Homeಮುಖಪುಟತಮಿಳುನಾಡಿನಲ್ಲಿ ಪ್ರತ್ಯೇಕತೆಯ ಕಿಡಿ ಹಚ್ಚಿದ ಬಿಜೆಪಿ: ಮುನ್ನೆಲೆಗೆ ಬಂದ ಪ್ರತ್ಯೇಕ ರಾಜ್ಯದ ಕೂಗು

ತಮಿಳುನಾಡಿನಲ್ಲಿ ಪ್ರತ್ಯೇಕತೆಯ ಕಿಡಿ ಹಚ್ಚಿದ ಬಿಜೆಪಿ: ಮುನ್ನೆಲೆಗೆ ಬಂದ ಪ್ರತ್ಯೇಕ ರಾಜ್ಯದ ಕೂಗು

- Advertisement -
- Advertisement -

ಬಿಜೆಪಿ ದೇಶಾದ್ಯಂತ ಒಡೆದು ಆಳುವ ನೀತಿಯ ಮೂಲಕ ಅಧಿಕಾರವನ್ನು ಹಿಡಿಯುತ್ತದೆ ಎಂಬ ಆರೋಪ ದೇಶದ ಅನೇಕ ರಾಜ್ಯಗಳಲ್ಲಿ ಕೇಳಿಬಂದಿದೆ. ಇದಕ್ಕೆ ತಾಜಾ ಉದಾಹರಣೆಯಾಗಿ ಎಲ್‌ಜೆಪಿ ಪಕ್ಷವನ್ನು ಬಿಜೆಪಿ   ಒಡೆಯುವ ಪ್ರಯತ್ನಕ್ಕೆ ಕೈ ಹಾಕಿದೆ. ಹಾಗೇ ವರ್ಷಗಳ ಹಿಂದೆ ಕರ್ನಾಟಕದಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಬೇಡಿಕೆ ಇಟ್ಟಿದ್ದರು. ಪಶ್ಚಿಮ ಬಂಗಾಳ ಚುನಾವಣೆಯ ಸಂದರ್ಭದಲ್ಲಿ ಅಲ್ಲಿ ಕೂಡ ಪ್ರತ್ಯೇಕ ಉತ್ತರ ಪ್ರಾಂತ್ಯದ ರಚನೆಗೆ ಬಿಜೆಪಿ ಪುಷ್ಠಿ ನೀಡಿತ್ತು. ಈಗ ತಮಿಳು ನಾಡಿನಲ್ಲಿ ಕೂಡ ಪ್ರತ್ಯೇಕ ರಾಜ್ಯ ರಚನೆಯ ಚರ್ಚೆಯನ್ನು ಬಿಜೆಪಿಯೇ ಹುಟ್ಟುಹಾಕಿದೆ. ಕೊಂಗನಾಡು ಪ್ರತ್ಯೇಕ ರಾಜ್ಯ ಬೇಡಿಕೆಯ ಕೂಗು ಮತ್ತೊಮ್ಮೆ ತಮಿಳುನಾಡಿನಲ್ಲಿ ಆರಂಭವಾಗಿದೆ.

ಬಿಜೆಪಿ ತಮಿಳು ನಾಡು ರಾಜ್ಯಾಧ್ಯಕ್ಷ  ಎಲ್ ಮುರುಗನ್ ಅವರಿಗೆ  ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ನೀಡಿದೆ. ಇದೇ ಸಂದರ್ಭದಲ್ಲಿ ಕೊಂಗ ನಾಡು ಪ್ರತ್ಯೇಕ ರಾಜ್ಯದ ಬೇಡಿಕೆ ಮುನ್ನೆಲೆಗೆ ಬಂದಿರುವುದು ಕೇವಲ ಕಾಕತಾಳೀಯವಲ್ಲ. ಬಿಜೆಪಿ ಆರಂಭದಿಂದಲೂ ಕೊಂಗು ನಾಡು ಎಂದು ಕರೆಯಲ್ಪಡುವ ಪಶ್ಚಿಮ ತಮಿಳುನಾಡಿನ ನಾಯಕರನ್ನೇ ಪಕ್ಷದ ಮುಂಚೂಣಿಯಲ್ಲಿ ನಿಲ್ಲಿಸಿದೆ. ಬಿಜೆಪಿಯ ಮತ ಬ್ಯಾಂಕ್ ಇರುವುದೂ ಈ ಪ್ರಾಂತ್ಯದಲ್ಲಿಯೇ.

