Homeಅಂಕಣಗಳುನಮ್ಮ ತೋಟದ ಸಾಲಿಗೆ ನೀವೂ ಬನ್ನಿನಮ್ಮ ತೋಟದ ಸಾಲಿಗೆ ನೀವೂ ಬನ್ನಿ-4: ಸಹಜ ಕೃಷಿ ಅಲ್ಲ, ಉಳುಮೆ ಇಲ್ಲದ ತೋಟ ನಮ್ಮದು

ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-4: ಸಹಜ ಕೃಷಿ ಅಲ್ಲ, ಉಳುಮೆ ಇಲ್ಲದ ತೋಟ ನಮ್ಮದು

ಅಣ್ಣ ತಮ್ಮಂದಿರು, ಅಕ್ಕ ತಂಗಿಯರ ನಡುವೆ ಭೂಮಿ ಹಂಚಿಕೆಯಾಗಿ ಹಿಡುವಳಿಗಳು ಚಿಕ್ಕದಾಗುತ್ತಿರುವ ಮತ್ತು ನೆಲವೆಲ್ಲ ಸೈಟಾಗುತ್ತಿರುವ ಕಾಲದಲ್ಲಿ ಇದು ಅನಿವಾರ್ಯ.

- Advertisement -
- Advertisement -

ಮೊದಲೆ ಹೇಳಿಬಿಡುವುದು ಒಳ್ಳೆಯದು. ನಮ್ಮದು ಫುಕುವೋಕಾ ಮಾದರಿಯ ಸಹಜ ಕೃಷಿ ಅಲ್ಲ. ಅವನದು ಅಷ್ಟೆ, ಅದನ್ನೂ ಪೂರ್ಣ ಸಹಜ ಕೃಷಿಯೆಂದು ಒಪ್ಪಲಾಗದು, ಮನುಷ್ಯರು ಈಗ ಸಿಕ್ಕಾಪಟ್ಟೆ ಮನುಷ್ಯರಾಗಿ ಅಸಹಜಗೊಂಡಿರುವುದು ನಿಜ ತಾನೆ. ಫುಕುವೋಕಾ ಎಲ್ಲರಂತೆ ಮಾರುಕಟ್ಟೆ, ಬೆಲೆ, ಒಂದಿಷ್ಟು ಸಲಕರಣೆಗಳು, ಒಂದಿಷ್ಟು ಗೊಬ್ಬರ, ಬೂದಿ, ಕಳೆ ನಿಯಂತ್ರಣ, ಕೊಯ್ಲು, ಒಕ್ಕಣೆ ಹೀಗೆ ಅವನೂ ಈ ಮನುಷ್ಯ ಜಗತ್ತಿನ ಕೂಸೇ.

ಆದರೆ ಅವನ ಕೃಷಿ ವಿಧಾನಗಳು ಸರಳ, ಪ್ರಕೃತಿಗೆ ಹತ್ತಿರ ಹತ್ತಿರ. ಅವನ ಬದುಕಿನ ವಿಧಾನಗಳು  ಅಷ್ಟೆ. ನಾವೆಲ್ಲ ಅವನ ಹಾದಿಯಲ್ಲಿರುವವರಷ್ಟೆ, ಅವನ ಹತ್ತಿರವೂ ಹೋಗಲಾಗಿಲ್ಲ. ಆದರೆ ಕ್ರಮಿಸಿರುವಷ್ಟು ದೂರ ನಮಗೆ ಒಳ್ಳೆಯದನ್ನು ತೋರಿಸಿದೆ.

