Homeಅಂಕಣಗಳುನಮ್ಮ ತೋಟದ ಸಾಲಿಗೆ ನೀವೂ ಬನ್ನಿನಮ್ಮ ತೋಟದ ಸಾಲಿಗೆ ನೀವೂ ಬನ್ನಿ-4: ಸಹಜ ಕೃಷಿ ಅಲ್ಲ, ಉಳುಮೆ ಇಲ್ಲದ ತೋಟ ನಮ್ಮದು

ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-4: ಸಹಜ ಕೃಷಿ ಅಲ್ಲ, ಉಳುಮೆ ಇಲ್ಲದ ತೋಟ ನಮ್ಮದು

ಅಣ್ಣ ತಮ್ಮಂದಿರು, ಅಕ್ಕ ತಂಗಿಯರ ನಡುವೆ ಭೂಮಿ ಹಂಚಿಕೆಯಾಗಿ ಹಿಡುವಳಿಗಳು ಚಿಕ್ಕದಾಗುತ್ತಿರುವ ಮತ್ತು ನೆಲವೆಲ್ಲ ಸೈಟಾಗುತ್ತಿರುವ ಕಾಲದಲ್ಲಿ ಇದು ಅನಿವಾರ್ಯ.

- Advertisement -
- Advertisement -

ಮೊದಲೆ ಹೇಳಿಬಿಡುವುದು ಒಳ್ಳೆಯದು. ನಮ್ಮದು ಫುಕುವೋಕಾ ಮಾದರಿಯ ಸಹಜ ಕೃಷಿ ಅಲ್ಲ. ಅವನದು ಅಷ್ಟೆ, ಅದನ್ನೂ ಪೂರ್ಣ ಸಹಜ ಕೃಷಿಯೆಂದು ಒಪ್ಪಲಾಗದು, ಮನುಷ್ಯರು ಈಗ ಸಿಕ್ಕಾಪಟ್ಟೆ ಮನುಷ್ಯರಾಗಿ ಅಸಹಜಗೊಂಡಿರುವುದು ನಿಜ ತಾನೆ. ಫುಕುವೋಕಾ ಎಲ್ಲರಂತೆ ಮಾರುಕಟ್ಟೆ, ಬೆಲೆ, ಒಂದಿಷ್ಟು ಸಲಕರಣೆಗಳು, ಒಂದಿಷ್ಟು ಗೊಬ್ಬರ, ಬೂದಿ, ಕಳೆ ನಿಯಂತ್ರಣ, ಕೊಯ್ಲು, ಒಕ್ಕಣೆ ಹೀಗೆ ಅವನೂ ಈ ಮನುಷ್ಯ ಜಗತ್ತಿನ ಕೂಸೇ.

ಆದರೆ ಅವನ ಕೃಷಿ ವಿಧಾನಗಳು ಸರಳ, ಪ್ರಕೃತಿಗೆ ಹತ್ತಿರ ಹತ್ತಿರ. ಅವನ ಬದುಕಿನ ವಿಧಾನಗಳು  ಅಷ್ಟೆ. ನಾವೆಲ್ಲ ಅವನ ಹಾದಿಯಲ್ಲಿರುವವರಷ್ಟೆ, ಅವನ ಹತ್ತಿರವೂ ಹೋಗಲಾಗಿಲ್ಲ. ಆದರೆ ಕ್ರಮಿಸಿರುವಷ್ಟು ದೂರ ನಮಗೆ ಒಳ್ಳೆಯದನ್ನು ತೋರಿಸಿದೆ.