ದೆಹಲಿಯ ಅಧಿಕಾರ ಕೇಂದ್ರದ ಪಡಸಾಲೆಯಲ್ಲಿ ಕೆಲಸ ಮಾಡುವ ಕೆಲವರು  ವಾರದ ಆರಂಭದಲ್ಲಿ ತಮಿಳುನಾಡು ಟ್ವಿಟರ್ ವಲಯದಲ್ಲಿ ಪ್ರತ್ಯೇಕತೆಯ ಚರ್ಚೆಗೆ ಮುನ್ನಡಿ ಬರೆದಿದ್ದಾರೆ.  ಕೆಲವು ಅಧಿಕೃತ ಪ್ರಕಟಣೆಗಳಲ್ಲಿ, ಹೊಸದಾಗಿ ಪ್ರಮಾಣವಚನ ಸ್ವೀಕರಿಸಿದ ರಾಜ್ಯ ಸಚಿವ  ಎಲ್ ಮುರುಗನ್ ಅವರ ಬಯೋ ಡೇಟಾದಲ್ಲಿ  ಹುಟ್ಟಿದ ಜಿಲ್ಲೆ ಊರುಗಳ ವಿಳಾಸದ ಬದಲಾಗಿ ಕೊಂಗು ನಾಡು ಎಂದು ನಮೂದಿಸಲಾಗಿದೆ. ಇದು ಆಕಸ್ಮಿಕವಾಗಿ ನಡೆದ ಬೆಳವಣಿಗೆಯಲ್ಲ. ಬಿಜೆಪಿ ಹೊಸದಾಗಿ ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಕೂಡ ಅಣ್ಣಾಮಲೈ ಅವರನ್ನು.  ಅಣ್ಣಾ ಮಲೈ ಕೂಡ ಇದೇ ಕೊಂಗು ನಾಡು ಪ್ರದೇಶದವರು.

ಇದನ್ನೂ ಓದಿ: ತಮಿಳುನಾಡು ಸರ್ಕಾರದ ಆರ್ಥಿಕ ಸಲಹಾ ಮಂಡಳಿಯ ಭಾಗವಾದ ರಘುರಾಂ ರಾಜನ್, ಎಸ್ತರ್ ಡುಫ್ಲೊ

2021ರ ವಿಧಾನಸಭೆ ಚುನಾವಣೆಯಲ್ಲಿ ಯಶಸ್ಸಿನ ಕನಸು ಕಾಣುತ್ತಿದ್ದ ಬಿಜೆಪಿಗೆ ಫಲಿತಾಂಶಗಳು ಅಷ್ಟು ಸಮಧಾನಕಾರಿಗಾಗಿ ಕಾಣಲಿಲ್ಲ. ತಮಿಳು ಸಂಸ್ಕೃತಿಯನ್ನು  ಹಿಂದುತ್ವದ ಅಜೆಂಡಾದ ಮೂಲಕ ಒಡೆಯಲು ಸಾಧ್ಯವಿಲ್ಲವೆಂಬ ವಿಷಯ ಅರಿವಾಗುತ್ತಿದ್ದಂತೆ ಬಿಜೆಪಿ ತಮಿಳರನ್ನು ತಮಿಳರಿಂದಲೇ ಒಡೆಯುವ ಪ್ರಯತ್ನಕ್ಕೆ ಕೈ ಹಾಕಿದೆ.

ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ ತಮಿಳು ನಾಡಿನಲ್ಲಿ ಅಧಿಕಾರವನ್ನು ಹಿಡಿಯುತ್ತಿದ್ದಂತೆ ಈ ಪ್ರತ್ಯೇಕತೆಯ ಕೂಗು ತೀವ್ರಗೊಂಡಿದೆ. ಸ್ಟಾಲಿನ್ ಕೇಂದ್ರ ಸರ್ಕಾರವನ್ನು ಒಕ್ಕೂಟ ಸರ್ಕಾರ ಎಂದು ಕರೆಯುವ ನಿರ್ಣಯ ಕೈಗೊಂಡಿರುವುದು ಹಾಗೂ ಜಿಎಸ್‌ಟಿ ಮತ್ತು ನೀಟ್‌ ಕುರಿತು ಪರಿಶೀಲನೆಗೆ ಸದನ ಸಮಿತಿಯನ್ನು ರಚಿಸಿರುವುದು ಕೇಂದ್ರ ಸರ್ಕಾರದ ಅಸಮಾಧಾನಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಸ್ಟಾಲಿನ್ ತಂತ್ರಕ್ಕೆ ಬಿಜೆಪಿ ಪ್ರತಿ ತಂತ್ರವಾಗಿ ಪ್ರತ್ಯೇಕ ಕೊಂಗುನಾಡು ಬೇಡಿಕೆಯನ್ನು ಹುಟ್ಟುಹಾಕಿದೆ.

