HomeUncategorizedಸಿನಿಮಾ ರಂಗಕ್ಕೂ ಕಾಲಿಟ್ಟ ಸುಮಲತಾ, ಹೆಚ್‌ಡಿಕೆ ವಾಗ್ವಾದ; ಅಣೆಕಟ್ಟೆಯಲ್ಲಿ ಬಿರುಕಿಲ್ಲ ಎಂದ ಸರ್ಕಾರ!

ಸಿನಿಮಾ ರಂಗಕ್ಕೂ ಕಾಲಿಟ್ಟ ಸುಮಲತಾ, ಹೆಚ್‌ಡಿಕೆ ವಾಗ್ವಾದ; ಅಣೆಕಟ್ಟೆಯಲ್ಲಿ ಬಿರುಕಿಲ್ಲ ಎಂದ ಸರ್ಕಾರ!

- Advertisement -
- Advertisement -

ಅಕ್ರಮ ಗಣಿಗಾರಿಕೆ, ಕೆಆರ್‌ಎಸ್‌ ಅಣೆಕಟ್ಟಿನ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಮತ್ತು ಮಂಡ್ಯ ಸಂಸದೆ ಸುಮಲತಾ ಅವರ ನಡುವೆ ನಡೆಯುತ್ತಿದ್ದ ಸಂಘರ್ಷ ಇದೀಗ ಸಿನಿಮಾರಂಗಕ್ಕೂ ಕಾಲಿಟ್ಟಿದೆ. ದಿವಂಗತ ನಟ ಅಂಬರೀಶ್‌ ಅವರ ಸ್ಮಾರಕದ ವಿಷಯದಲ್ಲಿ ಹೆಚ್‌ಡಿಕೆ ಅವರನ್ನು ಭೇಟಿಯಾಗಿದ್ದ ನಟ ದೊಡ್ಡಣ್ಣ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಸುಮಲತಾ ಅವರು ಆರೋಪಿಸಿದ್ದಾರೆ. ಇದರ ಜೊತೆಗೆ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್‌ ಅವರು ಕೂಡಾ ಕುಮಾರಸ್ವಾಮಿ ವಿರುದ್ದ ಕಿಡಿಕಾರಿದ್ದಾರೆ.

ರಾಕ್​ಲೈನ್ ವೆಂಕಟೇಶ್ ಹೇಳಿಕೆ ಕುಮಾರಸ್ವಾಮಿ ಬೆಂಬಲಿಗರನ್ನು ಕೆರಳಿಸಿದ್ದು, ಅವರ ಮನೆಗೆ ಮುತ್ತಿಗೆ ಹಾಕಿದ್ದಾರೆ. ಈ ಹಿನ್ನಲೆಯಲ್ಲಿ ಅವರ ಮನೆಯ ರಸ್ತೆಗೆ ಪೊಲೀಸರು ಬಿಗಿ ಭದ್ರತೆ ನೀಡಿದ್ದಾರೆ.

ಇದನ್ನೂ ಓದಿ: ಅಕ್ರಮ ಕಲ್ಲು ಗಣಿಗಾರಿಕೆಗೆ ಎಚ್.ಡಿ.ಕುಮಾರಸ್ವಾಮಿಯೇ ಪ್ರಮುಖ ರೂವಾರಿ: ಎಎಪಿ

ಶುಕ್ರವಾರ ಕುಮಾರಸ್ವಾಮಿ ವಿರುದ್ಧ ಮಾತನಾಡಿದ್ದ ರಾಕ್​ಲೈನ್ ವೆಂಕಟೇಶ್, ಮಂಡ್ಯ ಲೋಕಸಭಾ ಚುನಾವಣೆ ವೇಳೆ ನನ್ನ ಮತ್ತು ಸುಮಲತಾರ ಅಶ್ಲೀಲ ವಿಡಿಯೋ ಸೃಷ್ಟಿಸಲು ಕುಮಾರಸ್ವಾಮಿ ಯತ್ನಿಸಿದ್ದರು. ವೈಯಕ್ತಿಕ ದಾಳಿಗೆ ಇಳಿದಿದ್ದ ಕುಮಾರಸ್ವಾಮಿ, ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಸುಮಲತಾರ ತೇಜೋವಧೆ ಮಾಡುವ ಯೋಜನೆ ರೂಪಿಸಿದ್ದರು ಎಂದು ಹೇಳಿದ್ದರು.

“ಮಂಡ್ಯ ಲೋಕಸಭೆ ಚುನಾವಣೆ ವೇಳೆ ಪ್ರಚಾರಕ್ಕಾಗಿ ನಾವೆಲ್ಲ ಒಂದೇ ಹೋಟೆಲ್​ನಲ್ಲಿ ತಂಗಿದ್ದೆವು. ಹೋಟೆಲ್‌ನಲ್ಲಿ ನಾನು, ಸುಮಲತಾ ಓಡಾಡಿರುವ ಸಿಸಿಟಿವಿ ದೃಶ್ಯವನ್ನು ಹೋಟೆಲ್​ ಸಿಬ್ಬಂದಿಯಿಂದ ಪಡೆದುಕೊಂಡು, ನಾನು ಸುಮಲತಾ ಅವರ ಹೆಗಲ ಮೇಲೆ ಕೈ ಹಾಕಿರುವಂತೆ ವಿಡಿಯೋವನ್ನು ತಿರುಚಿದ್ದರಂತೆ. ಇಬ್ಬರೂ ಒಂದೇ ಕೊಠಡಿಗೆ ಹೋಗುತ್ತಿರುವ ಹಾಗೇ ವಿಡಿಯೋವನ್ನು ಸೃಷ್ಟಿಸಿದ್ದರು” ಎಂದು ರಾಕ್​​ಲೈನ್​ ಆರೋಪಿಸಿದ್ದರು.

