Homeಮುಖಪುಟಅಧಿಕಾರ ಕೇಂದ್ರದ ಅತ್ಯಾಪ್ತ ಹಿಮಾಚಲದ ವೀರಭದ್ರ ಸಿಂಗ್‌

ಅಧಿಕಾರ ಕೇಂದ್ರದ ಅತ್ಯಾಪ್ತ ಹಿಮಾಚಲದ ವೀರಭದ್ರ ಸಿಂಗ್‌

- Advertisement -
- Advertisement -

ಜುಲೈ 8 ರಂದು ನಿಧನರಾದ ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ತಮ್ಮ ಹೆಸರಿನಲ್ಲಿ ವಿಶಿಷ್ಟ ದಾಖಲೆಯನ್ನು ಹೊಂದಿದ್ದಾರೆ. ಇವರ ರಾಜಕೀಯದ ಆರಂಭದ ದಿನಗಳಿಂದಲೂ ಅಧಿಕಾರ ಒಲಿದು ಬಂದಿದೆ. ಯುವ ರಾಜಕಾರಣಿಯಾಗಿದ್ದಲೇ ವೀರಭದ್ರ ಸಿಂಗ್ ಕೇಂದ್ರ ಸರ್ಕಾರದಲ್ಲಿ ಮಂತ್ರಿಯಾಗಿದ್ದರು.

ಇಂದಿರಾಗಂಧಿ ಆಪ್ತರಲ್ಲಿ ಒಬ್ಬರಾಗಿದ್ದ ವೀರಭದ್ರ ಸಿಂಗ್ ಸತತ 6 ದಶಕಗಳ ಕಾಲ ಕಾಂಗ್ರೆಸ್‌ ಪಕ್ಷದ ಹೈಕಮಾಂಡ್‌ಗೆ ಅತ್ಯಂತ ಆಪ್ತರಾಗಿಯೇ ಮುಂದುವರೆದಿದ್ದರು. 1976 ರಲ್ಲಿ ಇಂದಿರಾ ಗಾಂಧಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ವಿಮಾನಯಾನ ಮತ್ತು ಪ್ರವಾಸೋದ್ಯಮ ಖಾತೆಯ ರಾಜ್ಯ ಮಂತ್ರಿಯಾಗಿದ್ದ ವೀರಭದ್ರ ಸಿಂಗ್‌ ಮನಮೋಹನ್‌ ಸಿಂಗ್‌ ಪ್ರಧಾನಿಯಾದ  ಅವಧಿಯಲ್ಲೂ ಬಹು ಮಖ್ಯ ಖಾತೆಯನ್ನು ಹೊಂದಿದ್ದರು. ಕೇಂದ್ರದಲ್ಲಿ 4 ಸಾರಿ ಮಂತ್ರಿ ರಾಜ್ಯದಲ್ಲಿ 6 ಸಾರಿ ಮುಖ್ಯಮಂತ್ರಿ, 9 ಅವಧಿಗೆ ಶಾಸಕ, 5 ಅವಧಿಗೆ ಸಂಸದ ಭಾರತ ರಾಜಕೀಯದಲ್ಲಿ ಇಂದೊಂದು ದಾಖಲೆಯಾಗಿ ಉಳಿದಿದೆ. 1971 ರಲ್ಲಿ ಹಿಮಾಚಲ ಪ್ರದೇಶ ಸ್ಥಾಪನೆಯಾದಾಗಿನಿಂದ ಇದುವರೆ ವೀರಭಧ್ರ ಸಿಂಗ್‌ ದೀರ್ಘಾವಧಿಗೆ ಮುಖ್ಯಮಂತ್ರಿಯಾಗಿದ್ದ ದಾಖಲೆಯನ್ನು ಹೊಂದಿದ್ದರು. ಹಿಮಾಚಲದಲ್ಲಿ ಅವರನ್ನು ರಾಜಾ ಸಾಹೇಬ್ ಎಂದೇ ಕರೆಯುತ್ತಿದ್ದುದು ವಿಶೇಷ.

