Homeಮುಖಪುಟಕ್ರೀಡಾ ತರಬೇತುದಾರ ಪಿ. ನಾಗರಾಜನ್‌ ವಿರುದ್ಧ ಮತ್ತೆ 7 ಲೈಂಗಿಕ ದೌರ್ಜನ್ಯದ ದೂರು

ಕ್ರೀಡಾ ತರಬೇತುದಾರ ಪಿ. ನಾಗರಾಜನ್‌ ವಿರುದ್ಧ ಮತ್ತೆ 7 ಲೈಂಗಿಕ ದೌರ್ಜನ್ಯದ ದೂರು

- Advertisement -
- Advertisement -

ಚೆನ್ನೈನ ಪ್ರಸಿದ್ಧ ಕ್ರೀಡಾ ತರಬೇತುದಾರ ಪಿ. ನಾಗರಾಜನ್‌ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪಗಳು ಕೇಳಿಬಂದಿವೆ. ಏಳಕ್ಕೂ ಹೆಚ್ಚು ಮಹಿಳಾ ಕ್ರೀಡಾಪಟುಗಳು ತಮ್ಮ ಮೇಲೆ ನಟರಾಜನ್‌ ಅವರು ಲೈಂಗಿಕ ದೌರ್ಜನ್ಯವನ್ನು ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಎರಡು ತಿಂಗಳ ಹಿಂದೆ 19 ವರ್ಷದ ರಾಷ್ಟ್ರ ಮಟ್ಟದ ಕ್ರೀಡಾಪಟು ಒಬ್ಬರು ನಾಗರಾಜನ್ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದರು.

ನಾಗರಾಜನ್ ವಿರುದ್ಧ ಆರೋಪ ಮಾಡಿರುವ ಕ್ರೀಡಾಪಟುಗಳೆಲ್ಲರು 30 ವರ್ಷ ಮೇಲ್ಪಟ್ಟವರಾಗಿದ್ದು ಅನೇಕ ವರ್ಷಗಳ ಕಾಲ ತಮ್ಮ ಕೋಚ್‌ ಲೈಂಗಿಕ ದೌರ್ಜನ್ಯವನ್ನು ಎಸಗಿದ್ದರು. ವಿಷಯವನ್ನು ಬಹಿರಂಗಗೊಳಿಸಿದರೆ ತರಬೇತಿಯನ್ನು ನಿಲ್ಲಿಸುವುದಾಗಿ ಬೆದರಿಕೆ ಒಡ್ಡಿದ್ದರು ಎಂದು ಕ್ರೀಡಾಪಟುಗಳು ಆರೋಪಿಸಿದ್ದಾರೆ.

ಆರೋಪಿತ ಕೋಚ್‌  ನಾಗರಾಜನ್‌ ಹೆಚ್ಚಾಗಿ ಜ್ಯೂನಿಯರ್‌ ಲೆವೆಲ್‌ ಕ್ರೀಡಾಪಟುಗಳನ್ನು ತರಬೇತುಗೊಳಿಸುತ್ತಿದ್ದರು. ತಾವು ಅಪ್ರಾಪ್ತ ವಯಸ್ಕರಾಗಿದ್ದಾಗಲೇ ತಮ್ಮ ಮೇಲೆ ದೌರ್ಜನ್ಯ ನಡೆದಿದೆ ಎಂದು  ಮಹಿಳಾ ಕ್ರೀಡಾಪಟುಗಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

2013 ರಿಂದ 2020 ರ ವರೆಗೆ ನಟರಾಜನ್‌ 19 ವರ್ಷದ ಕ್ರೀಡಾಪಟು ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಚೆನ್ನೈ ಡೆಪ್ಯುಟಿ ಕಮಿಷನರ್‌ ಎಸ್‌. ಮಹೇಶ್ವರನ್‌ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ನಾಗರಾಜನ್‌ ವಿರುದ್ಧ ಅದೇ ತರಹದ 7 ಪ್ರಕರಣಗಳು ದಾಖಲಾಗಿವೆ ಎಂದು ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದ್ದಾರೆ.

