Homeಮುಖಪುಟಅರ್ಜೆಂಟಿನಾ ಮಡಿಲಿಗೆ ಕೋಪಾ ಅಮೆರಿಕ ಕಪ್ : 28 ವರ್ಷಗಳ ನಂತರ ಪ್ರಶಸ್ತಿ ಬರ ನೀಗಿಸಿಕೊಂಡ...

ಅರ್ಜೆಂಟಿನಾ ಮಡಿಲಿಗೆ ಕೋಪಾ ಅಮೆರಿಕ ಕಪ್ : 28 ವರ್ಷಗಳ ನಂತರ ಪ್ರಶಸ್ತಿ ಬರ ನೀಗಿಸಿಕೊಂಡ ಮೆಸ್ಸಿ ಎಂಡ್‌ ಟೀಮ್‌

ನೆಯ್ಮಾರ್ ಕ್ರೀಡಾಂಗಣದಲ್ಲಿ ಕಂಬನಿಗರೆದರೆ, ಮೆಸ್ಸಿ ತನ್ನ ಕಿರಿಯ ಸಹೋದರನನ್ನು ಸಂತೈಸುವಂತೆ ನೆಯ್ಮಾರ್‌ರನ್ನು ಅಪ್ಪಿಕೊಂಡು  ಸಮಾಧಾನ ಹೇಳಿದರು. ಸೋಲು ಗೆಲುವಿನ ನಡುವೆ ಕ್ರೀಡೆ ಮಾಡಬೇಕಿದ್ದ ಕೆಲಸವನ್ನು ಕೋಪಾ ಅಮೆರಿಕ ಸದ್ದಿಲ್ಲದೇ ಮಾಡಿಯಾಗಿತ್ತು.

- Advertisement -
- Advertisement -

ಫುಟ್ಬಾಲ್‌ ದಂತಕತೆ ಮರಡೋನಾ, ವಿಶ್ವ ಶ್ರೇಷ್ಠ ಆಟಗಾರ ಮೆಸ್ಸಿ ಹೀಗೆ ಜಗತ್ತಿಗೆ ಶ್ರೇಷ್ಠ ಫುಟ್ಬಾಲರ್‌ಗಳನ್ನು ನೀಡಿದ ಅರ್ಜೆಂಟೆನಾ ಅಂತರಾಷ್ಟ್ರೀಯ ಕ್ರೀಡಾ ಕೂಟಗಳಲ್ಲಿ ಪ್ರಶಸ್ತಿಯ ಹಂತಕ್ಕೆ ಹೋಗಿ ಮುಗ್ಗರಿಸುತ್ತಿತ್ತು. ವಿಶ್ವ ಶ್ರೇಷ್ಠ ತಂಡವಾಗಿದ್ದರೂ ಕಳೆದ 28 ವರ್ಷಗಳಿಂದ ಯಾವುದೇ ಮಹತ್ವದ ಕ್ರೀಡಾಕೂಟದಲ್ಲಿ ಚಾಂಪಿಯನ್‌ ಪಟ್ಟವನ್ನು ಧರಿಸಲು ಸಾಧ್ಯವಾಗುತ್ತಿರಲಿಲ್ಲ. ಸರಿ ಸುಮಾರು ಮೂರು ದಶಕಗಳ ಅರ್ಜೆಂಟಿನಾದ ಪ್ರಶಸ್ತಿ ಬರ    ನೀಗಿದೆ. ಇಂದು ಬೆಳಗಿನ ಜಾವ ಬ್ರೆಜಿಲ್‌ನ ರಿಯೋ ಡಿ ಜನೈರೋದ ವಿಶ್ವ ಪ್ರಸಿದ್ಧ ಮೆರಕಾನಾ ಕ್ರೀಡಾಂಗಣದಲ್ಲಿ ನಡೆದ ಕೋಪ ಅಮೆರಿಕಾ ಚಾಂಪಿಯನ್‌ಶಿಪ್‌ ಟ್ರೋಫಿ ಗೆಲ್ಲುವ ಮೂಲಕ ಲಿಯೋನಲ್‌ ಮೆಸ್ಸಿ ನಾಯಕತ್ವದ ತಂಡ ಲ್ಯಾಟಿನ್ ಅಮೆರಿಕದ ಫುಟ್ಬಾಲ್ ಚಾಂಪಿಯನ್‌ ಆಗಿ ಹೊರ ಹೊಮ್ಮಿದೆ.

