HomeUncategorizedಸಿನಿಮಾ ರಂಗಕ್ಕೂ ಕಾಲಿಟ್ಟ ಸುಮಲತಾ, ಹೆಚ್‌ಡಿಕೆ ವಾಗ್ವಾದ; ಅಣೆಕಟ್ಟೆಯಲ್ಲಿ ಬಿರುಕಿಲ್ಲ ಎಂದ ಸರ್ಕಾರ!

ಸಿನಿಮಾ ರಂಗಕ್ಕೂ ಕಾಲಿಟ್ಟ ಸುಮಲತಾ, ಹೆಚ್‌ಡಿಕೆ ವಾಗ್ವಾದ; ಅಣೆಕಟ್ಟೆಯಲ್ಲಿ ಬಿರುಕಿಲ್ಲ ಎಂದ ಸರ್ಕಾರ!

- Advertisement -
- Advertisement -

ಅಕ್ರಮ ಗಣಿಗಾರಿಕೆ, ಕೆಆರ್‌ಎಸ್‌ ಅಣೆಕಟ್ಟಿನ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಮತ್ತು ಮಂಡ್ಯ ಸಂಸದೆ ಸುಮಲತಾ ಅವರ ನಡುವೆ ನಡೆಯುತ್ತಿದ್ದ ಸಂಘರ್ಷ ಇದೀಗ ಸಿನಿಮಾರಂಗಕ್ಕೂ ಕಾಲಿಟ್ಟಿದೆ. ದಿವಂಗತ ನಟ ಅಂಬರೀಶ್‌ ಅವರ ಸ್ಮಾರಕದ ವಿಷಯದಲ್ಲಿ ಹೆಚ್‌ಡಿಕೆ ಅವರನ್ನು ಭೇಟಿಯಾಗಿದ್ದ ನಟ ದೊಡ್ಡಣ್ಣ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಸುಮಲತಾ ಅವರು ಆರೋಪಿಸಿದ್ದಾರೆ. ಇದರ ಜೊತೆಗೆ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್‌ ಅವರು ಕೂಡಾ ಕುಮಾರಸ್ವಾಮಿ ವಿರುದ್ದ ಕಿಡಿಕಾರಿದ್ದಾರೆ.

ರಾಕ್​ಲೈನ್ ವೆಂಕಟೇಶ್ ಹೇಳಿಕೆ ಕುಮಾರಸ್ವಾಮಿ ಬೆಂಬಲಿಗರನ್ನು ಕೆರಳಿಸಿದ್ದು, ಅವರ ಮನೆಗೆ ಮುತ್ತಿಗೆ ಹಾಕಿದ್ದಾರೆ. ಈ ಹಿನ್ನಲೆಯಲ್ಲಿ ಅವರ ಮನೆಯ ರಸ್ತೆಗೆ ಪೊಲೀಸರು ಬಿಗಿ ಭದ್ರತೆ ನೀಡಿದ್ದಾರೆ.

ಇದನ್ನೂ ಓದಿ: ಅಕ್ರಮ ಕಲ್ಲು ಗಣಿಗಾರಿಕೆಗೆ ಎಚ್.ಡಿ.ಕುಮಾರಸ್ವಾಮಿಯೇ ಪ್ರಮುಖ ರೂವಾರಿ: ಎಎಪಿ

ಶುಕ್ರವಾರ ಕುಮಾರಸ್ವಾಮಿ ವಿರುದ್ಧ ಮಾತನಾಡಿದ್ದ ರಾಕ್​ಲೈನ್ ವೆಂಕಟೇಶ್, ಮಂಡ್ಯ ಲೋಕಸಭಾ ಚುನಾವಣೆ ವೇಳೆ ನನ್ನ ಮತ್ತು ಸುಮಲತಾರ ಅಶ್ಲೀಲ ವಿಡಿಯೋ ಸೃಷ್ಟಿಸಲು ಕುಮಾರಸ್ವಾಮಿ ಯತ್ನಿಸಿದ್ದರು. ವೈಯಕ್ತಿಕ ದಾಳಿಗೆ ಇಳಿದಿದ್ದ ಕುಮಾರಸ್ವಾಮಿ, ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಸುಮಲತಾರ ತೇಜೋವಧೆ ಮಾಡುವ ಯೋಜನೆ ರೂಪಿಸಿದ್ದರು ಎಂದು ಹೇಳಿದ್ದರು.

“ಮಂಡ್ಯ ಲೋಕಸಭೆ ಚುನಾವಣೆ ವೇಳೆ ಪ್ರಚಾರಕ್ಕಾಗಿ ನಾವೆಲ್ಲ ಒಂದೇ ಹೋಟೆಲ್​ನಲ್ಲಿ ತಂಗಿದ್ದೆವು. ಹೋಟೆಲ್‌ನಲ್ಲಿ ನಾನು, ಸುಮಲತಾ ಓಡಾಡಿರುವ ಸಿಸಿಟಿವಿ ದೃಶ್ಯವನ್ನು ಹೋಟೆಲ್​ ಸಿಬ್ಬಂದಿಯಿಂದ ಪಡೆದುಕೊಂಡು, ನಾನು ಸುಮಲತಾ ಅವರ ಹೆಗಲ ಮೇಲೆ ಕೈ ಹಾಕಿರುವಂತೆ ವಿಡಿಯೋವನ್ನು ತಿರುಚಿದ್ದರಂತೆ. ಇಬ್ಬರೂ ಒಂದೇ ಕೊಠಡಿಗೆ ಹೋಗುತ್ತಿರುವ ಹಾಗೇ ವಿಡಿಯೋವನ್ನು ಸೃಷ್ಟಿಸಿದ್ದರು” ಎಂದು ರಾಕ್​​ಲೈನ್​ ಆರೋಪಿಸಿದ್ದರು.

