Homeಕರೋನಾ ತಲ್ಲಣಮಹಾರಾಷ್ಟ್ರ, ಕೇರಳದಲ್ಲಿ ಹೆಚ್ಚುತ್ತಲೇ ಇದೆ ಸೋಂಕಿನ ಸಂಖ್ಯೆ-ಉತ್ತರ ಪ್ರದೇಶದಲ್ಲಿ ಕಪ್ಪಾ ರೂಪಾಂತರಿ ಪತ್ತೆ

ಮಹಾರಾಷ್ಟ್ರ, ಕೇರಳದಲ್ಲಿ ಹೆಚ್ಚುತ್ತಲೇ ಇದೆ ಸೋಂಕಿನ ಸಂಖ್ಯೆ-ಉತ್ತರ ಪ್ರದೇಶದಲ್ಲಿ ಕಪ್ಪಾ ರೂಪಾಂತರಿ ಪತ್ತೆ

- Advertisement -
- Advertisement -

ದೇಶದಲ್ಲಿ ಕೋವಿಡ್‌ ಎರಡನೇ ಅಲೆ ಮುಕ್ತಾಯವಾಯಿತು ಎಂದು ಅನ್ನುತ್ತಿರುವಾಗಲೇ ಮತ್ತೊಮ್ಮೆ ಕೊರೋನಾ ಭೀತಿ ಆರಂಭವಾಗಿದೆ. ಇದಕ್ಕೆ ಕಾರಣ ಕೆಲವು ರಾಜ್ಯಗಳಲ್ಲಿ ಕಳೆದೊಂದು ವಾರದಿಂದ ಹೆಚ್ಚುತ್ತಿರುವ ಕೊರೋನಾ ಸೊಂಕಿನ ಸಂಖ್ಯೆ. ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಜುಲೈ ಮೊದಲವಾರದಿಂದ ಆರಂಭವಾದ ಸೋಂಕಿತರ ಸಂಖ್ಯೆಯಲ್ಲಿನ ಹೆಚ್ಚಳ ಎರಡನೇ ವಾರದ ಹೊತ್ತಿಗೆ ಗಣನೀಯ ಸಂಖ್ಯೆಯನ್ನು ತಲುಪಿದೆ. ನಿರ್ಭಂದಗಳನ್ನು ತೆರವುಗೊಳಿಸಿದ ಪರಿಣಾಮವಾಗಿ ಪ್ರವಾಸಿ ತಾಣಗಳು ತುಂಬಿ ತುಳುಕಾಡುತ್ತಿವೆ. ಇದರ ನಡುವೆ ಹೊಸ ಅಪಾಯಕಾರಿ ಕಪ್ಪಾ ರೂಪಾಂತರಿ ವೈರಸ್‌ ಉತ್ತರ ಪ್ರದೇಶದಲ್ಲಿ ಪತ್ತೆಯಾಗಿದೆ.

ದೇಶದ ಕೋವಿಡ್ -19 ಪರಿಸ್ಥಿತಿಯ ಕುರಿತು ಪತ್ರಿಕಾಗೋಷ್ಠಿಯನ್ನು ನಡೆಸಿದ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರ್ವಾಲ್, ದೇಶದಲ್ಲಿ  ವೈರಸ್ ಇನ್ನೂ ಹರಡುತ್ತಿದೆ. ಕೋವಿಡ್ ಮಾನದಂಡಗಳ ಉಲ್ಲಂಘನೆ ಕಳವಳಕಾರಿಯಾಗಿದೆ.ದೇಶದ ಒಟ್ಟು ಕೋವಿಡ್ -19 ಪ್ರಕರಣಗಳಲ್ಲಿ  50% ಕ್ಕು ಹೆಚ್ಚು ಪ್ರಕರಣಗಳು ಮಹಾರಾಷ್ಟ್ರ ಮತ್ತು ಕೇರಳದಿಂದ ಬಂದಿವೆ. ಕೇರಳದ 14 ಮತ್ತು ಮಹಾರಾಷ್ಟ್ರದ 15 ಜಿಲ್ಲೆಗಳ ಪರಿಸ್ಥಿತಿ ಕಳವಳಕಾರಿಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕೇರಳದಲ್ಲಿ ಕಳೆದ 24 ಗಂಟೆಯಲ್ಲಿ ಕೊರೋನಾ ವೈರಸ್‌ನ 13,772 ಪ್ರಕರಣಗಳು ಪತ್ತೆಯಾಗಿವೆ. ಮಹಾರಾಷ್ಟ್ರದಲ್ಲಿ 9,083 ಜನರು ಸೋಂಕಿಗೆ ತುತ್ತಾಗಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕಿನ ಹೊಸ ಪ್ರಕರಣಗಳ ಸಂಖ್ಯೆ 43,504 ಇದೆ. 3,211 ಪ್ರಕರಣಗಳೊಂದಿಗೆ ತಮಿಳುನಾಡು, ಆಂಧ್ರಪ್ರದೇಶ 2,982 ಗಳು ನಂತರ ಸ್ಥಾನದಲ್ಲಿ ಇವೆ. ಅಸ್ಸಾಂನಲ್ಲಿ 2,644 ಹೊಸ ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: ಮಕ್ಕಳಿಗೂ ಬಂತು ಕೋವಿಡ್ ಲಸಿಕೆ : ಸೆಪ್ಟೆಂಬರ್‌ನಲ್ಲಿ ಝೈಡಸ್‌ ಕ್ಯಾಡಿಲಾ ವ್ಯಾಕ್ಸಿನ್‌-ಎನ್‌.ಕೆ. ಅರೋರಾ