ಕೊನೆಗೆ ತಾವು ಕೊನೆಯುಸಿರೆಳೆಯುವ ದಿನದಲ್ಲೂ ವೀರಭದ್ರ ಸಿಂಗ್ ಹಿಮಾಚಲ ಪ್ರದೇಶ ವಿಧಾನಸಭೆ ಸದಸ್ಯರಾಗಿದ್ರು ಎಂಬುದು ವಿಶೇಷ.1962ರ ಲೋಕಸಭೆ ಚುನಾವಣೆಯಿಂದ 2017ರ ಚುನಾವಣೆಯ ನಡುವಿನ ಅವಧಿಯಲ್ಲಿ ವೀರಭದ್ರ ಸಿಂಗ್ ಭಾರತ ರಾಜಕೀಯ ಮತ್ತು ಹಿಮಾಚಲ ಪ್ರದೇಶದ ರಾಜಕೀಯದಲ್ಲಿ ವಿಶೇಷ ಛಾಪನ್ನು ಒತ್ತಿಹೋಗಿದ್ದಾರೆ.

ವೀರಭದ್ರ ಸಿಂಗ್ ಪತ್ನಿ ಪ್ರತಿಭಾ ಸಿಂಗ್ ಹಾಗೂ ಪುತ್ರ ವಿಕ್ರಮಾದಿತ್ಯ ಸಿಂಗ್‌ ಕೂಡ ರಾಜಕಾರಣಿಗಳಾಗಿದ್ದಾರೆ. ಪ್ರತಿಭಾ ಅವರು ಹಿಂದೆ ಲೋಕಸಭೆ ಸದಸ್ಯರಾಗಿದ್ರು, ವಿಕ್ರಮಾದಿತ್ಯ ಸಿಂಗ್ ಶಿಮ್ಲಾ ಗ್ರಾಮೀಣ ಕ್ಷೇತದ ಶಾಸಕರಾಗಿದ್ದಾರೆ.

ಸಿಂಗ್‌ ಕುಟುಂಬ ಜೂನ್‌ 23 ರಂದು ವೀರಭದ್ರ ಸಿಂಗ್ ಅವರ 87 ನೇ ಹುಟ್ಟಿದ ದಿನವನ್ನು ಆಚರಿಸಿತ್ತು. ಈ ಸಂದರ್ಭದಲ್ಲಿ ನೂರಾರು ಸಂಖ್ಯೆಯ ಬೆಂಬಲಿಗರು ನೆರೆದಿದ್ದರು. 1983 ರಿಂದ 2012 ರ ಅವಧಿಯಲ್ಲಿ ವೀರಭದ್ರ ಸಿಂಗ್ 6 ಭಾರಿ ಹಿಮಾಚಲ ಪ್ರದೇಶ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಇಂದಿರಾ ಗಾಂಧಿ ಪ್ರಧಾನಿಯಾದ ಕಾಲದಿಂದ ಮನಮೋಹನ್‌ ಸಿಂಗ್ ಅವಧಿಯಲ್ಲಿ ಒಟ್ಟು 4 ಸಾರಿ ಕೇಂದ್ರ ಸಚಿವ ಸಂಪುಟದಲ್ಲಿ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. 65 ವರ್ಷಗಳ ತಮ್ಮ ರಾಜಕೀಯದ ಸುದೀರ್ಘ ಪ್ರಯಾಣದಲ್ಲಿ ಸುಮಾರು 50 ವರ್ಷಗಳ ಕಾಲ ವೀರಭದ್ರ ಸಿಂಗ್ ಮಂತ್ರಿಯಾಗಿ ಅಥವಾ ಮುಖ್ಯ ಮಂತ್ರಿಯಾಗಿ ಅಧಿಕಾರವನ್ನು ಹೊಂದಿದ್ದರೆಂಬುದು ವಿಶೇಷ.

2015 ರ ಅವಧಿಯಲ್ಲಿ ಭೃಷ್ಟಾಚಾರ ಮತ್ತು ಆದಾಯಕ್ಕು ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ವೀರಭದ್ರ ಸಿಂಗ್ ಹೆಸರು ತಳಕು ಹಾಕಿಕೊಂಡಿತ್ತು ಮತ್ತು ಸಿಬಿಐ ಈ ಸಂಬಂಧ ತನಿಖೆಯನ್ನು ಸಹ ನಡೆಸುತ್ತಿತ್ತು.

-ರಾಜೇಶ್ ಹೆಬ್ಬಾರ್

ಇದನ್ನೂ ಓದಿ: ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ನಿಧನ, 3 ದಿನಗಳ ಶೋಕಾಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...