Homeಚಳವಳಿಮಾಂಟೋನ ಈ ಕಥೆಗಳನ್ನು ಓದಿದರೆ, ನೀವು ಬೆಚ್ಚುತ್ತೀರಿ. ಓದಿ ನೋಡಿ

ಮಾಂಟೋನ ಈ ಕಥೆಗಳನ್ನು ಓದಿದರೆ, ನೀವು ಬೆಚ್ಚುತ್ತೀರಿ. ಓದಿ ನೋಡಿ

ಇವತ್ತು ವಿಭಜನೆ ಸೃಷ್ಟಿಸಿದ ವಿಲಕ್ಷಣ ಕಥೆಗಾರ ಹಸನ್ ಸಾದತ್ ಮಾಂಟೋ ಜನ್ಮದಿನ.

- Advertisement -
- Advertisement -

| ಪುನೀತ್ ಅಪ್ಪು |

ಇವತ್ತು ವಿಭಜನೆ ಸೃಷ್ಟಿಸಿದ ವಿಲಕ್ಷಣ ಕಥೆಗಾರ ಹಸನ್ ಸಾದತ್ ಮಾಂಟೋ ಜನ್ಮದಿನ. ದೇಶ ವಿಭಜನೆಯ ಆಘಾತವನ್ನು ತಡೆದುಕೊಳ್ಳಲಾರದೆ ಕೊನೆಯ ಕ್ಷಣದವರೆಗೂ ಭಾರತ ಮತ್ತು ಪಾಕಿಸ್ಥಾನದ ಬಡ, ದಮನಿತ ಮತ್ತು ನಿಕೃಷ್ಟ ಜನರಿಗೋಸ್ಕರ ಮರುಗಿದ, ಭಾರತದ ಕನವರಿಕೆಯಲ್ಲಿಯೇ ಪ್ರಾಣ ತ್ಯಜಿಸಿದ ಮಾಂಟೋ ಬರಿಯ ಕಥೆಗಾರನಲ್ಲ, ಆತನ ಬದುಕೇ ಒಂದು ರೂಪಕ. ಆತನ ಸಾವು ಇನ್ನೂ ವಿಚಿತ್ರ. ಮಾಂಟೋ ಯಾರು ಎಂದು ಯಾರಾದರೂ ಕೇಳಿದರೆ ಮಾಂಟೋ ಅಂದರೆ ಕಳ್ಳಭಟ್ಟಿ ಸಾರಾಯಿ ಎನ್ನಬಯಸುತ್ತೇನೆ. ಮಾಂಟೋನ ಕಥೆಗಳು ಕೂಡಾ ಆ ಸಾರಾಯಿಯಂತೆ ಸುಡುತ್ತಲೇ ಒಳಗಿಳಿಯುತ್ತವೆ. ಆದರೆ ಅದನ್ನು ಮೋಹಿಸಿದವನಿಗೆ ಮಾತ್ರ ಗೊತ್ತು ಅದರ ಮತ್ತು ಮತ್ತು ಗತ್ತು. ಬದುಕಬೇಕೆಂದು ಯಾರೂ ಅದನ್ನು ಕುಡಿಯುವುದಿಲ್ಲ. ಇದು ಸತ್ತವರ ಕಥೆ. ಬದುಕಿದವರು ಕಥೆಯಾಗುವುದಿಲ್ಲ. ನಾನು ಕುಡಿದರೂ ಸಾಯುತ್ತೇನೆ, ಕುಡಿಯದಿದ್ದರೂ ಸಾಯುತ್ತೇನೆ, ಅಮೇರಿಕಾದಿಂದ ಆಮದಾಗುವ ಈ ಗೋದಿಯ ಬೆಲೆ ನೋಡಿದರೆ ಮಾನ ಮರ್ಯಾದೆ ಇಲ್ಲದವರು ಮಾತ್ರ ಬದುಕಲು ಸಾಧ್ಯ ಎಂದಿದ್ದ ಮಾಂಟೋ.

