Homeಅಂಕಣಗಳುನಮ್ಮ ತೋಟದ ಸಾಲಿಗೆ ನೀವೂ ಬನ್ನಿನಮ್ಮ ತೋಟದ ಸಾಲಿಗೆ ನೀವೂ ಬನ್ನಿ -6: ತೆಂಗಿನ ಗರಿಗಳ ಲೀಲೆ

ನಮ್ಮ ತೋಟದ ಸಾಲಿಗೆ ನೀವೂ ಬನ್ನಿ -6: ತೆಂಗಿನ ಗರಿಗಳ ಲೀಲೆ

ತೆಂಗಿನ ಹಸಿ ಗರಿಗಳಿಂದ ಹರಟೆ ಚಾಪೆಯನ್ನೂ, ಸುಳಿಗರಿಗಳಿಂದ ಮಡಕೆ, ವಾಡೆ, ಮೂಡೆಗಳ ತಳಕ್ಕೆ ಬಳಸುತ್ತಿದ್ದ ಸಿಂಬೆಗಳನ್ನು ಸುಂದರವಾಗಿ ಹೆಣೆಯುತ್ತಿದ್ದ ಆನೆಗಾಲು ಸಿದ್ದಪ್ಪ ಒಂದು ಸುಂದರ ನೆನಪು.

- Advertisement -
- Advertisement -

ತೆಂಗಿನ ಮರವನ್ನು ಇನ್ನಿತರ ಮರಗಳಿಂದ ಬೇರ್ಪಡಿಸಿ ನೋಡುವಂತೆ ಮಾಡಿರುವುದೇ ಈ ಮರಕ್ಕಿರುವ ರೆಕ್ಕೆಯಂತಾ ಗರಿಗಳು. ಜನರು ಇದನ್ನು ಸರಿಯಾಗಿಯೇ ಗುರ್ತಿಸಿ ತೆಂಗಿನ ಎಲೆ ಎನ್ನದೆ ತೆಂಗಿನ ಗರಿ ಎಂದು ಕರೆದಿರುವುದು. ಗಾಳಿ ಬೀಸುವಾಗ ನೋಡಿದರೆ ಇವು ಎಲ್ಲಿಗೋ ಹಾರಿ ಹೋಗಲು ಸಿದ್ಧವಾಗುತ್ತಿವೆಯೇನೋ ಅನಿಸುತ್ತದೆ. ರೆಂಬೆ ಕೊಂಬೆ ಇಲ್ಲದ ಈ ಮರಕ್ಕೆ ಈ ಗರಿಗಳೇ ರೆಂಬೆಗಳು ಕೊಂಬೆಗಳು.

ಈಗ್ಗೆ ನಲವತ್ತು ಐವತ್ತು ವರ್ಷಗಳ ಹಿಂದೆ ತೆಂಗು ವಿರಳವಾಗಿದ್ದಾಗಲೂ ಅವುಗಳ ಗರಿಗಳನ್ನು ಮದುವೆ ಚಪ್ಪರಗಳ ರಚನೆಗೆ ಬಳಸುತ್ತಿದ್ದರು. ಅಡಕೆ ಮರ ಅಡಕೆ ದಬ್ಬೆಗಳನ್ನು ಬಳಸಿ ರೂಪಿಸುತ್ತಿದ್ದ ಚಪ್ಪರಕ್ಕೆ ಈ ಕಲಾಕೃತಿಯಂತಾ ಗರಿಗಳನ್ನು ಹೊದಿಸುತ್ತಿದ್ದರು. ಈ ಬಗೆಯ ಚಪ್ಪರವನ್ನು ನೋಡಲೆಂದೆ ಜನ ನಮ್ಮೂರಿನ ಮದುವೆಗಳಿಗೆ ಬರುತ್ತಿದ್ದರು. ನಮ್ಮೂರಿನ ಸಿದ್ದಕ್ಕನವರ ರಾಮಣ್ಣನವರು ಈ ಚಪ್ಪರ ಹಾಕಿಸುವ ಇಂಜಿನಿಯರ್‌ ಆಗಿದ್ದರು. ಒಂದಿಂಚೂ ಆಚೀಚೆ ಆಗದಂತೆ ಗಣಿತ ಶಾಸ್ತ್ರ ಪಂಡಿತರಂತೆ ಮುಂದೆ ನಿಂತು ಚಪ್ಪರ ಹಾಕಿಸುತ್ತಿದ್ದರು. ಇವರಿಗೆ ಸಾತ್‌ ನೀಡುತ್ತಿದ್ದ ನಮ್ಮ ಪೀಳಿಗೆಯ ಜನ ಅವರನ್ನು ಬಹುವಾಗಿ ನೆನಪಿಸಿಕೊಳ್ಳುತ್ತಾರೆ.

