Homeಮುಖಪುಟಯುರೋ ಕಪ್‌ ಫೈನಲ್‌: ರೋಚಕ ಪೆನಾಲ್ಟಿ ಶೂಟೌಟ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಇಟಲಿ ತಂಡ

ಯುರೋ ಕಪ್‌ ಫೈನಲ್‌: ರೋಚಕ ಪೆನಾಲ್ಟಿ ಶೂಟೌಟ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಇಟಲಿ ತಂಡ

- Advertisement -
- Advertisement -

ವಿಶ್ವ ಫುಟ್‌ಬಾಲ್‌ನ ಪವರ್‌ ಹೌಸ್‌ ಎಂದು ಗುರುತಿಸಿಕೊಂಡಿರುವ ಯುರೋಕಪ್ ಚಾಂಪಿಯನ್‌ಶಿಪ್‌ಗೆ ನಿನ್ನೆ ಮಧ್ಯರಾತ್ರಿ ತೆರೆಬಿದ್ದಿದೆ. ಅಂತಿಮ ಹಣಾಹಣಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಇಂಗ್ಲೆಂಡ್‌ ತಂಡವನ್ನು ಮಣಿಸಿ ಇಟಲಿ ಬರೊಬ್ಬರಿ 53 ವರ್ಷಗಳ ನಂತರ ಚಾಂಪಿಯನ್‌ಶಿಪ್ ಪಟ್ಟ ತನ್ನದಾಗಿಸಿಕೊಂಡಿತು.

ವಿಶ್ವ ಫುಟ್ಬಾಲ್‌ನ ಪವರ್‌ ಹೌಸ್‌ ಎಂದು ಕರೆಸಿಕೊಳ್ಲುವ ಫ್ರಾನ್ಸ್‌, ಜರ್ಮನಿ, ಸ್ಪೇನ್‌, ಬೆಲ್ಜಿಯಮ್‌ ತಂಡಗಳು ಫೈನಲ್‌ ಪ್ರವೇಶಿಸಲು ವಿಫಲವಾಗಿದ್ದವು. ಈ ಸಂದರ್ಭದಲ್ಲಿ ಇಟಲಿ ಯುರೋ ಕಪ್‌ ಗೆಲ್ಲುವುದರೊಂದಿಗೆ ಮುಂದಿನ ವರ್ಷ 2022 ರ ಫುಟ್ಬಾಲ್‌ ವಿಶ್ವಕಪ್‌ಗೆ ಸಿದ್ಧವಾಗಿರುವ ಸಂದೇಶವನ್ನು ನೀಡಿದೆ.

ಇಂಗ್ಲೆಂಡ್‌ ರಾಜಧಾನಿ ಲಂಡನ್‌ ನಗರದ ವೆಂಬ್ಲೆ ಕ್ರೀಡಾಂಗಣದಲ್ಲಿ ತವರಿನ ಪ್ರೇಕ್ಷಕರೆದರು ಮೊಟ್ಟ ಮೊದಲ ಬಾರಿಗೆ ಯುರೋಪಿಯನ್‌ ಚಾಂಪಿಯನ್‌ ಆಗುವ ಇಂಗ್ಲೆಂಡ್‌ ಕನಸು ನಿನ್ನೆ ತಡರಾತ್ರಿ ಭಗ್ನಗೊಂಡಿತು. ಲ್ಯೂಕ್ ಶಾ ಪಂದ್ಯದ 2 ನೇ ನಿಮಿಷದಲ್ಲಿ ಸಿಡಿಸಿದ ಆರಂಭಿಕ ಗೋಲಿನ ಮುನ್ನಡೆಯ ಹೊರತಾಗಿಯೂ ಇಂಗ್ಲೆಂಡ್‌ ಆಟಗಾರರಿಗೆ ಪಂದ್ಯದಲ್ಲಿ ಮತ್ತೊಂದು ಗೋಲು ಗಳಿಸಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: ಅರ್ಜೆಂಟಿನಾ ಮಡಿಲಿಗೆ ಕೋಪಾ ಅಮೆರಿಕ ಕಪ್ : 28 ವರ್ಷಗಳ ನಂತರ ಪ್ರಶಸ್ತಿ ಬರ ನೀಗಿಸಿಕೊಂಡ ಮೆಸ್ಸಿ ಎಂಡ್‌…

