Homeಕರ್ನಾಟಕಶುಲ್ಕ ಪಾವತಿಸದ ಮಕ್ಕಳ ಆನ್‌ಲೈನ್‌ ತರಗತಿ ಬಂದ್ ಮಾಡಿದ ಖಾಸಗಿ ಶಾಲೆ: ಪೋಷಕರ ಆಕ್ರೋಶ

ಶುಲ್ಕ ಪಾವತಿಸದ ಮಕ್ಕಳ ಆನ್‌ಲೈನ್‌ ತರಗತಿ ಬಂದ್ ಮಾಡಿದ ಖಾಸಗಿ ಶಾಲೆ: ಪೋಷಕರ ಆಕ್ರೋಶ

- Advertisement -
- Advertisement -

ಕೋವಿಡ್‌ ಕಾರಣದಿಂದ ಕಳೆದೊಂದು ವರ್ಷದಿಂದ ಶಾಲೆಗಳು ತೆರೆದಿಲ್ಲ. ಭೌತಿಕ ತರಗತಿಗಳು ನಿಂತಿವೆ. ಆನ್‌ಲೈನ್‌ ಶಿಕ್ಷಣ ವ್ಯವಸ್ಥೆ ಜಾರಿಯಲ್ಲಿದೆ. ಮಕ್ಕಳು ಆನ್‌ಲೈನ್‌ ಮುಖಾಂತರವೇ ತರಗತಿಗಳಿಗೆ ಹಾಜರಾಗುತ್ತಿದ್ದಾರೆ. ಶಾಲೆಗಳನ್ನು ತೆರೆಯದಿದ್ದರೂ ಸಹ ಶುಲ್ಕ ವಸೂಲಿ ಮಾತ್ರ ನಿಂತಿಲ್ಲ. ಮುಖ್ಯವಾಗಿ ಖಾಸಗಿ ಶಾಲೆಗಳು ಕೋವಿಡ್‌ ಸಮಯದಲ್ಲೂ ಸುಲಿಗೆಯಲ್ಲಿ ತೊಡಗಿವೆ ಎಂಬ ಆರೋಪ ಪೋಷಕರದ್ದು. ವಿದ್ಯಾರ್ಥಿ ಸ್ನೇಹಿ ಎಂದು ಹೇಳಿಕೊಳ್ಳುವ ಪ್ರತಿಷ್ಠಿತ ಕಾರ್ಪೊರೇಟ್‌ ಶಿಕ್ಷಣ ಸಂಸ್ಥೆಯೊಂದು ಶುಲ್ಕ ಪಾವತಿಸದ ಮಕ್ಕಳ ಆನ್‌ಲೈನ್ ತರಗತಿ ಬಂದ್ ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಸರ್ಕಾರ ಶುಲ್ಕ ನೀಡಲು ತಡವಾದರೂ ಮಕ್ಕಳ ತರಗತಿಗಳನ್ನು ನಿಲ್ಲಿಸುವಂತಿಲ್ಲ ಎಂದು ನಿಯಮಗಳನ್ನು ಹೊರಡಿಸಿದೆ. ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಬೆಂಗಳೂರಿನ ಎಬೆನೇಜರ್‌ ಇಂಟರ್‌ನ್ಯಾಷನಲ್‌ ಸ್ಕೂಲ್‌ ಅತಿ ಹೆಚ್ಚಿನ ಶುಲ್ಕವನ್ನು ವಸೂಲಿ ಮಾಡುತ್ತಿದೆ. ಈ ಸಂಬಂಧ ಪೋಷಕರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಶಾಲಾ ಶುಲ್ಕ ವಿಚಾರ: ಸಮಸ್ಯೆ ಬಗೆಹರಿಸುವಂತೆ ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ

