Homeಅಂತರಾಷ್ಟ್ರೀಯ‘ಹಸಿವೆಂಬ ವೈರಸ್‌’ಗೆ ವಿಶ್ವದಲ್ಲಿ ಪ್ರತಿ ನಿಮಿಷಕ್ಕೆ 11 ಜನರು ಬಲಿ!

‘ಹಸಿವೆಂಬ ವೈರಸ್‌’ಗೆ ವಿಶ್ವದಲ್ಲಿ ಪ್ರತಿ ನಿಮಿಷಕ್ಕೆ 11 ಜನರು ಬಲಿ!

- Advertisement -
- Advertisement -

ವಿಶ್ವದಲ್ಲಿ ಪ್ರತಿ ನಿಮಿಷಕ್ಕೆ ಕನಿಷ್ಠ 11 ಜನರು ಹಸಿವಿನಿಂದಾಗಿ ಸಾಯುತ್ತಿದ್ದಾರೆ ಎಂದು ಆ‌ಕ್ಸ್‌ಫಾಮ್‌‌‌ನ ಹೊಸ ಅಂಕಿಅಂಶಗಳು ಹೇಳಿದೆ. ಇದಲ್ಲದೆ, ಜಗತ್ತಿನಾದ್ಯಂತ ಬರಗಾಲದ ಪರಿಸ್ಥಿತಿಗಳು ಕಳೆದ ವರ್ಷಕ್ಕಿಂತ 6 ಪಟ್ಟು ಹೆಚ್ಚಾಗಿದೆ ಎಂದು ಅದು ಉಲ್ಲೇಖಿಸಿದೆ. ‘‘ಹಸಿವಿನ ವೈರಸ್‌ ದ್ವಿಗುಣ’’ ಎಂಬ ಶಿರ್ಷಿಕೆ ಇರುವ ವರದಿ ಬಿಡುಗಡೆ ಮಾಡಿರುವ ಆಕ್ಸ್‌ಫಾಮ್‌‌, ನಿಮಿಷವೊಂದಕ್ಕೆ ಕೊರೊನಾ ಸಾಂಕ್ರಮಿಕದಿಂದ ಸಾಯುವವರಿಗಿಂತ, ಹಸಿವಿನಿಂದ ಸಾಯುವವರೆ ಹೆಚ್ಚು ಎಂದು ಹೇಳಿದೆ.

ಆ‌ಕ್ಸ್‌ಫಾಮ್‌‌ 20 ಸ್ವತಂತ್ರ ಚಾರಿಟೇಬಲ್‌‌‌ ಸಂಸ್ಥೆಗಳ ಒಕ್ಕೂಟವಾಗಿದ್ದು, ಜಾಗತಿಕ ಬಡತನವನ್ನು ಹೋಗಲಾಡಿಸಲು ಕೆಲಸ ಮಾಡುತ್ತಿದೆ. ಇದನ್ನು 1942 ರಲ್ಲಿ ಸ್ಥಾಪಿಸಲಾಯಿತು.

ಪ್ರಸ್ತುತ ಪ್ರಪಂಚದಾದ್ಯಂತ 15.5 ಕೋಟಿ ಜನರು ಆಹಾರ ಅಭದ್ರತೆಯ ಬಿಕ್ಕಟ್ಟಿನಲ್ಲಿ ವಾಸಿಸುತ್ತಿದ್ದಾರೆ ಎಂದು ಆಕ್ಸ್‌ಫ್ಯಾಮ್ ಹೇಳಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಸುಮಾರು 2 ಕೋಟಿ ಜನರು ಹೆಚ್ಚಾಗಿದ್ದಾರೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಕೇಂದ್ರ ಸಂಪುಟ: 78 ಸಚಿವರಲ್ಲಿ 33 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ- ವರದಿ

ವಿಶ್ವದ ಹಸಿವಿಗೆ ಮಿಲಿಟರಿ ಸಂಘರ್ಷವು ಪ್ರಮುಖ ಕಾರಣವಾಗಿದೆ ಎಂದು ವರದಿ ಉಲ್ಲೇಖಿಸಿದೆ. ಮಿಲಿಟರಿ ಸಂಘರ್ಷಗಳನ್ನು ಎದುರಿಸುತ್ತಿರುವ ದೇಶಗಳಲ್ಲಿ 66% ದಷ್ಟು ದೇಶಗಳು ಹಸಿವಿನ ಬಿಕ್ಕಟ್ಟಿನೊಂದಿಗೆ ಕೂಡಾ ಹೋರಾಡುತ್ತಿವೆ. ಭೀಕರ ಸಾಂಕ್ರಾಮಿಕ ಸಮಯದಲ್ಲೂ ಜಾಗತಿಕವಾಗಿ ಮಿಲಿಟರಿಗೆ ಮಾಡಿರುವ ಖರ್ಚುಗಳು 51 ಬಿಲಿಯನ್ ಡಾಲರ್‌‌‌ ಹೆಚ್ಚಾಗಿದೆ ಎಂದು ಆಕ್ಸ್‌ಫಾಮ್ ಹೇಳಿದೆ.

