Homeಅಂಕಣಗಳುನಮ್ಮ ತೋಟದ ಸಾಲಿಗೆ ನೀವೂ ಬನ್ನಿನಮ್ಮ ತೋಟದ ಸಾಲಿಗೆ ನೀವೂ ಬನ್ನಿ-5: ಗೊಬ್ಬರೋತ್ಪಾದಕ ಗೆದ್ದಲುಗಳಿಗೊಂದು ಸಲಾಂ

ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-5: ಗೊಬ್ಬರೋತ್ಪಾದಕ ಗೆದ್ದಲುಗಳಿಗೊಂದು ಸಲಾಂ

ಹುತ್ತಗಳು ನೆಲಕ್ಕೆ ಮಳೆ ನೀರಿಂಗಿಸುವ ಅತ್ಯುತ್ತಮ ದಾರಿ.. ನಮ್ಮ ತೋಟದಲ್ಲಿ ಈ ಪಾಟಿ ಗೆದ್ದಲು ಇಲ್ಲದಿದ್ದರೆ ನಾವು ಆರಾಮವಾಗಿ ತೋಟ ಮಾಡಲು ಆಗುತ್ತಲೇ ಇರಲಿಲ್ಲ.

- Advertisement -
- Advertisement -

ನೀಟಾಗಿ ತೋಟ ಇಡುವುದೆಂದರೆ ಸಕಲ ಸಾವಯವ ವಸ್ತುಗಳನ್ನು ಅಲ್ಲಲ್ಲಿ ಗುಡ್ಡೆ ಹಾಕಿ ಸುಟ್ಟು, ತೋಟದ ಬದುಗಳನ್ನೆಲ್ಲಾ ಗುಡಿಸಿ ಅಂದವಾಗಿ ಕಾಣುವಂತೆ ಇಟ್ಟುಕೊಳ್ಳುವುದು ಎಂದು ನಂಬಿದ್ದ ನಮ್ಮಪ್ಪ ಹಾಗೇ ಇಟ್ಟುಕೊಂಡಿದ್ದರು. “ಇವರ ಅಪ್ಪ ಎಷ್ಟು ಅಚ್ಚುಕಟ್ಟಾಗಿ ತೋಟ ಇಟ್ಟುಕೊಂಡಿದ್ದರು, ನಡುಮನೆಯಂಥಾ ತೋಟವನ್ನು ಈ ಮನುಷ್ಯ ತಿಪ್ಪೆ ಗುಂಡಿ ಮಾಡಿ ಗಬ್ಬೆಬ್ಬಿಸಿದ್ದಾನೆ, ಇವನ ಪ್ರಯೋಗಕ್ಕಷ್ಟು ಬೆಂಕಿ ಹಾಕ, ಅಡವಾಗಿ ಸಂಬಳ ಬರುತ್ತೆ ಏನೇನಾದರು ಮಾಡಂಗಾಗುತ್ತೆ..” ಇತ್ಯಾದಿ ಬೈಗುಳಗಳನ್ನು ನಮ್ಮ ತೋಟದ ದಾರಿಯಲ್ಲಿ ಸಾಗುವ ಜನರು ಬಿತ್ತರಿಸುವಾಗ, ನಾನು ಬೇಲಿ ಸಾಲಲ್ಲಿ ಕೂತು ಆಲಿಸಿದ್ದೇನೆ. ಇದು ನನ್ನ ಭಾಗ್ಯ ಎಂದೇ ತಿಳಿದಿದ್ದೇನೆ. ಏಕೆಂದರೆ ಹಾಗೆ ಬೈದವರೇ ನಮ್ಮ ತೋಟವನ್ನು ಅನುಸರಿಸಿ ದಾರಿಗೆ ಬಂದಿದ್ದಾರೆ.

