ಮಂಡ್ಯದ ಕೆಆರ್ಎಸ್ ಅಣೆಕಟ್ಟೆ ಸಮೀಪದ ಬೇಬಿ ಬೆಟ್ಟದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆಗೆ ನಡೆಯುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಸಂಸದೆ ಸುಮಲತಾ ಅಂಬರೀಷ್ ನಡುವೆ ನಡೆಯುತ್ತಿದ್ದ ರಾಜಕೀಯ ಕದನಕ್ಕೆ ವಿರಾಮ ಬೀಳುವ ಕಾಲ ಬಂದಿದೆ.
ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜಕೀಯ ಕದನಕ್ಕೆ ಬ್ರೇಕ್ ಹಾಕಲು ನಿರ್ಧರಿಸಿದ್ದಾರೆ.
’ಕಾರ್ಯಕರ್ತ ಬಂಧುಗಳೇ, ಅಭಿಮಾನಿ ಅಣ್ಣ ತಮ್ಮಂದಿರೆ, ಅಕ್ಕ ತಂಗಿಯರೇ ನಾವು ಹೋರಾಟ ಮಾಡಬೇಕಾದ ವಿಚಾರ ಬಹಳಷ್ಟಿವೆ. ಕನ್ನಡ, ಕನ್ನಡಿಗ, ಕರ್ನಾಟಕಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನಮಗೆ ಬಹುದೊಡ್ಡ ನ್ಯಾಯ ಸಿಗಬೇಕಿದೆ. ನನ್ನ ಹೋರಾಟವನ್ನು ಈಗಾಗಲೇ ಅತ್ತ ಕೇಂದ್ರೀಕರಿಸಿದ್ದೇನೆ. ನಾಡು ನುಡಿಗಾಗಿ ಹೋರಾಡೋಣ. ಬೇರೆಲ್ಲ ವಿಷಯಗಳನ್ನು ನಾವು ಉಪೇಕ್ಷಿಸೋಣ’ ಎಂದಿದ್ದಾರೆ.
ಇದನ್ನೂ ಓದಿ: ಸಿನಿಮಾ ರಂಗಕ್ಕೂ ಕಾಲಿಟ್ಟ ಸುಮಲತಾ, ಹೆಚ್ಡಿಕೆ ವಾಗ್ವಾದ; ಅಣೆಕಟ್ಟೆಯಲ್ಲಿ ಬಿರುಕಿಲ್ಲ ಎಂದ ಸರ್ಕಾರ!
ಪ್ರಾದೇಶಿಕ ಪಕ್ಷವಾಗಿ ನಾವು ಮಾತಾಡುವುದಿದೆ, ಮಾತಾಡೋಣ. ಪ್ರಾದೇಶಿಕ ವಿಚಾರಗಳು ಇತ್ತೀಚೆಗೆ ಗೌಣವಾಗುತ್ತಿವೆ, ಅದರ ಬಗ್ಗೆ ಮಾತಾಡೋಣ. ಒಕ್ಕೂಟ ವ್ಯವಸ್ಥೆಯಲ್ಲಿ ನಮಗೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ನಾವು ದೊಡ್ಡದಾಗಿ ಕೂಗಿ ಹೇಳೋಣ. ಪ್ರಾದೇಶಿಕ ಅಸ್ಮಿತೆಯ ವಿಚಾರವನ್ನು ಜನರೊಂದಿಗೆ ಪ್ರಸ್ತಾಪಿಸೋಣ. ಆದರೆ, ಅನಗತ್ಯ ಮಾತು ಅನಗತ್ಯವಷ್ಟೆ.
2/4— H D Kumaraswamy (@hd_kumaraswamy) July 10, 2021
’ಪ್ರಾದೇಶಿಕ ಪಕ್ಷವಾಗಿ ನಾವು ಮಾತಾಡುವುದಿದೆ, ಮಾತಾಡೋಣ. ಪ್ರಾದೇಶಿಕ ವಿಚಾರಗಳು ಇತ್ತೀಚೆಗೆ ಗೌಣವಾಗುತ್ತಿವೆ, ಅದರ ಬಗ್ಗೆ ಮಾತಾಡೋಣ. ಒಕ್ಕೂಟ ವ್ಯವಸ್ಥೆಯಲ್ಲಿ ನಮಗೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ನಾವು ದೊಡ್ಡದಾಗಿ ಕೂಗಿ ಹೇಳೋಣ. ಪ್ರಾದೇಶಿಕ ಅಸ್ಮಿತೆಯ ವಿಚಾರವನ್ನು ಜನರೊಂದಿಗೆ ಪ್ರಸ್ತಾಪಿಸೋಣ. ಆದರೆ, ಅನಗತ್ಯ ಮಾತು ಅನಗತ್ಯವಷ್ಟೆ’ ಎಂದಿದ್ದಾರೆ.
’ನಾವು ಸಿಡಿಯಬೇಕಾದ ಪರಿಸ್ಥಿತಿ ಇದೆ, ಸಿಡಿಯೋಣ. ಕಾವೇರಿ ಜಲದ ಯೋಜನೆಗಳಿಗೆ ತಡೆಯೊಡ್ಡುತ್ತಿರುವವರ ವಿರುದ್ಧ ಸಿಡಿಯೋಣ. ನಮ್ಮ ನೆಲದಲ್ಲಿ ನಮ್ಮ ಕನ್ನಡ ಧ್ವಜವನ್ನು ಹಾರಿಸಲು ಬಿಡಲೊಲ್ಲದ ಪಟ್ಟಭದ್ರರ ವಿರುದ್ಧ ಸಿಡಿಯೋಣ. ನಮಗೆ ನೀಡಬೇಕಾದ ಪರಿಹಾರ, ಅನುದಾನ ನೀಡದ ವ್ಯವಸ್ಥೆಯ ವಿರುದ್ಧ ಸಿಡಿಯ ಬೇಕಾಗಿದೆ ಸಿಡಿಯೋಣ. ಇದು ನಮ್ಮ ಆಯ್ಕೆಯಾಗಲಿ’ ಎಂದು ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.
