Homeಅಂಕಣಗಳುನಮ್ಮ ತೋಟದ ಸಾಲಿಗೆ ನೀವೂ ಬನ್ನಿನಮ್ಮ ತೋಟದ ಸಾಲಿಗೆ ನೀವೂ ಬನ್ನಿ-4: ಸಹಜ ಕೃಷಿ ಅಲ್ಲ, ಉಳುಮೆ ಇಲ್ಲದ ತೋಟ ನಮ್ಮದು

ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-4: ಸಹಜ ಕೃಷಿ ಅಲ್ಲ, ಉಳುಮೆ ಇಲ್ಲದ ತೋಟ ನಮ್ಮದು

ಅಣ್ಣ ತಮ್ಮಂದಿರು, ಅಕ್ಕ ತಂಗಿಯರ ನಡುವೆ ಭೂಮಿ ಹಂಚಿಕೆಯಾಗಿ ಹಿಡುವಳಿಗಳು ಚಿಕ್ಕದಾಗುತ್ತಿರುವ ಮತ್ತು ನೆಲವೆಲ್ಲ ಸೈಟಾಗುತ್ತಿರುವ ಕಾಲದಲ್ಲಿ ಇದು ಅನಿವಾರ್ಯ.

- Advertisement -
- Advertisement -

ಮೊದಲೆ ಹೇಳಿಬಿಡುವುದು ಒಳ್ಳೆಯದು. ನಮ್ಮದು ಫುಕುವೋಕಾ ಮಾದರಿಯ ಸಹಜ ಕೃಷಿ ಅಲ್ಲ. ಅವನದು ಅಷ್ಟೆ, ಅದನ್ನೂ ಪೂರ್ಣ ಸಹಜ ಕೃಷಿಯೆಂದು ಒಪ್ಪಲಾಗದು, ಮನುಷ್ಯರು ಈಗ ಸಿಕ್ಕಾಪಟ್ಟೆ ಮನುಷ್ಯರಾಗಿ ಅಸಹಜಗೊಂಡಿರುವುದು ನಿಜ ತಾನೆ. ಫುಕುವೋಕಾ ಎಲ್ಲರಂತೆ ಮಾರುಕಟ್ಟೆ, ಬೆಲೆ, ಒಂದಿಷ್ಟು ಸಲಕರಣೆಗಳು, ಒಂದಿಷ್ಟು ಗೊಬ್ಬರ, ಬೂದಿ, ಕಳೆ ನಿಯಂತ್ರಣ, ಕೊಯ್ಲು, ಒಕ್ಕಣೆ ಹೀಗೆ ಅವನೂ ಈ ಮನುಷ್ಯ ಜಗತ್ತಿನ ಕೂಸೇ.

ಆದರೆ ಅವನ ಕೃಷಿ ವಿಧಾನಗಳು ಸರಳ, ಪ್ರಕೃತಿಗೆ ಹತ್ತಿರ ಹತ್ತಿರ. ಅವನ ಬದುಕಿನ ವಿಧಾನಗಳು  ಅಷ್ಟೆ. ನಾವೆಲ್ಲ ಅವನ ಹಾದಿಯಲ್ಲಿರುವವರಷ್ಟೆ, ಅವನ ಹತ್ತಿರವೂ ಹೋಗಲಾಗಿಲ್ಲ. ಆದರೆ ಕ್ರಮಿಸಿರುವಷ್ಟು ದೂರ ನಮಗೆ ಒಳ್ಳೆಯದನ್ನು ತೋರಿಸಿದೆ.