ಅವರ ಈ ಅಂಬೋಣಕ್ಕೆ ಕಾರಣವೂ ಇತ್ತು. ಮೊದಲು ನಾವು ತೋಟದ ಉಳುಮೆ ಬಿಟ್ಟಾಗ ಎಲ್ಲಾ ತೋಟದ ಉಳಿಕೆಯನ್ನು ಮರದ ಬುಡದಲ್ಲೆ ರಾಶಿಯಾಗುವಂತೆ ಬಿಟ್ಟ ಪರಿಣಾಮ ಅತಿಯಾಗಿ ಸೆದಾಲು ಉಂಟಾಯಿತು. ಅದರ ಮಧ್ಯದಲ್ಲಿ ಅನಗತ್ಯ ತರಾವರಿ ಗಿಡಗಳನ್ನು ಬೆಳೆಯಲು ಬಿಟ್ಟ ಕಾರಣ ತೋಟ ಕಾಡಿನ ಸ್ವರೂಪಕ್ಕೆ ತಲುಪಿತ್ತು. ನಡುಮನೆಯಂತಿದ್ದ ತೋಟವೀಗ ಒಡೆಯರಿಲ್ಲದೆ ರಜ ತುಂಬಿದ ತೋಟವಾಗಿ ಅವರಿಗೆ ಕಾಣತೊಡಗಿತ್ತು. ಕಾಲ ಕಳೆದಂತೆ ನಮಗೂ ಅದರ ಬಿಸಿ ತಟ್ಟಿತು. ತೋಟದೊಳಗೆ ಕೆಲಸ ಮಾಡುವುದು ಕಷ್ಟವಾಯಿತು. ಹುಳು ಹುಪ್ಪಡಿ ಮತ್ತು ಆಕಸ್ಮಿಕ ಬೆಂಕಿಯ ಭಯಗಳು ಸೇರಿಕೊಂಡು ನಮ್ಮನ್ನು ಎಚ್ಚರಿಸಿದವು.

ನಾವೀಗ ತೋಟದ ಉಳಿಕೆಯನ್ನು ನೆಲಕ್ಕೆ ವ್ಯವಸ್ಥಿತವಾಗಿ ಹೊದಿಸುತ್ತೇವೆ. ಅತಿ ಹೆಚ್ಚಾದ ಸಾವಯವ ಉಳಿಕೆಯನ್ನು ಬುಡದಿಂದ ತೆಗೆದು ಕಡಗಿಗೆ ಹಾಕುತ್ತೇವೆ. ಈ ಎಲ್ಲ ಉಳಿಕೆ ನೆಲದ ಸಂಪರ್ಕಕ್ಕೆ ಬರುವ ಕಾರಣ ಗೆದ್ದಲು ಆಯಾ ವರ್ಷದ ಉಳಿಕೆಯನ್ನು ಆಯಾ ವರ್ಷವೇ ತಿಂದು ಮಣ್ಣು ಮಾಡುತ್ತವೆ. ಅನಗತ್ಯ ಗಿಡಗಳನ್ನು ಕಿತ್ತುಹಾಕಿ ತಿರುಗಾಡಲು ಅನುಕೂಲ ಮಾಡಿಕೊಳ್ಳುತ್ತೇವೆ.

ಈಗ ತೋಟ ನೋಡಿದವರು ಮೊದಲಿನಂತೆ ಬೈಯ್ಯದೆ ಒಪ್ಪುವುದಕ್ಕೆ ಮನಸ್ಸು ಮಾಡುತ್ತಿದ್ದಾರೆ. ಅಷ್ಟೇ ಅಲ್ಲ ತಾವೂ ಬೆಳೆಗಳ ಉಳಿಕೆಗಳನ್ನು ಸುಡುವುದನ್ನು ನಿಲ್ಲಿಸಿ ಗೆದ್ದಲಿಗೆ ಉಣಿಸುತ್ತಿದ್ದಾರೆ. ಈಗವರಿಗೆ ಗೊತ್ತಾಗಿದೆ ಸುಟ್ಟರೆ ಸಿಕ್ಕುವುದು ಬೂದಿಯೆಂದು, ತೋಟ ಸುಡುಗಾಡಾಗುವುದೆಂದು. ತೋಟ ಸ್ವಲ್ಪ ಅಸ್ತವ್ಯಸ್ತವಾಗಿದ್ದರೂ ಪರವಾಗಿಲ್ಲವೆಂಬ ತಿಳುವಳಿಕೆ ಅವರಿಗೀಗ ಬಂದಿದೆ.