“ಇಂದು, ಕೊರೊನಾದಿಂದಾದ ಆರ್ಥಿಕ ಕುಸಿತ ಮತ್ತು ಹದಗೆಡುತ್ತಿರುವ ಹವಾಮಾನ ಬಿಕ್ಕಟ್ಟು 5,20,000 ಕ್ಕೂ ಹೆಚ್ಚು ಜನರನ್ನು ಹಸಿವಿನ ಅಂಚಿಗೆ ತಳ್ಳಿದೆ. ಸಾಂಕ್ರಾಮಿಕದ ವಿರುದ್ದ ಹೋರಾಡುವ ಬದಲು, ಪಕ್ಷಗಳು ಪರಸ್ಪರ ಹೋರಾಡುತ್ತಿದ್ದವು. ಇದು ಹವಾಮಾನ ವಿಪತ್ತುಗಳು ಮತ್ತು ಆರ್ಥಿಕ ಬಿಕ್ಕಟ್ಟಿನಿಂದಾಗಿ ಈಗಾಗಲೇ ಜರ್ಜರಿಗೊಂಡ ಲಕ್ಷಾಂತರ ಜನರಿಗೆ ಭಾರಿ ಹೊಡೆತವನ್ನು ನೀಡಿದೆ” ಎಂದು ಆಕ್ಸ್‌ಫಾಮ್‌ನ ಅಮೆರಿಕದ ಅಧ್ಯಕ್ಷ ಮತ್ತು ಸಿಇಒ ಅಬ್ಬಿ ಮ್ಯಾಕ್ಸ್‌ಮನ್ ಹೇಳಿದ್ದಾರೆ.

ಜಾಗತಿಕ ತಾಪಮಾನ ಏರಿಕೆ ಮತ್ತು ಸಾಂಕ್ರಾಮಿಕ ರೋಗದಿಂದಾಗಿ ಉಂಟಾದ ಆರ್ಥಿಕ ಪರಿಣಾಮಗಳು ಕೂಡಾ ಹಸಿವಿನ ಬಿಕ್ಕಟ್ಟಿನ ಉಲ್ಬಣಕ್ಕೆ ಪ್ರಮುಖ ಅಂಶಗಳಾಗಿವೆ ಎಂದು ವರದಿಯು ಗುರುತಿಸಿದೆ. ಈ ಎರಡೂ ಕಾರಣಗಳಿಂದಾಗಿ ಜಾಗತಿಕವಾಗಿ ಆಹಾರದ ಬೆಲೆ 40% ಹೆಚ್ಚಳವಾಗಿದ್ದು, ಇದು ಒಂದು ದಶಕದಲ್ಲೆ ಅತಿ ಹೆಚ್ಚಾಗಿದೆ ಎಂದು ವರದಿ ಹೇಳಿದೆ.

ವರದಿಯ ಪ್ರಕಾರ, ಇಂತಹ ಉಲ್ಬಣವು ಲಕ್ಷಾಂತರ ಜನರನ್ನು ಹಸಿವೆಗೆ ತಳ್ಳುವಲ್ಲಿ ಗಮನಾರ್ಹ ಕೊಡುಗೆ ನೀಡಿದೆ. ರಾಜ್ಯ ಪೋಷಿತ ಮಿಲಿಟರಿ ಸಂಘರ್ಷಗಳಿಗೆ ಅಂತ್ಯ ಹಾಡುವ ಮೂಲಕ “ಹಸಿವಿನ ದುರಂತವನ್ನು” ಅಂಗೀಕರಿಸಲು ಮತ್ತು ನಿಲ್ಲಿಸುವಂತೆ ಸರ್ಕಾರಗಳನ್ನು ಆಕ್ಸ್‌ಫಾಮ್‌‌ ತನ್ನ ಹೇಳಿಕೆಯಲ್ಲಿ ಒತ್ತಾಯಿಸಿದೆ.

ಇದನ್ನೂ ಓದಿ: ಸಿನಿಮಾ ರಂಗಕ್ಕೂ ಕಾಲಿಟ್ಟ ಸುಮಲತಾ, ಹೆಚ್‌ಡಿಕೆ ವಾಗ್ವಾದ; ಅಣೆಕಟ್ಟೆಯಲ್ಲಿ ಬಿರುಕಿಲ್ಲ ಎಂದ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...