Homeಮುಖಪುಟಅಧಿಕಾರ ಕೇಂದ್ರದ ಅತ್ಯಾಪ್ತ ಹಿಮಾಚಲದ ವೀರಭದ್ರ ಸಿಂಗ್‌

ಅಧಿಕಾರ ಕೇಂದ್ರದ ಅತ್ಯಾಪ್ತ ಹಿಮಾಚಲದ ವೀರಭದ್ರ ಸಿಂಗ್‌

- Advertisement -
- Advertisement -

ಜುಲೈ 8 ರಂದು ನಿಧನರಾದ ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ತಮ್ಮ ಹೆಸರಿನಲ್ಲಿ ವಿಶಿಷ್ಟ ದಾಖಲೆಯನ್ನು ಹೊಂದಿದ್ದಾರೆ. ಇವರ ರಾಜಕೀಯದ ಆರಂಭದ ದಿನಗಳಿಂದಲೂ ಅಧಿಕಾರ ಒಲಿದು ಬಂದಿದೆ. ಯುವ ರಾಜಕಾರಣಿಯಾಗಿದ್ದಲೇ ವೀರಭದ್ರ ಸಿಂಗ್ ಕೇಂದ್ರ ಸರ್ಕಾರದಲ್ಲಿ ಮಂತ್ರಿಯಾಗಿದ್ದರು.

ಇಂದಿರಾಗಂಧಿ ಆಪ್ತರಲ್ಲಿ ಒಬ್ಬರಾಗಿದ್ದ ವೀರಭದ್ರ ಸಿಂಗ್ ಸತತ 6 ದಶಕಗಳ ಕಾಲ ಕಾಂಗ್ರೆಸ್‌ ಪಕ್ಷದ ಹೈಕಮಾಂಡ್‌ಗೆ ಅತ್ಯಂತ ಆಪ್ತರಾಗಿಯೇ ಮುಂದುವರೆದಿದ್ದರು. 1976 ರಲ್ಲಿ ಇಂದಿರಾ ಗಾಂಧಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ವಿಮಾನಯಾನ ಮತ್ತು ಪ್ರವಾಸೋದ್ಯಮ ಖಾತೆಯ ರಾಜ್ಯ ಮಂತ್ರಿಯಾಗಿದ್ದ ವೀರಭದ್ರ ಸಿಂಗ್‌ ಮನಮೋಹನ್‌ ಸಿಂಗ್‌ ಪ್ರಧಾನಿಯಾದ  ಅವಧಿಯಲ್ಲೂ ಬಹು ಮಖ್ಯ ಖಾತೆಯನ್ನು ಹೊಂದಿದ್ದರು. ಕೇಂದ್ರದಲ್ಲಿ 4 ಸಾರಿ ಮಂತ್ರಿ ರಾಜ್ಯದಲ್ಲಿ 6 ಸಾರಿ ಮುಖ್ಯಮಂತ್ರಿ, 9 ಅವಧಿಗೆ ಶಾಸಕ, 5 ಅವಧಿಗೆ ಸಂಸದ ಭಾರತ ರಾಜಕೀಯದಲ್ಲಿ ಇಂದೊಂದು ದಾಖಲೆಯಾಗಿ ಉಳಿದಿದೆ. 1971 ರಲ್ಲಿ ಹಿಮಾಚಲ ಪ್ರದೇಶ ಸ್ಥಾಪನೆಯಾದಾಗಿನಿಂದ ಇದುವರೆ ವೀರಭಧ್ರ ಸಿಂಗ್‌ ದೀರ್ಘಾವಧಿಗೆ ಮುಖ್ಯಮಂತ್ರಿಯಾಗಿದ್ದ ದಾಖಲೆಯನ್ನು ಹೊಂದಿದ್ದರು. ಹಿಮಾಚಲದಲ್ಲಿ ಅವರನ್ನು ರಾಜಾ ಸಾಹೇಬ್ ಎಂದೇ ಕರೆಯುತ್ತಿದ್ದುದು ವಿಶೇಷ.

