Homeಕರ್ನಾಟಕಕೋವಿಡ್‌ ನಿರ್ಬಂಧ ತೆರವು: ದೊಡ್ಡ ಆಲದ ಮರಕ್ಕೆ ಪ್ರವಾಸಿಗರ ದಂಡು

ಕೋವಿಡ್‌ ನಿರ್ಬಂಧ ತೆರವು: ದೊಡ್ಡ ಆಲದ ಮರಕ್ಕೆ ಪ್ರವಾಸಿಗರ ದಂಡು

ಕೊರೊನಾ ಮತ್ತು ಲಾಕ್‌ ಡೌನ್ ಮನುಷ್ಯ ಪ್ರಾಣಿಗಳ ಬೇಧವಿಲ್ಲದೇ ಎಲ್ಲರನ್ನೂ ಕಂಗೆಡಿಸಿದೆ. ಪ್ರವಾಸಿಗರು ನೀಡುವ ಹಣ್ಣು ಹಂಪಲು ತಿಂಡಿಗಳಿಗೆ ಅಭ್ಯಾಸವಾಗಿದ್ದ ಕೋತಿಗಳು ಕಳೆದ 3 ತಿಂಗಳಿನಲ್ಲಿ ಆಹಾರ ವಿಲ್ಲದೇ ಮೃತಪಟ್ಟಿವೆ.

- Advertisement -
- Advertisement -

ಕೋವಿಡ್‌ ನಿರ್ಬಂಧಗಳು ತೆರವಾಗುತ್ತಿದ್ದಂತೆ ಬೆಂಗಳೂರಿಗೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಮೆಜೆಸ್ಟಿಕ್, ಯಶವಂತಪುರ ರೈಲ್ವೆ ನಿಲ್ಧಾಣಗಳು ಪ್ರಯಾಣಿಕರಿಂದ ತುಂಬಿ ತುಳುಕಾಡುತ್ತಿವೆ. ಹಾಗೆ ಬೆಂಗಳೂರಿನ ಪ್ರವಾಸಿ ತಾಣಗಳಲ್ಲಿ ಕಲರವ ಕೇಳಿ ಬರಲಾರಂಭಿಸಿದ್ದು ನಗರದ ಸುತ್ತಮುತ್ತದ ಸ್ಥಳಗಳಿಗೆ ಜನರು ಭೇಟಿ ನೀಡುತ್ತಿದ್ದಾರೆ. ಮಳೆಯ ತಂಪಾದ ವಾತಾವರಣ ಕೂಡ ಇದಕ್ಕೆ ಸಹಕಾರ ನೀಡಿದ್ದು ಇಂದು ನಗರದ ಅನೇಕ ಕಡೆ ಆರ್ಥಿಕ ಮತ್ತು ಪ್ರವಾಸೋದ್ಯಮದ ಚಟುವಟಿಕೆಗಳು ಚೇತರಿಸಿಕೊಂಡಿರುವುದು ಕಂಡು ಬಂದಿದೆ.

ನಗರದ ಹೊರ ವಲಯದಲ್ಲಿರುವ ಪುರಾತನ ದೊಡ್ಡ ಆಲದ ಮರವನ್ನು ನೋಡಲು ಇಂದು ಪ್ರವಾಸಿಗಳು  ಭೇಟಿ ನೀಡಿದ್ದು ಸುತ್ತಲಿನ ವ್ಯಾಪರಸ್ಥರ ಮುಖದಲ್ಲಿ ಒಂದಷ್ಟು ಗೆಲುವಿನ ಕಳೆ ಮೂಡಿದೆ.

