Homeಕರ್ನಾಟಕಆರ್‌ಟಿಇ ನಿಧಿ ₹ 1.87 ಕೋಟಿ ದುರುಪಯೋಗ ಆರೋಪ - 20 ಬ್ಲಾಕ್ ಶಿಕ್ಷಣ ಅಧಿಕಾರಿಗಳಿಗೆ...

ಆರ್‌ಟಿಇ ನಿಧಿ ₹ 1.87 ಕೋಟಿ ದುರುಪಯೋಗ ಆರೋಪ – 20 ಬ್ಲಾಕ್ ಶಿಕ್ಷಣ ಅಧಿಕಾರಿಗಳಿಗೆ ನೋಟಿಸ್‌

- Advertisement -
- Advertisement -

ಖಾಸಗಿ ಮತ್ತು ಅನುದಾನ ರಹಿತ ಶಾಲೆಗಳಿಗೆ 2014-15 ರಲ್ಲಿ ಬಿಡುಗಡೆ ಮಾಡಲಾಗಿದ್ದ 1.87 ಕೋಟಿ ರೂಗಳ ಆರ್‌‌ಟಿಇ ಬಾಕಿ ಮರುಪಾವತಿ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ನಾಲ್ವರು ಬ್ಲಾಕ್ ಶಿಕ್ಷಣ ಅಧಿಕಾರಿಗಳು (ಬಿಇಒ) ಸೇರಿದಂತೆ ಒಟ್ಟು 20 ಬಿಇಒಗಳಿಗೆ ಸಾರ್ವಜನಿಕ ಶಿಕ್ಷಣ ಆಯುಕ್ತರ ಕಚೇರಿ (ಸಿಪಿಐ) ನೋಟಿಸ್ ನೀಡಿದೆ.

“ಏಳು ದಿನಗಳಲ್ಲಿ ತಮ್ಮ ಉತ್ತರಗಳನ್ನು ನೀಡಲು ಬಿಇಒ ಗಳನ್ನು ಕೇಳಲಾಗಿದೆ” ಎಂದು ಮೂಲಗಳನ್ನು ಉಲ್ಲೇಖಿಸಿ ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ.

ಇದನ್ನೂ ಓದಿ: ಆನ್‌ಲೈನ್ ಶಿಕ್ಷಣಕ್ಕೆ ಮಾದರಿ ಸೃಷ್ಟಿಸದೆ, ಮೂಲಸೌಕರ್ಯಗಳಿಗೆ ಕ್ರಮ ತೆಗೆದುಕೊಳ್ಳದೆ ಪೋಷಕರನ್ನು ಆತಂಕಕ್ಕೆ ತಳ್ಳಿರುವ ಸರ್ಕಾರ

ಬೆಂಗಳೂರಿನ ರಮೇಶ್‌ ಬೆಟ್ಟಯ್ಯ ಅವರು, ಆರ್‌ಟಿಇ ಬಾಕಿ ಮರುಪಾವತಿಗಾಗಿ ಬಿಡುಗಡೆ ಮಾಡಿದ ಹಣವನ್ನು ದುರುಪಯೋಗ ಮಾಡಲಾಗಿದೆ ಎಂದು ಆರೋಪಿಸಿ ದೂರು ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ, ಸಾರ್ವಜನಿಕ ಶಿಕ್ಷಣ ಆಯುಕ್ತರು ಪ್ರಾಥಮಿಕ ಶಿಕ್ಷಣ ನಿರ್ದೇಶಕರಿಗೆ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದ್ದರು.

ಆರ್‌ಟಿಇ ಕೋಟಾ ಕಾಯ್ದೆಯಡಿ ಪ್ರವೇಶ ಪಡೆದ ಮಕ್ಕಳಿಂದ 2012-13 ರಿಂದ 2015-16 ರವರೆಗೆ ಹೆಚ್ಚುವರಿ ಶುಲ್ಕವನ್ನು ಪಡೆಯಲಾಗಿರುವುದನ್ನು ವಿಶೇಷವಾಗಿ ಉಲ್ಲೇಖಿಸಿ ನಿರ್ದೇಶಕರು ಆಯುಕ್ತರಿಗೆ ವರದಿಯನ್ನು ಸಲ್ಲಿಸಿದ್ದರು. ಆರ್‌ಟಿಇ ಬಾಕಿ ಮರುಪಾವತಿಗಾಗಿ ಹೆಚ್ಚುವರಿ ಪಾವತಿ ಪಡೆದಿರುವ ಬಗ್ಗೆ ಯಾವುದೇ ಅನುಸರಣೆ ವರದಿಯನ್ನು ಸಲ್ಲಿಸಲಾಗಿಲ್ಲ ಎಂದು ವರದಿ ಹೇಳಿದ್ದು, ಬಿಇಒಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ವರದಿಯು ಶಿಫಾರಸು ಮಾಡಿತ್ತು.

