Homeಮುಖಪುಟ‘ಕಷ್ಟಗಳಿದ್ದರೆ ಸುಖದ ಬೆಲೆ ತಿಳಿಯುತ್ತದೆ’ - ಪೆಟ್ರೋಲ್ ದರ ಏರಿಕೆಗೆ ಬಿಜೆಪಿ ಸಚಿವನ ಸಮರ್ಥನೆ!

‘ಕಷ್ಟಗಳಿದ್ದರೆ ಸುಖದ ಬೆಲೆ ತಿಳಿಯುತ್ತದೆ’ – ಪೆಟ್ರೋಲ್ ದರ ಏರಿಕೆಗೆ ಬಿಜೆಪಿ ಸಚಿವನ ಸಮರ್ಥನೆ!

- Advertisement -
- Advertisement -

ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದ ಸಚಿವ ಓಂ ಪ್ರಕಾಶ್ ಸಕ್ಲೆಚಾ ಅವರು, ‘‘ಯಾವುದೆ ಕಷ್ಟಗಳು ಇಲ್ಲದಾಗ, ಸಂತೋಷವನ್ನು ಆನಂದಿಸಲು ಸಾಧ್ಯವಾಗುವುದಿಲ್ಲ” ಎಂದು ಪೆಟ್ರೋಲ್ ಮತ್ತು ಡೀಸೆಲ್ ದರಗಳ ಹೆಚ್ಚಳವನ್ನು ಸಮರ್ಥಿಸಿಕೊಂಡಿದ್ದಾರೆ.

ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವ ಓಂ ಪ್ರಕಾಶ್‌, “ಕಷ್ಟಗಳು ನಿಮಗೆ ಒಳ್ಳೆಯ ಸಮಯದ ಸಂತೋಷವನ್ನು ಅರಿಯಲು ಸಹಾಯ ಮಾಡುತ್ತದೆ. ಯಾವುದೇ ತೊಂದರೆ ಇಲ್ಲದಿದ್ದರೆ, ನಿಮಗೆ ಸಂತೋಷವನ್ನು ಆನಂದಿಸಲು ಸಾಧ್ಯವಾಗುವುದಿಲ್ಲ” ಎಂದು ದೇಶದಲ್ಲಿ ಏರುತ್ತಿರುವ ಇಂಧನ ದರಗಳ ಬಗ್ಗೆ ಹೇಳಿದ್ದಾರೆ.

ಇದನ್ನೂ ಓದಿ: Explainer: ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ಆಯಿಲ್ ಬಾಂಡ್‌ಗಳು ಕಾರಣವೇ? GST ವ್ಯಾಪ್ತಿಗೆ ತರಲು ರಾಜ್ಯಗಳ ವಿರೋಧವೇಕೆ?

ದೆಹಲಿ, ಮುಂಬೈ, ಚೆನ್ನೈ, ಕೊಲ್ಕತ್ತಾ ಮತ್ತು ಬೆಂಗಳೂರು ನಗರದಲ್ಲಿ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ಪ್ರಸ್ತುತ, ದೇಶದ ಪ್ರಮುಖ ಮೆಟ್ರೋ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಅತ್ಯಂತ ದುಬಾರಿಯಾಗಿರುವುದು ಮುಂಬೈ ನಗರದಲ್ಲಾಗಿದೆ ಎಂದು ಸರ್ಕಾರಿ ತೈಲ ಸಂಸ್ಕರಣಾ ಸಂಸ್ಥೆ ತಿಳಿಸಿದೆ. ಮೌಲ್ಯವರ್ಧಿತ ತೆರಿಗೆಯಿಂದಾಗಿ ಬೇರೆ ಬೇರೆ ರಾಜ್ಯಗಳಲ್ಲಿ ಇಂಧನ ದರಗಳು ಬೇರೆ ಬೇರೆಯಾಗಿ ಇರುತ್ತವೆ.

ಪ್ರಧಾನಿ ನರೇಂದ್ರ ಮೋದಿ ಇಂಧನ ದರದ ತೀವ್ರ ಏರಿಕೆ ತಡೆಯುವುದರಲ್ಲಿ ವಿಫಲರಾಗಿದ್ದಾರೆ ಎಂಬ ಪ್ರಶ್ನೆಗೆ ಓಂ ಪ್ರಕಾಶ್ ಅವರು ಇದು ಮಾಧ್ಯಮಗಳು ಹರಡಿದ ವದಂತಿಗಳು ಎಂದು ಹೇಳಿದ್ದಾರೆ.

ತಮ್ಮ ಪಕ್ಷದ ಸರ್ಕಾರವನ್ನು ಈ ಹಿಂದಿನ ಕಾಂಗ್ರೆಸ್ ಆಡಳಿತಕ್ಕೆ ಹೋಲಿಕೆ ಮಾಡಿದ ಓಂ ಪ್ರಕಾಶ್‌, ಕಾಂಗ್ರೆಸ್‌‌ ಪೋಲಿಯೊ ವಿರುದ್ಧ ಲಸಿಕೆ ನೀಡಲು 40 ವರ್ಷಗಳನ್ನು ತೆಗೆದುಕೊಂಡಿತು, ಆದರೆ ಪ್ರಧಾನಿ ಮೋದಿ ಅವರು ಒಂದು ವರ್ಷದಲ್ಲಿ ಮೇಡ್ ಇನ್ ಇಂಡಿಯಾ ಕೊರೊನಾ ಲಸಿಕೆ ನೀಡಿದ್ದಾರೆ ಮತ್ತು ವ್ಯಾಕ್ಸಿನೇಷನ್ ಅಭಿಯಾನ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಇಂಧನ ಬೆಲೆಗಳ ಏರಿಕೆಯ ವಿರುದ್ದ ತೀವ್ರ ಆಕ್ರೋಶಗಳು ಹೆಚ್ಚುತ್ತಿದ್ದರೂ, ಶನಿವಾರ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆಯಲ್ಲಿ ಏರಿಕೆಯಾಗಿದೆ. ಪೆಟ್ರೋಲ್ ದರ ಪ್ರತಿ ಲೀಟರ್‌ಗೆ 34 ರಿಂದ 43 ಪೈಸೆಯಷ್ಟು ಹಾಗೂ ಡೀಸೆಲ್ ದರ ಪ್ರತಿ ಲೀಟರ್‌ಗೆ 28 ರಿಂದ 36 ಪೈಸೆಯಷ್ಟು ಹೆಚ್ಚಳ ಕಂಡಿದೆ.

ಇದನ್ನೂ ಓದಿ: ಪೆಟ್ರೋಲ್‌ ದರ ಹೆಚ್ಚಳಕ್ಕೆ ಕಾರಣ ತಿಳಿಸಿದ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...