ಇದನ್ನೂ ಓದಿ: ಮೈದುಂಬಿ ಹರಿಯುವ ನದಿಗಳು, ಧುಮ್ಮಿಕ್ಕುತ್ತಿರುವ ಜಲಪಾತಗಳ ನಡುವೆ ಬಣಗುಡುತ್ತಿರುವ ಮಲೆನಾಡಿನ ಪ್ರವಾಸಿ ತಾಣಗಳು

ಸರಿ ಸುಮಾರು ಮೂರು ತಿಂಗಳಿನಿಂದ ಬಂದ್‌ ಆಗಿದ್ದ ದೊಡ್ಡ ಆಲದ ಮರ ಈ ವಾರ ಸಾರ್ವಜನಿಕರ ಪ್ರವೇಶಕ್ಕೆ ತೆರೆದಿದೆ. ತಿಂಗಳುಗಳ ಕಾಲ ಮನೆಯಲ್ಲಿಯೇ ಕುಳಿತಿದ್ದ ಜನರು ಇಂದು ತಮ್ಮ ತಮ್ಮ ವಾಹನ ಮತ್ತು ಆಟೋ ರಿಕ್ಷಾದಲ್ಲಿ ಪುರಾತನ ದೊಡ್ಡ ಆಲದ ಮರಕ್ಕೆ ತೆರಳಿ ಪುಳಕಗೊಂಡರು.

ಬೆಂಗಳೂರಿನಲ್ಲಿ ಅನೇಕರಿಗೆ ದೊಡ್ಡ ಆಲದ ಮರದ ಪರಿಚಯ ಇದೆ. ಇನ್ನು ಕೆಲವರಿಗೆ ನಮ್ಮ ಸುತ್ತಲಿನ ಪ್ರದೇಶದ ಮಾಹಿತಿ ಇಲ್ಲ. ದೊಡ್ಡ ಆಲದ ಮರದ ವಿಶೇಷತೆ ಏನು? ಯಾಕಿದು ಪ್ರವಾಸಿ ತಾಣ ಎಂಬುದು ಹೆಚ್ಚು ಮುನ್ನೆಲೆಗೆ ಬಂದಿಲ್ಲ.

ಇದನ್ನೂ ಓದಿ: ಮುತ್ತು ಸುತ್ತು; ಸಾವನದುರ್ಗ: ಪ್ರಪಂಚದ ಅತಿದೊಡ್ಡ ಏಕಶಿಲಾ ಬೆಟ್ಟವಿದು, ಶಕ್ತಿಯಿದ್ದಷ್ಟು ಹತ್ತಿ ನೋಡ!

ದೊಡ್ಡ ಆಲದ ಮರ ಅಥವಾ ಬಿಗ್ ಬ್ಯಾನಿಯನ್ ಟ್ರೀ 

4-

ಇದೇನಪ್ಪಾ ಆಲದ ಮರವನ್ನು ಯಾವತ್ತೂ ನೋಡೇ ಇಲ್ವಾ ಅಂತಾ ನೀವು ಯೋಚಿಸಿರುವಿರಿ. ಆದರೆ ಇವತ್ತು ನಾವು ನಿಮಗೆ ಹೊರಟಿರುವ ಆಲದ ಮರ ಅಂತಿಂಥ ಆಲದ ಮರವಲ್ಲ. ಇದು ಸುಮಾರು 95  ಫೀಟ್‌ ಎತ್ತರ ಹಾಗೂ 400 ವರ್ಷಗಳ ಇತಿಹಾಸವನ್ನು ಹೊಂದಿರುವ ವಿಶೇಷ ಆಲದ ಮರ. ಬೆಂಗಳೂರು ದಕ್ಷಿಣದ ಕೇತೋಹಳ್ಳಿಯಲ್ಲಿರುವ ಈ ಆಲದ ಮರವನ್ನು ದೊಡ್ಡ ಆಲದ ಮರ ಅಥವಾ ಬಿಗ್ ಬ್ಯಾನಿಯನ್ ಟ್ರೀ ಎಂದೂ ಕರೆಯುತ್ತಾರೆ. ಇದು ಕಳೆದ ಕೆಲವು ವರ್ಷಗಳಿಂದ ಬೆಂಗಳೂರಿನಲ್ಲಿರುವ ಪ್ರವಾಸಿ ಆಕರ್ಷಣೆಯಾಗಿ ಬೆಳೆದಿದ್ದು ರಾಜ್ಯದ ಇಕೋ ಟೂರಿಸಂನ ಒಂದು ಭಾಗವಾಗಿದೆ.