ಮೊದ ಮೊದಲು ಕೆಲವರು ನಮ್ಮ ತೋಟ ನೋಡಿ ಈ ಬಗೆಯ ಕೃಷಿಯನ್ನು ನಿಮ್ಮಂತ ನಿಗಧಿತ ಸಂಬಳ ಬರುವವರು ಮಾತ್ರ ಮಾಡಲು ಸಾಧ್ಯ ಎನ್ನುತ್ತಿದ್ದರು. ನಿಜಕ್ಕೂ ಇಂಥ ಕಡಿಮೆ ಖರ್ಚಿನ, ಮರಾಧಾರಿತ, ಮಿಶ್ರ ಬೆಳೆಗಳ ಸಾಂದ್ರ ಬೇಸಾಯ ಪದ್ದತಿಯನ್ನು ಅನುಸರಿಸಬೇಕಾದವರು ನಿಜ ರೈತರು. ಐವತ್ತು ವರ್ಷಗಳ ಹಿಂದೆ ಈ ಬಗೆಯ ಬೇಸಾಯ ಮಾಡುತ್ತಿದ್ದವರು ಅವರೆ. ಬೆಲೆ, ಮಾರುಕಟ್ಟೆ, ನೀರಿನ ಕೊರತೆ, ರೋಗ ರುಜಿನಗಳು, ಪ್ರಾಣಿಗಳ ಕಾಟ, ಪ್ರಕೃತಿ ವಿಕೋಪ ಇವೇ ಮುಂತಾದ ನೂರಾರು ಸಂಕಷ್ಟಗಳಿಂದ ನರಳುತ್ತಿರುವ, ಮಾರುಕಟ್ಟೆ ಚೋರರ ಗರಗಸಕ್ಕೆ, ಸರ್ಕಾರಗಳ ದಿವ್ಯ ನಿರ್ಲಕ್ಷ್ಯಕ್ಕೆ ಒಳಗಾಗಿರುವ ರೈತರು ಈ ಬಗೆಯ ಕೃಷಿ ಮಾಡಬೇಕಾಗಿರುವುದು.

PC : Expo 2015, (ಫುಕುವೋಕಾ)

ಇರುವಷ್ಟು ನೆಲವನ್ನು, ಲಭ್ಯವಿರುವ ನೀರನ್ನು, ನಮ್ಮ ಶ್ರಮವನ್ನು ಸಾರ್ಥಕವಾಗಿ ಬಳಸಿಕೊಂಡು ಕೃಷಿ ಮಾಡುವುದು ಇಂದಿನ ತುರ್ತು. ಅಣ್ಣ ತಮ್ಮಂದಿರು, ಅಕ್ಕ ತಂಗಿಯರ ನಡುವೆ ಭೂಮಿ ಹಂಚಿಕೆಯಾಗಿ ಹಿಡುವಳಿಗಳು ಚಿಕ್ಕದಾಗುತ್ತಿರುವ ಮತ್ತು ನೆಲವೆಲ್ಲ ಸೈಟಾಗುತ್ತಿರುವ ಕಾಲದಲ್ಲಿ ಇದು ಅನಿವಾರ್ಯ.

ಇದೆಲ್ಲಾ ಇರಲಿ ನಮ್ಮ ರೈತರು ದುಡಿದದ್ದೆಲ್ಲಾ ಅವರ ಬಡತನ್ನಕ್ಕೆ ಜಮಾ ಆಗುವುದಾದರೆ, ಎಷ್ಟು ಹೆಚ್ಚು ಉತ್ಪಾದನೆ ಮಾಡಿದರೂ ಅದರ ಉತ್ಪದನಾ ವೆಚ್ಚವೇ ಜಾಸ್ತಿಯಾಗುವುದಾದರೆ, ಹೆಚ್ಚು ಉತ್ಪಾದನೆ ಯಾಕೆ ಮಾಡಬೇಕು? ಇನ್ನೂ ಬಡವರಾಗಲೆಂದೇ, ಅಥವ ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ತಲುಪಲೆಂದೇ?

