Homeಅಂತರಾಷ್ಟ್ರೀಯ‘ಹಸಿವೆಂಬ ವೈರಸ್‌’ಗೆ ವಿಶ್ವದಲ್ಲಿ ಪ್ರತಿ ನಿಮಿಷಕ್ಕೆ 11 ಜನರು ಬಲಿ!

‘ಹಸಿವೆಂಬ ವೈರಸ್‌’ಗೆ ವಿಶ್ವದಲ್ಲಿ ಪ್ರತಿ ನಿಮಿಷಕ್ಕೆ 11 ಜನರು ಬಲಿ!

- Advertisement -
- Advertisement -

ವಿಶ್ವದಲ್ಲಿ ಪ್ರತಿ ನಿಮಿಷಕ್ಕೆ ಕನಿಷ್ಠ 11 ಜನರು ಹಸಿವಿನಿಂದಾಗಿ ಸಾಯುತ್ತಿದ್ದಾರೆ ಎಂದು ಆ‌ಕ್ಸ್‌ಫಾಮ್‌‌‌ನ ಹೊಸ ಅಂಕಿಅಂಶಗಳು ಹೇಳಿದೆ. ಇದಲ್ಲದೆ, ಜಗತ್ತಿನಾದ್ಯಂತ ಬರಗಾಲದ ಪರಿಸ್ಥಿತಿಗಳು ಕಳೆದ ವರ್ಷಕ್ಕಿಂತ 6 ಪಟ್ಟು ಹೆಚ್ಚಾಗಿದೆ ಎಂದು ಅದು ಉಲ್ಲೇಖಿಸಿದೆ. ‘‘ಹಸಿವಿನ ವೈರಸ್‌ ದ್ವಿಗುಣ’’ ಎಂಬ ಶಿರ್ಷಿಕೆ ಇರುವ ವರದಿ ಬಿಡುಗಡೆ ಮಾಡಿರುವ ಆಕ್ಸ್‌ಫಾಮ್‌‌, ನಿಮಿಷವೊಂದಕ್ಕೆ ಕೊರೊನಾ ಸಾಂಕ್ರಮಿಕದಿಂದ ಸಾಯುವವರಿಗಿಂತ, ಹಸಿವಿನಿಂದ ಸಾಯುವವರೆ ಹೆಚ್ಚು ಎಂದು ಹೇಳಿದೆ.

ಆ‌ಕ್ಸ್‌ಫಾಮ್‌‌ 20 ಸ್ವತಂತ್ರ ಚಾರಿಟೇಬಲ್‌‌‌ ಸಂಸ್ಥೆಗಳ ಒಕ್ಕೂಟವಾಗಿದ್ದು, ಜಾಗತಿಕ ಬಡತನವನ್ನು ಹೋಗಲಾಡಿಸಲು ಕೆಲಸ ಮಾಡುತ್ತಿದೆ. ಇದನ್ನು 1942 ರಲ್ಲಿ ಸ್ಥಾಪಿಸಲಾಯಿತು.

ಪ್ರಸ್ತುತ ಪ್ರಪಂಚದಾದ್ಯಂತ 15.5 ಕೋಟಿ ಜನರು ಆಹಾರ ಅಭದ್ರತೆಯ ಬಿಕ್ಕಟ್ಟಿನಲ್ಲಿ ವಾಸಿಸುತ್ತಿದ್ದಾರೆ ಎಂದು ಆಕ್ಸ್‌ಫ್ಯಾಮ್ ಹೇಳಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಸುಮಾರು 2 ಕೋಟಿ ಜನರು ಹೆಚ್ಚಾಗಿದ್ದಾರೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಕೇಂದ್ರ ಸಂಪುಟ: 78 ಸಚಿವರಲ್ಲಿ 33 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ- ವರದಿ

ವಿಶ್ವದ ಹಸಿವಿಗೆ ಮಿಲಿಟರಿ ಸಂಘರ್ಷವು ಪ್ರಮುಖ ಕಾರಣವಾಗಿದೆ ಎಂದು ವರದಿ ಉಲ್ಲೇಖಿಸಿದೆ. ಮಿಲಿಟರಿ ಸಂಘರ್ಷಗಳನ್ನು ಎದುರಿಸುತ್ತಿರುವ ದೇಶಗಳಲ್ಲಿ 66% ದಷ್ಟು ದೇಶಗಳು ಹಸಿವಿನ ಬಿಕ್ಕಟ್ಟಿನೊಂದಿಗೆ ಕೂಡಾ ಹೋರಾಡುತ್ತಿವೆ. ಭೀಕರ ಸಾಂಕ್ರಾಮಿಕ ಸಮಯದಲ್ಲೂ ಜಾಗತಿಕವಾಗಿ ಮಿಲಿಟರಿಗೆ ಮಾಡಿರುವ ಖರ್ಚುಗಳು 51 ಬಿಲಿಯನ್ ಡಾಲರ್‌‌‌ ಹೆಚ್ಚಾಗಿದೆ ಎಂದು ಆಕ್ಸ್‌ಫಾಮ್ ಹೇಳಿದೆ.