ಇಟಲಿಯ ಸ್ಟಾರ್‌ ಆಟಗಾರ  ಲಿಯೋನಾರ್ಡೊ ಬೊನುಸಿ 67 ನೇ ನಿಮಷದಲ್ಲಿ ಅದ್ಭುತ ಗೋಲು ಗಳಿಸಿ ಇಟಲಿ ಪಕ್ಷದಿಂದ ಜಾರುತ್ತಿದ್ದ ಪಂದ್ಯವನ್ನು ಮತ್ತೆ ಸಮ ಸ್ಥಿತಿಗೆ ತಂದರು. ಎರಡೂ ತಂಡಗಳು ಯುರೋಪಿಯನ್‌ ಫುಟ್ಬಾಲ್‌ ಕಿರೀಟಕ್ಕಾಗಿ ಅಂತಿಮ ನಿಮಿಷದವರೆಗೂ ತೀವ್ರ ಪೈಪೋಟಿ ನಡೆಸಿದವಾದರೂ ಪಂದ್ಯ ಇಕ್ವಲೈಜರ್‌ನಲ್ಲಿಯೇ ಅಂತ್ಯವಾಯಿತು. 90+ ಹೆಚ್ಚುವರಿ ಸಮಯದಲ್ಲೂ ಪ್ರಬಲ ತಡೆಗೋಡೆಗಳನ್ನು ಭೇದಿಸಿ ಗೋಲು ಗಳಿಸುವ ಇಟಲಿ ಮತ್ತು ಇಂಗ್ಲೆಂಡ್‌ ತಂಡದ ಯತ್ನ ಯಶಸ್ವಿಯಾಗಲಿಲ್ಲ. ಕೊನೆಗೆ 1-1 ಗೋಲ್‌ಗಳಿಂದ ಎರಡು ತಂಡಗಳು ಸಮಬಲ ಸಾಧಿಸಿದ್ದರಿಂದ ಪಂದ್ಯ ರೋಚಕ ಪೆನಾಲ್ಟಿ ಶೂಟೌಟ್‌ವರೆಗೂ ಸಾಗಿತು.

ಚಾಂಪಿಯನ್‌ ತಂಡವನ್ನು ನಿರ್ಣಯಿಸುವ ಪೆನಾಲ್ಟಿ ಶೂಟೌಟ್‌ನಲ್ಲಿ ಇಟಲಿ ಮೇಲುಗೈ ಸಾಧಿಸಿ ಇಂಗ್ಲೆಂಡ್‌ ಅಭಿಮಾನಿಗಳನ್ನು ನಿರಾಸೆಗೊಳಿಸಿತು. ಮೊಟ್ಟ ಮೊದಲ ಬಾರಿಗೆ ಯುರೋಪಿಯನ್‌ ಚಾಂಪಿಯನ್‌ ಆಗುವ ಇಂಗ್ಲೆಂಡ್‌ ತಂಡದ ಕನಸು ನಿರ್ಣಾಯಕ ಹಂತದಲ್ಲಿ ವಿಫಲಗೊಂಡಿದ್ದಕ್ಕೆ ಅಭಿಮಾನಿಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದರು.

