Homeಅಂತರಾಷ್ಟ್ರೀಯ‘ಬಾಹ್ಯಾಕಾಶಕ್ಕೆ ಪ್ರವಾಸ ಹೊರಡುವ ಸಮಯ!’- ಇತಿಹಾಸ ನಿರ್ಮಿಸಲಿರುವ ‘ವರ್ಜಿನ್‌ ಗ್ಯಾಲಾಕ್ಟಿಕ್‌’

‘ಬಾಹ್ಯಾಕಾಶಕ್ಕೆ ಪ್ರವಾಸ ಹೊರಡುವ ಸಮಯ!’- ಇತಿಹಾಸ ನಿರ್ಮಿಸಲಿರುವ ‘ವರ್ಜಿನ್‌ ಗ್ಯಾಲಾಕ್ಟಿಕ್‌’

ತಂಡದಲ್ಲಿ ಭಾರತೀಯ ಮೂಲದ ಸಿರಿಶಾ ಬಾಂಡ್ಲಾ ಕೂಡಾ ಇರಲಿದ್ದಾರೆ.

- Advertisement -
- Advertisement -

ಬ್ರಿಟಿಷ್ ಕೋಟ್ಯಾಧಿಪತಿ ರಿಚರ್ಡ್ ಬ್ರಾನ್ಸನ್ ಅವರ ‘ವರ್ಜಿನ್‌ ಗ್ಯಾಲಾಕ್ಟಿಕ್‌’ ನ ಮೊದಲ ಬಾಹ್ಯಾಕಾಶ ತಂಡ ನಭಕ್ಕೆ ಹಾರಲು ತಯಾರಾಗಿದೆ. ಈ ಹಿಂದೆ ನಿಗದಿ ಪಡಿಸಿದಂತೆ ಭಾನುವಾರ ಭಾರತೀಯ ಕಾಲಮಾನ ಸಂಜೆ 6:30 ಕ್ಕೆ ಹೊರಡಬೇಕಿತ್ತಾದರೂ ಹವಾಮಾನ ವೈಪರೀತ್ಯದಿಂದಾಗಿ ರಾತ್ರಿ 8 ಗಂಟೆಗೆ ಹೊರಡಲಿದೆ. ವಿಶೇಷವೇನೆಂದರೆ ಈ ಪ್ರಯಾಣದ ತಂಡದಲ್ಲಿ ಭಾರತೀಯ ಮೂಲದ ಸಿರಿಶಾ ಬಾಂಡ್ಲಾ ಕೂಡಾ ಇದ್ದಾರೆ.

ಬಾಹ್ಯಾಕಾಶಕ್ಕೆ ಹೊರಟಿರುವ ‘ವರ್ಜಿನ್‌ ಗ್ಯಾಲಾಕ್ಟಿಕ್‌’ ಸಂಸ್ಥೆಯ ಆರು ಉದ್ಯೋಗಿಗಳಲ್ಲಿ ಒಬ್ಬರಾದ 71 ವರ್ಷದ ಬ್ರಾನ್ಸನ್, ಭವಿಷ್ಯದಲ್ಲಿ ‘ಬಾಹ್ಯಾಕಾಶ ಪ್ರವಾಸೋದ್ಯಮ’ದ ಹೊಸ ಪ್ರಯೋಗದ ಪೂರ್ವಭಾವಿಯಾಗಿ ಪ್ರಸ್ತುತ ಹಾರಾಟವನ್ನು ನಡೆಸುತ್ತಿದ್ದಾರೆ. ಅವರು ಸ್ಥಾಪಿಸಿದ ಕಂಪನಿಯು ಮುಂದಿನ ವರ್ಷದಿಂದ ತನ್ನ ಪ್ರವಾಸೋದ್ಯಮದ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಲು ಮುಂದಾಗಿದೆ.

ಇದನ್ನೂ ಓದಿ: ಮಂಗಳ ಗ್ರಹಕ್ಕೆ ಇಳಿದ ಬಾಹ್ಯಾಕಾಶ ನೌಕೆಯ ಮೈನವಿರೇಳಿಸುವ ವಿಡಿಯೋ ಬಿಡುಗಡೆ ಮಾಡಿದ ನಾಸಾ!

ಬಾಹ್ಯಾಕಾಶದ ಪ್ರವಾಸವು ದುಬಾರಿಯಾಗಿದ್ದರೂ, ಈಗಾಗಲೆ ನೂರಾರು ಶ್ರೀಮಂತ ಜನರು ಬ್ರಾನ್ಸನ್‌ ಅವರ ಸಂಸ್ಥೆಯಲ್ಲಿ ಮುಂಗಡ ಬುಕ್ಕಿಂಗ್ ಮಾಡಿದ್ದಾರೆ. ಆದರೆ ಪ್ರತಿ ಟಿಕೆಟ್‌ಗೆ 2.5 ಲಕ್ಷ ಡಾಲರ್‌ ವ್ಯಯಿಸಬೇಕಾಗುತ್ತದೆ. 2030 ರ ಹೊತ್ತಿಗೆ ಬಾಹ್ಯಾಕಾಶ ಪ್ರವಾಸೋದ್ಯಮದ ಮಾರುಕಟ್ಟೆ ವಾರ್ಷಿಕವಾಗಿ 300 ಕೋಟಿ ಡಾಲರ್‌ಗೆ ಬೆಳೆಯುತ್ತದೆ ಎಂದು ಸ್ವಿಸ್‌ ಬ್ಯಾಂಕ್‌ ಅಂದಾಜಿಸಿದೆ.

