Homeಅಂಕಣಗಳುನಮ್ಮ ತೋಟದ ಸಾಲಿಗೆ ನೀವೂ ಬನ್ನಿನಮ್ಮ ತೋಟದ ಸಾಲಿಗೆ ನೀವೂ ಬನ್ನಿ -6: ತೆಂಗಿನ ಗರಿಗಳ ಲೀಲೆ

ನಮ್ಮ ತೋಟದ ಸಾಲಿಗೆ ನೀವೂ ಬನ್ನಿ -6: ತೆಂಗಿನ ಗರಿಗಳ ಲೀಲೆ

ತೆಂಗಿನ ಹಸಿ ಗರಿಗಳಿಂದ ಹರಟೆ ಚಾಪೆಯನ್ನೂ, ಸುಳಿಗರಿಗಳಿಂದ ಮಡಕೆ, ವಾಡೆ, ಮೂಡೆಗಳ ತಳಕ್ಕೆ ಬಳಸುತ್ತಿದ್ದ ಸಿಂಬೆಗಳನ್ನು ಸುಂದರವಾಗಿ ಹೆಣೆಯುತ್ತಿದ್ದ ಆನೆಗಾಲು ಸಿದ್ದಪ್ಪ ಒಂದು ಸುಂದರ ನೆನಪು.

- Advertisement -
- Advertisement -

ತೆಂಗಿನ ಮರವನ್ನು ಇನ್ನಿತರ ಮರಗಳಿಂದ ಬೇರ್ಪಡಿಸಿ ನೋಡುವಂತೆ ಮಾಡಿರುವುದೇ ಈ ಮರಕ್ಕಿರುವ ರೆಕ್ಕೆಯಂತಾ ಗರಿಗಳು. ಜನರು ಇದನ್ನು ಸರಿಯಾಗಿಯೇ ಗುರ್ತಿಸಿ ತೆಂಗಿನ ಎಲೆ ಎನ್ನದೆ ತೆಂಗಿನ ಗರಿ ಎಂದು ಕರೆದಿರುವುದು. ಗಾಳಿ ಬೀಸುವಾಗ ನೋಡಿದರೆ ಇವು ಎಲ್ಲಿಗೋ ಹಾರಿ ಹೋಗಲು ಸಿದ್ಧವಾಗುತ್ತಿವೆಯೇನೋ ಅನಿಸುತ್ತದೆ. ರೆಂಬೆ ಕೊಂಬೆ ಇಲ್ಲದ ಈ ಮರಕ್ಕೆ ಈ ಗರಿಗಳೇ ರೆಂಬೆಗಳು ಕೊಂಬೆಗಳು.

ಈಗ್ಗೆ ನಲವತ್ತು ಐವತ್ತು ವರ್ಷಗಳ ಹಿಂದೆ ತೆಂಗು ವಿರಳವಾಗಿದ್ದಾಗಲೂ ಅವುಗಳ ಗರಿಗಳನ್ನು ಮದುವೆ ಚಪ್ಪರಗಳ ರಚನೆಗೆ ಬಳಸುತ್ತಿದ್ದರು. ಅಡಕೆ ಮರ ಅಡಕೆ ದಬ್ಬೆಗಳನ್ನು ಬಳಸಿ ರೂಪಿಸುತ್ತಿದ್ದ ಚಪ್ಪರಕ್ಕೆ ಈ ಕಲಾಕೃತಿಯಂತಾ ಗರಿಗಳನ್ನು ಹೊದಿಸುತ್ತಿದ್ದರು. ಈ ಬಗೆಯ ಚಪ್ಪರವನ್ನು ನೋಡಲೆಂದೆ ಜನ ನಮ್ಮೂರಿನ ಮದುವೆಗಳಿಗೆ ಬರುತ್ತಿದ್ದರು. ನಮ್ಮೂರಿನ ಸಿದ್ದಕ್ಕನವರ ರಾಮಣ್ಣನವರು ಈ ಚಪ್ಪರ ಹಾಕಿಸುವ ಇಂಜಿನಿಯರ್‌ ಆಗಿದ್ದರು. ಒಂದಿಂಚೂ ಆಚೀಚೆ ಆಗದಂತೆ ಗಣಿತ ಶಾಸ್ತ್ರ ಪಂಡಿತರಂತೆ ಮುಂದೆ ನಿಂತು ಚಪ್ಪರ ಹಾಕಿಸುತ್ತಿದ್ದರು. ಇವರಿಗೆ ಸಾತ್‌ ನೀಡುತ್ತಿದ್ದ ನಮ್ಮ ಪೀಳಿಗೆಯ ಜನ ಅವರನ್ನು ಬಹುವಾಗಿ ನೆನಪಿಸಿಕೊಳ್ಳುತ್ತಾರೆ.