ಕೋವಿಡ್ ಕಾಲದಲ್ಲಿ ಜೆಡಿಎಸ್ ರಾಜಕೀಯ ಮಾಡಲಿಲ್ಲ. ಆದರೆ, ಜನರ ಪರ ನಿಲ್ಲುವುದನ್ನು ಮರೆಯಲಿಲ್ಲ, ಸರ್ಕಾರವನ್ನು ಎಚ್ಚರಿಸದೇ ಇರಲಿಲ್ಲ. ಕರ್ನಾಟಕ, ಕನ್ನಡಿಗರಿಗೆ ಅಪಮಾನವಾದಾಗ ಸಿಡಿಯಲು ಒಂದು ಕ್ಷಣವೂ ತಡ ಮಾಡಿಲ್ಲ. ನಾವು ರಾಜಕೀಯ ಮಾಡೋಣ, ಕರ್ನಾಟಕ ಕೇಂದ್ರಿತ ರಾಜಕಾರಣ ಮಾಡೋಣ. ನಮ್ಮ ಮೇಲಿನ ಆರೋಪಗಳನ್ನು ಜನರ ತೀರ್ಮಾನಕ್ಕೆ ಬಿಡೋಣ.
4/4— H D Kumaraswamy (@hd_kumaraswamy) July 10, 2021
’ಕೋವಿಡ್ ಕಾಲದಲ್ಲಿ ಜೆಡಿಎಸ್ ರಾಜಕೀಯ ಮಾಡಲಿಲ್ಲ. ಆದರೆ, ಜನರ ಪರ ನಿಲ್ಲುವುದನ್ನು ಮರೆಯಲಿಲ್ಲ, ಸರ್ಕಾರವನ್ನು ಎಚ್ಚರಿಸದೇ ಇರಲಿಲ್ಲ. ಕರ್ನಾಟಕ, ಕನ್ನಡಿಗರಿಗೆ ಅಪಮಾನವಾದಾಗ ಸಿಡಿಯಲು ಒಂದು ಕ್ಷಣವೂ ತಡ ಮಾಡಿಲ್ಲ. ನಾವು ರಾಜಕೀಯ ಮಾಡೋಣ, ಕರ್ನಾಟಕ ಕೇಂದ್ರಿತ ರಾಜಕಾರಣ ಮಾಡೋಣ. ನಮ್ಮ ಮೇಲಿನ ಆರೋಪಗಳನ್ನು ಜನರ ತೀರ್ಮಾನಕ್ಕೆ ಬಿಡೋಣ’ ಎಂದು ಎಚ್ಡಿಕೆ ಕದನಕ್ಕೆ ವಿರಾಮ ಹಾಕುವ ನಿರ್ಧಾರಕ್ಕೆ ಬಂದಿದ್ದಾರೆ.
ಎಚ್ಡಿಕೆ ಟ್ವೀಟ್ಗೆ ಪ್ರತಿಕ್ರಿಯಿಸಿರುವ ಸಂಸದೆ ಸುಮಲತಾ, ಈ ವಿಷಯವನ್ನು ಶುರು ಮಾಡಿದ್ದು ಅವರು. ಅಂತ್ಯ ಮಾಡುತ್ತೇನೆ ಅಂದರೆ ಸಂತೋಷ. ನಾನು ಯಾವತ್ತೂ ಇದನ್ನು ವಿವಾದ ಮಾಡಬೇಕು ಎಂದುಕೊಳ್ಳಲಿಲ್ಲ. ಇದರಲ್ಲಿ ಖಾಸಗಿ ವಿಷಯಗಳನ್ನು ತರಬೇಕು ಎಂಬ ಉದ್ದೇಶ ನನಗೆ ಇರಲಿಲ್ಲ’ ಎಂದಿದ್ದಾರೆ.
ಇದನ್ನೂ ಓದಿ: ಸಂಸದೆ ಸುಮಲತಾ ದಾಖಲೆ ನೀಡಿದರೆ ಅಕ್ರಮ ಗಣಿಗಾರಿಕೆಯ ತನಿಖೆ – ಮುರುಗೇಶ್ ನಿರಾಣಿ



ಇಷ್ಟು ವರ್ಷಗಳ ಸಾರ್ವಜನಿಕ ಜೀವನದಲ್ಲಿ ಎಚ್ ಡಿಕೆ, ಟೀಕೆ ಮಾಡುವಾಗ ಭಾಷೆಯ ಬಳಕೆಯನ್ನೇ ತಿಳಿದಿಲ್ಲ ಎನ್ನುವುದು ನೋವಿನ ವಿಷಯ! ಭಾಷೆಯ ಬಳಕೆಯಲ್ಲಿ ತಾನು ಹಿಡಿತ ತಪ್ಪಿದೆ ಎಂದು ಹೇಳಿ ವಿಷಾದ ವ್ಯಕ್ತಪಡಿಸುವುದು ಅವಶ್ಯ ಮತ್ತು ರಾಜಕೀಯ ಹಿರಿತನಕ್ಕೆ ಶೋಭೆ.