ಕರ್ನಾಟಕದಲ್ಲಿ  2,530 ಹೊಸ ಪ್ರಕರಣಗಳು ದಾಖಲಾಗಿದ್ದು 62 ಜನರು ಕೋವಿಡ್‌ ಕಾರಣದಿಂದ ಮೃತಪಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ ಮಾತ್ರ ಕೋವಿಡ್ ಸಾವಿನ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು ಒಂದೇ ದಿನ 439 ಜನರು ಸೋಂಕಿಗೆ ಮೃತಪಟ್ಟಿದ್ದಾರೆ. ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೋವಿಡ್‌ ಪಾಸಿಟಿವಿಟಿ ದರ 10% ಕ್ಕಿಂತಲೂ ಹೆಚ್ಚಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.

ನಿರ್ಬಂಧಗಳನ್ನು ಸಡಿಲಿಸಿದ ಕಾರಣಕ್ಕೆ  ಜನರ ಓಡಾಟವೂ ಹೆಚ್ಚಿದ್ದು ಮುಂಬೈ. ದೆಹಲಿ ಸೇರಿದಂತೆ ದೇಶದ ನಗರಗಳ ಸಾರ್ವಜನಿಕ ಸ್ಥಳಗಳಲ್ಲಿ ಜನ ಸಂದಣಿ ಉಂಟಾಗುತ್ತಿರುವುದು ಕೂಡ ಸೋಂಕು ಹೆಚ್ಚುಳಕ್ಕೆ ಒಂದು ಕಾರಣ. ಕೋವಿಡ್ ಮೂರನೆ ಅಲೆ ದೇಶದಲ್ಲಿ ಆರಂಭವಾಗಿರುವ ಸೂಚನೆ ಇದಾಗಿರಬಹುದು. ಕೇಂದ್ರ ಆರೋಗ್ಯ ಇಲಾಖೆಯಾಗಲಿ ಅಥವಾ ತಜ್ಞರಾಗಲಿ ಮೂರನೇ ಅಲೆ ಆರಂಭವಾಗಿರುವ ಕುರಿತು ಇದುವರೆಗೆ ಅಧಿಕೃತವಾದ ಮಾಹಿತಿ ನೀಡಿಲ್ಲ.

ಪಂಜಾಬ್‌ನಲ್ಲಿ ಕ್ಯಾಪ್ಟನ್‌ ಅಮರಿಂರ್‌ ಸಿಂಗ್ ಸರ್ಕಾರ ವಾರಾಂತ್ಯದ ಕರ್ಪ್ಯು ಮತ್ತು ರಾತ್ರಿ ಕರ್ಪ್ಯುಗಳನ್ನು ತೆಗೆದಿದೆ.

ಇದನ್ನೂ ಓದಿ: ಅಮೆರಿಕಾದಲ್ಲಿ ಡೆಲ್ಟಾ ರೂಪಾಂತರಿಯಿಂದ ಹೆಚ್ಚಾದ, ಕೊರೊನಾ ಪ್ರಕರಣಗಳು!