ತೆಂಗಿನ ಹಸಿ ಗರಿಗಳಿಂದ ಹರಟೆ ಚಾಪೆಯನ್ನೂ, ಸುಳಿಗರಿಗಳಿಂದ ಮಡಕೆ, ವಾಡೆ, ಮೂಡೆಗಳ ತಳಕ್ಕೆ ಬಳಸುತ್ತಿದ್ದ ಸಿಂಬೆಗಳನ್ನು ಸುಂದರವಾಗಿ ಹೆಣೆಯುತ್ತಿದ್ದ ಆನೆಗಾಲು ಸಿದ್ದಪ್ಪ ಒಂದು ಸುಂದರ ನೆನಪು. ನಮ್ಮ ಅಟ್ಟದ ಮೇಲೆ ಹುಡುಕಿದರೆ ಸಿದ್ದಪ್ಪ ಹೆಣೆದ ಸಿಂಬೆಗಳು ಅನಾಥ ಸ್ಥಿತಿಯಲ್ಲಿ ಸಿಕ್ಕಾವು. ಇಂಥಾ ಸಿದ್ದಪ್ಪ ಹೆಣೆದುಕೊಡುತ್ತಿದ್ದ ಹರಟೆ ಚಾಪೆಗಳ ಮೇಲೆ ಕೂರಿಸಿಕೊಂಡು ರಾತ್ರಿ ಆಕಾಶದ ಅಡಿಯಲ್ಲಿ ನಮ್ಮಜ್ಜಿ ಹೇಳುತ್ತಿದ್ದ ಕತೆಗಳ ಮಾಯಕ್ಕೆ ಏನು ಸಮ.

ಆಯ್ಕೆ ಮಾಡಿದ ಒಣ ತೆಂಗಿನ ಗರಿಗಳಿಂದ ಚಾಪೆ ಹೆಣೆದು ಕೃಷಿ ಉತ್ಪನ್ನಗಳನ್ನು ಒಣಗಲು ಹಾಕಲು ಬಳಸುತ್ತಿದ್ದರು. ಟಾರ್ಪಾಲು, ಪ್ಲಾಸ್ಟಿಕ್ ಶೀಟ್‌ ಗಳ ಬಳಕೆ ಇರಲೇ ಇಲ್ಲ. ಇಂಥ ಚಾಪೆಗಳನ್ನು ಹೆಣೆಯುವುದರಲ್ಲಿ ನಮ್ಮವ್ವನ್ನನ್ನು ಮೀರಿಸುವವರು ಇರಲಿಲ್ಲವೆಂದು ಆಗ ನಮ್ಮವ್ವನ ಸಹಚರರು ಹೇಳುತ್ತಿದ್ದುದನ್ನು ಕೇಳಿಸಿಕೊಂಡಿದ್ದೆ. ನಮ್ಮವ್ವನ ಈ ಚಾಪೆಗಳ ಹಣಿ ಅಗಲವಾಗಿಯೂ ದೃಢವಾಗಿಯೂ ಇರುತ್ತಿದ್ದವು. ಮಾತು ಮಾತಾಡುತ್ತಲೇ ಚಾಪೆಯ ಹಣಿಯ ಸಿಂಬೆಗಳು ಸುತ್ತಿಕೊಂಡು ದೊಡ್ಡವಾಗುತ್ತಿದ್ದವು. ಈ ಹಣಿಗಳನ್ನು ಸೇರಿಸಿ ಒಟ್ಟಿಗೆ ಚಾಪೆ ಹೊಲಿಯುವುದು ಒಂದು ಕಲೆ. ಈಚಲು ಗರಿಗಳಿಂದ ಚಾಪೆ ಹೆಣಿಯುತ್ತಿದ್ದರು, ನಿಜ ಹೇಳಬೇಕೆಂದರೆ ಇವು ತೆಂಗಿನ ಚಾಪೆಗಳಿಗಿಂತಲೂ ಬಾಳಿಕೆ ಬರುತ್ತಿದ್ದವು. ಇವೆಲ್ಲ ಈಗ ಗ್ರಾಮೀಣ ಚರಿತ್ರೆಯ ಹಳಹಳಿಕೆಗಳಾಗಿ ಮಾತ್ರ ಉಳಿದಿವೆ.