ಪ್ರಾಥಮಿಕ ಶಿಕ್ಷಣ ನಿರ್ದೇಶಕರ ವರದಿಯ ಆಧಾರದ ಮೇಲೆ ಜುಲೈ 6 ರಂದು 20 ಬಿಇಒಗಳಿಗೆ ನೋಟಿಸ್ ನೀಡಲಾಗಿದೆ. ಒಂದು ವೇಳೆ ಬಿಇಒಗಳು ನೋಟಿಸ್‌ಗೆ ಉತ್ತರಿಸಲು ವಿಫಲವಾದರೆ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ನೋಟಿಸ್‌ನಲ್ಲಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಪಠ್ಯಕ್ರಮ ನಿರ್ಧರಿಸಲಿರುವ ಕೇಂದ್ರ: ಒಕ್ಕೂಟ ಕಲ್ಪನೆಗೇ ಅನ್ಯಾಯ ಎಂದ ಶಿಕ್ಷಣ ತಜ್ಞರು

ನಾನುಗೌರಿ.ಕಾಂ ಜೊತೆ ಮಾತನಾಡಿದ ಮಂಗಳೂರು ಮಂಗಳೂರು ದಕ್ಷಿಣ ಬಿಇಒ ರಾಜಲಕ್ಷ್ಮಿ ಕೆ., “ಬಿಇಒ ಕಚೇರಿಗೆ ನೋಟಿಸ್ ಬಂದಿದೆ. ಯಾವುದೆ ಹಣ ದುರುಪಯೋಗ ಆಗಿಲ್ಲ. ದಾಖಲೆಗಳನ್ನು ಪರಿಶೀಲನೆ ಮಾಡಿ ಶಿಕ್ಷಣ ಇಲಾಖೆಯ ಆಕ್ಷೇಪಕ್ಕೆ ಉತ್ತರ ಸಲ್ಲಿಸಲಿದ್ದೇವೆ” ಎಂದು ಹೇಳಿದ್ದಾರೆ.

ಬೆಂಗಳೂರು ದಕ್ಷಿಣ ಬ್ಲಾಕ್‌-1, ಹರಪನಹಳ್ಳಿ, ಗದಗ ನಗರ, ಮೂಡಿಗೆರೆ, ಹನೂರು, ಕೊಳ್ಳೆಗಾಲ, ಹರಪ್ಪನಹಳ್ಳಿ, ಮಾಗಡಿ, ಮೈಸೂರು ಉತ್ತರ, ಮೈಸೂರು ದಕ್ಷಿಣ, ತುಮಕೂರು, ಗೌರಿಬಿದನೂರು, ಹಡಗಲಿ, ಗೌರಿಬಿದನೂರು, ಸಹಾಪುರ, ವಿಜಯಪುರ, ಮಂಗಳುರು ದಕ್ಷಿಣ, ಮೂಡಬಿದಿರೆ, ಪುತ್ತೂರು, ಸುಳ್ಯ ಒಟ್ಟು 20 ಬಿಇಒ ಕಚೇರಿಗೆ ಸಾರ್ವಜನಿಕ ಶಿಕ್ಷಣ ಆಯುಕ್ತರು ನೋಟಿಸ್ ನೀಡಿದ್ದು, 1.87 ಕೋಟಿ ರೂ. ಹಣಗಳ ಉಪಯೋಗದ ಬಗ್ಗೆ ಆಕ್ಷೇಪ ಸಲ್ಲಿಸಲಾಗಿದೆ.

ಇದನ್ನೂ ಓದಿ: ಕೊರೋನಾ ಕಾಲಘಟ್ಟದಲ್ಲಿ ಗ್ರಾಮೀಣ ಮಕ್ಕಳ ಶಿಕ್ಷಣ ಹಕ್ಕು ರಕ್ಷಿಸುವಲ್ಲಿನ ಸವಾಲು ಮತ್ತು ಸಾಧ್ಯತೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...