ಮೊದ ಮೊದಲು ಕೆಲವರು ನಮ್ಮ ತೋಟ ನೋಡಿ ಈ ಬಗೆಯ ಕೃಷಿಯನ್ನು ನಿಮ್ಮಂತ ನಿಗಧಿತ ಸಂಬಳ ಬರುವವರು ಮಾತ್ರ ಮಾಡಲು ಸಾಧ್ಯ ಎನ್ನುತ್ತಿದ್ದರು. ನಿಜಕ್ಕೂ ಇಂಥ ಕಡಿಮೆ ಖರ್ಚಿನ, ಮರಾಧಾರಿತ, ಮಿಶ್ರ ಬೆಳೆಗಳ ಸಾಂದ್ರ ಬೇಸಾಯ ಪದ್ದತಿಯನ್ನು ಅನುಸರಿಸಬೇಕಾದವರು ನಿಜ ರೈತರು. ಐವತ್ತು ವರ್ಷಗಳ ಹಿಂದೆ ಈ ಬಗೆಯ ಬೇಸಾಯ ಮಾಡುತ್ತಿದ್ದವರು ಅವರೆ. ಬೆಲೆ, ಮಾರುಕಟ್ಟೆ, ನೀರಿನ ಕೊರತೆ, ರೋಗ ರುಜಿನಗಳು, ಪ್ರಾಣಿಗಳ ಕಾಟ, ಪ್ರಕೃತಿ ವಿಕೋಪ ಇವೇ ಮುಂತಾದ ನೂರಾರು ಸಂಕಷ್ಟಗಳಿಂದ ನರಳುತ್ತಿರುವ, ಮಾರುಕಟ್ಟೆ ಚೋರರ ಗರಗಸಕ್ಕೆ, ಸರ್ಕಾರಗಳ ದಿವ್ಯ ನಿರ್ಲಕ್ಷ್ಯಕ್ಕೆ ಒಳಗಾಗಿರುವ ರೈತರು ಈ ಬಗೆಯ ಕೃಷಿ ಮಾಡಬೇಕಾಗಿರುವುದು.

PC : Expo 2015, (ಫುಕುವೋಕಾ)

ಇರುವಷ್ಟು ನೆಲವನ್ನು, ಲಭ್ಯವಿರುವ ನೀರನ್ನು, ನಮ್ಮ ಶ್ರಮವನ್ನು ಸಾರ್ಥಕವಾಗಿ ಬಳಸಿಕೊಂಡು ಕೃಷಿ ಮಾಡುವುದು ಇಂದಿನ ತುರ್ತು. ಅಣ್ಣ ತಮ್ಮಂದಿರು, ಅಕ್ಕ ತಂಗಿಯರ ನಡುವೆ ಭೂಮಿ ಹಂಚಿಕೆಯಾಗಿ ಹಿಡುವಳಿಗಳು ಚಿಕ್ಕದಾಗುತ್ತಿರುವ ಮತ್ತು ನೆಲವೆಲ್ಲ ಸೈಟಾಗುತ್ತಿರುವ ಕಾಲದಲ್ಲಿ ಇದು ಅನಿವಾರ್ಯ.

ಇದೆಲ್ಲಾ ಇರಲಿ ನಮ್ಮ ರೈತರು ದುಡಿದದ್ದೆಲ್ಲಾ ಅವರ ಬಡತನ್ನಕ್ಕೆ ಜಮಾ ಆಗುವುದಾದರೆ, ಎಷ್ಟು ಹೆಚ್ಚು ಉತ್ಪಾದನೆ ಮಾಡಿದರೂ ಅದರ ಉತ್ಪದನಾ ವೆಚ್ಚವೇ ಜಾಸ್ತಿಯಾಗುವುದಾದರೆ, ಹೆಚ್ಚು ಉತ್ಪಾದನೆ ಯಾಕೆ ಮಾಡಬೇಕು? ಇನ್ನೂ ಬಡವರಾಗಲೆಂದೇ, ಅಥವ ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ತಲುಪಲೆಂದೇ?

