Homeಮುಖಪುಟಉಗ್ರ ಸಂಘಟನೆಗಳಿಗೆ ಹಣಕಾಸು ನೆರವು: ಕಾಶ್ಮೀರದಲ್ಲಿ ಎನ್‌ಐಎ ದಾಳಿಯಲ್ಲಿ ಆರು ಜನರ ಬಂಧನ

ಉಗ್ರ ಸಂಘಟನೆಗಳಿಗೆ ಹಣಕಾಸು ನೆರವು: ಕಾಶ್ಮೀರದಲ್ಲಿ ಎನ್‌ಐಎ ದಾಳಿಯಲ್ಲಿ ಆರು ಜನರ ಬಂಧನ

- Advertisement -
- Advertisement -

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ), ಉಗ್ರರ ಸಂಘಟನೆಗಳಿಗೆ ಹಣಕಾಸು ನೆರವು ನೀಡಿದ ಪ್ರಕರಣಗಳಿಗೆ ಸಂಬಂಧಿಸಿ ಶ್ರೀನಗರ, ಅನಂತ್‌ನಾಗ್ ಮತ್ತು ಬಾರಾಮುಲ್ಲಾ ಜಿಲ್ಲೆಗಳಲ್ಲಿ ದಾಳಿ ನಡೆಸಿದೆ. ದಾಳಿಯಲ್ಲಿ ಆರು ಜನರನ್ನು ಬಂಧಿಸಿದ್ದಾರೆ.

ಶನಿವಾರವಷ್ಟೇ ಜಮ್ಮು ಮತ್ತು ಕಾಶ್ಮೀರ ಸರ್ಕಾರ 11 ಸರ್ಕಾರಿ ನೌಕರರನ್ನು ಸೇವೆಯಿಂದ ವಜಾಗೊಳಿಸಿತ್ತು. ವಜಾಗೊಳಿಸಿದ ನೌಕರರಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲ್ಲಾಹುದ್ದೀನ್ ಅವರ ಇಬ್ಬರು ಪುತ್ರರಾದ ಸೈಯದ್ ಅಹ್ಮದ್ ಶಕೀಲ್ ಮತ್ತು ಶಾಹಿದ್ ಯೂಸುಫ್ ಸೇರಿದ್ದಾರೆ.

ಎನ್‌ಐಎ ದಕ್ಷಿಣ ಕಾಶ್ಮೀರದ ಪುಶ್ರೂ, ಸನ್‌ಸೂಮಾ ಮತ್ತು ಅಚಬಲ್ ಗ್ರಾಮಗಳಲ್ಲಿ ದಾಳಿ ನಡೆಸಿ ಐದು ಜನರನ್ನು ಬಂಧಿಸಿದೆ. ಶ್ರೀನಗರದಲ್ಲಿ ಧಾರ್ಮಿಕ ಸಂಸ್ಥೆ ದಾರುಲ್ ಉಲೂಮ್ ಕಚೇರಿಯ ಮೇಲೆ ದಾಳಿ ನಡೆಸಿ ಸಂಸ್ಥೆಯ ಮುಖ್ಯಸ್ಥ ನೂರ್ ದಿನ್ ಭಟ್ ಅವರನ್ನು ಬಂಧಿಸಲಾಗಿದೆ. ಜೊತೆಗೆ ಲ್ಯಾಪ್‌ಟಾಪ್, ಬ್ಯಾಂಕ್ ಸ್ಟೇಟ್‌ಮೆಂಟ್‌ಗಳು ಮತ್ತು ಇತರ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಸಂಸ್ಥೆಗೆ ಸೇರಿದ ದಲಾಲ್‌ ಮೊಹಲ್ಲಾ, ನವಾಬ್‌ ಬಜಾರ್ ಮತ್ತು ಓಲ್ಡ್‌ ಸಿಟಿಯಲ್ಲಿ ಇರುವ, ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳ ತಿಳಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡಿನಲ್ಲಿ ಪ್ರತ್ಯೇಕತೆಯ ಕಿಡಿ ಹಚ್ಚಿದ ಬಿಜೆಪಿ: ಮುನ್ನೆಲೆಗೆ ಬಂದ ಪ್ರತ್ಯೇಕ ರಾಜ್ಯದ ಕೂಗು

ಈ ಹಿಂದೆ, ಶೆರಿ ಕಾಶ್ಮೀರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಹಿರಿಯ ಪ್ರಯೋಗಾಲಯ ತಂತ್ರಜ್ಞ ಸೈಯದ್ ಶಕೀಲ್ ಅವರನ್ನು ಭಯೋತ್ಪಾದನೆಗೆ ಹಣಕಾಸು ನೆರವು ಆರೋಪದಲ್ಲಿ ಶ್ರೀನಗರದ ರಾಂಬಾಗ್ ಪ್ರದೇಶದ ನಿವಾಸದಿಂದ 2018 ರಲ್ಲಿ ಬಂಧಿಸಲಾಗಿತ್ತು. ಕಾಶ್ಮೀರ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿದ್ದ ಶಾಹಿದ್ ಯೂಸುಫ್ ಅವರನ್ನು 2017 ರಲ್ಲಿ ಇದೇ ಪ್ರಕರಣದಲ್ಲಿ ಬಂಧಿಸಲಾಗಿತ್ತು.

ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಇಲಾಖೆಯಿಂದ ವಜಾಗೊಳಿಸಿರುವ ಇಬ್ಬರು ಕಾನ್‌ಸ್ಟೆಬಲ್‌ಗಳು ಪೊಲೀಸ್ ಇಲಾಖೆಯೊಳಗಿನಿಂದ ಉಗ್ರಗಾಳಿಗೆ ಬೆಂಬಲಿಸುತ್ತಿದ್ದರು ಮತ್ತು ಬೆಂಬಲದ ಜೊತೆಗೆ ಉಗ್ರರಿಗೆ ಮಾಹಿತಿಯನ್ನು ಒದಗಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಅನಂತನಾಗ್, ಬಾರಾಮುಲ್ಲಾ ಜಿಲ್ಲೆಗಳಲ್ಲಿಯೂ ವಿವಿಧೆಡೆ ದಾಳಿ ನಡೆದಿದ್ದು, ವ್ಯಾಪಾರಿಗಳಾದ ಉಮರ್‌ ಭಟ್, ತನ್ವೀರ್ ಭಟ್, ಜಾವೇದ್‌ ಭಟ್‌, ಔಷಧ ವ್ಯಾಪಾರಿ ಜೀಶನ್ ಮಲಿಕ್‌, ವೈದ್ಯಕೀಯ ಪ್ರಯೋಗಾಲಯದ ತಂತ್ರಜ್ಞ ಒವೈಸಿ ಭಟ್ ಎಂಬುವವರನ್ನು ಬಂಧಿಸಲಾಗಿದೆ.


ಇದನ್ನೂ ಓದಿ: 2,500 ಕೋಟಿ ಮೌಲ್ಯದ ಹೆರಾಯಿನ್ ವಶಪಡಿಸಿಕೊಂಡ ದೆಹಲಿ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...