ಸಾದತ್ ಹಸನ್ ಮಾಂಟೋ

ಮಾಂಟೋನ ಕೆಲವು ಸಣ್ಣ ಸಾಲುಗಳನ್ನು ಇಲ್ಲಿ ಕೊಟ್ಟಿರುವೆ.

1. ಶಾಶ್ವತ ರಜೆ.

.ಗಲಭೆಕೋರರ ಒಂದು ಗುಂಪು ಗಣಿಯತ್ತ ತೆರಳಿತು. ಸಿಕ್ಕಿ ಸಿಕ್ಕಿದವರನ್ನು ಹೊಡೆದು ಸಾಯಿಸ ತೊಡಗಿತು. ಒಬ್ಬ ಕಾರ್ಮಿಕ ಕೂಗಿಕೊಂಡ, ” ಅಯ್ಯೋ ನನ್ನ ಕೊಲ್ಲಬೇಡಿ, ನಾನು ರಜೆಯಲ್ಲಿ ಊರಿಗೆ ತೆರಳುತಿರುವೆ”.

2. ಪಠಾಣಿಸ್ತಾನ್

ಗಲಭೆಕೋರರ ತಂಡ ಒಬ್ಬನನ್ನು ತಡೆದು ನಿಲ್ಲಿಸಿತು.
“ಏಯ್ ಯಾರು ನೀನು ಇಂದೂವ ಅಥವಾ ಮುಸ್ಲಮೀನಾ”?
ವ್ಯಕ್ತಿ : ” ಹ್ಞಾಂ ಹ್ಞಾ.. ಮುಸ್ಲಮೀನ್ ಮುಸ್ಲಮೀನ್”
ತಂಡ : “ಓಹೋ ಹಾಗಾದರೆ ನಿನ್ನ ಪ್ರವಾದಿ ಯಾರು ಹೇಳು ನೋಡೋಣ”.
ವ್ಯಕ್ತಿ: “ಹ್ಞಾಂ? …. ಮಹಮ್ಮದ್ ಖಾನ್”
ತಂಡ : ” ಸರಿ, ಈತನನ್ನು ಬಿಟ್ಟು ಬಿಡೋಣ”.

3. ರೇಡಿಯೋ ವಾರ್ತೆ:

” ಪಂಜಾಬ್, ಗ್ವಾಲಿಯರ್ ಮತ್ತು ಮುಂಬಯಿಯ ಕೆಲವು ಗಲ್ಲಿಗಳಲ್ಲಿ ಜನರು ಸಿಹಿ ಹಂಚುತ್ತಿದ್ದಾರೆ. ಮಹಾತ್ಮಾ ಗಾಂಧಿಯವರ ಹತ್ಯೆಯಾಗಿದೆ”.

4. ಮೂರ್ಖ.

ಆತನ ಆತ್ಮಹತ್ಯೆಯ ಬಗ್ಗೆ ಆತನ ಸ್ನೇಹಿತ ಹೀಗೆ ಹೇಳಿದ್ದ, ‘ ಎಂತಹಾ ಮೂರ್ಖ! ನಾನು ಅವನಲ್ಲಿ ಹೇಳುತ್ತಲೆ ಇದ್ದೆ, ಆ ಉದ್ದನೆಯ ಗಡ್ಡವನ್ನು ಬೋಳಿಸಿ, ಕೂದಲಿಗೆ ಕತ್ತರಿ ಹಾಕಿದ ಕೂಡಲೇ ಆತನೇನು ಧರ್ಮಭ್ರಷ್ಟನಾಗೋದಿಲ್ಲ. ನಮ್ಮ ಸಚ್ಚೇ ಗುರುವಿಗೆ ಶರಣಾಗಿ ಆತನ ಅನುಗ್ರಹವಿದ್ದರೆ ಆತ ತನ್ನ ಮೊದಲ ಸ್ವರೂಪಕ್ಕೆ ಬದಲಾಗಿ ಬಿಡುತ್ತಿದ್ದ’.

5. ಧೃಡತೆ.