ಕೊಂಗು ನಾಡು ರಾಜ್ಯದ ಬೇಡಿಕೆ ಆರಂಭವಾಗಿರುವುದು ಇದೇ ಮೊದಲಲ್ಲ. 2013 ರಲ್ಲಿಯೂ ಇದೇ ಕೂಗು ಮತ್ತು ಆಗ್ರಹಗಳು ತಮಿಳುನಾಡಿನಲ್ಲಿ ಕೇಳಿಬಂದಿದ್ದವು. 1950 ರಲ್ಲಿ ಪ್ರತ್ಯೇಕ ಭಾಷಾವಾರು ಪ್ರಾಂತ್ಯದ ಆಧಾರದಲ್ಲಿ ರಾಜ್ಯಗಳ ರಚನೆಯಾದಾಗಿನಿಂದಲೂ ಈ ಬೇಡಿಕೆ ಕೇಳಿ ಬರುತ್ತಿದೆ. ಪ್ರತ್ಯೇಕ ರಾಜ್ಯ ಹೋರಾಟಕ್ಕಾಗಿ ಹಲವು ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳು ಹುಟ್ಟಿಕೊಂಡಿವೆ. ಈ ಪಕ್ಷಗಳು ರಾಜಕೀಯದಲ್ಲಿ ಯಶಸ್ವಿಯಾಗದ್ದರಿಂದ ಮತ್ತು  ಡಿಎಂಕೆ  ಎಐಡಿಎಂಕೆಗಳ ಚೆನ್ನೈ ಕೇಂದ್ರಿತ ರಾಜಕಾರಣದಿಂದ ಕೊಂಗು ನಾಡು ಚರ್ಚೆ ಇದುವರೆಗೆ ಮುಖ್ಯವಾಹಿನಿಗೆ ಬಂದಿರಲಿಲ್ಲ. ಕಾಲ ಬದಲಾದಂತೆಲ್ಲ ತಮಿಳು ನಾಡಿನ ರಾಜಕೀಯ ಚಿತ್ರಣವೂ ಬದಲಾಗುತ್ತಿದೆ. 2 ದ್ರಾವಿಡ ಪಕ್ಷಗಳ ರಾಜಕೀಯ ಮೇಲಾಟದ ನಡುವೆ ರಾಜ್ಯದಲ್ಲಿ ಬೇರೂರಲು ಯತ್ನಿಸುತ್ತಿರುವ ಬಿಜೆಪಿಗೆ ಹದವಾದ ಮಣ್ಣು ಕೊಂಗು ನಾಡಿನಲ್ಲಿ ಕಾಣಿಸುತ್ತಿದೆ. ಬಿಜೆಪಿ ಈ ಪ್ರಾತ್ಯಂದಲ್ಲಿ ಪ್ರಬಲವಾದಂತೆಲ್ಲ ಪ್ರತ್ಯೇಕ ರಾಜ್ಯದ ಕೂಗು ಬಲಗಳ್ಳುತ್ತಿರುವುದು ವಿಶೇಷ.

ಇದನ್ನೂ ಓದಿ: ತಮಿಳುನಾಡು ರಾಜಕೀಯದಲ್ಲಿ ದಿಢೀರ್‌ ಬೆಳವಣಿಗೆ- ಎಐಡಿಎಂಕೆಯಲ್ಲಿ ಬಂಡಾಯದ ಬಿರುಗಾಳಿ

ಏನಿದು ಕೊಂಗು ನಾಡು ?

