ಥಿಕ ಹಾಗೂ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ, 2005ರಿಂದ 2007ರವರೆಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಕಾವಲು ಹಾಗೂ ನಿರ್ವಹಣೆ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ರೋಮಿ ಭಾಟಿ, ಪೃಥ್ವಿ ರೆಡ್ಡಿ, ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್‌ ದಾಸರಿ, ಬೆಂಗಳೂರು ಘಟಕದ ಉಪಾಧ್ಯಕ್ಷ ಬಿಟಿ ನಾಗಣ್ಣ, ಪಕ್ಷದ ರಾಜಕೀಯ ಚಟುವಟಿಕೆಗಳ ಉಸ್ತುವಾರಿ ಲಕ್ಷಿಕಾಂತ್ ಕಾಂತ್ ರಾವ್ ಹಾಗೂ ಮಾಧ್ಯಮ ಸಂಚಾಲಕ ಜಗದೀಶ್ ಸದಂ ಸೇರಿದಂತೆ ಇನ್ನೂ ಅನೇಕ ಆಮ್‌ ಆದ್ಮಿ ಪಕ್ಷದ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಅಬಕಾರಿ ಇಲಾಖೆಯಿಂದ ಜನಾರೋಗ್ಯ ಕಡೆಗಣನೆ: ಮದ್ಯದಂಗಡಿ ತೆರವಿಗೆ ನೂರಾರು ಮಹಿಳೆಯರ ನಿರಂತರ ಧರಣಿ

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...