Homeಅಂತರಾಷ್ಟ್ರೀಯ‘ಹಸಿವೆಂಬ ವೈರಸ್‌’ಗೆ ವಿಶ್ವದಲ್ಲಿ ಪ್ರತಿ ನಿಮಿಷಕ್ಕೆ 11 ಜನರು ಬಲಿ!

‘ಹಸಿವೆಂಬ ವೈರಸ್‌’ಗೆ ವಿಶ್ವದಲ್ಲಿ ಪ್ರತಿ ನಿಮಿಷಕ್ಕೆ 11 ಜನರು ಬಲಿ!

- Advertisement -
- Advertisement -

ವಿಶ್ವದಲ್ಲಿ ಪ್ರತಿ ನಿಮಿಷಕ್ಕೆ ಕನಿಷ್ಠ 11 ಜನರು ಹಸಿವಿನಿಂದಾಗಿ ಸಾಯುತ್ತಿದ್ದಾರೆ ಎಂದು ಆ‌ಕ್ಸ್‌ಫಾಮ್‌‌‌ನ ಹೊಸ ಅಂಕಿಅಂಶಗಳು ಹೇಳಿದೆ. ಇದಲ್ಲದೆ, ಜಗತ್ತಿನಾದ್ಯಂತ ಬರಗಾಲದ ಪರಿಸ್ಥಿತಿಗಳು ಕಳೆದ ವರ್ಷಕ್ಕಿಂತ 6 ಪಟ್ಟು ಹೆಚ್ಚಾಗಿದೆ ಎಂದು ಅದು ಉಲ್ಲೇಖಿಸಿದೆ. ‘‘ಹಸಿವಿನ ವೈರಸ್‌ ದ್ವಿಗುಣ’’ ಎಂಬ ಶಿರ್ಷಿಕೆ ಇರುವ ವರದಿ ಬಿಡುಗಡೆ ಮಾಡಿರುವ ಆಕ್ಸ್‌ಫಾಮ್‌‌, ನಿಮಿಷವೊಂದಕ್ಕೆ ಕೊರೊನಾ ಸಾಂಕ್ರಮಿಕದಿಂದ ಸಾಯುವವರಿಗಿಂತ, ಹಸಿವಿನಿಂದ ಸಾಯುವವರೆ ಹೆಚ್ಚು ಎಂದು ಹೇಳಿದೆ.

ಆ‌ಕ್ಸ್‌ಫಾಮ್‌‌ 20 ಸ್ವತಂತ್ರ ಚಾರಿಟೇಬಲ್‌‌‌ ಸಂಸ್ಥೆಗಳ ಒಕ್ಕೂಟವಾಗಿದ್ದು, ಜಾಗತಿಕ ಬಡತನವನ್ನು ಹೋಗಲಾಡಿಸಲು ಕೆಲಸ ಮಾಡುತ್ತಿದೆ. ಇದನ್ನು 1942 ರಲ್ಲಿ ಸ್ಥಾಪಿಸಲಾಯಿತು.

ಪ್ರಸ್ತುತ ಪ್ರಪಂಚದಾದ್ಯಂತ 15.5 ಕೋಟಿ ಜನರು ಆಹಾರ ಅಭದ್ರತೆಯ ಬಿಕ್ಕಟ್ಟಿನಲ್ಲಿ ವಾಸಿಸುತ್ತಿದ್ದಾರೆ ಎಂದು ಆಕ್ಸ್‌ಫ್ಯಾಮ್ ಹೇಳಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಸುಮಾರು 2 ಕೋಟಿ ಜನರು ಹೆಚ್ಚಾಗಿದ್ದಾರೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಕೇಂದ್ರ ಸಂಪುಟ: 78 ಸಚಿವರಲ್ಲಿ 33 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ- ವರದಿ

ವಿಶ್ವದ ಹಸಿವಿಗೆ ಮಿಲಿಟರಿ ಸಂಘರ್ಷವು ಪ್ರಮುಖ ಕಾರಣವಾಗಿದೆ ಎಂದು ವರದಿ ಉಲ್ಲೇಖಿಸಿದೆ. ಮಿಲಿಟರಿ ಸಂಘರ್ಷಗಳನ್ನು ಎದುರಿಸುತ್ತಿರುವ ದೇಶಗಳಲ್ಲಿ 66% ದಷ್ಟು ದೇಶಗಳು ಹಸಿವಿನ ಬಿಕ್ಕಟ್ಟಿನೊಂದಿಗೆ ಕೂಡಾ ಹೋರಾಡುತ್ತಿವೆ. ಭೀಕರ ಸಾಂಕ್ರಾಮಿಕ ಸಮಯದಲ್ಲೂ ಜಾಗತಿಕವಾಗಿ ಮಿಲಿಟರಿಗೆ ಮಾಡಿರುವ ಖರ್ಚುಗಳು 51 ಬಿಲಿಯನ್ ಡಾಲರ್‌‌‌ ಹೆಚ್ಚಾಗಿದೆ ಎಂದು ಆಕ್ಸ್‌ಫಾಮ್ ಹೇಳಿದೆ.