ಮೊದ ಮೊದಲು ಕೆಲವರು ನಮ್ಮ ತೋಟ ನೋಡಿ ಈ ಬಗೆಯ ಕೃಷಿಯನ್ನು ನಿಮ್ಮಂತ ನಿಗಧಿತ ಸಂಬಳ ಬರುವವರು ಮಾತ್ರ ಮಾಡಲು ಸಾಧ್ಯ ಎನ್ನುತ್ತಿದ್ದರು. ನಿಜಕ್ಕೂ ಇಂಥ ಕಡಿಮೆ ಖರ್ಚಿನ, ಮರಾಧಾರಿತ, ಮಿಶ್ರ ಬೆಳೆಗಳ ಸಾಂದ್ರ ಬೇಸಾಯ ಪದ್ದತಿಯನ್ನು ಅನುಸರಿಸಬೇಕಾದವರು ನಿಜ ರೈತರು. ಐವತ್ತು ವರ್ಷಗಳ ಹಿಂದೆ ಈ ಬಗೆಯ ಬೇಸಾಯ ಮಾಡುತ್ತಿದ್ದವರು ಅವರೆ. ಬೆಲೆ, ಮಾರುಕಟ್ಟೆ, ನೀರಿನ ಕೊರತೆ, ರೋಗ ರುಜಿನಗಳು, ಪ್ರಾಣಿಗಳ ಕಾಟ, ಪ್ರಕೃತಿ ವಿಕೋಪ ಇವೇ ಮುಂತಾದ ನೂರಾರು ಸಂಕಷ್ಟಗಳಿಂದ ನರಳುತ್ತಿರುವ, ಮಾರುಕಟ್ಟೆ ಚೋರರ ಗರಗಸಕ್ಕೆ, ಸರ್ಕಾರಗಳ ದಿವ್ಯ ನಿರ್ಲಕ್ಷ್ಯಕ್ಕೆ ಒಳಗಾಗಿರುವ ರೈತರು ಈ ಬಗೆಯ ಕೃಷಿ ಮಾಡಬೇಕಾಗಿರುವುದು.

PC : Expo 2015, (ಫುಕುವೋಕಾ)

ಇರುವಷ್ಟು ನೆಲವನ್ನು, ಲಭ್ಯವಿರುವ ನೀರನ್ನು, ನಮ್ಮ ಶ್ರಮವನ್ನು ಸಾರ್ಥಕವಾಗಿ ಬಳಸಿಕೊಂಡು ಕೃಷಿ ಮಾಡುವುದು ಇಂದಿನ ತುರ್ತು. ಅಣ್ಣ ತಮ್ಮಂದಿರು, ಅಕ್ಕ ತಂಗಿಯರ ನಡುವೆ ಭೂಮಿ ಹಂಚಿಕೆಯಾಗಿ ಹಿಡುವಳಿಗಳು ಚಿಕ್ಕದಾಗುತ್ತಿರುವ ಮತ್ತು ನೆಲವೆಲ್ಲ ಸೈಟಾಗುತ್ತಿರುವ ಕಾಲದಲ್ಲಿ ಇದು ಅನಿವಾರ್ಯ.

ಇದೆಲ್ಲಾ ಇರಲಿ ನಮ್ಮ ರೈತರು ದುಡಿದದ್ದೆಲ್ಲಾ ಅವರ ಬಡತನ್ನಕ್ಕೆ ಜಮಾ ಆಗುವುದಾದರೆ, ಎಷ್ಟು ಹೆಚ್ಚು ಉತ್ಪಾದನೆ ಮಾಡಿದರೂ ಅದರ ಉತ್ಪದನಾ ವೆಚ್ಚವೇ ಜಾಸ್ತಿಯಾಗುವುದಾದರೆ, ಹೆಚ್ಚು ಉತ್ಪಾದನೆ ಯಾಕೆ ಮಾಡಬೇಕು? ಇನ್ನೂ ಬಡವರಾಗಲೆಂದೇ, ಅಥವ ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ತಲುಪಲೆಂದೇ?

