Homeಮುಖಪುಟ2,500 ಕೋಟಿ ಮೌಲ್ಯದ ಹೆರಾಯಿನ್ ವಶಪಡಿಸಿಕೊಂಡ ದೆಹಲಿ ಪೊಲೀಸರು

2,500 ಕೋಟಿ ಮೌಲ್ಯದ ಹೆರಾಯಿನ್ ವಶಪಡಿಸಿಕೊಂಡ ದೆಹಲಿ ಪೊಲೀಸರು

- Advertisement -
- Advertisement -

ದೆಹಲಿಯ ಫರಿದಾಬಾದ್‌ನ ಮನೆಯೊಂದರಲ್ಲಿ 2,500 ಕೋಟಿಗಿಂತ ಹೆಚ್ಚು ಮೌಲ್ಯದ 354 ಕೆಜಿ ಹೆರಾಯಿನ್‌ ಅನ್ನು ದೆಹಲಿ ಪೊಲೀಸರು ವಶಪಡಿಸಿಕೊಂಡಿದ್ದು, ಅತಿದೊಡ್ಡ ಹೆರಾಯಿನ್ ಸಾಗಣೆ ಜಾಲವನ್ನು ಬೇಧಿಸಿದ್ದಾರೆ.

ಅಫ್ಘಾನಿಸ್ತಾನ, ಯುರೋಪ್ ಮತ್ತು ಭಾರತದ ಕೆಲವು ಭಾಗಗಳಲ್ಲಿ ಹರಡಿರುವ ಅಂತಾರಾಷ್ಟ್ರೀಯ ಮಟ್ಟದ ಬೃಹತ್ ಡ್ರಗ್ಸ್​ ಜಾಲವನ್ನು ಬೇಧಿಸಿರುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ. ಈವರೆಗೆ ನಾಲ್ಕು ಜನರನ್ನು ಬಂಧಿಸಲಾಗಿದ್ದು, ಪ್ರಕರಣದಲ್ಲಿ ’ಮಾದಕ ದ್ರವ್ಯ ಭಯೋತ್ಪಾದನೆ’ ಕೋನವನ್ನು ತನಿಖೆ ನಡೆಸುತ್ತಿರುವುದಾಗಿ, ಶಂಕಿತರ ವಿಚಾರಣೆಯನ್ನು ಪ್ರಾರಂಭಿಸಿರುವುದ್ದಾಗಿ ಪೊಲೀಸರು ತಿಳಿಸಿದ್ದಾರೆ.

“ಅಫ್ಘಾನಿಸ್ತಾನಿ ಹಜರತ್ ಅಲಿ, ಕಾಶ್ಮೀರದ ಅನಂತ್‌ನಾಗ್ ನಿವಾಸಿ ರಿಜ್ವಾನ್ ಅಹ್ಮದ್, ಪಂಜಾಬ್‌ನ ಜಲಂಧರ್‌ನ ಗುರ್ಜೋತ್ ಸಿಂಗ್ ಮತ್ತು ಗುರ್ದೀಪ್ ಸಿಂಗ್ ಎಂಬುವವರನ್ನು‍ ಪೊಲೀಸರು ಬಂಧಿಸಿದ್ದಾರೆ. ಈ ದಂಧೆ ಅಫ್ಘಾನಿಸ್ತಾನ, ಯುರೋಪ್ ಮತ್ತು ಭಾರತದ ಹಲವಾರು ಭಾಗಗಳಲ್ಲಿ ಹರಡಿದೆ” ಎಂದು ದೆಹಲಿ ಪೊಲೀಸ್ ವಿಶೇಷ ಸೆಲ್​​ನ ನೀರಜ್​ ಠಾಕೂರ್ ತಿಳಿಸಿದ್ದಾರೆ. ​

ಇದನ್ನೂ ಓದಿ: ಬಿಜೆಪಿ ಭ್ರಷ್ಟಾಚಾರಕ್ಕೆ ಬೇಸತ್ತು ಆಮ್‌ ಆದ್ಮಿ ಪಕ್ಷ ಸೇರಿದ ವಿರಾಜಪೇಟೆ ಮಾಜಿ ಶಾಸಕ ಎಚ್.ಡಿ.ಬಸವರಾಜು

