Homeಮುಖಪುಟಪ್ರಸಿದ್ದ ‘ಕೋಟ್ಟಕ್ಕಲ್‌ ಆಯುರ್ವೇದ’ ವೈದ್ಯ ಡಾ.ಪಿ.ಕೆ. ವಾರಿಯರ್‌ (100) ನಿಧನ

ಪ್ರಸಿದ್ದ ‘ಕೋಟ್ಟಕ್ಕಲ್‌ ಆಯುರ್ವೇದ’ ವೈದ್ಯ ಡಾ.ಪಿ.ಕೆ. ವಾರಿಯರ್‌ (100) ನಿಧನ

- Advertisement -
- Advertisement -

‘ಕೋಟ್ಟಕ್ಕಲ್‌ ಆಯುರ್ವೇದ’ ಎಂದು ಪ್ರಸಿದ್ದವಾಗಿರುವ ಆರ್ಯ ವೈದ್ಯ ಶಾಲಾದ ವ್ಯವಸ್ಥಾಪಕ ಟ್ರಸ್ಟಿ ಡಾ. ಪಿ.ಕೆ. ವಾರಿಯರ್‌ ನಿಧನರಾಗಿದ್ದಾರೆ. ಆಯುರ್ವೇದ ಔಷಧಗಳಿಗೆ ವಿಶ್ವದಾದ್ಯಂತ ಹೆಸರುವಾಸಿಯಾಗಿರುವ ಕೇರಳದ ಕೋಟ್ಟಕ್ಕಲ್‌‌ನ ವೈದ್ಯರತ್ನಂ ಪಿಎಸ್ ವಾರಿಯರ್‌‌‌ ಅವರ ‘ಆರ್ಯ ವೈದ್ಯ ಶಾಲಾ’ದ ಮುಖ್ಯ ಕಚೇರಿಯಾದ ಕೈಲಾಸ ಮಂದಿರಂನಲ್ಲಿ ಶನಿವಾರದಂದು ಅವರು ತಮ್ಮ ಕೊನೆಯುಸಿರೆಳೆದಿದ್ದಾರೆ. ಅವರು ತಿಂಗಳ ಹಿಂದೆಯಷ್ಟೆ ತನ್ನ ನೂರನೇ ಜನ್ಮ ದಿನವನ್ನು ಆಚರಿಸಿದ್ದರು.

ವೈದ್ಯರತ್ನಂ ಪಿಎಸ್ ವಾರಿಯರ್‌‌‌ ಅವರು ಪ್ರಾರಂಭಿಸಿದ್ದ ಆರ್ಯ ವೈದ್ಯ ಶಾಲಾದ ವ್ಯವಸ್ಥಾಪಕ ಟ್ರಸ್ಟಿಯಾಗಿ 1954 ರಲ್ಲಿ ಡಾ. ವಾರಿಯರ್‌ ನೇಮಕವಾಗಿದ್ದು. ಡಾ. ವಾರಿಯರ್ ಶತಮಾನದಷ್ಟು ಹಳೆಯದಾದ ಸಂಸ್ಥೆಯನ್ನು ವೈಭವ ಮತ್ತು ಖ್ಯಾತಿಯ ಉತ್ತುಂಗಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಸ್ವಾತಂತ್ರ್ಯ ಹೋರಾಟಗಾರರಾದ ಡಾ. ವಾರಿಯರ್, ಆಯುರ್ವೇದಕ್ಕೆ ದೇಹ ಮತ್ತು ಮನಸ್ಸನ್ನು ಸಮಗ್ರವಾಗಿ ಪರಿಗಣಿಸುವ ಮೂಲಕ ಮನುಷ್ಯರನ್ನು ಸಮಗ್ರವಾಗಿ ನೋಡುವ ಹೊಸ ದೃಷ್ಟಿಕೋನವನ್ನು ನೀಡಿದ್ದರು ಎಂದು ದಿ ಹಿಂದೂ ಪತ್ರಿಕೆ ಉಲ್ಲೇಖಿಸಿದೆ.

ಇದನ್ನೂ ಓದಿ: ಕೊರೊನಾ: ರೋಗ ನಿರೋಧಕತೆ ಕುರಿತು ಆಯುರ್ವೇದದ ದೃಷ್ಟಿಕೋನ

‘ಸ್ಮೃತಿಪರ್ವಂ’ ಎಂಬ ಅವರ ಪುಸ್ತಕವು 2009 ರಲ್ಲಿ ಅತ್ಯುತ್ತಮ ಆತ್ಮಚರಿತ್ರೆಗಾಗಿ ಕೇರಳ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು. ಇದರ ಇಂಗ್ಲಿಷ್ ಅನುವಾದ ‘ದಿ ಕ್ಯಾಂಟೊ ಆಫ್ ಮೆಮೊರೀಸ್’ ಕೂಡ ಹೆಚ್ಚು ಜನಪ್ರಿಯವಾಗಿತ್ತು. ಅವರು ಅಖಿಲ ಭಾರತ ಆಯುರ್ವೇದ ಕಾಂಗ್ರೆಸ್ ಅಧ್ಯಕ್ಷರಾಗಿ ಎರಡು ಬಾರಿ ಆಯ್ಕೆಯಾಗಿದ್ದರು.

ಡಾ. ವಾರಿಯರ್ ಅವರ ನಿಧನಕ್ಕೆ ಭಾರತದ ರಾಷ್ಟ್ರಪತಿ, ಪ್ರಧಾನ ಮಂತ್ರಿ ಸೇರಿದಂತೆ ದೇಶದ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಅವರಿಗೆ 1999 ರಲ್ಲಿ ಪದ್ಮಶ್ರೀ, 2010 ರಲ್ಲಿ ಪದ್ಮಭೂಷಣ ನೀಡಿ ಗೌರವಿಸಲಾಗಿತ್ತು. ಕ್ಯಾಲಿಕಟ್ ವಿಶ್ವವಿದ್ಯಾಲಯವು ಅವರಿಗೆ 1999 ರಲ್ಲಿ ಡಿಲಿಟ್ ಪದವಿಯನ್ನು ನೀಡಿ ಗೌರವಿಸಿತು. ಕೋಪನ್ ಹ್ಯಾಗನ್ ವಿಶ್ವವಿದ್ಯಾಲಯದ ಡಾಕ್ಟರ್ ಆಫ್ ಮೆಡಿಸಿನ್ ಪ್ರಶಸ್ತಿ ಸೇರಿದಂತೆ ಅವರು ಅನೇಕ ಗೌರವ ಪದವಿಗಳನ್ನು ಪಡೆದಿದ್ದಾರೆ.

ಅವರ ಪತ್ನಿ ಮಾಧವಿಕುಟ್ಟಿ ಮತ್ತು ಮಗ ವಿಜಯನ್ ವಾರಿಯರ್ ಕೆಲವು ವರ್ಷಗಳ ಹಿಂದೆ ನಿಧನರಾಗಿದ್ದರು. ಅವರಿಗೆ ಮಗ ಬಾಲಚಂದ್ರ ವಾರಿಯರ್ ಮತ್ತು ಮಗಳು ಸುಭದ್ರಾ ರಾಮಚಂದ್ರನ್ ಇದ್ದಾರೆ.

ಇದನ್ನೂ ಓದಿ: ಪತಂಜಲಿ ಕೊರೊನಾ ಔಷಧಿ: ಆಯುರ್ವೇದ ವೈದ್ಯಶಾಸ್ತ್ರಕ್ಕೆ ಮಸಿ ಬಳಿಯುವ ಪ್ರಯತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...