ಉತ್ತರ ಪ್ರದೇಶದಲ್ಲಿ ಹೊಸ ರೂಪಾಂತರಿ ಕಪ್ಪಾ ವೈರಸ್‌ ತಳಿಯ 2 ಪ್ರಕರಣಗಳು ಪತ್ತೆ

ವ್ಯಾಪಕವಾಗಿ ಹರಡಬಲ್ಲ ಕೊವಿಡ್-19ನ ಕಪ್ಪಾ ತಳಿ ರೂಪಾಂತರ ಸೋಂಕುಗಳು ಉತ್ತರ ಪ್ರದೇಶದಲ್ಲಿ ಪತ್ತೆಯಾಗಿದೆ.ಕಪ್ಪಾ ತಳಿಯ ಎರಡು ಪ್ರಕರಣಗಳು ಇಲ್ಲಿ ಪತ್ತೆಯಾಗಿರುವುದಾಗಿ ರಾಜ್ಯ ಸರ್ಕಾರ ಹೇಳಿದೆ. ಅಧಿಕೃತ ಹೇಳಿಕೆಯ ಪ್ರಕಾರ ಲಖನೌದ ಕಿಂಗ್ ಜಾರ್ಜ್ ವೈದ್ಯಕೀಯ ಕಾಲೇಜಿನಲ್ಲನ ಮಾದರಿಗಳನ್ನು ಪರೀಕ್ಷೆಗೊಳಪಡಿಸಿದಾಗ ಈ ತಳಿ ಪತ್ತೆಯಾಗಿದೆ. ಶುಕ್ರವಾರ ಬಿಡುಗಡೆ ಮಾಡಿದ ಅಧಿಕೃತ ಹೇಳಿಕೆಯಲ್ಲಿ ಉತ್ತರ ಪ್ರದೇಶ ಸರ್ಕಾರ ಈ ಬಗ್ಗೆ  ಮಾಹಿತಿ ನೀಡಿದೆ.

ಕಾಪ್ಪಾ ರೂಪಂತರಿ ಕುರಿತಾಗಿ ಮಾಹಿತಿ ನೀಡಿದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಮಿತ್ ಮೋಹನ್ ಪ್ರಸಾದ್ ಅವರು, ‘ಜೀನೋಮ್ ಸೀಕ್ವೆನ್ಸಿಂಗ್ ಎನ್ನುವುದು ಪ್ರಯೋಗಾಲಯ ಪ್ರಕ್ರಿಯೆಯಾಗಿದ್ದು, ಇದು ರೂಪಾಂತರಗಳನ್ನು ನಿರೂಪಿಸಲು ಮತ್ತು ರೋಗ ಪತ್ತೆಹಚ್ಚಲಿರುವ ವಿಧಾನವಾಗಿದೆ. ಪ್ರಸ್ತುತ, ಉತ್ತರ ಪ್ರದೇಶ  ರಾಜ್ಯದಲ್ಲಿ ದೈನಂದಿನ ಕೋವಿಡ್‌ ಪಾಸಿಟಿವಿಟಿ ದರವು ಶೇಕಡಾ 0.04ರಷ್ಟಿದೆ.ಈ ಹಿಂದೆಯೇ ಈ ಕಪ್ಪಾ ರೂಪಾಂತರಿ ತಳಿಯ  ಪ್ರಕರಣಗಳು ರಾಜ್ಯದಲ್ಲಿ ಕಂಡುಬಂದಿವೆ ಎಂದು ಹೇಳಿದ್ದಾರೆ.

ಈ ಕಪ್ಪಾರೂಪಾಂತರಿ ಬಗ್ಗೆ ಚಿಂತೆ ಮಾಡುವ ಅಗತ್ಯವಿಲ್ಲ. ಇದು ಕೊರೊನಾ ವೈರಸ್ನ ಒಂದು ರೂಪಾಂತರವಾಗಿದೆ ಮತ್ತು ಅದರ ಚಿಕಿತ್ಸೆಯು ಸಾಧ್ಯವಿದೆ. ಎಚ್ಚರಿಕೆಯ ಕ್ರಮವಾಗಿ, ಪೀಡಿತ ಜಿಲ್ಲೆಗಳ ಹೆಸರುಗಳು ಅಥವಾ ಅದರ ಮೂಲದ ಸ್ಥಳಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಪ್ರಸಾದ್ ಹೇಳಿದರು.

 ಸೋಂಕಿನ ಎರಡನೆಯ ಅಲೆಯ ನಡುವೆಯೇ ಡೆಲ್ಟಾ, ಆಲ್ಫಾ ಮತ್ತು ಕಪ್ಪಾದಂತಹ ರೂಪಾಂತರಗಳು ಹೆಚ್ಚು ಹರಡುತ್ತವೆ ಎಂದು ಹೇಳಲಾಗುತ್ತಿರುವುದರಿಂದ ರಾಜ್ಯಗಳಿಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರ ಈಗಾಗಲೇ ಎಚ್ಚರಿಸಿದೆ.

ಇದನ್ನೂ ಓದಿ: ಕೊರೊನಾ ಸೋಂಕಿತರಾಗಿ, ದಾನಿಗಳ ನೆರವಿನ ನಿರೀಕ್ಷೆಯಲ್ಲಿದ್ದಾರೆ ಕರ್ನಾಟಕದ ಮಾನವ ಕಂಪ್ಯೂಟರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...