ಇಂಗ್ಲೆಂಡ್‌ ತಂಡದ ನಾಯಕ ಹ್ಯಾರಿ ಕೇನ್ ಮತ್ತು ರಹೀಮ್ ಸ್ಟರ್ಲಿಂಗ್ ಮೇಲೆ ತವರಿನ ಅಭಿಮಾನಿಗಳು ಇಟ್ಟ ನಿರೀಕ್ಷೆ ಹುಸಿಯಾಗಿದೆ. ಇಬ್ಬರೂ ಆಟಗಾರರು ಟೂರ್ನಿಮೆಂಟ್‌ ಉದ್ದಕ್ಕೂ ಮಿಂಚಿನ ಪ್ರದರ್ಶನಗಳನ್ನು ನೀಡಿದ್ದರು.

Euro Cup 2020 England Vs Denmark Preview: Where To Watch Semifinal Match Liveಯುರೋ ಚಾಂಪಿಯನ್ಶಿಪ್‌ನಲ್ಲಿ ನಾಲ್ಕು ಪಂದ್ಯಗಳಿಂದ 5 ಗೋಲುಗಳಿಸಿದ ಕ್ರಿಸ್ಟಿಯಾನೋ ರೊನಾಲ್ಡೊ ಅತಿಹೆಚ್ಚು ಗೋಲು ಗಳಿಸಿದ ಆಟಗಾರನಿಗೆ ನಿಡಲಾಗುವ ಗೋಲ್ಡನ್‌ ಶೂ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಯುರೋ ಕಪ್‌ನಲ್ಲಿ ರೊನಾಲ್ಡೋಗೆ ದೊರೆತ ಮೊದಲ ಪ್ರಶಸ್ತಿ ಇದು.

16 ಗೋಲುಗಳನ್ನು ತಡೆದ ಇಂಗ್ಲೆಂಡ್‌ ಗೋಲ್‌ ಕೀಪರ್‌ ಜೊರ್ಡನ್‌ ಪಿಕ್‌ಫೋರ್ಡ್ ಅವರಿಗೆ ಗೋಲ್ಡನ್‌ ಗ್ಲೌಸ್‌ ಪ್ರಶಸ್ತಿಯನ್ನು ನೀಡಲಾಯಿತು.

ಮತ್ತೊಂದೆಡೆ ಇಟಲಿ ತಂಡ ಮ್ಯಾನೇಜರ್‌ ರಾಬರ್ಟೊ ಮ್ಯಾನ್ಸಿನಿ ಮಾರ್ಗದರ್ಶನದಲ್ಲಿ ಸತತ 34ನೇ ಗೆಲುವನ್ನು ಸಾಧಿಸುವ ಮೂಲಕ ಐತಿಹಾಸಿಕ ದಾಖಲೆಯನ್ನು ನಿರ್ಮಿಸಿತು.

ಇದನ್ನೂ ಓದಿ: ಡಿಯಾಗೋ ಮರಡೋನಾ: ಫುಟ್‌ಬಾಲ್ ಲೋಕವನ್ನು ಪ್ರಜ್ವಲಿಸಿದ ಅದ್ಭುತ ಮಾಂತ್ರಿಕ

ಎರಡೂ ತಂಡಗಳಿಗೂ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಯುರೋ ಕಪ್‌ನಲ್ಲಿ ಇಂಗ್ಲೆಂಡ್‌ ತಂಡ ಮೊದಲ ಬಾರಿಗೆ ಫೈನಲ್ ಹಂತವನ್ನು ತಲುಪಿ ಹೊಸ ನಿರೀಕ್ಷೆಗಳನ್ನು ಹುಟ್ಟಿಸಿತ್ತು. 2020 ರಲ್ಲೂ ಇಂಗ್ಲೆಂಡ್‌ನ ಪ್ರಶಸ್ತಿಯ ಬರ ನೀಗಲಿಲ್ಲ. 1966 ರ ಫುಟ್ಬಾಲ್‌ ವಿಶ್ವಕಪ್‌ ಗೆಲುವಿನ ನಂತರ ಇಂಗ್ಲೆಂಡ್‌ ಇದುವರೆಗೆ ಯಾವುದೇ ಮುಖ್ಯ ಕ್ರೀಡಾಕೂಟದಲ್ಲಿ ಫೈನಲ್‌ಗೇರಿರಲಿಲ್ಲ. ಹಾಗಾಗಿ ಇಂಗ್ಲೆಂಡ್‌ ಅಭಿಮಾನಿಗಳಲ್ಲಿ ಸ್ವಾಭಾವಿಕವಾಗಿ ನಿರೀಕ್ಷೆ ಗರಿಗೆದರಿತ್ತು.