ಇಂದು ಬೆಳಗಿನ ಜಾವ ನಡೆದ ಬ್ರೆಜಿಲ್ ಮತ್ತು ಅರ್ಜೆಂಟಿನಾ  ತಂಡಗಳ ನಡುವಿನ ಫೈನಲ್‌ ಪಂದ್ಯ ಕೊನೆ  ಕ್ಷಣದವರೆಗೂ ಫುಟ್ಬಾಲ್‌ ಪ್ರೇಮಿಗಳನ್ನು ರೋಚಕತೆಯ ಉತ್ತುಂಗದಲ್ಲಿ ತಂದು ನಿಲ್ಲಿಸಿತ್ತು. ಜಗತ್ತಿನ ಫುಟ್ಬಾಲ್ ಪ್ರೇಮಿಗಳು ಮೆಸ್ಸಿ ಮತ್ತು ನೆಯ್ಮಾರ್‌ ಗೋಲು ಸಿಡಿಸುವುದನ್ನು ನೋಡಲು ಕಾತರದಿಂದ ಕಾಯುತ್ತಿದ್ದರು. ಮೆಸ್ಸಿಯಾಗಲಿ ‍ನೆಯ್ಮಾರ್‌ ಆಗಲಿ ಅಂತಿಮ ಹಣಾಹಣಿಯಲ್ಲಿ ಗೋಲು ಸಿಡಿಸದೇ ಫುಟ್ಬಾಲ್‌ ಪ್ರೇಮಿಗಳನ್ನು ನಿರಾಸೆ ಗೊಳಿಸಿದರು. ಅರ್ಜೆಂಟಿನಾದ ಗೆಲುವಿನ ಗೋಲು ಪಂದ್ಯದ 22 ನಿಮಿಷದಲ್ಲಿ ಎಂಜೆಲ್‌ ಡಿ ಮಾರಿಯಾ ಅವರ ಮೂಲಕ ಬಂತು. ಆಮೂಲಕ ಅರ್ಜೆಂಟಿನಾ 1-0 ಗೋಲುಗಳ ಅಂತರದಲ್ಲಿ ಬ್ರೆಜಿಲ್‌ ತಂಡವನ್ನು ಮಣಿಸಿ ಲ್ಯಾಟಿನ್‌ ಅಮೆರಿಕಾದ  ಪುಟ್ಬಾಲ್‌ ಚಾಂಪಿಯನ್ನು ಪಟ್ಟವನ್ನು ಧರಿಸಿತು.

ಅರ್ಜೆಂಟಿನಾ ಗೆಲುವಿನ ರುವಾರಿ ಅಂಜೆಲ್ ಡಿ ಮಾರಿಯಾ

ಮಿಡ್‌ಫೀಲ್ಡರ್‌ ರೋಡ್ರಿಗೊ ಡಿ ಪಾಲ್ ನೀಡಿದ ಲಾಂಗ್‌ ಪಾಸನ್ನು ಮಾರಿಯೋ ಯಾವುದೇ ಪ್ರಮಾದವಿಲ್ಲದೇ ಬ್ರೆಜಿಲ್‌ನ ಗೋಲು ಪೆಟ್ಟಿಗೆ ತಲುಪಿಸಿದರು. ಆ ಕ್ಷಣ ಅರ್ಜೆಂಟಿನಾ ಪಾಳಯದಲ್ಲಿ ಸಂತಸದ ಕಲರವ ಮುಗಿಲು ಮುಟ್ಟಿತು. ಪಂದ್ಯದ ಅಂತ್ಯದವರೆಗೂ ದಕ್ಷಿಣದ ಅಮೆರಿಕದ ಎರಡು ಶ್ರೇಷ್ಠ ತಂಡಗಳು ಗೋಲು ಗಳಿಸಲು ತೀವ್ರ ಹಣಾಹಣಿ ನಡೆಸಿದವಾದರೂ ಗೋಲ್‌ಕೀಪರ್‌ ಮತ್ತು ಬಲಿಷ್ಠ ರಕ್ಷಣೆಯಿಂದ ಮತ್ತೊಂದು ಗೋಲು ಪಂದ್ಯದಲ್ಲಿ ದಾಖಲಾಗಲಿಲ್ಲ.

