Homeಕರೋನಾ ತಲ್ಲಣಮಹಾರಾಷ್ಟ್ರ, ಕೇರಳದಲ್ಲಿ ಹೆಚ್ಚುತ್ತಲೇ ಇದೆ ಸೋಂಕಿನ ಸಂಖ್ಯೆ-ಉತ್ತರ ಪ್ರದೇಶದಲ್ಲಿ ಕಪ್ಪಾ ರೂಪಾಂತರಿ ಪತ್ತೆ

ಮಹಾರಾಷ್ಟ್ರ, ಕೇರಳದಲ್ಲಿ ಹೆಚ್ಚುತ್ತಲೇ ಇದೆ ಸೋಂಕಿನ ಸಂಖ್ಯೆ-ಉತ್ತರ ಪ್ರದೇಶದಲ್ಲಿ ಕಪ್ಪಾ ರೂಪಾಂತರಿ ಪತ್ತೆ

- Advertisement -
- Advertisement -

ದೇಶದಲ್ಲಿ ಕೋವಿಡ್‌ ಎರಡನೇ ಅಲೆ ಮುಕ್ತಾಯವಾಯಿತು ಎಂದು ಅನ್ನುತ್ತಿರುವಾಗಲೇ ಮತ್ತೊಮ್ಮೆ ಕೊರೋನಾ ಭೀತಿ ಆರಂಭವಾಗಿದೆ. ಇದಕ್ಕೆ ಕಾರಣ ಕೆಲವು ರಾಜ್ಯಗಳಲ್ಲಿ ಕಳೆದೊಂದು ವಾರದಿಂದ ಹೆಚ್ಚುತ್ತಿರುವ ಕೊರೋನಾ ಸೊಂಕಿನ ಸಂಖ್ಯೆ. ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಜುಲೈ ಮೊದಲವಾರದಿಂದ ಆರಂಭವಾದ ಸೋಂಕಿತರ ಸಂಖ್ಯೆಯಲ್ಲಿನ ಹೆಚ್ಚಳ ಎರಡನೇ ವಾರದ ಹೊತ್ತಿಗೆ ಗಣನೀಯ ಸಂಖ್ಯೆಯನ್ನು ತಲುಪಿದೆ. ನಿರ್ಭಂದಗಳನ್ನು ತೆರವುಗೊಳಿಸಿದ ಪರಿಣಾಮವಾಗಿ ಪ್ರವಾಸಿ ತಾಣಗಳು ತುಂಬಿ ತುಳುಕಾಡುತ್ತಿವೆ. ಇದರ ನಡುವೆ ಹೊಸ ಅಪಾಯಕಾರಿ ಕಪ್ಪಾ ರೂಪಾಂತರಿ ವೈರಸ್‌ ಉತ್ತರ ಪ್ರದೇಶದಲ್ಲಿ ಪತ್ತೆಯಾಗಿದೆ.

ದೇಶದ ಕೋವಿಡ್ -19 ಪರಿಸ್ಥಿತಿಯ ಕುರಿತು ಪತ್ರಿಕಾಗೋಷ್ಠಿಯನ್ನು ನಡೆಸಿದ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರ್ವಾಲ್, ದೇಶದಲ್ಲಿ  ವೈರಸ್ ಇನ್ನೂ ಹರಡುತ್ತಿದೆ. ಕೋವಿಡ್ ಮಾನದಂಡಗಳ ಉಲ್ಲಂಘನೆ ಕಳವಳಕಾರಿಯಾಗಿದೆ.ದೇಶದ ಒಟ್ಟು ಕೋವಿಡ್ -19 ಪ್ರಕರಣಗಳಲ್ಲಿ  50% ಕ್ಕು ಹೆಚ್ಚು ಪ್ರಕರಣಗಳು ಮಹಾರಾಷ್ಟ್ರ ಮತ್ತು ಕೇರಳದಿಂದ ಬಂದಿವೆ. ಕೇರಳದ 14 ಮತ್ತು ಮಹಾರಾಷ್ಟ್ರದ 15 ಜಿಲ್ಲೆಗಳ ಪರಿಸ್ಥಿತಿ ಕಳವಳಕಾರಿಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕೇರಳದಲ್ಲಿ ಕಳೆದ 24 ಗಂಟೆಯಲ್ಲಿ ಕೊರೋನಾ ವೈರಸ್‌ನ 13,772 ಪ್ರಕರಣಗಳು ಪತ್ತೆಯಾಗಿವೆ. ಮಹಾರಾಷ್ಟ್ರದಲ್ಲಿ 9,083 ಜನರು ಸೋಂಕಿಗೆ ತುತ್ತಾಗಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕಿನ ಹೊಸ ಪ್ರಕರಣಗಳ ಸಂಖ್ಯೆ 43,504 ಇದೆ. 3,211 ಪ್ರಕರಣಗಳೊಂದಿಗೆ ತಮಿಳುನಾಡು, ಆಂಧ್ರಪ್ರದೇಶ 2,982 ಗಳು ನಂತರ ಸ್ಥಾನದಲ್ಲಿ ಇವೆ. ಅಸ್ಸಾಂನಲ್ಲಿ 2,644 ಹೊಸ ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: ಮಕ್ಕಳಿಗೂ ಬಂತು ಕೋವಿಡ್ ಲಸಿಕೆ : ಸೆಪ್ಟೆಂಬರ್‌ನಲ್ಲಿ ಝೈಡಸ್‌ ಕ್ಯಾಡಿಲಾ ವ್ಯಾಕ್ಸಿನ್‌-ಎನ್‌.ಕೆ. ಅರೋರಾ