ಅತ್ತ 4 ಬಾರಿಯ ವಿಶ್ವಕಪ್‌ ಚಾಂಪಿಯನ್‌ ಇಟಲಿ ಕೂಡ 2006 ರ ವಿಶ್ವಕಪ್‌ ಗೆಲುವಿನ ನಂತರ ಸತತ 15 ವರ್ಷ ಗೆಲುವಿನ ರುಚಿ ಸವಿದಿರಲಿಲ್ಲ. 2012 ರಲ್ಲಿ ಬಲಿಷ್ಠ ಸ್ಪೇನ್‌ ತಂಡದ ವಿರುದ್ಧ ಸೋಲನುಭವಿಸುವ ಮೂಲಕ ನಿರಾಸೆ ಗೊಂಡಿದ್ದ ಇಟಲಿ ಯುರೋ ಕಪ್‌ 2020 ಚಾಂಪಿಯನ್‌ಶಿಪ್ ಮುಡಿಗೇರಿಸಿಕೊಳ್ಳುವ ಮೂಲಕ 2012 ರ ನಿರಾಸೆಗೆ ಕೊನೆಹಾಡಿತು.

ಕೊರೊನಾ ಸಾಂಕ್ರಾಮಿಕದ ನಡುವೆಯೂ ಮಿನಿ ವರ್ಡ್‌ಕಪ್ ಎಂದೇ ಖ್ಯಾತವಾಗಿರುವ ಯುರೋಪಿಯನ್‌ ಚಾಂಪಿಯನ್‌ಶಿಪ್‌ ಹಣಾಹಣಿ ಸುಖಾಂತ್ಯವಾಗಿದೆ. ಕೋವಿಡ್‌ ಕಾರಣದಿಂದ 16 ನೇ ಯುರೋ ಕಪ್‌ ಪಂದ್ಯಾವಳಿಯನ್ನು ಕೇವಲ ಒಂದು ದೇಶದಲ್ಲಿ ನಡೆಯದೇ 11 ದೇಶಗಳು ಟೂರ್ನಿಗೆ ಆತಿಥ್ಯ ವಹಿಸಿದವು. ಅಜೆರ್ಬೈಜಾನ್, ಡೆನ್ಮಾರ್ಕ್, ಇಂಗ್ಲೆಂಡ್, ಜರ್ಮನಿ, ಹಾಲೆಂಡ್, ಹಂಗೇರಿ, ಇಟಲಿ, ರೊಮೇನಿಯಾ, ರಷ್ಯಾ, ಸ್ಕಾಟ್ಲೆಂಡ್ ಮತ್ತು ಸ್ಪೇನ್ ಗಳಲ್ಲಿ ಯುರೋ ಕಪ್‌ ಪಂದ್ಯಗಳು ನಡೆದಿದ್ದು ಕೋವಿಡ್‌ ಆತಂಕದ ನಡುವೆ ಪಂದ್ಯಾವಳಿಯ ಸ್ಥಳ ಬದಲಾವಣೆಗೆ ಕೂಡ ಒತ್ತಾಯಗಳು ಕೇಳಿ ಬಂದಿದ್ದವು.