“ಸುಮಲತಾಗೆ ಯಾರು ಇಲ್ಲ ಅಂದುಕೊಂಡಿದ್ದೀರಾ? ನನ್ನಂತ ಸಾವಿರಾರು ಜನ ಸಂಸದೆ ಸುಮಲತಾ ಜೊತೆ ಇದ್ದಾರೆ. ಜೂನಿಯರ್ ರೆಬಲ್ ಸ್ಟಾರ್ ಇದ್ದಾನೆ, ಅಂಬಿ ಅಭಿಮಾನಿಗಳು ಅವರ ಕುಟುಂಬ ಕಾಯುತ್ತಾರೆ. ಸುಮಲತಾರನ್ನು ಅಡ್ಡ ಮಲಗಿಸಿ ಎಂದು ಕುಮಾರಸ್ವಾಮಿ ಮಾತಾಡಿದ್ದಾರೆ. ಅಮೇಲೆ ಕಾವಲು ಕಾಯಬೇಕು ಎಂದಿದ್ದೇನೆ ಎಂದು ಹೇಳಿದ್ದರು. ಕುಮಾರಸ್ವಾಮಿ ತಮ್ಮ ಹೇಳಿಕೆಯನ್ನು ತಿರುಚುತ್ತಾರೆ” ಎಂದು ರಾಕ್​​​ಲೈನ್​​ ವೆಂಕಟೇಶ್‌ ಹೇಳಿದ್ದರು.

ಇದನ್ನೂ ಓದಿ: ಪ್ರತಾಪ್ ಸಿಂಹ ಪೇಟೆ ರೌಡಿ ತರ ಮಾತನಾಡುತ್ತಾರೆ; ಪ್ರತಿಕ್ರಿಯೆಗೆ ಅರ್ಹರಲ್ಲ: ಸಂಸದೆ ಸುಮಲತ

ರಾಕ್​ಲೈನ್‌ ಅವರ ಹೇಳಿಕೆ ಜೆಡಿಎಸ್​ ಕಾರ್ಯಕರ್ತರನ್ನು ಕೆರಳಿಸಿದ್ದು, ಇಂದು ಬೆಳಿಗ್ಗೆ ರಾಕ್​ಲೈನ್ ಮನೆಗೆ ಮುತ್ತಿಗೆ ಹಾಕಿದ್ದಾರೆ. ಈ ಮಾಹಿತಿ ಮೊದಲೆ ತಿಳಿದಿದ್ದ ಪೊಲೀಸರು ರಾಕ್‌ಲೈನ್‌ ಮನೆಯ ಏರಿಯಾಗಳಿಗೆ ಅಡ್ಡಲಾಗಿ ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಿದ್ದರು. ಅದಾಗಿಯೂ ಕಾರ್ಯಕರ್ತರು ಅಲ್ಲಿ ತಮ್ಮ ಪ್ರತಿಭಟನೆಯನ್ನು ದಾಖಲಿಸಿದ್ದಾರೆ.

ಈ ನಡುವೆ ಗಣಿಗಾರಿಕೆಯಿಂದ ಕೆಆರ್‌ಎಸ್‌ ಅಣೆಕಟ್ಟೆಯಲ್ಲಿ ಬಿರುಕು ಬಿಟ್ಟಿದೆ ಎಂಬ ಸುಮಲತಾ ಆರೋಪವನ್ನು ತಳ್ಳಿ ಹಾಕಿರುವ ಕಾವೇರಿ ನೀರಾವರಿ ನಿಗಮ, “ಅಣೆಕಟ್ಟೆಯಲ್ಲಿ ಯಾವುದೆ ರೀತಿಯ ಇಲ್ಲ” ಎಂದು ಸ್ಪಷ್ಟಪಡಿಸಿದೆ.

ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಜಯಪ್ರಕಾಶ್ ಅವರು ‘‘ಕೆಆರ್‌ಎಸ್‌ ಅಣೆಕಟ್ಟು ಸುರಕ್ಷಿತವಾಗಿದೆ. ಅಣೆಕಟ್ಟಿನ ಗೋಡೆಯಲ್ಲಿ ಯಾವುದೇ ಬಿರುಕು ಇಲ್ಲದಿರುವುದು ಆಗಾಗ್ಗೆ ನಡೆಸಿದ ತಪಾಸಣೆಯಿಂದ ಖಚಿತವಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಅಣೆಕಟ್ಟು ಸುರಕ್ಷಾ ಪರಿಶೀಲನಾ ಸಮಿತಿ ಹಾಗೂ ರಾಜ್ಯದ ಗೇಟ್‌ ಸಲಹಾ ಸಮಿತಿ ಸದಸ್ಯರು ಜುಲೈ 2 ರಂದು ಕೆಆರ್‌ಎಸ್‌ ಅಣೆಕಟ್ಟೆಯಲ್ಲಿ ಬಿರುಕು ಬಿಟ್ಟಿದೆಯೆ ಎಂಬ ಬಗ್ಗೆ ಪರಿಶೀಲನೆ ನಡೆಸಿದ್ದರು ಎಂದು ಜಯಪ್ರಕಾಶ್ ಹೇಳಿದ್ದಾರೆ.

ಇದನ್ನೂ ಓದಿ: ಹಿಂದಿ ಹೇರಿಕೆಯನ್ನು ಒಪ್ಪಲು ಸಾಧ್ಯವಿಲ್ಲ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...