ತಮಿಳು ನಾಡಿನ ಪಶ್ಚಿಮ ಭಾಗವನ್ನು ಕೊಂಗು ನಾಡು ಎಂದು ಕರೆಯಲಾಗುತ್ತದೆ. ಪ್ರಾಚೀನ ಕೊಂಗುನಾಡು  ಪ್ರದೇಶವು ಹಲವಾರು ಜಿಲ್ಲೆಗಳು ಮತ್ತು ತಾಲ್ಲೂಕುಗಳಿಂದ ಕೂಡಿದ್ದು, ಇವುಗಳನ್ನು ಪ್ರಸ್ತುತ ಪಳನಿ, ಕರುರು, ಧರಪುರಂ, ತಿರುಚೆಂಗೋಡು, ಈರೋಡ್, ಪೊಲ್ಲಾಚಿ, ನಮ್ಮಕ್ಕಲ್, ಸೇಲಂ, ಧರ್ಮಪುರಿ, ನೀಲಗಿರಿ, ಅವಿನಾಶಿ, ಸತ್ಯಮಂಗಲಂ, ಕೊಯಮತ್ತೂರು ಎಂದು ಕರೆಯಲಾಗುತ್ತದೆ.  ಬೃಹತ್ ಸಂಪತ್ತು, ಆಹ್ಲಾದಕರ ವಾತಾವರಣ ಮತ್ತು ವಿಶಿಷ್ಟ ಲಕ್ಷಣಗಳಿಂದ ಕೂಡಿರುವ ಕೊಂಗುನಾಡಿನಲ್ಲಿ ಚೇರ, ಪಾಂಡ್ಯ, ಚೋಳ, ಹೊಯ್ಸಳ, ಮುಸ್ಲಿಂ ಆಡಳಿತಗಾರರು ಮತ್ತು ಅಂತಿಮವಾಗಿ ಬ್ರಿಟಿಷರು ಆಳ್ವಿಕೆ ನಡೆಸಿದ್ದಾರೆ . ತಮಿಳುನಾಡಿನ ಇತರ ಭಾಗಗಳಿಂದ ಭಾಷಿಕ ಭಿನ್ನತೆ ಮತ್ತು ಭೌಗೋಳಿಕ ಭಿನ್ನತೆಯನ್ನು ಹೊಂದಿರುವ  ಈ ಪ್ರದೇಶ ಕರ್ನಾಟಕದ ಗಡಿಗೆ ಹೊಂದಿಕೊಂಡಂತೆಯೇ ಇರುವುದು ವಿಶೇಷ. ಪ್ರಾಕೃತಿಕ ಸಂಪತ್ತಿನಿಂದ ಕೂಡಿರುವ ಈ ಭಾಗದಲ್ಲಿ ಅನೇಕ ನದಿಗಳು ಹರಿಯುತ್ತಿದ್ದು ಸಮೃದ್ಧ ಕೃಷಿಗೆ ಕೊಂಗುನಾಡು ಪ್ರಸಿದ್ಧವಾಗಿದೆ.

 

ಪ್ರಾಚೀನ ಕೊಂಗುನಾಡು ದೇಶ ಒಳಗೊಂಡಿದ್ದ ಭೂಭಾಗ

ಇಂದು ಸೇಲಂ, ಕೃಷ್ಣಗಿರಿ, ಕೊಯಂಬತ್ತೂರು ನಗರಗಳು ಬೃಹತ್ ಮತ್ತು ಮಧ್ಯಮ ಗಾತ್ರದ ಕೈಗಾರಿಕೆ ದೇಶಾದ್ಯಂತ ಪ್ರಸಿದ್ಧವಾಗಿವೆ.

ಇದನ್ನೂ ಓದಿ: ‘ಕೇಂದ್ರ ಸರ್ಕಾರ’ ಅಲ್ಲ, ‘ಒಕ್ಕೂಟ ಸರ್ಕಾರ’: ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌‌!

ತಮಿಳು ನಾಡಿನಲ್ಲಿ ಕಳೆದ 10 ವರ್ಷಗಳಲ್ಲಿ ಬಿಜೆಪಿಗೆ ನೆಲೆ ಸಿಕ್ಕಿರುವುದು ಇಲ್ಲಿ ಮಾತ್ರ. ಬಿಜೆಪಿ ತನ್ನ ಮತಬ್ಯಾಂಕ್ ವಿಸ್ತರಣೆಯ ಉದ್ದೇಶಕ್ಕೆ ಪ್ರತ್ಯೇಕತೆಯ ಕೂಗನ್ನು ಸಶಕ್ತವಾಗಿ ಬಳಸಿಕೊಳ್ಳಲು ಮುಂದಾಗಿದೆ ಎಂಬುದು  ಪ್ರತ್ಯೇಕ ರಾಜ್ಯವನ್ನು  ವಿರೋಧಿಸುವವರ ಆರೋಪವಾಗಿದೆ.