-ರಾಜೇಶ್‌ ಹೆಬ್ಬಾರ್‌


ಇದನ್ನೂ ಓದಿ: ಕೊರೊನಾ 3ನೇ ಅಲೆಯ ಆತಂಕ ಹೆಚ್ಚಿಸಿದ ಯುರೋ ಕಪ್ ಫುಟ್ಬಾಲ್ ಟೂರ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದೊಂದಿಗಿನ ಯುದ್ಧಕ್ಕೆ ಇರಾನ್ 40 ವರ್ಷಗಳಿಂದ ಸಿದ್ಧವಾಗಿತ್ತು: ನಿವೃತ್ತ ಲೆಫ್ಟಿನೆಂಟ್ ಜನರಲ್ ಧಿಲ್ಲೋನ್

"ತನ್ನ ಅತ್ಯುನ್ನತ ನಾಯಕತ್ವವನ್ನು ಕಳೆದುಕೊಳ್ಳುವಂತಹ ತುರ್ತು ಪರಿಸ್ಥಿತಿಗಳು ಸೇರಿದಂತೆ, ಅಮೆರಿಕದೊಂದಿಗಿನ ಸಂಭಾವ್ಯ ಯುದ್ಧಕ್ಕಾಗಿ ಇರಾನ್ ನಾಲ್ಕು ದಶಕಗಳಿಂದ ಸಿದ್ಧತೆ ನಡೆಸಿದೆ. ಹೀಗಾಗಿ ಎದುರಾಳಿಗಳಿಗೆ ಆ ದೇಶವನ್ನು ಸಂಪೂರ್ಣವಾಗಿ ನಾಶಪಡಿಸುವುದು ಕಷ್ಟಕರವಾಗಿದೆ" ಎಂದು ಭಾರತೀಯ...

ಸಚಿವ ಬಿ. ನಾಗೇಂದ್ರ ವಜಾಗೆ ಆಗ್ರಹಿಸಿ ಆಗಸ್ಟ್ 24ರಂದು ವಿಧಾನಸೌಧ ಮುತ್ತಿಗೆಗೆ ಕರೆ ನೀಡಿದ ಬಿಜೆಪಿ: ಉಲ್ಬಣಗೊಂಡ ರಾಜಕೀಯ ಸಂಘರ್ಷ

ಕರ್ನಾಟಕದ ರಾಜಕೀಯ ವಲಯದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣವು ಭಾರಿ ಸಂಚಲನ ಮೂಡಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಮರ...

ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, "ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಆಗಸ್ಟ್ 15 ರಿಂದ ತಿರೂರಿನ...

ಉತ್ತರ ಪ್ರದೇಶ| ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ತನ್ನದೇ ಅಂಗಡಿಯ ಸಿಹಿತಿಂಡಿ ತಿನ್ನಲು ನಿರಾಕರಿಸಿದ ಮಾಲೀಕ

ಆಹಾರ ಸುರಕ್ಷತಾ ದಾಳಿಯ ವೇಳೆ ಸಿಹಿ ತಿಂಡಿ ಅಂಗಡಿಯ ಮಾಲೀಕನೊಬ್ಬ ತನ್ನದೇ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಸಿಹಿತಿಂಡಿಯನ್ನು ತಿನ್ನಲು ನಿರಾಕರಿಸಿ ಸುದ್ದಿಯಾಗಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಕಲಬೆರಕೆ ಹಾಗೂ ನಕಲಿ ಸಿಹಿತಿಂಡಿಗಳನ್ನು ಮಾರಾಟ...

