Homeಮುಖಪುಟಹೊಸ ಗೌಪ್ಯತಾ ನೀತಿಗೆ ತಾತ್ಕಾಲಿಕ ತಡೆ: ಹೈಕೋರ್ಟ್‌ನಲ್ಲಿ ವಾಟ್ಸಪ್

ಹೊಸ ಗೌಪ್ಯತಾ ನೀತಿಗೆ ತಾತ್ಕಾಲಿಕ ತಡೆ: ಹೈಕೋರ್ಟ್‌ನಲ್ಲಿ ವಾಟ್ಸಪ್

- Advertisement -
- Advertisement -

‘ಡೇಟಾ ಪ್ರೊಟೆಕ್ಷನ್ ಮಸೂದೆ’ ಜಾರಿಗೆ ಬರುವ ತನಕ ತಾತ್ಕಾಲಿಕವಾಗಿ ಗೌಪ್ಯತಾ ನೀತಿಯನ್ನು ತಡೆಹಿಡಿಯಲು ನಿರ್ಧರಿಸಿದೆ ಎಂದು ವಾಟ್ಸಪ್ ಶುಕ್ರವಾರ ತನ್ನ ಗೌಪ್ಯತಾ ನೀತಿಯ ಬಗ್ಗೆ ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ. ವಾಟ್ಸಪ್‌ನ ಹೊಸ ಗೌಪ್ಯತಾ ನೀತಿಯು, ವಾಟ್ಸಪ್‌ನಲ್ಲಿ ನಾವು ನಡೆಸಿದ ಕೆಲವು ಸಂಭಾಷಣೆಗಳನ್ನು ಫೇಸ್‌ಬುಕ್‌ನಲ್ಲಿ ಜಾಹಿರಾತಿಗೆ ಬಳಸಲು ಅನುಮತಿ ನೀಡುತ್ತದೆ.

ಏಕ ನ್ಯಾಯಾಧೀಶರ ಆದೇಶದ ವಿರುದ್ಧ ಮುಖ್ಯ ನ್ಯಾಯಮೂರ್ತಿ ಡಿ ಎನ್ ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರ ನ್ಯಾಯಪೀಠ ಫೇಸ್‌ಬುಕ್ ಮತ್ತು ವಾಟ್ಸಾಪ್ ಮೇಲ್ಮನವಿ ವಿಚಾರಣೆ ನಡೆಸಿತು. ಏಕ ನ್ಯಾಯಾಧೀಶರ ಪೀಠವು, ವಾಟ್ಸಾಪ್‌ನ ಹೊಸ ನೀತಿಯ ಬಗ್ಗೆ ತನಿಖೆ ನಡೆಸಲು ನಿರ್ದೇಶಿಸುವ ಭಾರತದ ‘ನಿಯಂತ್ರಕ ಸ್ಪರ್ಧಾ ಆಯೋಗ’ (ಸಿಸಿಐ)ದ ಆದೇಶವನ್ನು ತಡೆಹಿಡಿಯಲು ನಿರಾಕರಿಸಿತ್ತು.

ವಾಟ್ಸಾಪ್ ಪರವಾಗಿ ಹಾಜರಾದ ವಕೀಲ ಹರೀಶ್ ಸಾಲ್ವೆ ಅವರು “ಹೊಸ ಗೌಪ್ಯತಾ ನೀತಿಯನ್ನು ಸ್ಥಗಿತಗೊಳಿಸಲು ಸರ್ಕಾರ ಕೇಳಿ ಕೊಂಡಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಾಟ್ಸಪ್‌‌ ಹೊಸ ಗೌಪ್ಯತಾ ನೀತಿ ವಿವಾದ – ಹಿಂತೆಗೆದುಕೊಳ್ಳುವಂತೆ ತಾಕೀತು ಮಾಡಿದ ಸರ್ಕಾರ

‘ಡೇಟಾ ಸಂರಕ್ಷಣಾ ಮಸೂದೆ’ ಬರುವವರೆಗೆ ನಾವು ಹೊಸ ಗೌಪ್ಯತಾ ನೀತಿಯನ್ನು ಜಾರಿಗೊಳಿಸುವುದಿಲ್ಲ ಎಂದು ಹೇಳಿದ್ದೇವೆ. ಮಸೂದೆಯು ಯಾವಾಗ ಹೊರಬರುತ್ತದೆ ಎಂದು ನಮಗೆ ತಿಳಿದಿಲ್ಲ. ನಾವು ಇದನ್ನು ಸ್ವಲ್ಪ ಸಮಯದವರೆಗೆ ಮಾಡುವುದಿಲ್ಲ ಎಂದು ಹರೀಶ್‌ ನ್ಯಾಯಾಲಯಕ್ಕೆ ಹೇಳಿದ್ದಾರೆ.

