Homeಮುಖಪುಟಅಧಿಕಾರ ಕೇಂದ್ರದ ಅತ್ಯಾಪ್ತ ಹಿಮಾಚಲದ ವೀರಭದ್ರ ಸಿಂಗ್‌

ಅಧಿಕಾರ ಕೇಂದ್ರದ ಅತ್ಯಾಪ್ತ ಹಿಮಾಚಲದ ವೀರಭದ್ರ ಸಿಂಗ್‌

- Advertisement -
- Advertisement -

ಜುಲೈ 8 ರಂದು ನಿಧನರಾದ ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ತಮ್ಮ ಹೆಸರಿನಲ್ಲಿ ವಿಶಿಷ್ಟ ದಾಖಲೆಯನ್ನು ಹೊಂದಿದ್ದಾರೆ. ಇವರ ರಾಜಕೀಯದ ಆರಂಭದ ದಿನಗಳಿಂದಲೂ ಅಧಿಕಾರ ಒಲಿದು ಬಂದಿದೆ. ಯುವ ರಾಜಕಾರಣಿಯಾಗಿದ್ದಲೇ ವೀರಭದ್ರ ಸಿಂಗ್ ಕೇಂದ್ರ ಸರ್ಕಾರದಲ್ಲಿ ಮಂತ್ರಿಯಾಗಿದ್ದರು.

ಇಂದಿರಾಗಂಧಿ ಆಪ್ತರಲ್ಲಿ ಒಬ್ಬರಾಗಿದ್ದ ವೀರಭದ್ರ ಸಿಂಗ್ ಸತತ 6 ದಶಕಗಳ ಕಾಲ ಕಾಂಗ್ರೆಸ್‌ ಪಕ್ಷದ ಹೈಕಮಾಂಡ್‌ಗೆ ಅತ್ಯಂತ ಆಪ್ತರಾಗಿಯೇ ಮುಂದುವರೆದಿದ್ದರು. 1976 ರಲ್ಲಿ ಇಂದಿರಾ ಗಾಂಧಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ವಿಮಾನಯಾನ ಮತ್ತು ಪ್ರವಾಸೋದ್ಯಮ ಖಾತೆಯ ರಾಜ್ಯ ಮಂತ್ರಿಯಾಗಿದ್ದ ವೀರಭದ್ರ ಸಿಂಗ್‌ ಮನಮೋಹನ್‌ ಸಿಂಗ್‌ ಪ್ರಧಾನಿಯಾದ  ಅವಧಿಯಲ್ಲೂ ಬಹು ಮಖ್ಯ ಖಾತೆಯನ್ನು ಹೊಂದಿದ್ದರು. ಕೇಂದ್ರದಲ್ಲಿ 4 ಸಾರಿ ಮಂತ್ರಿ ರಾಜ್ಯದಲ್ಲಿ 6 ಸಾರಿ ಮುಖ್ಯಮಂತ್ರಿ, 9 ಅವಧಿಗೆ ಶಾಸಕ, 5 ಅವಧಿಗೆ ಸಂಸದ ಭಾರತ ರಾಜಕೀಯದಲ್ಲಿ ಇಂದೊಂದು ದಾಖಲೆಯಾಗಿ ಉಳಿದಿದೆ. 1971 ರಲ್ಲಿ ಹಿಮಾಚಲ ಪ್ರದೇಶ ಸ್ಥಾಪನೆಯಾದಾಗಿನಿಂದ ಇದುವರೆ ವೀರಭಧ್ರ ಸಿಂಗ್‌ ದೀರ್ಘಾವಧಿಗೆ ಮುಖ್ಯಮಂತ್ರಿಯಾಗಿದ್ದ ದಾಖಲೆಯನ್ನು ಹೊಂದಿದ್ದರು. ಹಿಮಾಚಲದಲ್ಲಿ ಅವರನ್ನು ರಾಜಾ ಸಾಹೇಬ್ ಎಂದೇ ಕರೆಯುತ್ತಿದ್ದುದು ವಿಶೇಷ.

