Homeಚಳವಳಿಹರಿಯಾಣದಲ್ಲಿ ಬಿಜೆಪಿ ನಾಯಕರಿಗೆ ಮತ್ತೆ ಮುಖಭಂಗ: ಮುಂದುವರೆದ ರೈತರ ಪ್ರತಿಭಟನೆ

ಹರಿಯಾಣದಲ್ಲಿ ಬಿಜೆಪಿ ನಾಯಕರಿಗೆ ಮತ್ತೆ ಮುಖಭಂಗ: ಮುಂದುವರೆದ ರೈತರ ಪ್ರತಿಭಟನೆ

- Advertisement -
- Advertisement -

ಹರಿಯಾಣದಲ್ಲಿ ಎರಡನೇ ದಿನವೂ ಬಿಜೆಪಿ, ಅದರ ಮಿತ್ರ ಪಕ್ಷಗಳು ಮತ್ತು ರಾಜ್ಯದ ಬಿಜೆಪಿ ನಾಯಕರ ವಿರುದ್ಧ ರೈತರು ಪ್ರತಿಭಟನೆ ಮುಂದುವರೆಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ- ಜೆಜೆಪಿ ನಾಯಕರು ನಡೆಸಲು ನಿರ್ಧರಿಸಿರುವ ಎಲ್ಲಾ ಕಾರ್ಯಕ್ರಮಗಳಲ್ಲಿ ಕಪ್ಪು ಧ್ವಜಗಳನ್ನು ತೋರಿಸಿ ಕಾರ್ಯಕ್ರಮದಿಂದ ವಾಪಸ್ ತೆರಳುವಂತೆ ಮಾಡಲಾಗುತ್ತಿದೆ.

ರಾಜ್ಯ ಸಹಕಾರ ಸಚಿವ ಬನ್ವಾರಿ ಲಾಲ್ ಹಾಜರಿದ್ದ ಫತೇಹಾಬಾದ್ ಜಿಲ್ಲೆಯ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಪ್ರತಿಭಟನಾಕಾರರು ಕಪ್ಪು ಧ್ವಜಗಳನ್ನು ಹಾರಿಸಿ ಪ್ರತಿಭಟನೆ ನಡೆಸಿದ್ದಾರೆ. ಜಜ್ಜರ್‌ನಲ್ಲಿ ನಡೆದ ಮತ್ತೊಂದು ಕಾರ್ಯಕ್ರಮದಲ್ಲಿಯೂ ಇದೇ ರೀತಿ ಪ್ರತಿಭಟನೆ ನಡೆಸಲಾಗಿದೆ.

ಹಿಸಾರ್ ಮತ್ತು ಯಮುನಾನಗರ್ ಜಿಲ್ಲೆಗಳಲ್ಲಿ ಶನಿವಾರ ನಡೆಸಿದ್ದ ತಯಾರಿಯನ್ನೇ ಪೊಲೀಸರು ಇಲ್ಲಿಯೂ ಮಾಡಿಕೊಂಡಿದ್ದರು. ರೈತರು ಪ್ರತಿಭಟನೆ ನಡೆಸುತ್ತಾರೆ ಎಂಬ ನಿರೀಕ್ಷೆಯಲ್ಲಿ ಸಾಕಷ್ಟು ಪೊಲೀಸರನ್ನು ನಿಯೋಜಿಸಿ, ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿತ್ತು. ಆದರೆ, ಬ್ಯಾರಿಕೇಡ್‌ಗಳನ್ನು ತಳ್ಳಿ ಪ್ರತಿಭಟನೆ ನಡೆಸಿದ ರೈತರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದೆ.

ಇದನ್ನೂ ಓದಿ: ಜ.26 ರ ಘಟನೆ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆದರೆ, ವಿಶ್ವಸಂಸ್ಥೆ ಬಳಿ ಹೋಗುವುದಿಲ್ಲ-ರಾಕೇಶ್ ಟಿಕಾಯತ್

ಬಿಜೆಪಿ ಕಾರ್ಯಕರ್ತರನ್ನು ಒಳಗೊಂಡ ಜಜ್ಜರ್ ಕಾರ್ಯಕ್ರಮದಲ್ಲಿ ಸಂಸದ ಡಾ.ಅರವಿಂದ್ ಶರ್ಮಾ, ಪ್ರದೇಶದ ಉಸ್ತುವಾರಿ ವಿನೋದ್ ತಾವ್ಡೆ ಮತ್ತು ಬಿಜೆಪಿ ರಾಜ್ಯ ಅಧ್ಯಕ್ಷ ಓಂ ಪ್ರಕಾಶ್ ಧನ್ಖಾದ್ ಭಾಗವಹಿಸಬೇಕಿತ್ತು.

ಜಿಲ್ಲೆಯಲ್ಲಿ ಕಾರ್ಯಕ್ರಮ ನಡೆಯುವುದನ್ನು ರಹಸ್ಯವಾಗಿಡಲಾಗಿತ್ತು. ಆದರೆ, ಹೇಗೊ ಮಾಹಿತಿ ಪಡೆದ ರೈತರು ಕಾರ್ಯಕ್ರಮ ಸ್ಥಳವನ್ನು ತಲುಪಲು ಯಶಸ್ವಿಯಾಗಿ, ಪ್ರತಿಭಟನೆ ನಡೆಸಿದ್ದಾರೆ.

ಈ ತಿಂಗಳಿನಲ್ಲಿ ಬಿಜೆಪಿ ರಾಜ್ಯದಾದ್ಯಂತ ಸರಣಿ ಕಾರ್ಯಕ್ರಮಗಳನ್ನು ಯೋಜಿಸಿದೆ, ಈ ಕಾರ್ಯಕ್ರಮಗಳನ್ನು ಗುರಿಯಾಗಿಸಿಕೊಂಡಿರುವ ರೈತರು ಕಾರ್ಯಕ್ರಮಗಳ ಸ್ಥಳಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹರಿಯಾಣದಲ್ಲಿ ಯಾವುದೇ ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಬಿಜೆಪಿ-ಜನ್ನಾಯಕ್ ಜನತಾ ಪಕ್ಷದ ಮುಖಂಡರಿಗೆ ಅವಕಾಶ ನೀಡದಂತೆ ರೈತರು ಈ ಹಿಂದೆ ಕರೆ ನೀಡಿದ್ದರು.

ಕಳೆದ 8 ತಿಂಗಳಿನಿಂದ ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ಲಕ್ಷಾಂತರ ರೈತರು ದೆಹಲಿಯ ಸಿಂಘು, ಟಿಕ್ರಿ, ಗಾಝಿಪುರ್‌ ಮತ್ತು ರಾಜಸ್ಥಾನದ ಶಹಾಜಾನ್‌ಪುರ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹರಿಯಾಣ, ಪಂಜಾಬ್, ರಾಜಸ್ಥಾನ, ಉತ್ತರಪ್ರದೇಶಗಳಲ್ಲಿಯೂ ಪ್ರತಿಭಟನೆ ನಡೆಯುತ್ತಿದೆ.


ಇದನ್ನೂ ಓದಿ: ಕೇಂದ್ರ ಚರ್ಚೆ ನಡೆಸಲು ಬಯಸಿದರೆ, ರೈತರಿಗೆ ಷರತ್ತು ವಿಧಿಸುವಂತಿಲ್ಲ- ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...