ಎಬೆನೆಜರ್ ಇಂಟರ್‌ನ್ಯಾಷನಲ್ ಸ್ಕೂಲ್ ಬೆಂಗಳೂರು(EISB) ರಾಜಧಾನಿಯ ಪ್ರತಿಷ್ಠಿತ ಶಾಲೆಗಳಲ್ಲಿ ಒಂದು. ಅಂತರಾಷ್ಟ್ರೀಯ ಪಠ್ಯಕ್ರಮವನ್ನು ಅಳವಡಿಸಿಕೊಂಡಿರುವ ಈ ಶಾಲೆಯಲ್ಲಿ ಸುಮಾರು 800ಕ್ಕೂ ಅಧಿಕ ವಿದ್ಯಾರ್ಥಿಗಳು ಓದುತ್ತಿದ್ದು ಕಳೆದ ಒಂದು ವರ್ಷದಿಂದ ಆನ್‌ಲೈನ್‌ ಮೂಲಕ ತರಗತಿಗಳನ್ನು ಮತ್ತು ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸುತ್ತಿದೆ. ಭೌತಿಕ ತರಗತಿಗಳನ್ನು ನಡೆಸದ ಕಾರಣ ಶಾಲೆಯು ಸ್ವಾಭಾವಿಕವಾಗಿ ಶುಲ್ಕವನ್ನು ಕಡಿತಗೊಳಿಸಬೇಕಿತ್ತು. ಭೋದನಾ ಶುಲ್ಕವನ್ನು ಮಾತ್ರ ವಿದ್ಯಾರ್ಥಿಗಳಿಂದ ಕಟ್ಟಿಸಿಕೊಳ್ಳಬೇಕೆಂಬ ಸರ್ಕಾರದ ನಿಯಮದನುಸಾರ ಶಾಲೆಯ ಶುಲ್ಕ ಕಳೆದ ವರ್ಷಕ್ಕಿಂತ ಈ ವರ್ಷ ಕಡಿಮೆಯಾಗಬೇಕಿತ್ತು. ಆದರೆ ಶಾಲಾ ಅಡಳಿತ ಈ ವರ್ಷ ಕಳೆದ ವರ್ಷಕ್ಕಿಂತ ಶೇ 30% ಶುಲ್ಕವನ್ನು ಹೆಚ್ಚಿಸಿದೆ ಎಂದು ಶಾಲೆಯ ಈ ನಡೆಯಿಂದ ಬೇಸರಗೊಂಡ ಪೋಷಕರು ತಿಳಿಸಿದ್ದಾರೆ.

ಬೊಮ್ಮಸಂದ್ರದ ಅನ್ವಿತಾ (ಹೆಸರು ಬದಲಾಯಿಸಲಾಗಿದೆ) ಎಲೆಕ್ಟ್ರಾನಿಕ್‌ ಸಿಟಿಯ ಎಬೆನೇಜರ್‌ ಇಂಟರ್‌ನ್ಯಾಷನಲ್‌ ಸ್ಕೂಲ್‌ನಲ್ಲಿ 6 ತರಗತಿಯ ಐಸಿಎಸ್‌ಸಿ ಪಠ್ಯಕ್ರಮದಲ್ಲಿ ಓದುತ್ತಿದ್ದಾರೆ. ಆಕೆಯ ತಮ್ಮ ಅನುಷ್‌ (ಹೆಸರು ಬದಲಾಯಿಸಲಾಗಿದೆ) ಅದೇ ಸ್ಕೂಲ್‌ನಲ್ಲಿ 5 ನೇ ತರಗತಿಯಲ್ಲಿ ಓದುತ್ತಿದ್ದಾನೆ. ಶಾಲೆ ಆಡಳಿತ ಮಂಡಳಿ ಶುಲ್ಕ ಪಾವತಿಸಿಲ್ಲ ಎಂಬ ಕಾರಣದಿಂದ ಜುಲೈ 1 ರಿಂದ ಇವರಿಬ್ಬರ ಆನ್‌ಲೈನ್‌ ತರಗತಿಗಳನ್ನು ನಿಲ್ಲಿಸಿದೆ. ಪೋಷಕರಾದ ಜಗಮೋಹನ್‌ ರೆಡ್ಡಿ (ಹೆಸರು ಬದಲಾಯಿಸಲಾಗಿದೆ) ಸ್ಕೂಲ್ ಆಡಳಿತವನ್ನು ಈ ಕುರಿತು ಸಂಪರ್ಕಿಸಿದರೂ ಸರಿಯಾದ ಸ್ಪಂದನೆ ದೊರೆತಿಲ್ಲ. ಕಳೆದ 12 ದಿನಗಳಿಂದ ಮಕ್ಕಳ ತರಗತಿಗಳು ನಿಂತು ಹೋಗಿವೆ. ತಾಂತ್ರಿಕ ಕಾರಣಗಳದಿಂದ ತರಗತಿ ನಡೆಯುತ್ತಿಲ್ಲವೆಂದು ಶಾಲೆ ಆಡಳಿತ ನಮಗೆ ಹೇಳುತ್ತಿದೆ. ಆದರೆ ನಮ್ಮ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷ 1,40,000 ರೂ. ಗಳಷ್ಟಿದ್ದ ಶಾಲಾ ಶುಲ್ಕ ಈ ವರ್ಷ 1,70,000 ರೂಗೆ ಹೆಚ್ಚಳವಾಗಿದೆ. ಬೋಧನಾ ಶುಲ್ಕವನ್ನೇ 1,70,000 ಕ್ಕೆ ಹೆಚ್ಚಿಸುವ ಮೂಲಕ ಶಾಲೆ ಆಡಳಿತ ಸರ್ಕಾರಿ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಪೋಷಕರು ಆರೋಪಿಸಿದ್ದಾರೆ.