“ಸುಮಲತಾಗೆ ಯಾರು ಇಲ್ಲ ಅಂದುಕೊಂಡಿದ್ದೀರಾ? ನನ್ನಂತ ಸಾವಿರಾರು ಜನ ಸಂಸದೆ ಸುಮಲತಾ ಜೊತೆ ಇದ್ದಾರೆ. ಜೂನಿಯರ್ ರೆಬಲ್ ಸ್ಟಾರ್ ಇದ್ದಾನೆ, ಅಂಬಿ ಅಭಿಮಾನಿಗಳು ಅವರ ಕುಟುಂಬ ಕಾಯುತ್ತಾರೆ. ಸುಮಲತಾರನ್ನು ಅಡ್ಡ ಮಲಗಿಸಿ ಎಂದು ಕುಮಾರಸ್ವಾಮಿ ಮಾತಾಡಿದ್ದಾರೆ. ಅಮೇಲೆ ಕಾವಲು ಕಾಯಬೇಕು ಎಂದಿದ್ದೇನೆ ಎಂದು ಹೇಳಿದ್ದರು. ಕುಮಾರಸ್ವಾಮಿ ತಮ್ಮ ಹೇಳಿಕೆಯನ್ನು ತಿರುಚುತ್ತಾರೆ” ಎಂದು ರಾಕ್​​​ಲೈನ್​​ ವೆಂಕಟೇಶ್‌ ಹೇಳಿದ್ದರು.

ಇದನ್ನೂ ಓದಿ: ಪ್ರತಾಪ್ ಸಿಂಹ ಪೇಟೆ ರೌಡಿ ತರ ಮಾತನಾಡುತ್ತಾರೆ; ಪ್ರತಿಕ್ರಿಯೆಗೆ ಅರ್ಹರಲ್ಲ: ಸಂಸದೆ ಸುಮಲತ

ರಾಕ್​ಲೈನ್‌ ಅವರ ಹೇಳಿಕೆ ಜೆಡಿಎಸ್​ ಕಾರ್ಯಕರ್ತರನ್ನು ಕೆರಳಿಸಿದ್ದು, ಇಂದು ಬೆಳಿಗ್ಗೆ ರಾಕ್​ಲೈನ್ ಮನೆಗೆ ಮುತ್ತಿಗೆ ಹಾಕಿದ್ದಾರೆ. ಈ ಮಾಹಿತಿ ಮೊದಲೆ ತಿಳಿದಿದ್ದ ಪೊಲೀಸರು ರಾಕ್‌ಲೈನ್‌ ಮನೆಯ ಏರಿಯಾಗಳಿಗೆ ಅಡ್ಡಲಾಗಿ ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಿದ್ದರು. ಅದಾಗಿಯೂ ಕಾರ್ಯಕರ್ತರು ಅಲ್ಲಿ ತಮ್ಮ ಪ್ರತಿಭಟನೆಯನ್ನು ದಾಖಲಿಸಿದ್ದಾರೆ.

ಈ ನಡುವೆ ಗಣಿಗಾರಿಕೆಯಿಂದ ಕೆಆರ್‌ಎಸ್‌ ಅಣೆಕಟ್ಟೆಯಲ್ಲಿ ಬಿರುಕು ಬಿಟ್ಟಿದೆ ಎಂಬ ಸುಮಲತಾ ಆರೋಪವನ್ನು ತಳ್ಳಿ ಹಾಕಿರುವ ಕಾವೇರಿ ನೀರಾವರಿ ನಿಗಮ, “ಅಣೆಕಟ್ಟೆಯಲ್ಲಿ ಯಾವುದೆ ರೀತಿಯ ಇಲ್ಲ” ಎಂದು ಸ್ಪಷ್ಟಪಡಿಸಿದೆ.

ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಜಯಪ್ರಕಾಶ್ ಅವರು ‘‘ಕೆಆರ್‌ಎಸ್‌ ಅಣೆಕಟ್ಟು ಸುರಕ್ಷಿತವಾಗಿದೆ. ಅಣೆಕಟ್ಟಿನ ಗೋಡೆಯಲ್ಲಿ ಯಾವುದೇ ಬಿರುಕು ಇಲ್ಲದಿರುವುದು ಆಗಾಗ್ಗೆ ನಡೆಸಿದ ತಪಾಸಣೆಯಿಂದ ಖಚಿತವಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಅಣೆಕಟ್ಟು ಸುರಕ್ಷಾ ಪರಿಶೀಲನಾ ಸಮಿತಿ ಹಾಗೂ ರಾಜ್ಯದ ಗೇಟ್‌ ಸಲಹಾ ಸಮಿತಿ ಸದಸ್ಯರು ಜುಲೈ 2 ರಂದು ಕೆಆರ್‌ಎಸ್‌ ಅಣೆಕಟ್ಟೆಯಲ್ಲಿ ಬಿರುಕು ಬಿಟ್ಟಿದೆಯೆ ಎಂಬ ಬಗ್ಗೆ ಪರಿಶೀಲನೆ ನಡೆಸಿದ್ದರು ಎಂದು ಜಯಪ್ರಕಾಶ್ ಹೇಳಿದ್ದಾರೆ.

ಇದನ್ನೂ ಓದಿ: ಹಿಂದಿ ಹೇರಿಕೆಯನ್ನು ಒಪ್ಪಲು ಸಾಧ್ಯವಿಲ್ಲ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...