354 ಕೆಜಿ ಹೆರಾಯಿನ್‌ಗೆ ಬಳಸಿದ 100 ಕೆಜಿಗಿಂತ ಹೆಚ್ಚು ರಾಸಾಯನಿಕಗಳನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಡ್ರಗ್ಸ್‌ನ ಒಟ್ಟಾರೆ ಅಂತರರಾಷ್ಟ್ರೀಯ ಮೌಲ್ಯ 2,500 ಕೋಟಿಗಿಂತ ಹೆಚ್ಚಿದ್ದು, ಇದನ್ನು ಪಂಜಾಬ್‌ಗೆ ಕಳುಹಿಸಲು ಉದ್ದೇಶಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Rs 2,500 Crore Worth Heroin Seized Near Delhi. This Is What It Looks Like
ಪೊಲೀಸರು ವಶಪಡಿಸಿಕೊಂಡಿರುವ ಹೆರಾಯಿನ್

ಇರಾನ್‌ನ ಚಬಹಾರ್ ಬಂದರಿನ ಮೂಲಕ ಮಹಾರಾಷ್ಟ್ರದ ಮುಂಬೈಗೆ ಜವಾಹರ್ ಲಾಲ್ ನೆಹರು ಬಂದರಿನ ಮೂಲಕ ಅಫ್ಘಾನಿಸ್ತಾನದಿಂದ ಡ್ರಗ್ಸ್‌ ತರಲಾಗಿದೆ. ಗೋಣಿ ಚೀಲಗಳಲ್ಲಿ ಮತ್ತು ಪೆಟ್ಟಿಗೆಗಳಲ್ಲಿ ಹೆರಾಯಿನ್ ಅಡಗಿಸಿಡಲಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.

“ಅಫ್ಘಾನಿಸ್ತಾನದಿಂದ ತರಲಾದ ಡ್ರಗ್ಸ್​​ನ್ನು ಮಧ್ಯಪ್ರದೇಶದ ಶಿವಪುರಿ ಸಮೀಪ ಇರುವ ಕಾರ್ಖಾನೆಯಲ್ಲಿ ಇನ್ನಷ್ಟು ಸಂಸ್ಕರಿಸಲಾಗಿತ್ತು. ಅದನ್ನು ಅಡಗಿಸಿಡಲು ಫರಿದಾಬಾದ್​ನಲ್ಲಿ ಬಾಡಿಗೆ ಮನೆಯನ್ನೂ ಪಡೆಯಲಾಗಿದೆ. ನಂತರ ಇದನ್ನು ದೆಹಲಿ, ಪಂಜಾಬ್, ಹರಿಯಾಣ, ರಾಜಸ್ಥಾನ ಮತ್ತು ಜಮ್ಮು ಮತ್ತು ಕಾಶ್ಮೀರಗಳಲ್ಲಿ ಮಾರಾಟ ಮಾಡಲು ಯೋಜಿಸಲಾಗಿತ್ತು” ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಈ ಡ್ರಗ್ಸ್ ದಂಧೆಯ ಹಿಂದಿನ ಮಾಸ್ಟರ್ ಮೈಂಡ್ ನವಪ್ರೀತ್ ಸಿಂಗ್ ಪೋರ್ಚುಗಲ್‌ನಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಪಂಜಾಬಿನಿಂದ ಬಂಧಿಸಿರುವ ಆರೋಪಿ ಮಾಹಿತಿ ನೀಡಿದ್ದಾರೆ. ಇದಕ್ಕೆ ಹಣಕಾಸು ಸಹಕಾರ ಪಾಕಿಸ್ತಾನದಿಂದ ಸಿಗುತ್ತಿದೆ ಎಂಬ ಮಾಹಿತಿಯೂ ಸಿಕ್ಕಿದೆ ಎಂದು ಹೇಳಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.


ಇದನ್ನೂ ಓದಿ: ಆರೋಗ್ಯ ಸರಿಯಿಲ್ಲ ಎಂದಿದ್ದ ಪ್ರಜ್ಞಾ ಠಾಕೂರ್‌‌ – ಡ್ಯಾನ್ಸ್‌ ಮಾಡುವ ವಿಡಿಯೊ ವೈರಲ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...