ಎಬೆನೇಜರ್‌ ಶಾಲೆಯ ಶುಲ್ಕ ವಿವರ

ಶಾಲೆಯ ಆಡಳಿತ ಒಟ್ಟು ಶುಲ್ಕದಲ್ಲಿ ಬೇರೆ ಬೇರೆ ವಿಭಾಗಗಳನ್ನು ಮಾಡದೇ ಬೋಧನಾ ಶುಲ್ಕದ ಹೆಸರಿನಲ್ಲಿ ಕಳೆದ ವರ್ಷಕ್ಕಿಂತ ಹೆಚ್ಚು ಫೀಸ್‌ ವಿಧಿಸಿದೆ.

ಇದನ್ನೂ ಓದಿ: ಶಾಲಾ ಶುಲ್ಕ ಮನ್ನಾ ಮಾಡುವ ಪಿಐಎಲ್ ತಿರಸ್ಕರಿಸಿದ ದೆಹಲಿ ಹೈಕೋರ್ಟ್

“ಆನ್‌ಲೈನ್‌ ತರಗತಿಗಳನ್ನು ನಿಲ್ಲಿಸಿರುವುದೇಕೆ? ಎಂಬ ಪ್ರಶ್ನೆಗೆ ಶಾಲೆ ಇದುವರೆಗೆ ಉತ್ತರಿಸುತ್ತಿಲ್ಲ. ಫೀಸ್‌ ಕಟ್ಟದ ಕಾರಣಕ್ಕೇ ತರಗತಿಯನ್ನು ನೀಡುತ್ತಿಲ್ಲವೆ ಎಂಬ ಪ್ರಶ್ನೆಗೆ ಉತ್ತರಿಸಲು ಶಾಲೆ ಸಿದ್ಧವಿಲ್ಲ. ಶಾಲೆಗೆ ಬನ್ನಿ ಮಾತನಾಡೋಣ, ಸಮಸ್ಯೆಯನ್ನು ಬಗೆಹರಿಸಿಕೊಳ್ಳೋಣ ಎಂಬ ಉತ್ತರ ಶಾಲೆ ಕಡೆಯಿಂದ ಪ್ರತಿ ಸಾರಿ ಕೇಳಿ ಬರುತ್ತಿದೆ” ಎಂದು ಪೋಷಕರು ದೂರಿದ್ದಾರೆ.

ಪೋಷಕರ ಆರೋಪದ ಕುರಿತು ಶಾಲೆ ಆಡಳಿತ ಮಂಡಳಿಯ ಪ್ರತಿಕ್ರಿಯೆ ಪಡೆಯಲು ನಾನುಗೌರಿ.ಕಾಂ ಪ್ರಯತ್ನಿಸಿತು. “ನಾವು ಯಾವುದೇ ಮಕ್ಕಳ ಆನ್‌ಲೈನ್ ತರಗತಿಗಳನ್ನು ನಿಲ್ಲಿಸಿಲ್ಲ. ಕೆಲವು ತಾಂತ್ರಿಕ ಕಾರಣಗಳಿಂದ ತರಗತಿಗಳು ಆರಂಭವಾಗಿಲ್ಲ. ಶೀ‍ಘ್ರದಲ್ಲಿ ಸಮಸ್ಯೆ ಬಗೆಹರಿಸಲಾಗುತ್ತದೆ. ಬೋಧನಾ ಶುಲ್ಕದಲ್ಲಿ ಹೆಚ್ಚಳ ಮಾಡಿರುವುದು ಶಾಲಾ ಆಡಳಿತದ ನಿರ್ಧಾರ.” ಎಂದು ಹೇಳಿದ್ದಾರೆ.