ತೆಂಗಿನ ಹಸಿ ಗರಿಗಳಿಂದ ಹರಟೆ ಚಾಪೆಯನ್ನೂ, ಸುಳಿಗರಿಗಳಿಂದ ಮಡಕೆ, ವಾಡೆ, ಮೂಡೆಗಳ ತಳಕ್ಕೆ ಬಳಸುತ್ತಿದ್ದ ಸಿಂಬೆಗಳನ್ನು ಸುಂದರವಾಗಿ ಹೆಣೆಯುತ್ತಿದ್ದ ಆನೆಗಾಲು ಸಿದ್ದಪ್ಪ ಒಂದು ಸುಂದರ ನೆನಪು. ನಮ್ಮ ಅಟ್ಟದ ಮೇಲೆ ಹುಡುಕಿದರೆ ಸಿದ್ದಪ್ಪ ಹೆಣೆದ ಸಿಂಬೆಗಳು ಅನಾಥ ಸ್ಥಿತಿಯಲ್ಲಿ ಸಿಕ್ಕಾವು. ಇಂಥಾ ಸಿದ್ದಪ್ಪ ಹೆಣೆದುಕೊಡುತ್ತಿದ್ದ ಹರಟೆ ಚಾಪೆಗಳ ಮೇಲೆ ಕೂರಿಸಿಕೊಂಡು ರಾತ್ರಿ ಆಕಾಶದ ಅಡಿಯಲ್ಲಿ ನಮ್ಮಜ್ಜಿ ಹೇಳುತ್ತಿದ್ದ ಕತೆಗಳ ಮಾಯಕ್ಕೆ ಏನು ಸಮ.

ಆಯ್ಕೆ ಮಾಡಿದ ಒಣ ತೆಂಗಿನ ಗರಿಗಳಿಂದ ಚಾಪೆ ಹೆಣೆದು ಕೃಷಿ ಉತ್ಪನ್ನಗಳನ್ನು ಒಣಗಲು ಹಾಕಲು ಬಳಸುತ್ತಿದ್ದರು. ಟಾರ್ಪಾಲು, ಪ್ಲಾಸ್ಟಿಕ್ ಶೀಟ್‌ ಗಳ ಬಳಕೆ ಇರಲೇ ಇಲ್ಲ. ಇಂಥ ಚಾಪೆಗಳನ್ನು ಹೆಣೆಯುವುದರಲ್ಲಿ ನಮ್ಮವ್ವನ್ನನ್ನು ಮೀರಿಸುವವರು ಇರಲಿಲ್ಲವೆಂದು ಆಗ ನಮ್ಮವ್ವನ ಸಹಚರರು ಹೇಳುತ್ತಿದ್ದುದನ್ನು ಕೇಳಿಸಿಕೊಂಡಿದ್ದೆ. ನಮ್ಮವ್ವನ ಈ ಚಾಪೆಗಳ ಹಣಿ ಅಗಲವಾಗಿಯೂ ದೃಢವಾಗಿಯೂ ಇರುತ್ತಿದ್ದವು. ಮಾತು ಮಾತಾಡುತ್ತಲೇ ಚಾಪೆಯ ಹಣಿಯ ಸಿಂಬೆಗಳು ಸುತ್ತಿಕೊಂಡು ದೊಡ್ಡವಾಗುತ್ತಿದ್ದವು. ಈ ಹಣಿಗಳನ್ನು ಸೇರಿಸಿ ಒಟ್ಟಿಗೆ ಚಾಪೆ ಹೊಲಿಯುವುದು ಒಂದು ಕಲೆ. ಈಚಲು ಗರಿಗಳಿಂದ ಚಾಪೆ ಹೆಣಿಯುತ್ತಿದ್ದರು, ನಿಜ ಹೇಳಬೇಕೆಂದರೆ ಇವು ತೆಂಗಿನ ಚಾಪೆಗಳಿಗಿಂತಲೂ ಬಾಳಿಕೆ ಬರುತ್ತಿದ್ದವು. ಇವೆಲ್ಲ ಈಗ ಗ್ರಾಮೀಣ ಚರಿತ್ರೆಯ ಹಳಹಳಿಕೆಗಳಾಗಿ ಮಾತ್ರ ಉಳಿದಿವೆ.