ಕರ್ನಾಟಕದಲ್ಲಿ  2,530 ಹೊಸ ಪ್ರಕರಣಗಳು ದಾಖಲಾಗಿದ್ದು 62 ಜನರು ಕೋವಿಡ್‌ ಕಾರಣದಿಂದ ಮೃತಪಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ ಮಾತ್ರ ಕೋವಿಡ್ ಸಾವಿನ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು ಒಂದೇ ದಿನ 439 ಜನರು ಸೋಂಕಿಗೆ ಮೃತಪಟ್ಟಿದ್ದಾರೆ. ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೋವಿಡ್‌ ಪಾಸಿಟಿವಿಟಿ ದರ 10% ಕ್ಕಿಂತಲೂ ಹೆಚ್ಚಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.

ನಿರ್ಬಂಧಗಳನ್ನು ಸಡಿಲಿಸಿದ ಕಾರಣಕ್ಕೆ  ಜನರ ಓಡಾಟವೂ ಹೆಚ್ಚಿದ್ದು ಮುಂಬೈ. ದೆಹಲಿ ಸೇರಿದಂತೆ ದೇಶದ ನಗರಗಳ ಸಾರ್ವಜನಿಕ ಸ್ಥಳಗಳಲ್ಲಿ ಜನ ಸಂದಣಿ ಉಂಟಾಗುತ್ತಿರುವುದು ಕೂಡ ಸೋಂಕು ಹೆಚ್ಚುಳಕ್ಕೆ ಒಂದು ಕಾರಣ. ಕೋವಿಡ್ ಮೂರನೆ ಅಲೆ ದೇಶದಲ್ಲಿ ಆರಂಭವಾಗಿರುವ ಸೂಚನೆ ಇದಾಗಿರಬಹುದು. ಕೇಂದ್ರ ಆರೋಗ್ಯ ಇಲಾಖೆಯಾಗಲಿ ಅಥವಾ ತಜ್ಞರಾಗಲಿ ಮೂರನೇ ಅಲೆ ಆರಂಭವಾಗಿರುವ ಕುರಿತು ಇದುವರೆಗೆ ಅಧಿಕೃತವಾದ ಮಾಹಿತಿ ನೀಡಿಲ್ಲ.

ಪಂಜಾಬ್‌ನಲ್ಲಿ ಕ್ಯಾಪ್ಟನ್‌ ಅಮರಿಂರ್‌ ಸಿಂಗ್ ಸರ್ಕಾರ ವಾರಾಂತ್ಯದ ಕರ್ಪ್ಯು ಮತ್ತು ರಾತ್ರಿ ಕರ್ಪ್ಯುಗಳನ್ನು ತೆಗೆದಿದೆ.

ಇದನ್ನೂ ಓದಿ: ಅಮೆರಿಕಾದಲ್ಲಿ ಡೆಲ್ಟಾ ರೂಪಾಂತರಿಯಿಂದ ಹೆಚ್ಚಾದ, ಕೊರೊನಾ ಪ್ರಕರಣಗಳು!