ಇದನ್ನೂ ಓದಿ: 30% ಶುಲ್ಕ ಕಡಿತ: ಸರ್ಕಾರದ ವಿರುದ್ಧ ಬೀದಿಗಿಳಿದ ಖಾಸಗಿ ಶಾಲಾ ಶಿಕ್ಷಕರು, ಸಿಬ್ಬಂದಿಗಳು

ಒಂದು ಕಡೆ ಮಕ್ಕಳಿಂದ ಹೆಚ್ಚು ಶುಲ್ಕ ವಸೂಲಿ ಮಾಡುವ ಶಾಲೆ ತನ್ನ ಸಿಬ್ಬಂದಿಗೆ ಮಾತ್ರ ವೇತನ ಕಡಿತಗೊಳಿಸಿ ಶೇ. 50% ಹಣ ನೀಡುತ್ತಿದ್ದಾರೆ ಎಂದು ಹೆಸರು ಹೇಳಲಿಚ್ಚಿಸದ ಸಿಬ್ಬಂದಿಯೊಬ್ಬರು ಎಬೆನೆಜರ್ ಶಾಲೆ ಆಡಳಿತದಿಂದ ವಿರುದ್ಧ ಆರೋಪಿಸಿದ್ದಾರೆ. ಇದನ್ನೂ ಸಹ ಶಾಲೆಯ ಆಡಳಿತಾಧಿಕಾರಿ ನಿರಾಕರಿಸಿದ್ದಾರೆ.

ತದನಂತರ “ಶಾಲೆಯ ಆಡಳಿತ  ತಮ್ಮನ್ನು ಕರೆಸಿ ಮಾತನಾಡಿದ್ದು, ಸಮಸ್ಯೆ ಬಗೆಹರಿಸಿರುವುದಾಗಿ ಭರವಸೆ ನೀಡಿದ್ದು, ಎರಡು ದಿನದಲ್ಲಿ ಆನ್‌ಲೈನ್ ಶಿಕ್ಷಣ ಆರಂಭಿಸಲಾಗುವುದು. ಶುಲ್ಕವನ್ನು ಸಾಧ್ಯವಾದಾಗ ಕಟ್ಟಿ ಎಂದಿದ್ದಾರೆ” ಎಂದು ಪೋಷಕರು ತಿಳಿಸಿದ್ದಾರೆ.

ಬೋಧನಾ ಶುಲ್ಕದ ಹೆಸರಿನಲ್ಲಿ ಖಾಸಗಿ ಶಾಲೆಗಳು ಲಕ್ಷಾಂತರ ಹಣವನ್ನು ವಸೂಲಿ ಮಾಡುತ್ತಿರುವುದು ಇನ್ನೂ ಅನೇಕ ಕಡೆ ಬೆಳಕಿಗೆ ಬಂದಿದೆ. ಮಕ್ಕಳ ಆನ್‌ಲೈನ್‌ ತರಗತಿಗಳನ್ನು ನಿಲ್ಲಿಸುವ ಭಯದಿಂದ ಪೋಷಕರು ದೂರು ನೀಡಲು ಈ ಸಂಬಂಧ ಮುಂದೆ ಬರುತ್ತಿಲ್ಲ. ಸರ್ಕಾರ ಮತ್ತು ಶಿಕ್ಷಣ ಸಚಿವರು ಈ ಸಂಬಂಧ ಗಮನಹರಿಸಿ ಖಾಸಗಿ ಶಾಲೆಗಳ ಸುಲಿಗೆಯಿಂದ ಪೋಷಕರನ್ನು ರಕ್ಷಿಸಬೇಕಿದೆ. ಹಾಗೇ ಖಾಸಗಿ ಶಾಲೆಗಳು ಸಿಬ್ಬಂದಿಗಳಿಗೆ ಸರಿಯಾಗಿ ವೇತನ ನೀಡುವಂತೆ ಎಚ್ಚರಿಕೆ ನೀಡಬೇಕಿದೆ.

-ರಾಜೇಶ್‌ ಹೆಬ್ಬಾರ್‌


ಇದನ್ನೂ ಓದಿ: ಶಾಲಾ ಶುಲ್ಕ ವಿಚಾರ: ಸರ್ಕಾರ ನಿಗದಿಪಡಿಸುವ ಶುಲ್ಕಕ್ಕೆ ಬದ್ಧ ಎಂದ ಆಡಳಿತ ಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...