ಇದನ್ನೂ ಓದಿ: ಕರ್ನಾಟಕಕ್ಕೂ ಬಂತು ವಿಸ್ಟಾಡೋಮ್ ರೈಲು: ಮಂಗಳೂರು-ಬೆಂಗಳೂರು ನಡುವೆ ಮೊದಲ ಓಡಾಟ

400-

ಈ ಆಲದ ಮರವು ಭಾರತದ ಪುರಾತನ ಆಲದ ಮರಗಳಲ್ಲಿ ನಾಲ್ಕನೆಯ ಸ್ಥಾನವನ್ನು ಪಡೆದುಕೊಂಡಿದೆ. ಆಂಧ್ರಪ್ರದೇಶದ ಮೆಹಬೂಬ್ ನಗರ, ಪಶ್ಚಿಮ ಬಂಗಾಳದ ಕೊಲ್ಕತ್ತ ಹಾಗೂ ತಮಿಳುನಾಡಿನ ಚೆನ್ನೈನಲ್ಲ್ಲಿ ಕ್ರಮವಾಗಿ ಮೊದಲ ಮೂರು ದೈತ್ಯ ಆಲದ ಮರಗಳಿವೆ. ಇಲ್ಲಿ ಒಂದು ಪುರಾತನ ಮುನೀಶ್ವರ ದೇವರ ದೇವಾಲಯ ಕೂಡಾ ಇದೆ.

ಇದನ್ನೂ ಓದಿ: ಕೋವಿಡ್‌ ನಿರ್ಬಂಧ ತೆರವು : ಪ್ರವಾಸಿ ತಾಣಗಳತ್ತ ಜನ-ಹಂಪಿಯಲ್ಲಿ ಜನ ಜಂಗುಳಿ

ಕರ್ನಾಟಕ ರಾಜ್ಯ ಸರ್ಕಾರದ ತೋಟಗಾರಿಕೆ ಇಲಾಖೆಯು ಈ ದೊಡ್ಡ ಆಲದ ಮರದ ಸಂರಕ್ಷಣೆಯ ಜವಾಬ್ದಾರಿಯನ್ನು ಹೊತ್ತುಕೊಂಡಿದೆ. ಆಲದ ಮರದ ಸುತ್ತಮುತ್ತಲಿನ ಪ್ರದೇಶಕ್ಕೆ ಕಬ್ಬಿಣದ ಗ್ರಿಲ್ ಹಾಕಲಾಗಿದೆ. ಪ್ರವಾಸೋದ್ಯಮ ಇಲಾಖೆ ದೊಡ್ಡ ಆಲದ ಮರವನ್ನು ಪಾರಂಪರಿಕ ವೃಕ್ಷವೆಂದು ಘೋಷಿಸಿ ತಾಣವನ್ನು ಪ್ರವಾಸಿ ಕೇಂದ್ರವನ್ನಾಗಿ ಮಾಡಿದೆ. ಈ ಮರದ ಸುತ್ತಲೂ ಪ್ರವಾಸಿಗರಿಗೆ ಕುಳಿತುಕೊಳ್ಳಲು ಕಲ್ಲಿನ ಬೆಂಚುಗಳನ್ನು ಹಾಕಲಾಗಿದೆ.

ಈಗ ನೋಡುತ್ತಿರುವ ಆಲದ ಮರವು ಹಲವು ವರ್ಷಗಳ ಹಿಂದೆ ಇನ್ನೂ ದೊಡ್ಡದಾಗಿತ್ತು, ಆದರೆ ಯಾವುದೋ ನೈಸರ್ಗಿಕ ಕಾಯಿಲೆಗೆ ಒಳಗಾಗಿ ನಶಿಸಿತು. ಆದ್ದರಿಂದ ಮರವು ಈಗ ಅನೇಕ ವಿಭಿನ್ನ ಮರಗಳಂತೆ ಕಾಣಿಸುತ್ತದೆ.

