Homeಕರ್ನಾಟಕಎಚ್.ಡಿ.ಕುಮಾರಸ್ವಾಮಿ V/s ಸುಮಲತಾ: ರಾಜಕೀಯ ಕದನಕ್ಕೆ ವಿರಾಮ ನೀಡಲು ಎಚ್‌ಡಿಕೆ ನಿರ್ಧಾರ

ಎಚ್.ಡಿ.ಕುಮಾರಸ್ವಾಮಿ V/s ಸುಮಲತಾ: ರಾಜಕೀಯ ಕದನಕ್ಕೆ ವಿರಾಮ ನೀಡಲು ಎಚ್‌ಡಿಕೆ ನಿರ್ಧಾರ

- Advertisement -
- Advertisement -

ಮಂಡ್ಯದ ಕೆಆರ್‌ಎಸ್‌ ಅಣೆಕಟ್ಟೆ ಸಮೀಪದ‌ ಬೇಬಿ ಬೆಟ್ಟದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆಗೆ ನಡೆಯುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಸಂಸದೆ ಸುಮಲತಾ ಅಂಬರೀಷ್‌ ನಡುವೆ ನಡೆಯುತ್ತಿದ್ದ ರಾಜಕೀಯ ಕದನಕ್ಕೆ ವಿರಾಮ ಬೀಳುವ ಕಾಲ ಬಂದಿದೆ.

ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜಕೀಯ ಕದನಕ್ಕೆ ಬ್ರೇಕ್ ಹಾಕಲು ನಿರ್ಧರಿಸಿದ್ದಾರೆ.

’ಕಾರ್ಯಕರ್ತ ಬಂಧುಗಳೇ, ಅಭಿಮಾನಿ ಅಣ್ಣ ತಮ್ಮಂದಿರೆ, ಅಕ್ಕ ತಂಗಿಯರೇ ನಾವು ಹೋರಾಟ ಮಾಡಬೇಕಾದ ವಿಚಾರ ಬಹಳಷ್ಟಿವೆ. ಕನ್ನಡ, ಕನ್ನಡಿಗ, ಕರ್ನಾಟಕಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನಮಗೆ ಬಹುದೊಡ್ಡ ನ್ಯಾಯ ಸಿಗಬೇಕಿದೆ. ನನ್ನ ಹೋರಾಟವನ್ನು ಈಗಾಗಲೇ ಅತ್ತ ಕೇಂದ್ರೀಕರಿಸಿದ್ದೇನೆ. ನಾಡು ನುಡಿಗಾಗಿ ಹೋರಾಡೋಣ. ಬೇರೆಲ್ಲ ವಿಷಯಗಳನ್ನು ನಾವು ಉಪೇಕ್ಷಿಸೋಣ’ ಎಂದಿದ್ದಾರೆ.

ಇದನ್ನೂ ಓದಿ: ಸಿನಿಮಾ ರಂಗಕ್ಕೂ ಕಾಲಿಟ್ಟ ಸುಮಲತಾ, ಹೆಚ್‌ಡಿಕೆ ವಾಗ್ವಾದ; ಅಣೆಕಟ್ಟೆಯಲ್ಲಿ ಬಿರುಕಿಲ್ಲ ಎಂದ ಸರ್ಕಾರ!

’ಪ್ರಾದೇಶಿಕ ಪಕ್ಷವಾಗಿ ನಾವು ಮಾತಾಡುವುದಿದೆ, ಮಾತಾಡೋಣ. ಪ್ರಾದೇಶಿಕ ವಿಚಾರಗಳು ಇತ್ತೀಚೆಗೆ ಗೌಣವಾಗುತ್ತಿವೆ, ಅದರ ಬಗ್ಗೆ ಮಾತಾಡೋಣ. ಒಕ್ಕೂಟ ವ್ಯವಸ್ಥೆಯಲ್ಲಿ ನಮಗೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ನಾವು ದೊಡ್ಡದಾಗಿ ಕೂಗಿ ಹೇಳೋಣ. ಪ್ರಾದೇಶಿಕ ಅಸ್ಮಿತೆಯ ವಿಚಾರವನ್ನು ಜನರೊಂದಿಗೆ ಪ್ರಸ್ತಾಪಿಸೋಣ. ಆದರೆ, ಅನಗತ್ಯ ಮಾತು ಅನಗತ್ಯವಷ್ಟೆ’ ಎಂದಿದ್ದಾರೆ.

