Homeಮುಖಪುಟಕೇಂದ್ರ ಸಂಪುಟ: 78 ಸಚಿವರಲ್ಲಿ 33 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ- ವರದಿ

ಕೇಂದ್ರ ಸಂಪುಟ: 78 ಸಚಿವರಲ್ಲಿ 33 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ- ವರದಿ

ಸಂಪುಟದ 70 (90%) ಸಚಿವರು ಕೋಟ್ಯಾಧಿಪತಿಗಳಾಗಿದ್ದು, ಪ್ರತಿ ಸಚಿವರ ಸರಾಸರಿ ಆಸ್ತಿ 16.24 ಕೋಟಿ ರೂಪಾಯಿಗಳಾಗಿವೆ.

- Advertisement -
- Advertisement -

ನೂತನ ಕೇಂದ್ರ ಸಂಪುಟದ ಶೇಕಡಾ 40 ರಷ್ಟು ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. ಶೇಕಡಾ 90 ರಷ್ಟು ಸಚಿವರು ಕೋಟ್ಯಾಧಿಪತಿಗಳಿದ್ದಾರೆ ಎಂದು ಇಂಡಿಪೆಂಡೆಂಟ್ ವಾಚ್‌ಡಾಗ್ ಗ್ರೂಪ್ ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ತನ್ನ ವರದಿಯಲ್ಲಿ ತಿಳಿಸಿದೆ.

ಇತ್ತೀಚೆಗೆ ಕೇಂದ್ರ ಸಚಿವ ಸಂಪುಟವನ್ನು ಪುನರ್ರಚಿಸಲಾಯಿತು. ಈ ವೇಳೆ 44 ಹೊಸ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಂಪುಟದಲ್ಲಿನ 78 ಮಂತ್ರಿಗಳಲ್ಲಿ 33 (42%) ಮಂದಿ ತಮ್ಮ ಚುನಾವಣಾ ಅಫಿಡವಿಟ್‌ಗಳಲ್ಲಿ ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳಿರುವುದನ್ನು ಘೋಷಿಸಿದ್ದಾರೆ ಎಂದು ಎಡಿಆರ್ ತಿಳಿಸಿದೆ.

ಅದರಲ್ಲಿ, 24 ಮಂತ್ರಿಗಳ (31%) ವಿರುದ್ಧ ಕೊಲೆ, ಕೊಲೆ ಯತ್ನ ಮತ್ತು ದರೋಡೆ ಸೇರಿದಂತೆ ಗಂಭೀರ ಪ್ರಕರಣಗಳು ಇರುವುದನ್ನು ಸ್ವತಃ ತಾವೇ ತಮ್ಮ ಚುನಾವಣಾ ಅಫಿಡವಿಟ್‌ಗಳಲ್ಲಿ ಘೋಷಿಸಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸಂಪುಟ ಪುನರ್‌ರಚನೆ: ಯಾರಿಗೆ ಯಾವ ಖಾತೆ? – ಇಲ್ಲಿದೆ ಡೀಟೈಲ್ಸ್

ಸಚಿವ ಸಂಪುಟವನ್ನು ಪುನರ್ರಚಿಸಿದ ಬಳಿಕ ಸಂಪುಟದಲ್ಲಿ ಕ್ರಿಮಿನಲ್ ಪ್ರಕರಣಗಳಿರುವ ಸಚಿವರ ಪ್ರಮಾಣ  ಶೇಕಡಾ 3 ರಷ್ಟು ಏರಿಕೆಯಾಗಿದೆ. 2019 ರಲ್ಲಿ ಎಡಿಆರ್ ನಡೆಸಿದ ವಿಶ್ಲೇಷಣೆಯಲ್ಲಿ, ಮೊದಲ ಸಚಿವ ಸಂಪುಟದಲ್ಲಿ ಪ್ರಮಾಣವಚನ ಸ್ವೀಕರಿಸಿದ, 56 ಮಂತ್ರಿಗಳಲ್ಲಿ ಶೇಕಡಾ 39 ರಷ್ಟು ಮಂದಿಯ ವಿರುದ್ದ ಕ್ರಿಮಿನಲ್ ಪ್ರಕರಣಗಳಿದ್ದವು. ಆ ಸಂಪುಟದಲ್ಲಿಯೂ ಶೇಕಡಾ 91 ರಷ್ಟು ಮಂದಿ ಕೋಟ್ಯಾಧಿಪತಿಗಳಿದ್ದರು ಎಂದು ಎಡಿಆರ್ ತಿಳಿಸಿದೆ.