ಇದನ್ನೂ ಓದಿ: ಬ್ರೆಜಿಲ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ: ಅಧ್ಯಕ್ಷ ಜೈರ್‌ ಬೊಲ್ಸೊನಾರೋ ರಾಜೀನಾಮೆಗೆ ಪಟ್ಟು

ಪಂದ್ಯದ 88 ನೇ ನಿಮಿಷದಲ್ಲಿ  ಲಿಯೋನಲ್‌ ಮೆಸ್ಸಿ ಗೋಲು ಪೆಟ್ಟಿಗೆಯ ಹತ್ತಿರಕ್ಕೆ ಚೆಂಡನ್ನು ತಂದು  ಅಭಿಮಾನಿಗಳು ಒಂದು ಕ್ಷಣ ಉಸಿರನ್ನು ಬಿಗಿಹಿಡಿದು ನಿಲ್ಲುವಂತೆ ಮಾಡಿದರು. ಆದರೆ ಮೆಸ್ಸಿ ಫೈನಲ್‌ನಲ್ಲಿ ಅಭಿಮಾನಿಗಳನ್ನು ನಿರಾಸೆ ಗೊಳಿಸಿದರು. ಇಡೀ  ಪಂದ್ಯದಲ್ಲಿ ಅರ್ಜೆಂಟಿನಾ ಗೋಲು ಪೆಟ್ಟಿಗೆಗೆ ಭದ್ರ ತಡೆಗೋಡೆಯಾಗಿ ನಿಂತು ಪಂದ್ಯವನ್ನು ಗೆಲ್ಲಿಸಿಕೊಟ್ಟಿದ್ದು ಗೋಲ್‌ಕೀಪರ್ ಎಮಿಲಿಯಾನೋ ಮಾರ್ಟಿನೇಜ್‌.  ಫೈನಲ್‌ ಪಂದ್ಯದಲ್ಲಿ ಮಾರ್ಟಿನೇಜ್‌ ತೋರಿದ ಕೆಚ್ಚೆದೆಯ ಪ್ರದರ್ಶನ ಎಂತಹವರನ್ನಾದರೂ ದಂಗುಬಡಿಸದೇ ಇರಲಾರದು. ಬ್ರೆಜಿಲಿಯನ್‌ ಸ್ಟ್ರೈಕರ್‌ಗಳ ಪ್ರಬಲ ದಾಳಿಯನ್ನು ಮೆಟ್ಟಿನಿಂತ ಮಾರ್ಟಿನೇಜ್‌ ಅರ್ಜೆಂಟಿನಾ ಮಡಿಲಿಗೆ ಕೋಪಾ ಅಮೆರಿಕ ಟ್ರೋಫಿ ಬರಲು ಮುಖ್ಯ ಕಾರಣ.

ಅರ್ಜೆಂಟಿನಾ ಗೋಲ್‌ಕೀಪರ್‌ ಎಮಿಲಿಯಾನೊ ಡಿ ಮಾರ್ಟಿನೇಜ್‌

ಬ್ರೆಜಿಲ್‌ನಲ್ಲಿ ಫೈನಲ್‌ ಪಂದ್ಯ. ಬ್ರೆಜಿಲ್ ಟ್ರೋಫಿಯಿಂದ ಒಂದು ಹೆಜ್ಜೆಯಷ್ಟೆ ದೂರವಿದೆ. ಆಂತಿಮ ಹಣಾಹಣಿ ಸಾಂಪ್ರದಾಯಿಕ ಎದುರಾಳಿ ಅಜೆಂಟಿನಾ ವಿರುದ್ಧ. ಹಾಗಿದ್ದ ಮೇಲೆ ಬ್ರೆಜಿಲಿಯನ್‌ ಅಭಿಮಾನಿಗಳ ಉತ್ಸಾಹಕ್ಕೆಲ್ಲಿ ತಡೆ ? ಅಂತಿಮ ಕ್ಷಣದ ವರೆಗೂ ಟ್ರೋಫಿ ಗೆಲ್ಲುವ ನಿರೀಕ್ಷೆಯಲ್ಲಿ ನೆರೆದಿದ್ದ ಸಾವಿರಾರು ಬ್ರೆಜಿಲಿಯನ್‌ ಪ್ರೇಕ್ಷಕರ ಕಂಗಳು ಪಂದ್ಯದಂತ್ಯಕ್ಕೆ ಹನಿಗೂಡಿದ್ದವು. ನೆಯ್ಮಾರ್ ಕ್ರೀಡಾಂಗಣದಲ್ಲಿ ಕಂಬನಿಗರೆದರೆ, ಮೆಸ್ಸಿ ತನ್ನ ಕಿರಿಯ ಸಹೋದರನನ್ನು ಸಂತೈಸುವಂತೆ ನೆಯ್ಮಾರ್‌ರನ್ನು ಅಪ್ಪಿಕೊಂಡು  ಸಮಾಧಾನ ಹೇಳಿದರು. ಸೋಲು ಗೆಲುವಿನ ನಡುವೆ ಕ್ರೀಡೆ ಮಾಡಬೇಕಿದ್ದ ಕೆಲಸವನ್ನು ಕೋಪಾ ಅಮೆರಿಕ ಸದ್ದಿಲ್ಲದೇ ಮಾಡಿಯಾಗಿತ್ತು.