ಕೊನೆಗೆ ತಾವು ಕೊನೆಯುಸಿರೆಳೆಯುವ ದಿನದಲ್ಲೂ ವೀರಭದ್ರ ಸಿಂಗ್ ಹಿಮಾಚಲ ಪ್ರದೇಶ ವಿಧಾನಸಭೆ ಸದಸ್ಯರಾಗಿದ್ರು ಎಂಬುದು ವಿಶೇಷ.1962ರ ಲೋಕಸಭೆ ಚುನಾವಣೆಯಿಂದ 2017ರ ಚುನಾವಣೆಯ ನಡುವಿನ ಅವಧಿಯಲ್ಲಿ ವೀರಭದ್ರ ಸಿಂಗ್ ಭಾರತ ರಾಜಕೀಯ ಮತ್ತು ಹಿಮಾಚಲ ಪ್ರದೇಶದ ರಾಜಕೀಯದಲ್ಲಿ ವಿಶೇಷ ಛಾಪನ್ನು ಒತ್ತಿಹೋಗಿದ್ದಾರೆ.

ವೀರಭದ್ರ ಸಿಂಗ್ ಪತ್ನಿ ಪ್ರತಿಭಾ ಸಿಂಗ್ ಹಾಗೂ ಪುತ್ರ ವಿಕ್ರಮಾದಿತ್ಯ ಸಿಂಗ್‌ ಕೂಡ ರಾಜಕಾರಣಿಗಳಾಗಿದ್ದಾರೆ. ಪ್ರತಿಭಾ ಅವರು ಹಿಂದೆ ಲೋಕಸಭೆ ಸದಸ್ಯರಾಗಿದ್ರು, ವಿಕ್ರಮಾದಿತ್ಯ ಸಿಂಗ್ ಶಿಮ್ಲಾ ಗ್ರಾಮೀಣ ಕ್ಷೇತದ ಶಾಸಕರಾಗಿದ್ದಾರೆ.

ಸಿಂಗ್‌ ಕುಟುಂಬ ಜೂನ್‌ 23 ರಂದು ವೀರಭದ್ರ ಸಿಂಗ್ ಅವರ 87 ನೇ ಹುಟ್ಟಿದ ದಿನವನ್ನು ಆಚರಿಸಿತ್ತು. ಈ ಸಂದರ್ಭದಲ್ಲಿ ನೂರಾರು ಸಂಖ್ಯೆಯ ಬೆಂಬಲಿಗರು ನೆರೆದಿದ್ದರು. 1983 ರಿಂದ 2012 ರ ಅವಧಿಯಲ್ಲಿ ವೀರಭದ್ರ ಸಿಂಗ್ 6 ಭಾರಿ ಹಿಮಾಚಲ ಪ್ರದೇಶ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಇಂದಿರಾ ಗಾಂಧಿ ಪ್ರಧಾನಿಯಾದ ಕಾಲದಿಂದ ಮನಮೋಹನ್‌ ಸಿಂಗ್ ಅವಧಿಯಲ್ಲಿ ಒಟ್ಟು 4 ಸಾರಿ ಕೇಂದ್ರ ಸಚಿವ ಸಂಪುಟದಲ್ಲಿ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. 65 ವರ್ಷಗಳ ತಮ್ಮ ರಾಜಕೀಯದ ಸುದೀರ್ಘ ಪ್ರಯಾಣದಲ್ಲಿ ಸುಮಾರು 50 ವರ್ಷಗಳ ಕಾಲ ವೀರಭದ್ರ ಸಿಂಗ್ ಮಂತ್ರಿಯಾಗಿ ಅಥವಾ ಮುಖ್ಯ ಮಂತ್ರಿಯಾಗಿ ಅಧಿಕಾರವನ್ನು ಹೊಂದಿದ್ದರೆಂಬುದು ವಿಶೇಷ.

2015 ರ ಅವಧಿಯಲ್ಲಿ ಭೃಷ್ಟಾಚಾರ ಮತ್ತು ಆದಾಯಕ್ಕು ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ವೀರಭದ್ರ ಸಿಂಗ್ ಹೆಸರು ತಳಕು ಹಾಕಿಕೊಂಡಿತ್ತು ಮತ್ತು ಸಿಬಿಐ ಈ ಸಂಬಂಧ ತನಿಖೆಯನ್ನು ಸಹ ನಡೆಸುತ್ತಿತ್ತು.

-ರಾಜೇಶ್ ಹೆಬ್ಬಾರ್

ಇದನ್ನೂ ಓದಿ: ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ನಿಧನ, 3 ದಿನಗಳ ಶೋಕಾಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...