ಈಗ ಈ ಗರಿಗಳನ್ನು ನಾವೀಗ ಮಲ್ಚಿಂಗ್‌ ಮುಚ್ಚಿಕೆಯಾಗಿ ಬಳಸುತ್ತಿದ್ದೇವೆ. ಸ್ವಾಗೆ ಗರಿಗಳಲ್ಲಿರುವ ಕಡ್ಡಿಗೆ ಈಗ ಉತ್ತಮ ಬೆಲೆ ಬಂದಿದೆ, ಉತ್ತರ ಭಾರತದ ಕಸ ಗುಡಿಸುತ್ತಿರುವುದು ಈ ನಮ್ಮ ಭಾಗದ ಸ್ವಾಗೆ ಕಡ್ಡಿ ಪೊರಕೆಗಳೇ. ಆಮ್‌ ಆದ್ಮಿ ಪಕ್ಷದ ಸಿಂಬಲ್ ಮಟ್ಟಕೆ ಅದು ಬೆಳೆದು ನಿಂತಿರುವುದು ಯಾರಿಗೆ ತಾನೆ ಗೊತ್ತಿಲ್ಲ.

ಈ ತೆಂಗಿನ ಗರಿಗಳನ್ನು ಸುಟ್ಟು ಭಸ್ಮ ಮಾಡುತ್ತಿದ್ದ ರೈತರೀಗ ಅದರ ಲಾಭ ಕಂಡುಕೊಂಡಿದ್ದಾರೆ. ನೆಲದ ಪಸೆ ಆರದಂತೆ ಅವುಗಳನ್ನು ಹರಡಿ ಸದ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇನ್ನು ಕೆಲವರು ಈ ಗರಿಗಳನ್ನು ಸಣ್ಣಗೆ ಸವರಿ ಹರಡುತ್ತಿದ್ದಾರೆ, ಏನಾದರೂ ಆಗಲಿ ಸುಡದಿದ್ದರೆ ಸಾಕು. ಸುಟ್ಟರೆ ಸುಡುಗಾಡು ಎಂಬುದನ್ನು ಮತ್ತೆ ಮತ್ತೆ ನೆನೆದರೆ ಅದೇ ಪುಣ್ಯ.

  • ಕೃಷ್ಣಮೂರ್ತಿ ಬಿಳಿಗೆರೆ

(ಹುಳಿಯಾರು ಬಿಎಂಎಸ್‌ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು. ತಮ್ಮ ತೋಟದಲ್ಲಿ ಸಹಜ ಕೃಷಿ ಮಾಡುತ್ತಲೇ ಕೃಷಿ ಶೋಧನೆಯಲ್ಲಿ ತೊಡಗಿಸಿಕೊಂಡಿರುವ ಇವರು ಸಾವಿರ ಕಣ್ಣಿನ ನವಿಲು, ಕಿಂಚಿತ್ತು ಪ್ರೀತಿಯ ಬದುಕು, ದಾಸಯ್ಯ ಇದು ಕನಸೇನಯ್ಯ, ಧರೆ ಮೇಲೆ ಉರಿಪಾದ, ಮಳೆ ನೀರ ಕುಡಿ, ಅನ್ನ ದೇವರ ಮುಂದೆ, ಮರದಡಿಯ ಮನುಷ್ಯ ಸೇರಿದಂತೆ ಹಲವು ಪುಸ್ತಕಗಳನ್ನು ರಚಿಸಿದ್ದಾರೆ.)


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-4: ಸಹಜ ಕೃಷಿ ಅಲ್ಲ, ಉಳುಮೆ ಇಲ್ಲದ ತೋಟ ನಮ್ಮದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...