ಸುಮಾರು 61 ವಿಧಾನಸಭಾ ಕ್ಷೇತ್ರಗಳು ಹಾಗೂ 10 ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಈ ಕೊಂಗು ನಾಡು ಪ್ರಾಂತ್ಯವನ್ನು ಪ್ರತ್ಯೇಕ ರಾಜ್ಯವನ್ನಾಗಿಸುವುದು ಅಥವಾ ಪುದಚ್ಚೇರಿ ಮಾದರಿಯಲ್ಲಿ ಕೇಂದ್ರಾಡಳಿತ ಪ್ರದೇಶವನ್ನಾಗಿಸುವುದು ಬೆಜೆಪಿಯ ಲೆಕ್ಕಾಚಾರ. ಹೆಚ್ಚುವರಿಯಾಗಿ ಸುತ್ತಲಿನ ಒಂದೆರಡು ಜಿಲ್ಲೆಗಳನ್ನು ಸೇರಿಸಿ 90 ವಿಧಾನಸಭಾ ಕ್ಷೇತ್ರಗಳನ್ನು ಹಾಗೂ 15 ಲೋಕಸಭಾ ಕ್ಷೇತ್ರಗಳನ್ನು ಒಗ್ಗೂಡಿಸಿ ಒಂದು ಹೊಸ ರಾಜ್ಯ ರಚನೆ ಮಾಡುವ ಚಿಂತನೆ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಲಯದಲ್ಲಿ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಪ್ರತ್ಯೇಕ ಕೊಂಗು ನಾಡು ಬೇಡಿಕೆಗೆ ಹಲವು ಸಂಘಟನೆಗಳು, ಚಿಂತಕರು, ಸಾಹಿತಿಗಳು, ವಿದ್ಯಾರ್ಥಿಗಳು ಕೂಡ ಬೇಡಿಕೆಗೆ ಧ್ವನಿಗೂಡಿಸಿ ಕೊಂಗು ನಾಡು ಚರ್ಚೆ ಕಾವೇರಲು ಕಾರಣರಾಗಿದ್ದಾರೆ. ಬಿಜೆಪಿಯ ವಿಸ್ತರಣಾ ವಾದದ ಸಾಂದರ್ಭಿಕ ಶಿಶುವಾಗಿ ಕೊಂಗು ನಾಡು ರಾಜ್ಯ ರಚನೆಯಾಗಬಹುದೇ ? ಅಥವಾ ಡಿಎಂಕೆ ಮತ್ತು ಬಿಜೆಪಿ ನಡುವಿನ ರಾಜಕೀಯ ತಿಕ್ಕಾಟ ಪ್ರತ್ಯೇಕ ರಾಜ್ಯದ ರಚನೆಗೆ ದಾರಿ ಮಾಡಿ ಕೊಡಬಹುದೇ ಎಂಬುದಕ್ಕೆ ಕಾಲವೇ ಉತ್ತರಿಸಬೇಕು.

-ರಾಜೇಶ್ ಹೆಬ್ಬಾರ್‌

ಇದನ್ನೂ ಓದಿ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷನಾಗಿ ‘ಅಣ್ಣಾಮಲೈ’ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. 26 ಕೋಟಿ ಜನಸಂಖ್ಯೆ ಇರುವ ಜಂಗಲ್ ರಾಜ್ಯ ಉತ್ತರ ಪ್ರದೇಶವನ್ನು 4 ಅಥವಾ 5 ರಾಜ್ಯವಾಗಿ ವಿಭಜಿಸಿ ಅಲ್ಲಿ ಅಭಿವ್ರಿದ್ಧಿಗೆ ಇಂಬು ಕೊಡುವ ಬದಲು , ದಕ್ಷಿಣದ ದ್ರಾವಿಡರನ್ನು ಒಡೆಯಲು ಕುತಂತ್ರಿ ಚಡ್ಡಿಗಳು ಪ್ರಯತ್ನಿಸುತ್ತಿರುವುದನ್ನು ಎಲ್ಲಾ
    ದಕ್ಷಿಣ ಭಾರತೀಯರು ವಿರೋಧಿಸಬೇಕು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...