ಕೊರೊನಾ ಸಾಂಕ್ರಾಮಿಕದ ನಡುವೆಯೂ ಜಗತ್ತಿನ ಅತಿ ಹಳೆಯ ಫುಟ್ಬಾಲ್‌ ಕ್ರೀಡಾಕೂಟವನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಬ್ರೆಜಿಲ್ ಸರ್ಕಾರ ಮತ್ತು ಬ್ರೆಜಿಲಿಯನ್‌ ಫುಟ್ಬಾಲ್‌ ಫೆಡರೇಷನ್‌ ನಿಜಕ್ಕೂ ಅಭಿನಂದನೆಗೆ ಅರ್ಹರು. ಕ್ರೀಡಾಕೂಟದ ಆರಂಭದಲ್ಲಿ ಬ್ರೆಜಿಲ್‌ನಲ್ಲಿ ನಡೆದ ಪ್ರತಿಭಟನೆಯನ್ನೆಲ್ಲ ಫುಟ್ಬಾಲ್ ತನ್ನ ತೆಕ್ಕೆಯಲ್ಲಿ ಕರಗಿಸಿಕೊಂಡಿದ್ದು ವಿಶೇಷ.

ಇದನ್ನೂ ಓದಿ: ಡಿಯಾಗೋ ಮರಡೋನಾ: ಫುಟ್‌ಬಾಲ್ ಲೋಕವನ್ನು ಪ್ರಜ್ವಲಿಸಿದ ಅದ್ಭುತ ಮಾಂತ್ರಿಕ

 2014ರಲ್ಲಿ ಇದೇ ಮೆರಕಾನಾ ಕ್ರೀಡಾಂಗಣದಲ್ಲಿ ಫುಟ್ಬಾಲ್‌ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಅರ್ಜೆಂಟಿನಾ ತಂಡ ಜರ್ಮನಿ ವಿರುದ್ಧ ಪಾರಾಭಾವಗೊಂಡು ನಿರಾಸೆಗೊಳಗಾಗಿತ್ತು. ಇಂದು 2014ರ ಅರ್ಜೆಂಟಿನಾದ  ನಿರಾಸೆಯನ್ನು ಅದೇ ಮೆರಕಾನಾ ಕ್ರೀಡಾಂಗಣ ಮರೆಸಿದೆ.