‘ಯಾವ ಕಾರಣಕ್ಕೂ ನಾನು ಸಿಖ್ ಆಗಿ ಮತಾಂತರವಾಗಲಾರೆ, ಮರ್ಯಾದೆಯಿಂದ ನನ್ನ ಕ್ಷೌರಕತ್ತಿ ವಾಪಾಸ್ ಕೊಡಿ’

5. ಮಾನವೀಯತೆ.

‘ ಅಯ್ಯೋ ದಯವಿಟ್ಟು ನನ್ನ ಮಗಳನ್ನು ನನ್ನ ಕಣ್ಣೆದುರಿನಲ್ಲೇ ಕೊಲ್ಲದಿರಿ’.
‘ಸರಿ, ಸರಿ, ಆಕೆಯ ಬಟ್ಟೆ ಬಿಚ್ಚಿ ಓಡಿಸಿ’.

6. ದೇವರು ದೊಡ್ಡವನು !

ಆ ಸಂಜೆ ಕೊನೆಗೂ ಮುಗಿಯಿತು ಮತ್ತು ಆ ಮುಜ್ರಾ ನರ್ತಕಿಯ ಗಿರಾಕಿಗಳು ಒಬ್ಬೊಬ್ಬರೇ ಮನೆಗೆ ತೆರಳಿದರು.

ಮುಜ್ರಾವನ್ನು ವ್ಯವಸ್ಥೆ ಮಾಡಿದ್ದ ಮುದುಕ ನಿಟ್ಟುಸಿರುಬಿಟ್ಟ, ‘ ಆ ದೇಶದಲ್ಲಿ ಎಲ್ಲವನ್ನೂ ಕಳೆದುಕೊಂಡು ಇಲ್ಲಿಗೆ ಬಂದೆವು, ಆದರೂ ಅಲ್ಲಾಹ್ ಕೈ ಬಿಡಲಿಲ್ಲ. ಕೆಲವೇ ದಿನಗಳಲ್ಲಿ ನಮಗೆ ಒಳ್ಳೆಯ ದಿನಗಳು ಲಭಿಸಿದವು’.

7.ವಿಶ್ರಾಂತಿ.

‘ನೋಡು ಅವನಿನ್ನೂ ಸತ್ತಿಲ್ಲ. ಜೀವ ಇದ್ದ ಹಾಗೆ ಕಾಣ್ತಾ ಇದೆ’.
‘ ಏಯ್ ಇರ್ಲಿ ಬಿಡೊ, ನನಗೂ ಕೈ ನೋಯ್ರಾ ಇದೆ’.

8. ನ್ಯಾಯ.

‘ನೋಡು ಇದು ಅನ್ಯಾಯ. ಕಾಳಸಂತೆ ಬೆಲೆಯಲ್ಲಿ ಕಳಪೆ ಪೆಟ್ರೋಲ್ ಮಾರಾಟ ಮಾಡಿದ್ದೀಯ ನೀನು, ಒಂದೇ ಒಂದು ಅಂಗಡಿಯನ್ನು ಸುಡೋಕಾಗಿಲ್ಲ’.

9. ಅದೃಷ್ಟ.

‘ಏನ್ ದುರಾದೃಷ್ಟ ನೋಡೋ ನಂದು, ಅಷ್ಟೆಲ್ಲಾ ಕಷ್ಟಪಟ್ಟು ನನಗೆ ಸಿಕ್ಕಿದ್ದು ಈ ಒಂದು ಪೆಟ್ಟಿಗೆ ಮಾತ್ರ…. ಅದರಲ್ಲಿ ಕೂಡಾ ಸಿಕ್ಕಿದ್ದು ಹಂದಿ ಮಾಂಸ’.