ಗೃಹ ವ್ಯವಹಾರಗಳ ರಾಜ್ಯ ಸಚಿವರಾಗಿ ನೇಮಕಗೊಂಡಿರುವ ಕೂಚ್ ಬೆಹರ್ ಕ್ಷೇತ್ರದ ನಿಸಿತ್ ಪ್ರಮಾಣಿಕ್, ತಮ್ಮ ವಿರುದ್ಧ ಕೊಲೆ (ಐಪಿಸಿ ಸೆಕ್ಷನ್ -302) ಪ್ರಕರಣ ಇರುವುದನ್ನು ಘೋಷಿಸಿಕೊಂಡಿದ್ದಾರೆ. ಹೊಸ ಸಚಿವ ಸಂಪುಟದಲ್ಲಿ 35 ನೇ ವಯಸ್ಸಿನಲ್ಲಿ ಸಚಿವರಾಗಿ ಅತ್ಯಂತ ಕಿರಿಯ ಸಚಿವ ಎನಿಸಿಕೊಂಡಿದ್ದಾರೆ.

ಹೊಸ ಸಂಪುಟಕ್ಕೆ ಸೇರ್ಪಡೆಗೊಂಡಿರುವ ಜಾನ್ ಬಾರ್ಲಾ, ಪ್ರಮಾಣಿಕ್, ಪಂಕಜ್ ಚೌಧರಿ ಮತ್ತು ವಿ.ಮುರಳೀಧರನ್ ಈ ನಾಲ್ಕು ಸಚಿವರು ಕೊಲೆ ಯತ್ನಕ್ಕೆ ಸಂಬಂಧಿಸಿದ ಪ್ರಕರಣಗಳು ಇರುವುದನ್ನು ಘೋಷಿಸಿಕೊಂಡಿದ್ದಾರೆ (ಐಪಿಸಿ ಸೆಕ್ಷನ್ -307).

ನರೇಂದ್ರ ಮೋದಿ ಸಂಪುಟದ 70 (90%) ಸಚಿವರು ಕೋಟ್ಯಾಧಿಪತಿಗಳಾಗಿದ್ದು, ಪ್ರತಿ ಸಚಿವರ ಸರಾಸರಿ ಆಸ್ತಿ 16.24 ಕೋಟಿ ರೂ. ನಾಲ್ವರು ಸಚಿವರು 50 ಕೋಟಿ ರೂ.ಗಿಂತ ಹೆಚ್ಚಿನ ಆಸ್ತಿಯನ್ನು ಘೋಷಿಸಿದ್ದಾರೆ. ಅವರಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ – 395 ಕೋಟಿ ರೂಪಾಯಿ, ಪಿಯೂಷ್ ಗೋಯಲ್ – 95 ಕೋಟಿ ರೂಪಾಯಿ, ನಾರಾಯಣ್  ರಾಣೆ – 87 ಕೋಟಿ ರೂಪಾಯಿ ಮತ್ತು ರಾಜೀವ್ ಚಂದ್ರಶೇಖರ್ – 64 ಕೋಟಿ ರೂಪಾಯಿ ಆಸ್ತಿ ಹೊಂದಿದ್ದಾರೆ.

ಹೊಸ ಕ್ಯಾಬಿನೆಟ್‌ ಮಂತ್ರಿಗಳಲ್ಲಿ 21 ಜನ ಸ್ನಾತಕೋತ್ತರ ಪದವೀಧರರಾಗಿದ್ದಾರೆ. 9 ಮಂತ್ರಿಗಳು ಡಾಕ್ಟರೇಟ್ ಪಡೆದಿದ್ದರೇ, ತಲಾ 17 ಮಂದಿ ಪದವೀಧರರು ಮತ್ತು ವೃತ್ತಿಪರ ಪದವೀಧರರಾಗಿದ್ದಾರೆ. ಇನ್ನು 7 ಮಂದಿ ತಮ್ಮ ಹನ್ನೆರಡನೇ ತರಗತಿ, 3 ಸಚಿವರು ತಮ್ಮ ಹತ್ತನೇ ತರಗತಿ ಮತ್ತು  ಇಬ್ಬರು ಸಚಿವರು ತಮ್ಮ ಎಂಟನೇ ತರಗತಿಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ಭ್ರಷ್ಟಾಚಾರ ಆರೋಪ ಹೊತ್ತವರು ಬಿಜೆಪಿ ಸೇರಿ ಕಳಂಕರಹಿತ ಎನಿಸಿಕೊಂಡವರ ಪಟ್ಟಿ ಇಲ್ಲಿದೆ ಇ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...