ವಿಶ್ವ ಫುಟ್ಬಾಲ್‌ನ ಮುಕುಟಮಣಿಯಾಗಿ ಕಂಗೊಳಿಸುತ್ತಿರವ ಮೆಸ್ಸಿ ಕ್ಲಬ್‌ ಫುಟ್ಬಾಲ್‌ನಲ್ಲಿ ಇದುವರೆಗೆ ನೂರಾರು ಪ್ರಶಸ್ತಿಗಳನ್ನು ಹತ್ತಾರು ಚಾಂಪಿಯನ್‌ ಶಿಫ್‌ ಜಯಿಸಿದ್ದಾರೆ. ಆದರೆ ಅರ್ಜೆಂಟಿನಾದ ಬಿಳಿ ನೀಲಿ ಪಟ್ಟೆಯ ಜೆರ್ಸಿ ತೊಟ್ಟು ದೇಶಕ್ಕೆ ಟ್ರೋಫಿ ಗೆಲ್ಲುವ  ಮೆಸ್ಸಿ ಕನಸು ಇದುವರೆಗೆ ಈಡೇರಿರಲಿಲ್ಲ. ಇಂದು ಮೆಸ್ಸಿ ಮತ್ತು ಅರ್ಜೆಂಟಿನಾದ ದೀರ್ಘಕಾಲದ ಟ್ರೊಫಿ ಕನಸು ನನಸಾಗಿದೆ . ಈ ರೋಚಕ ಪಂದ್ಯವನ್ನು ಗೆಲ್ಲುತ್ತಿದ್ದಂತೆಯೇ ಅರ್ಜೆಂಟಿನಾ ಆಟಗಾರರು ಮೆಸ್ಸಿಯನ್ನು ಮೇಲಕ್ಕೆ ಚಿಮ್ಮಿಸಿ ಸಂಭ್ರಮಿಸಿದ ಕ್ಷಣ ವಿಶ್ವ ಫುಟ್ಬಾಲ್ ಇತಿಹಾಸದಲ್ಲಿ ಅಚ್ಚಳಿಯದ ದಾಖಲೆಯಾಗಿ ಸೇರ್ಪಡೆಗೊಂಡಿತು.

ಅರ್ಜೆಂಟಿನಾ ಆಟಗಾರರು ಮೆಸ್ಸಿಯನ್ನು ಮೇಲಕ್ಕೆ ಚಿಮ್ಮಿಸಿ ಸಂಭ್ರಮಿಸಿದ ಕ್ಷಣ

2016 ರ ಜುಲೈ ೧೦ ರಂದು ಅಂದರೆ ಇಂದಿಗೆ ೫ ವರ್ಷ ಮೊದಲು ಫುಟ್ಬಾಲ್ ಕ್ರೀಡೆಯ ಮತ್ತೊಬ್ಬ ಶ್ರೇಷ್ಠ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ನೇತೃತ್ವದ ಪೋರ್ಚುಗಲ್ ಯುರೋಪಿಯನ್ ಚಾಂಪಿಯಾನ್‌ ಆಗಿ ಹೊರಹೊಮ್ಮಿತ್ತು. ರೊನಾಲ್ಡೋ ಗೆಲುವಿಗೂ ಪೋರ್ಚುಗಲ್‌ ಅಭಿಮಾನಿಗಳು ಹೀಗೆಯೇ ಸಂಭ್ರಮಿಸಿದ್ದರು.

ನಿವೃತ್ತಿಯ ಅಂಚಿನಲ್ಲಿರುವ ಫುಟ್ಬಾಲ್‌ ಜಗತ್ತಿನ ಇಬ್ಬರು ಶ್ರೇಷ್ಠ ಆಟಗಾರರಾದ ಮೆಸ್ಸಿ ಮತ್ತು ರೊನಾಲ್ಡೋ ಇನ್ನೆಷ್ಟು ವರ್ಷ ಮೈದಾನದಲ್ಲಿ ಕಾಣಿಸಿಕೊಳ್ಳಲಿದ್ದಾರೆಂಬುದು ತಿಳಿದಿಲ್ಲ. ವರ್ಷಗಳ ಹಿಂದೆ ನಿವೃತ್ತಿಯ ನಿರ್ಧಾರ ಮಾಡಿದ್ದ ಮೆಸ್ಸಿ ಅಭಿಮಾನಿಗಳ ಒತ್ತಾಯ ಮತ್ತು ದೇಶಕ್ಕಾಗಿ ಟ್ರೋಫಿ ಗೆಲ್ಲುವ ಕನಸಿನಿಂದ ತಮ್ಮ ನಿವೃತ್ತಿಯಿಂದ ಹಿಂದೆ ಸರಿದಿದ್ದರು.

 -ರಾಜೇಶ್ ಹೆಬ್ಬಾರ್‌

  ಇದನ್ನೂ ಓದಿ: ವಿಂಬಲ್ಡನ್ ಟೆನಿಸ್ ಟೂರ್ನಿ ಆರಂಭ; ಇಲ್ಲ ಭಾರತದ ಪ್ರಾತಿನಿಧ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...