’ನಾವು ಸಿಡಿಯಬೇಕಾದ ಪರಿಸ್ಥಿತಿ ಇದೆ, ಸಿಡಿಯೋಣ. ಕಾವೇರಿ ಜಲದ ಯೋಜನೆಗಳಿಗೆ ತಡೆಯೊಡ್ಡುತ್ತಿರುವವರ ವಿರುದ್ಧ ಸಿಡಿಯೋಣ. ನಮ್ಮ ನೆಲದಲ್ಲಿ ನಮ್ಮ ಕನ್ನಡ ಧ್ವಜವನ್ನು ಹಾರಿಸಲು ಬಿಡಲೊಲ್ಲದ ಪಟ್ಟಭದ್ರರ ವಿರುದ್ಧ ಸಿಡಿಯೋಣ. ನಮಗೆ ನೀಡಬೇಕಾದ ಪರಿಹಾರ, ಅನುದಾನ ನೀಡದ ವ್ಯವಸ್ಥೆಯ ವಿರುದ್ಧ ಸಿಡಿಯ ಬೇಕಾಗಿದೆ ಸಿಡಿಯೋಣ. ಇದು ನಮ್ಮ ಆಯ್ಕೆಯಾಗಲಿ’ ಎಂದು ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.

’ಕೋವಿಡ್‌ ಕಾಲದಲ್ಲಿ ಜೆಡಿಎಸ್‌ ರಾಜಕೀಯ ಮಾಡಲಿಲ್ಲ. ಆದರೆ, ಜನರ ಪರ ನಿಲ್ಲುವುದನ್ನು ಮರೆಯಲಿಲ್ಲ, ಸರ್ಕಾರವನ್ನು ಎಚ್ಚರಿಸದೇ ಇರಲಿಲ್ಲ. ಕರ್ನಾಟಕ, ಕನ್ನಡಿಗರಿಗೆ ಅಪಮಾನವಾದಾಗ ಸಿಡಿಯಲು ಒಂದು ಕ್ಷಣವೂ ತಡ ಮಾಡಿಲ್ಲ. ನಾವು ರಾಜಕೀಯ ಮಾಡೋಣ, ಕರ್ನಾಟಕ ಕೇಂದ್ರಿತ ರಾಜಕಾರಣ ಮಾಡೋಣ. ನಮ್ಮ ಮೇಲಿನ ಆರೋಪಗಳನ್ನು ಜನರ ತೀರ್ಮಾನಕ್ಕೆ ಬಿಡೋಣ’ ಎಂದು ಎಚ್‌ಡಿಕೆ ಕದನಕ್ಕೆ ವಿರಾಮ ಹಾಕುವ ನಿರ್ಧಾರಕ್ಕೆ ಬಂದಿದ್ದಾರೆ.

ಎಚ್‌ಡಿಕೆ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಸಂಸದೆ ಸುಮಲತಾ, ಈ ವಿಷಯವನ್ನು ಶುರು ಮಾಡಿದ್ದು ಅವರು. ಅಂತ್ಯ ಮಾಡುತ್ತೇನೆ ಅಂದರೆ ಸಂತೋಷ. ನಾನು ಯಾವತ್ತೂ ಇದನ್ನು ವಿವಾದ ಮಾಡಬೇಕು ಎಂದುಕೊಳ್ಳಲಿಲ್ಲ. ಇದರಲ್ಲಿ ಖಾಸಗಿ ವಿಷಯಗಳನ್ನು ತರಬೇಕು ಎಂಬ ಉದ್ದೇಶ ನನಗೆ ಇರಲಿಲ್ಲ’ ಎಂದಿದ್ದಾರೆ.


ಇದನ್ನೂ ಓದಿ: ಸಂಸದೆ ಸುಮಲತಾ ದಾಖಲೆ ನೀಡಿದರೆ ಅಕ್ರಮ ಗಣಿಗಾರಿಕೆಯ ತನಿಖೆ – ಮುರುಗೇಶ್ ನಿರಾಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಷ್ಟು ವರ್ಷಗಳ ಸಾರ್ವಜನಿಕ ಜೀವನದಲ್ಲಿ ಎಚ್ ಡಿಕೆ, ಟೀಕೆ ಮಾಡುವಾಗ ಭಾಷೆಯ ಬಳಕೆಯನ್ನೇ ತಿಳಿದಿಲ್ಲ ಎನ್ನುವುದು ನೋವಿನ ವಿಷಯ! ಭಾಷೆಯ ಬಳಕೆಯಲ್ಲಿ ತಾನು ಹಿಡಿತ ತಪ್ಪಿದೆ ಎಂದು ಹೇಳಿ ವಿಷಾದ ವ್ಯಕ್ತಪಡಿಸುವುದು ಅವಶ್ಯ ಮತ್ತು ರಾಜಕೀಯ ಹಿರಿತನಕ್ಕೆ ಶೋಭೆ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...