ಒಟ್ಟಾರೆಯಾಗಿ ವೀಕೆಂಡ್‌ ಕರ್ಪ್ಯೂ ತೆರವಾದ ಮೊದಲ ವೀಕೆಂಡ್‌ನಲ್ಲಿ ಭಾನುವಾರ ಸಂಜೆ ಹೊತ್ತಿನಲ್ಲಿ  ಹತ್ತಾರು ಪ್ರವಾಸಿಗರು ಪ್ರಶಾಂತವಾಗಿ ಕಾಲಕಳೆದಿದ್ದಾರೆ.  ಕಲ್ಲು ಬೆಂಚುಗಳಲ್ಲಿ ಕುಳಿತು ಹರಟೆ ಹೊಡೆಯುತ್ತಾ  ಕೋತಿಗಳ ಚೇಷ್ಟೆಯನ್ನು ಎಂಜಾಯ್ ಮಾಡುತ್ತಾ ಕಾಲ ಕಳೆದಿದ್ದಾರೆ.

ದೊಡ್ಡ ಆಲದ ಮರದಲ್ಲಿ ಕೋತಿಗಳ ಸಂಭ್ರಮ

ಪ್ರವಾಸಿಗರು ನೀಡುವ ಹಣ್ಣು ಹಂಪಲು ತಿಂಡಿಗಳಿಗೆ ಅಭ್ಯಾಸವಾಗಿದ್ದ ಕೋತಿಗಳು ಕಳೆದ 3 ತಿಂಗಳು ಸಾಕಷ್ಟು ಕಷ್ಟಪಟ್ಟವು. ಕೆಲವು ನಗರ ಪ್ರದೇಶಕ್ಕೆ ಹೋದವು. ಒಂದಷ್ಟು ಚಿಕ್ಕ ಕೋತಿಗಳು ಹಸಿವಿನಿಂದ ಮೃತಪಟ್ಟಿವೆ ಎಂದು ಸ್ಥಳೀಯ ವ್ಯಾಪಾರಿಯೊಬ್ಬರು ತಿಳಿಸಿದ್ದಾರೆ.

ಕೊರೊನಾ ಮತ್ತು ಲಾಕ್‌ ಡೌನ್ ಮನುಷ್ಯ ಪ್ರಾಣಿಗಳ ಬೇಧವಿಲ್ಲದೇ ಎಲ್ಲರನ್ನೂ ಕಂಗೆಡಿಸಿದೆ.  3ನೇ ಅಲೆಯ ಭೀತಿಯ ನಡುವೆ ನಿಟ್ಟುಸಿರಿಗೊಂದಷ್ಟು ಅವಕಾಶ ಸಿಕ್ಕಿದೆ. ಎಚ್ಚರಿಕೆಯ ನಡುವೆ ಅಚ್ಚರಿಯ ಹುಡುಕಾಟಕ್ಕೆ ದೊಡ್ಡ ಆಲದ ಮರ ಒಂದು ಪ್ರಶಸ್ತ ತಾಣ. ವಿಶ್ರಾಂತಿ, ವಿಜ್ಞಾನ ಎರಡನ್ನೂ ಒಟ್ಟಿಗೆ ನೀಡುವ ಬಿಗ್‌ ಬ್ಯಾನಿಯನ್‌  ಟ್ರೀ ನಮ್ಮ ಮುಂದಿನ ಪ್ರವಾಸಕ್ಕೆ ಪ್ರಶಸ್ತ ನಿಲ್ಧಾಣ.

-ರಾಜೇಶ್‌ ಹೆಬ್ಬಾರ್‌

ಇದನ್ನೂ ಓದಿ: ಕೈ ಬೀಸಿ ಕರೆಯಲಿರುವ ಕೇರಳ…ಪ್ರವಾಸಿ ತಾಣಗಳು ಪುನರಾರಂಭ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...