ಕೆಲವರು ಇಂಥ ಸಾವಯವ ಉಳಿಕೆಗಳನ್ನು ಪುಡಿಮಾಡಲು ದೊಡ್ಡ ಮಿಷನ್‌ ತಂದು ಪ್ರಯತ್ನಿಸಿದರು. ಹೀಗೆ ಮಾಡದಿದ್ದರೆ ತೆಂಗಿನ ಎಡಮಟ್ಟೆ, ಕುರಂಬಳೆ, ಮಟ್ಟೆ ಇತ್ಯಾದಿಗಳು ಕರಗುವುದಿಲ್ಲವೆಂಬುದು ಇವರ ಅಂಬೋಣವಾಗಿತ್ತು. ಆದರೆ ಇದು ಬಲು ಖರ್ಚಿನ, ಅತಿ ಶ್ರಮದ ಬಾಬ್ತು. ನಿಜ, ಎಡಮಟ್ಟೆಗಳು ಬೇಗ ಕರಗುವುದಿಲ್ಲ, ಅದಕ್ಕೆ ನಾವು ಈ ಎಡಮಟ್ಟೆಗಳನ್ನು ಬೇಲಿ ಸಾಲಲ್ಲಿ ವ್ಯವಸ್ಥಿತವಾಗಿ ಒಟ್ಟುತ್ತೇವೆ. ಅವು ಅಲ್ಲಿ ನಿಧಾನವಾಗಿ ಗೆದ್ದಲು ಪಾಲಾಗಿ ಗೊಬ್ಬರವಾಗುತ್ತದೆ. ಬೆಟ್ಟಕ್ಕೆ ಕಲ್ಲು ಹೊರುವುದು ತಪ್ಪುತ್ತದೆ. ತೋಟದೊಳಗೇ ಗೊಬ್ಬರ ಉತ್ಪಾದನೆಯಾಗಿ ಮೇಲೆ ಫಲ ಪಲ್ಲವಿಸುವ ವಿಸ್ಮಯವಿದು.

ಈಗ ನಮ್ಮ ತೋಟದ ಸುತ್ತಮುತ್ತಲ ರೈತರಿಗೆ ಸುಡುವುದರ ನೋವು ಮತ್ತು ಸಾವು ಅರ್ಥವಾಗಿದೆ. ಅವರು ಸುಡುತ್ತಿದ್ದುದು ಕೇವಲ ತೆಂಗಿನ ಉಳಿಕೆಗಳಷ್ಟೇ ಅಲ್ಲ, ನಮಗೆ ಉಪಕಾರಿಯಾದ ಗೆದ್ದಲನ್ನು ಇನ್ನಿತರ ಜೀವಿಗಳನ್ನು ಎಂಬ ಅರಿವು ಉಂಟಾಗಿದೆ. ಅದಕ್ಕೀಗ ಅವರು ಬೆಂಕಿಬೊಮ್ಮರ ಸ್ಥಾನಕ್ಕೆ ರಾಜಿನಾಮೆ ಬಿಸಾಕಿದ್ದಾರೆ. ಗೆದ್ದಲು ಸಂಭ್ರಮದಿಂದ ತೋಟಕ್ಕೆ ಗೊಬ್ಬರ ಉತ್ಪಾದಿಸಿ ಕೊಡುತ್ತಿವೆ. ಅವುಗಳಿಗೆ ಸಲಾಂ ಹೇಳಲು ಬೇರೆ ಕಾರಣ ಇನ್ನೇನು ಬೇಕು? ಆದರೂ ಮುಳ್ಳು ಇನ್ನಿತರ ಕಸಗಳನ್ನು ಸುಡುವುದು ಮುಂದುವರಿದಿದೆ. ಏನನ್ನೂ ಸುಡುವ ಅಗತ್ಯವಿಲ್ಲ, ಬಂಡೆಯೇ ದಿನಪತ್ತಿನ ಮೇಲೆ ಕರಗುತ್ತದೆ ಎಂದರೆ ಇದ್ಯಾವ ಲೆಕ್ಕ?