“ನಾವು ಹೊಸ ಗೌಪ್ಯತಾ ನೀತಿಯನ್ನು ತಡೆಹಿಡಿಯಲು ಸ್ವಯಂಪ್ರೇರಣೆಯಿಂದ ಒಪ್ಪಿದ್ದೇವೆ. ಅದನ್ನು ಒಪ್ಪಿಕೊಳ್ಳಲೆ ಬೇಕು ಎಂದು ಬಳಕೆದಾದರನ್ನು ಒತ್ತಾಯಿಸುವುದಿಲ್ಲ” ಎಂದು ಹರೀಶ್ ಸಾಲ್ವೆ ವಾಟ್ಸಪ್‌ ಪರವಾಗಿ ಹೇಳಿದ್ದಾರೆ.

ಭಾರತದಲ್ಲಿ 53 ಕೋಟಿ ಬಳಕೆದಾರರನ್ನು ವಾಟ್ಸ್‌ಪ್‌ ಹೊಂದಿದ್ದು, ಅದು ತನ್ನ ಬಳಕೆದಾರರ ಡೇಟಾವನ್ನು ತನ್ನ ಮಾತೃಸಂಸ್ಥೆ ಫೇಸ್‌ಬುಕ್‌ನೊಂದಿಗೆ ಹಂಚಿಕೊಳ್ಳುತ್ತಿದೆ ಎಂಬ ಬಗ್ಗೆ ಬಳಕೆದಾರರು ಕಳವಳ ವ್ಯಕ್ತಪಡಿಸಿದ್ದರು. ಇದರಿಂದಾಗಿ ಹೊಸ ಗೌಪ್ಯತಾ ನೀತಿಯನ್ನು ಪರಿಚಯಿಸಿದ ನಂತರ ವಾಟ್ಸಪ್‌ ತೀವ್ರ ಹಿನ್ನಡೆ ಅನುಭವಿಸಿತ್ತು. ಹಲವಾರು ಬಳಕೆದಾರರು ಸಿಗ್ನಲ್ ಮತ್ತು ಟೆಲಿಗ್ರಾಮ್‌ನಂತಹ ಅಪ್ಲಿಕೇಶನ್‌ಗಳಿಗೆ ತೆರಳಿದ್ದರು.

ಈ ಹಿಂದೆ ಆಪ್‌ ಬಳಸಬೇಕೆಂದರೆ ತನ್ನ ಹೊಸ ನೀತಿಯನ್ನು ಕಡ್ಡಾಯವಾಗಿ ಒಪ್ಪಿಕೊಳ್ಳಬೇಕು ಎಂದು ವಾಟ್ಸಪ್‌ ಹೇಳಿತ್ತು. ಆದರೆ ನಂತರ ಅದರಿಂದ ಹಿಂದೆ ಸರಿದಿತ್ತು. ಆದರೆ ಹೊಸ ಗೌಪ್ಯತಾ ನೀತಿಯನ್ನು ಒಪ್ಪಿಕೊಳ್ಳುವಂತೆ ಅದು ನೋಟಿಫಿಕೇಷನ್‌ ಕಳುಹಿಸುತ್ತಲೆ ಇದೆ.

ಈ ನೋಟಿಫಿಕೇಷನ್‌ ವಿರುದ್ದ ಸರ್ಕಾರವು ಹೊಸ ಅಫಿಡವಿಟ್ ಕೂಡಾ ಸಲ್ಲಿಸಿತ್ತು. ವಾಟ್ಸಪ್ ಕುತಂತ್ರದಿಂದ ತನ್ನ ಗೌಪ್ಯತಾ ನೀತಿಗೆ ಒಪ್ಪಿಗೆ ಪಡೆಯುತ್ತಿದೆ ಎಂದು ಸರ್ಕಾರ ಹೇಳಿತ್ತು.

ಇದನ್ನೂ ಓದಿ: ಹೊಸ ಗೌಪ್ಯತಾ ನೀತಿಗೆ ಕುತಂತ್ರದಿಂದ ಒಪ್ಪಿಗೆ ಪಡೆಯುತ್ತಿದೆ: ಕೇಂದ್ರದಿಂದ ವಾಟ್ಸಪ್‌‌ ವಿರುದ್ದ ಹೊಸ ಅಫಿಡವಿಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...