“ಇಂದು, ಕೊರೊನಾದಿಂದಾದ ಆರ್ಥಿಕ ಕುಸಿತ ಮತ್ತು ಹದಗೆಡುತ್ತಿರುವ ಹವಾಮಾನ ಬಿಕ್ಕಟ್ಟು 5,20,000 ಕ್ಕೂ ಹೆಚ್ಚು ಜನರನ್ನು ಹಸಿವಿನ ಅಂಚಿಗೆ ತಳ್ಳಿದೆ. ಸಾಂಕ್ರಾಮಿಕದ ವಿರುದ್ದ ಹೋರಾಡುವ ಬದಲು, ಪಕ್ಷಗಳು ಪರಸ್ಪರ ಹೋರಾಡುತ್ತಿದ್ದವು. ಇದು ಹವಾಮಾನ ವಿಪತ್ತುಗಳು ಮತ್ತು ಆರ್ಥಿಕ ಬಿಕ್ಕಟ್ಟಿನಿಂದಾಗಿ ಈಗಾಗಲೇ ಜರ್ಜರಿಗೊಂಡ ಲಕ್ಷಾಂತರ ಜನರಿಗೆ ಭಾರಿ ಹೊಡೆತವನ್ನು ನೀಡಿದೆ” ಎಂದು ಆಕ್ಸ್‌ಫಾಮ್‌ನ ಅಮೆರಿಕದ ಅಧ್ಯಕ್ಷ ಮತ್ತು ಸಿಇಒ ಅಬ್ಬಿ ಮ್ಯಾಕ್ಸ್‌ಮನ್ ಹೇಳಿದ್ದಾರೆ.

ಜಾಗತಿಕ ತಾಪಮಾನ ಏರಿಕೆ ಮತ್ತು ಸಾಂಕ್ರಾಮಿಕ ರೋಗದಿಂದಾಗಿ ಉಂಟಾದ ಆರ್ಥಿಕ ಪರಿಣಾಮಗಳು ಕೂಡಾ ಹಸಿವಿನ ಬಿಕ್ಕಟ್ಟಿನ ಉಲ್ಬಣಕ್ಕೆ ಪ್ರಮುಖ ಅಂಶಗಳಾಗಿವೆ ಎಂದು ವರದಿಯು ಗುರುತಿಸಿದೆ. ಈ ಎರಡೂ ಕಾರಣಗಳಿಂದಾಗಿ ಜಾಗತಿಕವಾಗಿ ಆಹಾರದ ಬೆಲೆ 40% ಹೆಚ್ಚಳವಾಗಿದ್ದು, ಇದು ಒಂದು ದಶಕದಲ್ಲೆ ಅತಿ ಹೆಚ್ಚಾಗಿದೆ ಎಂದು ವರದಿ ಹೇಳಿದೆ.

ವರದಿಯ ಪ್ರಕಾರ, ಇಂತಹ ಉಲ್ಬಣವು ಲಕ್ಷಾಂತರ ಜನರನ್ನು ಹಸಿವೆಗೆ ತಳ್ಳುವಲ್ಲಿ ಗಮನಾರ್ಹ ಕೊಡುಗೆ ನೀಡಿದೆ. ರಾಜ್ಯ ಪೋಷಿತ ಮಿಲಿಟರಿ ಸಂಘರ್ಷಗಳಿಗೆ ಅಂತ್ಯ ಹಾಡುವ ಮೂಲಕ “ಹಸಿವಿನ ದುರಂತವನ್ನು” ಅಂಗೀಕರಿಸಲು ಮತ್ತು ನಿಲ್ಲಿಸುವಂತೆ ಸರ್ಕಾರಗಳನ್ನು ಆಕ್ಸ್‌ಫಾಮ್‌‌ ತನ್ನ ಹೇಳಿಕೆಯಲ್ಲಿ ಒತ್ತಾಯಿಸಿದೆ.

ಇದನ್ನೂ ಓದಿ: ಸಿನಿಮಾ ರಂಗಕ್ಕೂ ಕಾಲಿಟ್ಟ ಸುಮಲತಾ, ಹೆಚ್‌ಡಿಕೆ ವಾಗ್ವಾದ; ಅಣೆಕಟ್ಟೆಯಲ್ಲಿ ಬಿರುಕಿಲ್ಲ ಎಂದ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...