ಎಷ್ಟೋ ಜನ ಗೆದ್ದಲು ಎಂದರೆ ಸಾವು ಎಂದು ತಿಳಿಯುತ್ತಾರೆ. ಗೆದ್ದಲು ಎಂದರೆ ಹುತ್ತದತ್ತ ಇವರ ಚಿತ್ತ ಹರಿಯುತ್ತದೆ, ಹಾವುಗಳು ಇವರನ್ನು ಸುತ್ತಿಕೊಳ್ಳುತ್ತವೆ, ಗೆದ್ದಲು ಎಂದರೆ ನಾಶ ಎಂದೆ ಇವರ ಸ್ವಷ್ಟ ನಿಲುವು. ಆದರೆ ವಾಸ್ತವವೇ ಬೇರೆ. ಹುತ್ತಗಳು ನೆಲಕ್ಕೆ ಮಳೆ ನೀರಿಂಗಿಸುವ ಅತ್ಯುತ್ತಮ ದಾರಿಗಳೆಂದು ಅವರಿಗೆ ಗೊತ್ತಿಲ್ಲ. ನಿಮ್ಮ ಹೊಲ ತೋಟಗಳಲ್ಲಿ ಗೆದ್ದಲು ಒಣಗಿದ ಎಲೆ, ಗರಿ, ತೊಗಟೆ ಮುಂತಾದ ಪದಾರ್ಥಗಳನ್ನು ತಿಂದು ಬದುಕುತ್ತವೆ. ಇದರಿಂದ ಯಾರಿಗೂ ಯಾವ ತೊಂದರೆಯೂ ಇಲ್ಲ. ಇವುಗಳನ್ನು ಆಜನ್ಮ ವೈರಿಗಳೆಂದು ಭಾವಿಸುವುದು ತಪ್ಪು. ಅನೇಕರಿಗೆ ತಮ್ಮ ವೈರಿ ಯಾರೆಂದು ತಿಳಿಯುವುದೇ ಇಲ್ಲ, ತಮ್ಮ ಮಿತ್ರರನ್ನೇ ವೈರಿಗಳೆಂದು ತಿಳಿದು ಸುಟ್ಟು ಹಾಕುತ್ತಾರೆ. ನಮ್ಮ ತೋಟದಲ್ಲಿ ಈ ಪಾಟಿ ಗೆದ್ದಲು ಇಲ್ಲದಿದ್ದರೆ ನಾವು ಆರಾಮವಾಗಿ ತೋಟ ಮಾಡಲು ಆಗುತ್ತಲೇ ಇರಲಿಲ್ಲ. ಕಡಿಮೆ ಖರ್ಚು ಒಳ್ಳೆ ಫಸಲು.

  • ಕೃಷ್ಣಮೂರ್ತಿ ಬಿಳಿಗೆರೆ

(ಹುಳಿಯಾರು ಬಿಎಂಎಸ್‌ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು. ತಮ್ಮ ತೋಟದಲ್ಲಿ ಸಹಜ ಕೃಷಿ ಮಾಡುತ್ತಲೇ ಕೃಷಿ ಶೋಧನೆಯಲ್ಲಿ ತೊಡಗಿಸಿಕೊಂಡಿರುವ ಇವರು ಸಾವಿರ ಕಣ್ಣಿನ ನವಿಲು, ಕಿಂಚಿತ್ತು ಪ್ರೀತಿಯ ಬದುಕು, ದಾಸಯ್ಯ ಇದು ಕನಸೇನಯ್ಯ, ಧರೆ ಮೇಲೆ ಉರಿಪಾದ, ಮಳೆ ನೀರ ಕುಡಿ. ಅನ್ನ ದೇವರ ಮುಂದೆ, ಮರದಡಿಯ ಮನುಷ್ಯ ಸೇರಿದಂತೆ ಹಲವು ಪುಸ್ತಕಗಳನ್ನು ರಚಿಸಿದ್ದಾರೆ.)


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-2: ಈ ಹಕ್ಕಿಗಳು ಎಲ್ಲಿರುತ್ತವೋ ಏನೋ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತೋಟವನ್ನು ಸುಡುಗಾಡು ಮಾಡದೆ ಕಾಯುವ ಕಾಡು ಮಾಡುವ ಸಂದೇಶದೊಂದಿಗೆ ಕೃಷಿಯ ಸಂತೋಷ ಸಾರುವ ಸುಂದರ ಲೇಖನ.
    ಧನ್ಯವಾದಗಳು ಬಿಳಿಗೆರೆ ಸರ್ ಮತ್ತು ಗೌರಿ.ಕಾಮ್

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...