ಇಂಥ ಹೊತ್ತಲ್ಲಿ ರೈತರು ತಮ್ಮನ್ನು ರಕ್ಷಿಸಿಕೊಳ್ಳುವ ಹೊಸ ಕೃಷಿ ಮಂತ್ರಗಳನ್ನು ಕಲಿಯಲೇಬೇಕಿದೆ. ಆ ನಿಟ್ಟಿನಲ್ಲಿ ಯೋಚಿಸಿ ಕಾರ್ಯಕ್ಷೇತ್ರಕ್ಕೆ ಇಳಿದವರನ್ನಿಲ್ಲಿ ಸ್ಮರಿಸಲೇ ಬೇಕು, ಚೇರ್ಕಾಡಿ ರಾಮಚಂದ್ರ ರಾಯರು, ಭರಮಗೌಡರು, ಪುರಷೋತ್ತಮರಾಯರು, ಜಿ.ಎನ್‌.ಎಸ್‌ ರೆಡ್ಡಿ, ನಾರಾಯಣ ರೆಡ್ಡಿ, ಶಿವನಂಜಯ್ಯ ಬಾಳೆಕಾಯಿ, ಶಿವರಾಜ ಪಾಟೀಲ್‌, ಎ.ಪಿ ಚಂದ್ರಶೇಖರ್‌, ಕೈಲಾಸ ಮೂರ್ತಿ, ವಿಜಯ ಅಂಗಡಿ, ಬಸವರಾಜು, ಸದಾಶಿವಪ್ಪ, ಮಹಲಿಂಗಪ್ಪ ಈ ರೈತರಿಗೆ ಪೂರಕವಾಗಿ ನಿಂತು ಈ ಬಗೆಗೆ ಬರೆದ, ಕೃಷ್ಣ ಪ್ರಸಾದ್‌, ಶ್ರೀಪಡ್ರೆ, ಮಲ್ಲಿಕಾರ್ಜುನ ಹೊಸಪಾಳ್ಯ, ಆನಂದ ತೀರ್ಥ ಪ್ಯಾಟಿ, ಶಿವರಾಂ ಪೈಲೂರು, ಗಾಣಧಾಳು ಶ್ರೀಕಂಠ, ಅನಿತಾ, ಶಿವಾನಂದ ಕಳವೆ ಮುಂತಾದವರು, ಇವರಿಗೆ ಒತ್ತಾಸೆಯಾಗಿ ನಿಂತ ಸಿರಿಸಮೃದ್ಧಿ (ಬಳಗ) ಅಡಿಕೆ ಪತ್ರಿಕೆ, ಸುಜಾತ, ಲೀಸಾ ಇಂಡಿಯ, ಸಹಜ ಸಾಗುವಳಿ ಮುಂತಾದ ಪ್ರತ್ರಿಕೆಗಳು, ಸಂಘಟನೆಗಳು ಪರ್ಯಾಯ ಕೃಷಿ ವಿಧಾನಗಳ ಬಗೆಗೆ ಬಹುವಾಗಿ ತಲೆಕೆಡಿಸಿಕೊಂಡ ಪರಿಣಾಮ ಸಾವಿರಾರು ರೈತರ ಸ್ವಾವಲಂಬಿ ಬದುಕಿಗೆ ಕಾರಣವಾಗಿದೆ.

ಅದಕ್ಕೆ ಈ ಕಡಿಮೆ ಖರ್ಚಿನ, ಮಿಶ್ರ ಬೆಳೆಗಳ ಮರಾಧಾರಿತ, ಬಹುಮಹಡಿಯ ಕೃಷಿ ಪದ್ದತಿ ಹಬ್ಬಬೇಕು. ವೈಜ್ಞಾನಿಕೆ ಬೇಸಾಯದ ಹೆಸರಿನಲ್ಲಿ ಉಗ್ರ ಬೇಸಾಯ ಮಾಡಿ ಮಣ್ಣು ನೀರು ಜೀವಗಳನ್ನು ಕಳೆದುಕೊಳ್ಳುವುದಲ್ಲ.

  • ಕೃಷ್ಣಮೂರ್ತಿ ಬಿಳಿಗೆರೆ

(ಹುಳಿಯಾರು ಬಿಎಂಎಸ್‌ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು. ತಮ್ಮ ತೋಟದಲ್ಲಿ ಸಹಜ ಕೃಷಿ ಮಾಡುತ್ತಲೇ ಕೃಷಿ ಶೋಧನೆಯಲ್ಲಿ ತೊಡಗಿಸಿಕೊಂಡಿರುವ ಇವರು ಸಾವಿರ ಕಣ್ಣಿನ ನವಿಲು, ಕಿಂಚಿತ್ತು ಪ್ರೀತಿಯ ಬದುಕು, ದಾಸಯ್ಯ ಇದು ಕನಸೇನಯ್ಯ, ಧರೆ ಮೇಲೆ ಉರಿಪಾದ, ಮಳೆ ನೀರ ಕುಡಿ, ಅನ್ನ ದೇವರ ಮುಂದೆ, ಮರದಡಿಯ ಮನುಷ್ಯ ಸೇರಿದಂತೆ ಹಲವು ಪುಸ್ತಕಗಳನ್ನು ರಚಿಸಿದ್ದಾರೆ.)


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-2: ಈ ಹಕ್ಕಿಗಳು ಎಲ್ಲಿರುತ್ತವೋ ಏನೋ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...