‘ವರ್ಜಿನ್‌ ಗ್ಯಾಲಾಕ್ಟಿಕ್‌’ ನ ರಾಕೆಟ್‌ ಒಂದು 2014 ರಲ್ಲಿ ಕ್ಯಾಲಿಫೋರ್ನಿಯಾದ ಮೊಜಾವೆ ಮರುಭೂಮಿಯ ಮೇಲೆ ಪರೀಕ್ಷಾ ಹಾರಾಟದ ಸಂದರ್ಭದಲ್ಲಿ ಅಪಘಾತಕ್ಕೀಡಾಗಿತ್ತು. ಅದರಲ್ಲಿ ಒಬ್ಬ ಪೈಲಟ್ ಸಾವನ್ನಪ್ಪಿದ್ದು, ಇನ್ನೊಬ್ಬನಿಗೆ ಗಂಭೀರವಾಗಿ ಗಾಯವಾಗಿತ್ತು.

ಪ್ರಸ್ತುತ ಪ್ರಯಾಣದಲ್ಲಿ ಆಂಧ್ರಪ್ರದೇಶದ ಗುಂಟೂರು ಮೂಲದ 34 ವರ್ಷದ ಸಿರಿಶಾ ಬಾಂಡ್ಲಾ ಕೂಡಾ ತಂಡದಲ್ಲಿದ್ದಾರೆ. ಸಿರಿಶಾ ಅವರು ಏರೋನಾಟಿಕಲ್ ಎಂಜಿನಿಯರ್ ಆಗಿದ್ದು, ಬಾಹ್ಯಾಕಾಶಕ್ಕೆ ತೆರಳುತ್ತಿರುವ ಭಾರತೀಯ ಮೂಲದ ಮೂರನೇ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇದನ್ನೂ ಓದಿ: ಬೆಳ್ಳಿಚುಕ್ಕಿ: ಸೌರ ಮಂಡಲದಲ್ಲಿ ಅತ್ಯಂತ ವೇಗವಾಗಿ ಸೂರ್ಯನ ಸುತ್ತ ಸುತ್ತವ ಗ್ರಹ!

ಈ ಹಿಂದೆ ಭಾರತೀಯ ಮೂಲದ ಕಲ್ಪನಾ ಚಾವ್ಲಾ ಮತ್ತು ಸುನೀತಾ ವಿಲಿಯಮ್ಸ್‌‌ ಬಾಹ್ಯಾಕಾಶಕ್ಕೆ ಹಾರಿದ್ದರು. ಪ್ರಸ್ತುತ ಬಾಹ್ಯಾಕಾಶ ಪ್ರಯಾಣದಲ್ಲಿ ಸಿರಿಶಾ ಗಗನಯಾತ್ರಿ ಸಂಖ್ಯೆ 004 ಆಗಲಿದ್ದಾರೆ.

ಸಿರಿಶಾ ಅವರು ಜನವರಿ 2021 ರಲ್ಲಿ ವರ್ಜಿನ್‌ ಗ್ಯಾಲಾಕ್ಟಿಕ್‌ ಸರ್ಕಾರಿ ವ್ಯವಹಾರ ಮತ್ತು ಸಂಶೋಧನಾ ಕಾರ್ಯಾಚರಣೆಗಳ ಉಪಾಧ್ಯಕ್ಷರಾಗಿ ತಮ್ಮ ಕೆಲಸವನ್ನು ಪ್ರಾರಂಭಿಸಿದ್ದರು.

ಪ್ರಸ್ತುತ ಬಾಹ್ಯಾಕಾಶ ಪ್ರಯಾಣಲ್ಲಿ, ಸಂಸ್ಥೆಯ ಸಂಸ್ಥಾಪಕ ಸರ್ ರಿಚರ್ಡ್ ಬ್ರಾನ್ಸನ್ ಜೊತೆಗೆ ಇತರ ಐದು ಜನರು ಇರಲಿದ್ದಾರೆ. ಬೆತ್ ಮೋಸೆಸ್, ಕಾಲಿನ್ ಬೆನೆಟ್, ಸಿರಿಶಾ ಬಾಂಡ್ಲಾ, ಸಿಜೆ ಸ್ಟರ್ಕೊ ಮತ್ತು ಕೆಲ್ಲಿ ಲ್ಯಾಟಿಮರ್ ಇರಲಿದ್ದಾರೆ.

ಭಾನುವಾರ ಹೊರಡುತ್ತಿರುವ ಈ ಪ್ರಯಾಣವನ್ನು ಕೆಳಗಿನ ವಿಡಿಯೊದಲ್ಲಿ ನೋಡಬಹುದಾಗಿದೆ.


ಇದನ್ನೂ ಓದಿ: ಬೆಳ್ಳಿಚುಕ್ಕಿ: ಅನ್ಯಗ್ರಹದಲ್ಲಿ ನಡೆದ ಮೊದಲ ವೈಮಾನಿಕ ಹಾರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...