ಈಗ ಈ ಗರಿಗಳನ್ನು ನಾವೀಗ ಮಲ್ಚಿಂಗ್‌ ಮುಚ್ಚಿಕೆಯಾಗಿ ಬಳಸುತ್ತಿದ್ದೇವೆ. ಸ್ವಾಗೆ ಗರಿಗಳಲ್ಲಿರುವ ಕಡ್ಡಿಗೆ ಈಗ ಉತ್ತಮ ಬೆಲೆ ಬಂದಿದೆ, ಉತ್ತರ ಭಾರತದ ಕಸ ಗುಡಿಸುತ್ತಿರುವುದು ಈ ನಮ್ಮ ಭಾಗದ ಸ್ವಾಗೆ ಕಡ್ಡಿ ಪೊರಕೆಗಳೇ. ಆಮ್‌ ಆದ್ಮಿ ಪಕ್ಷದ ಸಿಂಬಲ್ ಮಟ್ಟಕೆ ಅದು ಬೆಳೆದು ನಿಂತಿರುವುದು ಯಾರಿಗೆ ತಾನೆ ಗೊತ್ತಿಲ್ಲ.

ಈ ತೆಂಗಿನ ಗರಿಗಳನ್ನು ಸುಟ್ಟು ಭಸ್ಮ ಮಾಡುತ್ತಿದ್ದ ರೈತರೀಗ ಅದರ ಲಾಭ ಕಂಡುಕೊಂಡಿದ್ದಾರೆ. ನೆಲದ ಪಸೆ ಆರದಂತೆ ಅವುಗಳನ್ನು ಹರಡಿ ಸದ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇನ್ನು ಕೆಲವರು ಈ ಗರಿಗಳನ್ನು ಸಣ್ಣಗೆ ಸವರಿ ಹರಡುತ್ತಿದ್ದಾರೆ, ಏನಾದರೂ ಆಗಲಿ ಸುಡದಿದ್ದರೆ ಸಾಕು. ಸುಟ್ಟರೆ ಸುಡುಗಾಡು ಎಂಬುದನ್ನು ಮತ್ತೆ ಮತ್ತೆ ನೆನೆದರೆ ಅದೇ ಪುಣ್ಯ.

  • ಕೃಷ್ಣಮೂರ್ತಿ ಬಿಳಿಗೆರೆ

(ಹುಳಿಯಾರು ಬಿಎಂಎಸ್‌ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು. ತಮ್ಮ ತೋಟದಲ್ಲಿ ಸಹಜ ಕೃಷಿ ಮಾಡುತ್ತಲೇ ಕೃಷಿ ಶೋಧನೆಯಲ್ಲಿ ತೊಡಗಿಸಿಕೊಂಡಿರುವ ಇವರು ಸಾವಿರ ಕಣ್ಣಿನ ನವಿಲು, ಕಿಂಚಿತ್ತು ಪ್ರೀತಿಯ ಬದುಕು, ದಾಸಯ್ಯ ಇದು ಕನಸೇನಯ್ಯ, ಧರೆ ಮೇಲೆ ಉರಿಪಾದ, ಮಳೆ ನೀರ ಕುಡಿ, ಅನ್ನ ದೇವರ ಮುಂದೆ, ಮರದಡಿಯ ಮನುಷ್ಯ ಸೇರಿದಂತೆ ಹಲವು ಪುಸ್ತಕಗಳನ್ನು ರಚಿಸಿದ್ದಾರೆ.)


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-4: ಸಹಜ ಕೃಷಿ ಅಲ್ಲ, ಉಳುಮೆ ಇಲ್ಲದ ತೋಟ ನಮ್ಮದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...