ಇಂಥ ಹೊತ್ತಲ್ಲಿ ರೈತರು ತಮ್ಮನ್ನು ರಕ್ಷಿಸಿಕೊಳ್ಳುವ ಹೊಸ ಕೃಷಿ ಮಂತ್ರಗಳನ್ನು ಕಲಿಯಲೇಬೇಕಿದೆ. ಆ ನಿಟ್ಟಿನಲ್ಲಿ ಯೋಚಿಸಿ ಕಾರ್ಯಕ್ಷೇತ್ರಕ್ಕೆ ಇಳಿದವರನ್ನಿಲ್ಲಿ ಸ್ಮರಿಸಲೇ ಬೇಕು, ಚೇರ್ಕಾಡಿ ರಾಮಚಂದ್ರ ರಾಯರು, ಭರಮಗೌಡರು, ಪುರಷೋತ್ತಮರಾಯರು, ಜಿ.ಎನ್‌.ಎಸ್‌ ರೆಡ್ಡಿ, ನಾರಾಯಣ ರೆಡ್ಡಿ, ಶಿವನಂಜಯ್ಯ ಬಾಳೆಕಾಯಿ, ಶಿವರಾಜ ಪಾಟೀಲ್‌, ಎ.ಪಿ ಚಂದ್ರಶೇಖರ್‌, ಕೈಲಾಸ ಮೂರ್ತಿ, ವಿಜಯ ಅಂಗಡಿ, ಬಸವರಾಜು, ಸದಾಶಿವಪ್ಪ, ಮಹಲಿಂಗಪ್ಪ ಈ ರೈತರಿಗೆ ಪೂರಕವಾಗಿ ನಿಂತು ಈ ಬಗೆಗೆ ಬರೆದ, ಕೃಷ್ಣ ಪ್ರಸಾದ್‌, ಶ್ರೀಪಡ್ರೆ, ಮಲ್ಲಿಕಾರ್ಜುನ ಹೊಸಪಾಳ್ಯ, ಆನಂದ ತೀರ್ಥ ಪ್ಯಾಟಿ, ಶಿವರಾಂ ಪೈಲೂರು, ಗಾಣಧಾಳು ಶ್ರೀಕಂಠ, ಅನಿತಾ, ಶಿವಾನಂದ ಕಳವೆ ಮುಂತಾದವರು, ಇವರಿಗೆ ಒತ್ತಾಸೆಯಾಗಿ ನಿಂತ ಸಿರಿಸಮೃದ್ಧಿ (ಬಳಗ) ಅಡಿಕೆ ಪತ್ರಿಕೆ, ಸುಜಾತ, ಲೀಸಾ ಇಂಡಿಯ, ಸಹಜ ಸಾಗುವಳಿ ಮುಂತಾದ ಪ್ರತ್ರಿಕೆಗಳು, ಸಂಘಟನೆಗಳು ಪರ್ಯಾಯ ಕೃಷಿ ವಿಧಾನಗಳ ಬಗೆಗೆ ಬಹುವಾಗಿ ತಲೆಕೆಡಿಸಿಕೊಂಡ ಪರಿಣಾಮ ಸಾವಿರಾರು ರೈತರ ಸ್ವಾವಲಂಬಿ ಬದುಕಿಗೆ ಕಾರಣವಾಗಿದೆ.

ಅದಕ್ಕೆ ಈ ಕಡಿಮೆ ಖರ್ಚಿನ, ಮಿಶ್ರ ಬೆಳೆಗಳ ಮರಾಧಾರಿತ, ಬಹುಮಹಡಿಯ ಕೃಷಿ ಪದ್ದತಿ ಹಬ್ಬಬೇಕು. ವೈಜ್ಞಾನಿಕೆ ಬೇಸಾಯದ ಹೆಸರಿನಲ್ಲಿ ಉಗ್ರ ಬೇಸಾಯ ಮಾಡಿ ಮಣ್ಣು ನೀರು ಜೀವಗಳನ್ನು ಕಳೆದುಕೊಳ್ಳುವುದಲ್ಲ.

  • ಕೃಷ್ಣಮೂರ್ತಿ ಬಿಳಿಗೆರೆ

(ಹುಳಿಯಾರು ಬಿಎಂಎಸ್‌ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು. ತಮ್ಮ ತೋಟದಲ್ಲಿ ಸಹಜ ಕೃಷಿ ಮಾಡುತ್ತಲೇ ಕೃಷಿ ಶೋಧನೆಯಲ್ಲಿ ತೊಡಗಿಸಿಕೊಂಡಿರುವ ಇವರು ಸಾವಿರ ಕಣ್ಣಿನ ನವಿಲು, ಕಿಂಚಿತ್ತು ಪ್ರೀತಿಯ ಬದುಕು, ದಾಸಯ್ಯ ಇದು ಕನಸೇನಯ್ಯ, ಧರೆ ಮೇಲೆ ಉರಿಪಾದ, ಮಳೆ ನೀರ ಕುಡಿ, ಅನ್ನ ದೇವರ ಮುಂದೆ, ಮರದಡಿಯ ಮನುಷ್ಯ ಸೇರಿದಂತೆ ಹಲವು ಪುಸ್ತಕಗಳನ್ನು ರಚಿಸಿದ್ದಾರೆ.)


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-2: ಈ ಹಕ್ಕಿಗಳು ಎಲ್ಲಿರುತ್ತವೋ ಏನೋ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...