10. ಕೇಳೋರೇ ಇಲ್ಲ

‘ಎಂತಹಾ ದರಿದ್ರ ಜನಗಳಪ್ಪಾ ಇವ್ರು, ಮಸೀದಿಯೊಳಗೆ ಬಿಸಾಡೋಕೆ ಅಂತ ಕಷ್ಟ ಪಟ್ಟು ಒಂದೈವತ್ತು ಹಂದಿಗಳನ್ನು ಕಡ್ದು ಕಾಯ್ತಾ ಇದ್ದೀನಿ, ಒಂದೇ ಒಂದು ಗಿರಾಕಿ ಸಿಗ್ತಾ ಇಲ್ಲ, ಗಡಿಯಾಚೆ ನೋಡು, ಅಲ್ಲಿನ ಜನ ದನದ ಮಾಂಸಕ್ಕೊಸ್ಕರ ಕ್ಯೂ ನಿಂತಿದ್ದಾರೆ, ಇಲ್ಲಿ ಹಂದಿ ಮಾಂಸನ ಕೇಳೋರೇ ಇಲ್ಲ’.

11. ತಪ್ಪನ್ನು ತಿದ್ದಲಾಯಿತು.

‘ಯಾರಯ್ಯ ನೀನು’

‘ಹರ್ ಹರ್ ಮಹಾದೇವ್, ಹರ್ ಹರ್ ಮಹದೇವ್, ಹರ್ ಹರ್ ಮಹಾದೇವ್’!
‘ನೀನು ಅದೇ ಎಂದು ಹೇಳೋದಕ್ಕೆ ಸಾಕ್ಷಿ ಏನಿದೆ’
‘ನನ್ನ ಹೆಸರು ಧರಮ್ ಚಂದ್’
‘ಅದು ಸಾಕ್ಷಿಯಾಗೋದಿಲ್ಲ’
‘ಸರಿ ಸರಿ, ನನಗೆ ನಾಲಕ್ಕು ವೇದಗಳೂ ಬಾಯಿಪಾಠ ಬರುತ್ತವೆ, ಬೇಕಿದ್ದರೆ ಪರೀಕ್ಷಿಸಿ’
‘ನಮಗೆ ವೇದ ಗೀದ ಎಲ್ಲಾ ಬರೋದಿಲ್ಲ, ಸಾಕ್ಷಿ ಕೊಡು’
‘ಏನೂ?!’
‘ನಿನ್ನ ಪೈಜಾಮ ಕೆಳಗೆ ಮಾಡು’
ಆತ ತನ್ನ ಪೈಜಾಮ ಕೆಳಗೆ ಜಾರಿಸಿದ ತಕ್ಷಣ ಅಲ್ಲೊಂದು ಬೊಬ್ಬೆ ಕೇಳಿಸಿತು,’ಕೊಲ್ಲಿ ಕೊಲ್ಲಿ ಆತನನ್ನು’.
‘ಅಯ್ಯೋ ದಯವಿಟ್ಟು ನಿಲ್ಲಿ, ನಾನು ನಿಮ್ಮ ಸಹೋದರ, ದೇವರಾಣೆಗೂ..’
‘ಹಾಗಾದರೆ ಇದೇನು?’
‘ನಾನು ಹಾದು ಬರಬೇಕಾಗಿದ್ದ ಆ ದಾರಿ ಶತ್ರುಗಳ ನಿಯಂತ್ರಣದಲ್ಲಿತ್ತು, ನಾನು ಮುನ್ನೆಚ್ಚರಿಕೆ ವಹಿಸಬೇಕಾಗಿತ್ತು ಅದಿಕ್ಕೆ ಇದೊಂದೇ ತಪ್ಪು ನಾನು ಮಾಡಿದ್ದು ನಮ್ಮ ಜೀವ ಉಳಿಸುವುದಕ್ಕೋಸ್ಕರ, ಮತ್ತೆಲ್ಲವೂ ಸರಿ ಇದೆ, ಇದೊಂದೇ ತಪ್ಪು ನಾನು ಮಾಡಿದ್ದು’.
‘ಸರಿ, ತಪ್ಪನ್ನು ತಿದ್ದಿ ಬಿಡಿ’.
ಹಾಗೆ, ತಪ್ಪು ನಿವಾರಿಸಲ್ಪಟ್ಟಿತು, ಜೊತೆಗೆ ಧರಮ್ ಚಂದನು ಕೂಡಾ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...