ಕೊನೆಗೆ ತಾವು ಕೊನೆಯುಸಿರೆಳೆಯುವ ದಿನದಲ್ಲೂ ವೀರಭದ್ರ ಸಿಂಗ್ ಹಿಮಾಚಲ ಪ್ರದೇಶ ವಿಧಾನಸಭೆ ಸದಸ್ಯರಾಗಿದ್ರು ಎಂಬುದು ವಿಶೇಷ.1962ರ ಲೋಕಸಭೆ ಚುನಾವಣೆಯಿಂದ 2017ರ ಚುನಾವಣೆಯ ನಡುವಿನ ಅವಧಿಯಲ್ಲಿ ವೀರಭದ್ರ ಸಿಂಗ್ ಭಾರತ ರಾಜಕೀಯ ಮತ್ತು ಹಿಮಾಚಲ ಪ್ರದೇಶದ ರಾಜಕೀಯದಲ್ಲಿ ವಿಶೇಷ ಛಾಪನ್ನು ಒತ್ತಿಹೋಗಿದ್ದಾರೆ.

ವೀರಭದ್ರ ಸಿಂಗ್ ಪತ್ನಿ ಪ್ರತಿಭಾ ಸಿಂಗ್ ಹಾಗೂ ಪುತ್ರ ವಿಕ್ರಮಾದಿತ್ಯ ಸಿಂಗ್‌ ಕೂಡ ರಾಜಕಾರಣಿಗಳಾಗಿದ್ದಾರೆ. ಪ್ರತಿಭಾ ಅವರು ಹಿಂದೆ ಲೋಕಸಭೆ ಸದಸ್ಯರಾಗಿದ್ರು, ವಿಕ್ರಮಾದಿತ್ಯ ಸಿಂಗ್ ಶಿಮ್ಲಾ ಗ್ರಾಮೀಣ ಕ್ಷೇತದ ಶಾಸಕರಾಗಿದ್ದಾರೆ.

ಸಿಂಗ್‌ ಕುಟುಂಬ ಜೂನ್‌ 23 ರಂದು ವೀರಭದ್ರ ಸಿಂಗ್ ಅವರ 87 ನೇ ಹುಟ್ಟಿದ ದಿನವನ್ನು ಆಚರಿಸಿತ್ತು. ಈ ಸಂದರ್ಭದಲ್ಲಿ ನೂರಾರು ಸಂಖ್ಯೆಯ ಬೆಂಬಲಿಗರು ನೆರೆದಿದ್ದರು. 1983 ರಿಂದ 2012 ರ ಅವಧಿಯಲ್ಲಿ ವೀರಭದ್ರ ಸಿಂಗ್ 6 ಭಾರಿ ಹಿಮಾಚಲ ಪ್ರದೇಶ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಇಂದಿರಾ ಗಾಂಧಿ ಪ್ರಧಾನಿಯಾದ ಕಾಲದಿಂದ ಮನಮೋಹನ್‌ ಸಿಂಗ್ ಅವಧಿಯಲ್ಲಿ ಒಟ್ಟು 4 ಸಾರಿ ಕೇಂದ್ರ ಸಚಿವ ಸಂಪುಟದಲ್ಲಿ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. 65 ವರ್ಷಗಳ ತಮ್ಮ ರಾಜಕೀಯದ ಸುದೀರ್ಘ ಪ್ರಯಾಣದಲ್ಲಿ ಸುಮಾರು 50 ವರ್ಷಗಳ ಕಾಲ ವೀರಭದ್ರ ಸಿಂಗ್ ಮಂತ್ರಿಯಾಗಿ ಅಥವಾ ಮುಖ್ಯ ಮಂತ್ರಿಯಾಗಿ ಅಧಿಕಾರವನ್ನು ಹೊಂದಿದ್ದರೆಂಬುದು ವಿಶೇಷ.

2015 ರ ಅವಧಿಯಲ್ಲಿ ಭೃಷ್ಟಾಚಾರ ಮತ್ತು ಆದಾಯಕ್ಕು ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ವೀರಭದ್ರ ಸಿಂಗ್ ಹೆಸರು ತಳಕು ಹಾಕಿಕೊಂಡಿತ್ತು ಮತ್ತು ಸಿಬಿಐ ಈ ಸಂಬಂಧ ತನಿಖೆಯನ್ನು ಸಹ ನಡೆಸುತ್ತಿತ್ತು.

-ರಾಜೇಶ್ ಹೆಬ್ಬಾರ್

ಇದನ್ನೂ ಓದಿ: ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ನಿಧನ, 3 ದಿನಗಳ ಶೋಕಾಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...