ದೇಶದ ಅಭಿವೃದ್ಧಿಗೆ ಕೌಶಲ್ಯದ ಕೊರತೆ ಸವಾಲು: 8.7 ಕೋಟಿ ಯುವಜನರು ಶಿಕ್ಷಣ, ಉದ್ಯೋಗದಿಂದ ವಂಚಿತರಾಗಿದ್ದಾರೆ ಎಂದ ನೀತಿ ಆಯೋಗ

ಭಾರತದ ಆರ್ಥಿಕ ಪ್ರಗತಿ ಹಾಗೂ ಭವಿಷ್ಯದ ಅಭಿವೃದ್ಧಿಯ ಹಾದಿಯಲ್ಲಿ ದೇಶದ ಯುವಶಕ್ತಿಯನ್ನು ಬಳಸಿಕೊಳ್ಳುವುದು ಅತ್ಯಂತ ನಿರ್ಣಾಯಕವಾಗಿದೆ. ಆದರೆ ಪ್ರಸ್ತುತ ದೇಶದಲ್ಲಿ ಕೋಟ್ಯಂತರ ಯುವಜನರು ಯಾವುದೇ ರೀತಿಯ ಶಿಕ್ಷಣ, ಉದ್ಯೋಗ ಅಥವಾ ಕೌಶಲ್ಯ ತರಬೇತಿಯಲ್ಲಿ...

ಮೀಸಲಾತಿ ಭಿಕ್ಷೆಯಲ್ಲ, ಸಾಂವಿಧಾನಿಕ ಹಕ್ಕು: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್

"ಯಾರದ್ದೋ ಬೇಡಿಕೆಗೆ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಇದು ತಲೆಮಾರುಗಳಿಂದ ಸಾಮಾಜಿಕ ತಾರತಮ್ಯವನ್ನು ಎದುರಿಸಿದ ಸಮುದಾಯಗಳನ್ನು ಬೆಂಬಲಿಸಲು ಇರುವ ಸಾಂವಿಧಾನಿಕ ಹಕ್ಕು" ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಶುಕ್ರವಾರ ಹೇಳಿದ್ದಾರೆ. ದೆಹಲಿಗೆ ತೆರಳುವ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಶೇ.80 ರಷ್ಟು ಮಹಿಳೆಯರು ಕಿರುಕುಳ ಎದುರಿಸುತ್ತಿದ್ದಾರೆ; ಹಿಂಸಾಚಾರವು ಅವರ ಪ್ರಗತಿಗೆ ಅಡ್ಡಿಯಾಗಿದೆ: ರಾಹುಲ್ ಗಾಂಧಿ

ದೇಶದ ಅತಿದೊಡ್ಡ ಆಸ್ತಿಯಾಗಿರುವ ಮಹಿಳೆಯರು ಪ್ರಗತಿ ಸಾಧಿಸುವುದನ್ನು ತಡೆಯಲು ಸಮಾಜದಲ್ಲಿ ಹಿಂಸಾಚಾರವನ್ನು ಬಳಸಲಾಗುತ್ತಿದೆ. ಶೇಕಡಾ 80 ರಷ್ಟು ಜನರು ಕಿರುಕುಳ ಎದುರಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ...

‘ಅಕ್ರಮ ವಲಸಿಗರ ಪರಿಶೀಲನೆ’ ನೆಪದಲ್ಲಿ ಬಂಗಾಳಿ ವಲಸೆ ಕಾರ್ಮಿಕರ ಮೇಲೆ ಬೆಂಗಳೂರು ಪೊಲೀಸರಿಂದ ದೌರ್ಜನ್ಯ: ಜಂಟಿ ಸತ್ಯಶೋಧನಾ ವರದಿ

ಬೆಂಗಳೂರು ನಗರದಲ್ಲಿ ನಡೆದ "ಅಕ್ರಮ ವಲಸಿಗರ ಪರಿಶೀಲನೆ" ಕಾರ್ಯಾಚರಣೆಯ ಹೆಸರಿನಲ್ಲಿ ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರನ್ನು ಭಾಷೆ ಮತ್ತು ವರ್ಗದ ಆಧಾರದ ಮೇಲೆ ಪ್ರೊಫೈಲಿಂಗ್ ಮಾಡಿ, ಅವರ ಮೇಲೆ ಅನಿಯಂತ್ರಿತ ಬಂಧನ, ಹಲ್ಲೆ...