2013-2020 ರ ಅವಧಿಯಲ್ಲಿ 13 ವರ್ಷ ವಯಸ್ಸಿನವಳಾಗಿದ್ದಾಗಿನಿಂದ ಕೋಚ್‌ ತನ್ನನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದರು. ದಿನದ ತರಬೇತಿ ಮುಗಿದ ನಂತರ ಇತರ ಸಹ ಕ್ರೀಡಾಪಟುಗಳನ್ನು ಕಳುಹಿಸಿ ನನ್ನನ್ನು ಚಿಕ್ಕ ಕೋಣೆಗೆ ಕರೆದುಕೊಂಡು ಹೋಗಿ ಫಿಸಿಯೋ ಥೆರಪಿ ಹೆಸರಿನಲ್ಲಿ ದೌರ್ಜನ್ಯವನ್ನು ಎಸಗುತ್ತಿದ್ದರು. ಅನೇಕ ಸಾರಿ ನಾನು ಇದರ ವಿರುದ್ಧ ಪ್ರತಿಭಟಿಸಿದಾಗ ಕ್ರೀಡಾಕೂಟಗಳಿಂದ ಹೊರಹಾಕುವುದು ಮತ್ತು ಸ್ಪರ್ಧೆಗೆ ಅವಕಾಶವನ್ನು ನಿರಾಕರಿಸುವ ಬೆದರಿಕೆ ಹಾಕಿದರು ಎಂದು ಸಂತ್ರಸ್ತೆ ತನ್ನ ದೂರಿನಲ್ಲಿ ಹೇಳಿದ್ದಾರೆ.

ಪೊಲೀಸರು ತನಿಖಾಧಿಕಾರಿಯ ದೂರವಾಣಿ ಸಂಖ್ಯೆ ಮತ್ತು ಇಮೇಲ್‌ ವಿಳಾಸವನ್ನು ಸಾರ್ವಜನಿಕಗೊಳಿಸಿದ ನಂತರ ನಾಗರಾಜನ್‌ ವಿರುದ್ಧ ಏಳು ದೂರುಗಳು ಬಂದಿವೆ. ೮ ನೇ ತರಗತಿಯಲ್ಲಿರುವಾಗ ಕೋಚ್‌ ಸರ್‌ ನನ್ನೊಂದಿಗೆ ಬೇರೆ ರೀತಿಯಲ್ಲಿ ನಡೆದುಕೊಳ್ಳಲು ಆರಂಭಿಸಿದರು. ಅದು ೭ ವರ್ಷಗಳ ಕಾಲ ನಡೆಯಿತು. ಈ ಘಟನೆಗಳಿಂದ ನನ್ನ ಮಾನಸಿಕ ಆರೋಗ್ಯ ಹದಗೆಟ್ಟಿತು. ಆತ್ಮಹತ್ಯೆಯ ಮನಸ್ಥಿತಿ ಬೆಳೆಯಲು ಕಾರಣವಾಗಿತ್ತು ಎಂದು ಮತ್ತೊಬ್ಬ ಕ್ರೀಡಾಪಟು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಮೇ 28 ರಂದು ನಾಗರಾಜನ್‌ ವಿರುದ್ಧ ಮೊದಲ ದೂರು ದಾಖಲಾಗಿತ್ತು. ತಮ್ಮ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಆರೋಪಿತ ಕೋಚ್ ಆತ್ಮಹತ್ಯೆಗೆ ಯತ್ನಿಸಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಾಗರಾಜನ್‌ ವಿರುದ್ಧ ಐಪಿಸಿ ಮತ್ತು ಪೋಸ್ಕೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರತಿಯೊಂದು ದೂರು ಕೂಡ ಆರೋಪಿಯ ಕರಾಳ ಕೃತ್ಯಗಳನ್ನು ಬಹಿರಂಗಗೊಳಿಸಿದೆ ಎಂದು ಉಪ ಪೊಲೀಸ್ ಆಯುಕ್ತೆ ಹೆಚ್‌. ಜಯಲಕ್ಷ್ಮಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...