ಇಂಥ ಹೊತ್ತಲ್ಲಿ ರೈತರು ತಮ್ಮನ್ನು ರಕ್ಷಿಸಿಕೊಳ್ಳುವ ಹೊಸ ಕೃಷಿ ಮಂತ್ರಗಳನ್ನು ಕಲಿಯಲೇಬೇಕಿದೆ. ಆ ನಿಟ್ಟಿನಲ್ಲಿ ಯೋಚಿಸಿ ಕಾರ್ಯಕ್ಷೇತ್ರಕ್ಕೆ ಇಳಿದವರನ್ನಿಲ್ಲಿ ಸ್ಮರಿಸಲೇ ಬೇಕು, ಚೇರ್ಕಾಡಿ ರಾಮಚಂದ್ರ ರಾಯರು, ಭರಮಗೌಡರು, ಪುರಷೋತ್ತಮರಾಯರು, ಜಿ.ಎನ್‌.ಎಸ್‌ ರೆಡ್ಡಿ, ನಾರಾಯಣ ರೆಡ್ಡಿ, ಶಿವನಂಜಯ್ಯ ಬಾಳೆಕಾಯಿ, ಶಿವರಾಜ ಪಾಟೀಲ್‌, ಎ.ಪಿ ಚಂದ್ರಶೇಖರ್‌, ಕೈಲಾಸ ಮೂರ್ತಿ, ವಿಜಯ ಅಂಗಡಿ, ಬಸವರಾಜು, ಸದಾಶಿವಪ್ಪ, ಮಹಲಿಂಗಪ್ಪ ಈ ರೈತರಿಗೆ ಪೂರಕವಾಗಿ ನಿಂತು ಈ ಬಗೆಗೆ ಬರೆದ, ಕೃಷ್ಣ ಪ್ರಸಾದ್‌, ಶ್ರೀಪಡ್ರೆ, ಮಲ್ಲಿಕಾರ್ಜುನ ಹೊಸಪಾಳ್ಯ, ಆನಂದ ತೀರ್ಥ ಪ್ಯಾಟಿ, ಶಿವರಾಂ ಪೈಲೂರು, ಗಾಣಧಾಳು ಶ್ರೀಕಂಠ, ಅನಿತಾ, ಶಿವಾನಂದ ಕಳವೆ ಮುಂತಾದವರು, ಇವರಿಗೆ ಒತ್ತಾಸೆಯಾಗಿ ನಿಂತ ಸಿರಿಸಮೃದ್ಧಿ (ಬಳಗ) ಅಡಿಕೆ ಪತ್ರಿಕೆ, ಸುಜಾತ, ಲೀಸಾ ಇಂಡಿಯ, ಸಹಜ ಸಾಗುವಳಿ ಮುಂತಾದ ಪ್ರತ್ರಿಕೆಗಳು, ಸಂಘಟನೆಗಳು ಪರ್ಯಾಯ ಕೃಷಿ ವಿಧಾನಗಳ ಬಗೆಗೆ ಬಹುವಾಗಿ ತಲೆಕೆಡಿಸಿಕೊಂಡ ಪರಿಣಾಮ ಸಾವಿರಾರು ರೈತರ ಸ್ವಾವಲಂಬಿ ಬದುಕಿಗೆ ಕಾರಣವಾಗಿದೆ.

ಅದಕ್ಕೆ ಈ ಕಡಿಮೆ ಖರ್ಚಿನ, ಮಿಶ್ರ ಬೆಳೆಗಳ ಮರಾಧಾರಿತ, ಬಹುಮಹಡಿಯ ಕೃಷಿ ಪದ್ದತಿ ಹಬ್ಬಬೇಕು. ವೈಜ್ಞಾನಿಕೆ ಬೇಸಾಯದ ಹೆಸರಿನಲ್ಲಿ ಉಗ್ರ ಬೇಸಾಯ ಮಾಡಿ ಮಣ್ಣು ನೀರು ಜೀವಗಳನ್ನು ಕಳೆದುಕೊಳ್ಳುವುದಲ್ಲ.

  • ಕೃಷ್ಣಮೂರ್ತಿ ಬಿಳಿಗೆರೆ

(ಹುಳಿಯಾರು ಬಿಎಂಎಸ್‌ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು. ತಮ್ಮ ತೋಟದಲ್ಲಿ ಸಹಜ ಕೃಷಿ ಮಾಡುತ್ತಲೇ ಕೃಷಿ ಶೋಧನೆಯಲ್ಲಿ ತೊಡಗಿಸಿಕೊಂಡಿರುವ ಇವರು ಸಾವಿರ ಕಣ್ಣಿನ ನವಿಲು, ಕಿಂಚಿತ್ತು ಪ್ರೀತಿಯ ಬದುಕು, ದಾಸಯ್ಯ ಇದು ಕನಸೇನಯ್ಯ, ಧರೆ ಮೇಲೆ ಉರಿಪಾದ, ಮಳೆ ನೀರ ಕುಡಿ, ಅನ್ನ ದೇವರ ಮುಂದೆ, ಮರದಡಿಯ ಮನುಷ್ಯ ಸೇರಿದಂತೆ ಹಲವು ಪುಸ್ತಕಗಳನ್ನು ರಚಿಸಿದ್ದಾರೆ.)


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-2: ಈ ಹಕ್ಕಿಗಳು ಎಲ್ಲಿರುತ್ತವೋ ಏನೋ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...