ಉತ್ತರ ಪ್ರದೇಶದಲ್ಲಿ ಹೊಸ ರೂಪಾಂತರಿ ಕಪ್ಪಾ ವೈರಸ್‌ ತಳಿಯ 2 ಪ್ರಕರಣಗಳು ಪತ್ತೆ

ವ್ಯಾಪಕವಾಗಿ ಹರಡಬಲ್ಲ ಕೊವಿಡ್-19ನ ಕಪ್ಪಾ ತಳಿ ರೂಪಾಂತರ ಸೋಂಕುಗಳು ಉತ್ತರ ಪ್ರದೇಶದಲ್ಲಿ ಪತ್ತೆಯಾಗಿದೆ.ಕಪ್ಪಾ ತಳಿಯ ಎರಡು ಪ್ರಕರಣಗಳು ಇಲ್ಲಿ ಪತ್ತೆಯಾಗಿರುವುದಾಗಿ ರಾಜ್ಯ ಸರ್ಕಾರ ಹೇಳಿದೆ. ಅಧಿಕೃತ ಹೇಳಿಕೆಯ ಪ್ರಕಾರ ಲಖನೌದ ಕಿಂಗ್ ಜಾರ್ಜ್ ವೈದ್ಯಕೀಯ ಕಾಲೇಜಿನಲ್ಲನ ಮಾದರಿಗಳನ್ನು ಪರೀಕ್ಷೆಗೊಳಪಡಿಸಿದಾಗ ಈ ತಳಿ ಪತ್ತೆಯಾಗಿದೆ. ಶುಕ್ರವಾರ ಬಿಡುಗಡೆ ಮಾಡಿದ ಅಧಿಕೃತ ಹೇಳಿಕೆಯಲ್ಲಿ ಉತ್ತರ ಪ್ರದೇಶ ಸರ್ಕಾರ ಈ ಬಗ್ಗೆ  ಮಾಹಿತಿ ನೀಡಿದೆ.

ಕಾಪ್ಪಾ ರೂಪಂತರಿ ಕುರಿತಾಗಿ ಮಾಹಿತಿ ನೀಡಿದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಮಿತ್ ಮೋಹನ್ ಪ್ರಸಾದ್ ಅವರು, ‘ಜೀನೋಮ್ ಸೀಕ್ವೆನ್ಸಿಂಗ್ ಎನ್ನುವುದು ಪ್ರಯೋಗಾಲಯ ಪ್ರಕ್ರಿಯೆಯಾಗಿದ್ದು, ಇದು ರೂಪಾಂತರಗಳನ್ನು ನಿರೂಪಿಸಲು ಮತ್ತು ರೋಗ ಪತ್ತೆಹಚ್ಚಲಿರುವ ವಿಧಾನವಾಗಿದೆ. ಪ್ರಸ್ತುತ, ಉತ್ತರ ಪ್ರದೇಶ  ರಾಜ್ಯದಲ್ಲಿ ದೈನಂದಿನ ಕೋವಿಡ್‌ ಪಾಸಿಟಿವಿಟಿ ದರವು ಶೇಕಡಾ 0.04ರಷ್ಟಿದೆ.ಈ ಹಿಂದೆಯೇ ಈ ಕಪ್ಪಾ ರೂಪಾಂತರಿ ತಳಿಯ  ಪ್ರಕರಣಗಳು ರಾಜ್ಯದಲ್ಲಿ ಕಂಡುಬಂದಿವೆ ಎಂದು ಹೇಳಿದ್ದಾರೆ.

ಈ ಕಪ್ಪಾರೂಪಾಂತರಿ ಬಗ್ಗೆ ಚಿಂತೆ ಮಾಡುವ ಅಗತ್ಯವಿಲ್ಲ. ಇದು ಕೊರೊನಾ ವೈರಸ್ನ ಒಂದು ರೂಪಾಂತರವಾಗಿದೆ ಮತ್ತು ಅದರ ಚಿಕಿತ್ಸೆಯು ಸಾಧ್ಯವಿದೆ. ಎಚ್ಚರಿಕೆಯ ಕ್ರಮವಾಗಿ, ಪೀಡಿತ ಜಿಲ್ಲೆಗಳ ಹೆಸರುಗಳು ಅಥವಾ ಅದರ ಮೂಲದ ಸ್ಥಳಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಪ್ರಸಾದ್ ಹೇಳಿದರು.

 ಸೋಂಕಿನ ಎರಡನೆಯ ಅಲೆಯ ನಡುವೆಯೇ ಡೆಲ್ಟಾ, ಆಲ್ಫಾ ಮತ್ತು ಕಪ್ಪಾದಂತಹ ರೂಪಾಂತರಗಳು ಹೆಚ್ಚು ಹರಡುತ್ತವೆ ಎಂದು ಹೇಳಲಾಗುತ್ತಿರುವುದರಿಂದ ರಾಜ್ಯಗಳಿಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರ ಈಗಾಗಲೇ ಎಚ್ಚರಿಸಿದೆ.

ಇದನ್ನೂ ಓದಿ: ಕೊರೊನಾ ಸೋಂಕಿತರಾಗಿ, ದಾನಿಗಳ ನೆರವಿನ ನಿರೀಕ್ಷೆಯಲ್ಲಿದ್ದಾರೆ ಕರ್ನಾಟಕದ ಮಾನವ ಕಂಪ್ಯೂಟರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...