“ಇಂದು, ಕೊರೊನಾದಿಂದಾದ ಆರ್ಥಿಕ ಕುಸಿತ ಮತ್ತು ಹದಗೆಡುತ್ತಿರುವ ಹವಾಮಾನ ಬಿಕ್ಕಟ್ಟು 5,20,000 ಕ್ಕೂ ಹೆಚ್ಚು ಜನರನ್ನು ಹಸಿವಿನ ಅಂಚಿಗೆ ತಳ್ಳಿದೆ. ಸಾಂಕ್ರಾಮಿಕದ ವಿರುದ್ದ ಹೋರಾಡುವ ಬದಲು, ಪಕ್ಷಗಳು ಪರಸ್ಪರ ಹೋರಾಡುತ್ತಿದ್ದವು. ಇದು ಹವಾಮಾನ ವಿಪತ್ತುಗಳು ಮತ್ತು ಆರ್ಥಿಕ ಬಿಕ್ಕಟ್ಟಿನಿಂದಾಗಿ ಈಗಾಗಲೇ ಜರ್ಜರಿಗೊಂಡ ಲಕ್ಷಾಂತರ ಜನರಿಗೆ ಭಾರಿ ಹೊಡೆತವನ್ನು ನೀಡಿದೆ” ಎಂದು ಆಕ್ಸ್‌ಫಾಮ್‌ನ ಅಮೆರಿಕದ ಅಧ್ಯಕ್ಷ ಮತ್ತು ಸಿಇಒ ಅಬ್ಬಿ ಮ್ಯಾಕ್ಸ್‌ಮನ್ ಹೇಳಿದ್ದಾರೆ.

ಜಾಗತಿಕ ತಾಪಮಾನ ಏರಿಕೆ ಮತ್ತು ಸಾಂಕ್ರಾಮಿಕ ರೋಗದಿಂದಾಗಿ ಉಂಟಾದ ಆರ್ಥಿಕ ಪರಿಣಾಮಗಳು ಕೂಡಾ ಹಸಿವಿನ ಬಿಕ್ಕಟ್ಟಿನ ಉಲ್ಬಣಕ್ಕೆ ಪ್ರಮುಖ ಅಂಶಗಳಾಗಿವೆ ಎಂದು ವರದಿಯು ಗುರುತಿಸಿದೆ. ಈ ಎರಡೂ ಕಾರಣಗಳಿಂದಾಗಿ ಜಾಗತಿಕವಾಗಿ ಆಹಾರದ ಬೆಲೆ 40% ಹೆಚ್ಚಳವಾಗಿದ್ದು, ಇದು ಒಂದು ದಶಕದಲ್ಲೆ ಅತಿ ಹೆಚ್ಚಾಗಿದೆ ಎಂದು ವರದಿ ಹೇಳಿದೆ.

ವರದಿಯ ಪ್ರಕಾರ, ಇಂತಹ ಉಲ್ಬಣವು ಲಕ್ಷಾಂತರ ಜನರನ್ನು ಹಸಿವೆಗೆ ತಳ್ಳುವಲ್ಲಿ ಗಮನಾರ್ಹ ಕೊಡುಗೆ ನೀಡಿದೆ. ರಾಜ್ಯ ಪೋಷಿತ ಮಿಲಿಟರಿ ಸಂಘರ್ಷಗಳಿಗೆ ಅಂತ್ಯ ಹಾಡುವ ಮೂಲಕ “ಹಸಿವಿನ ದುರಂತವನ್ನು” ಅಂಗೀಕರಿಸಲು ಮತ್ತು ನಿಲ್ಲಿಸುವಂತೆ ಸರ್ಕಾರಗಳನ್ನು ಆಕ್ಸ್‌ಫಾಮ್‌‌ ತನ್ನ ಹೇಳಿಕೆಯಲ್ಲಿ ಒತ್ತಾಯಿಸಿದೆ.

ಇದನ್ನೂ ಓದಿ: ಸಿನಿಮಾ ರಂಗಕ್ಕೂ ಕಾಲಿಟ್ಟ ಸುಮಲತಾ, ಹೆಚ್‌ಡಿಕೆ ವಾಗ್ವಾದ; ಅಣೆಕಟ್ಟೆಯಲ್ಲಿ ಬಿರುಕಿಲ್ಲ ಎಂದ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...