Homeಮುಖಪುಟಮೇಕೆದಾಟು ಯೋಜನೆ: ಸರ್ವ ಪಕ್ಷ ಸಭೆ ನಡೆಸಿದ ತಮಿಳುನಾಡು ಸಿಎಂ ಸ್ಟಾಲಿನ್

ಮೇಕೆದಾಟು ಯೋಜನೆ: ಸರ್ವ ಪಕ್ಷ ಸಭೆ ನಡೆಸಿದ ತಮಿಳುನಾಡು ಸಿಎಂ ಸ್ಟಾಲಿನ್

’ಯಡಿಯೂರಪ್ಪ ಅವರು ತಮಿಳುನಾಡು ಸಿಎಂಗೆ ಪತ್ರ ಬರೆದಿದ್ದೇ ತಪ್ಪು. ನಮಗೆ ಯೋಜನೆ ಮಾಡಲು ಯಾರ ಒಪ್ಪಿಗೆ ಬೇಕಿಲ್ಲ’- ಡಿ.ಕೆ.ಶಿವಕುಮಾರ್‌

- Advertisement -
- Advertisement -

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು, ರಾಜಧಾನಿಗೆ ಕುಡಿಯುವ ನೀರು ಸರಬರಾಜು ಮಾಡುವ ಸಲುವಾಗಿ ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆಯನ್ನು ಆರಂಭಿಸಿತ್ತು. ಯೋಜನೆಯ ಬಗ್ಗೆ ತಮಿಳುನಾಡಿನಿಂದ ವಿರೋಧ ದಶಕಗಳಿಂದಲೇ ಇದೆ. ಭಾನುವಾರ ಇದೇ ವಿಚಾರಕ್ಕೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ನೇತೃತ್ವದಲ್ಲಿ ಸರ್ವ ಪಕ್ಷಗಳ ಸಭೆ ನಡೆದಿದೆ.

ಮೇಕೆದಾಟು ಯೋಜನೆಯಿಂದ ತಮಿಳುನಾಡಿನ ನೀರಿನ ಪಾಲಿಗೆ ಕುತ್ತಾಗಲಿದೆ. ಅಲ್ಲಿನ ರೈತರಿಗೆ ಅನ್ಯಾಯವಾಗಲಿದೆ ಎಂಬುದು ತಮಿಳುನಾಡಿನ ಆರೋಪ. ಸರ್ವಪಕ್ಷಗಳ ಸಭೆಯಲ್ಲಿ ಮೇಕೆದಾಟು ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಲಾಗಿದ್ದು, ಸಭೆಯಲ್ಲಿ 3 ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ಡಿಎಂಕೆ, ಎಐಎಡಿಎಂಕೆ, ಕಾಂಗ್ರೆಸ್, ಬಿಜೆಪಿ, ಎಡಪಕ್ಷಗಳು ಸೇರಿ ಒಟ್ಟು 13 ಪಕ್ಷಗಳಿಂದ ವಿರೋಧ ವ್ಯಕ್ತವಾಗಿದ್ದು, ಕಾನೂನು ಹೋರಾಟದ ಬಗ್ಗೆಯೂ ಸಮಾಲೋಚನೆ ನಡೆದಿದೆ. ಅಲ್ಲದೆ, ಸುಪ್ರೀಂಕೋರ್ಟ್ ಮೆಟ್ಟಿಲೇರಲು ತಮಿಳುನಾಡು ಸರ್ಕಾರದ ಚಿಂತನೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ತಮಿಳುನಾಡಿನಲ್ಲಿ ಪ್ರತ್ಯೇಕತೆಯ ಕಿಡಿ ಹಚ್ಚಿದ ಬಿಜೆಪಿ: ಮುನ್ನೆಲೆಗೆ ಬಂದ ಪ್ರತ್ಯೇಕ ರಾಜ್ಯದ ಕೂಗು

1.ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸುವುದು. 2. ಸರ್ವ ಪಕ್ಷ ಸದಸ್ಯರು ಕೇಂದ್ರ ಜಲ ಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿಯಾಗಿ ಅವರ ಮೂಲಕ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವುದು. 3. ಇದೇ ಸಂಧರ್ಭದಲ್ಲಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸುವುದು ಎಂದು ತಮೂರು ನಿರ್ಣಯಗಳನನ್ನು ತೆಗೆದುಕೊಳ್ಳಲಾಗಿದೆ.

ಇನ್ನು ಜುಲೈ 7ರಂದು ತಮಿಳುನಾಡಿನ ಜಲ ಸಂಪನ್ಮೂಲ ಸಚಿವ ದೊರೈ ಮುರುಗನ್ ಅವರು ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಮೇಕೆದಾಟು ಯೋಜನೆಯನ್ನು ತಡೆಯುವಂತೆ ಮನವಿ ಸಲ್ಲಿಸಿದ್ದರು.

“ಯೋಜನೆ ಬಗೆಗಿನ ವ್ಯಾಜ್ಯ ಸುಪ್ರೀಂ ಕೋರ್ಟಿನಲ್ಲಿದ್ದು, ತೀರ್ಪು ಬರುವವರೆಗೆ ಯೋಜನೆಗೆ ಅನುಮತಿ ನೀಡಬೇಡಿ. ಯೋಜನೆ ಆರಂಭವಾದರೆ ಎರಡೂ ರಾಜ್ಯಗಳ ಗಡಿಯಲ್ಲಿ ಮತ್ತೆ ಸಮಸ್ಯೆ ಉಲ್ಬಣವಾಗುತ್ತದೆ. ತಮಿಳುನಾಡಿನ ರೈತರಿಗೆ ಅನ್ಯಾಯವಾಗಲಿದೆ” ಎಂದು ದೂರು ನೀಡಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ’ನೂರು ವರ್ಷ ಆದರೂ, ಅವರದ್ದು ಇದೇ ಅಜೆಂಡಾ ಇದೆ. ಡಬಲ್ ಇಂಜಿನ್ ಸರ್ಕಾರ ಇದೆಲ್ಲ ಕ್ಲಿಯರ್ ಮಾಡುತ್ತೇವೆ ಎಂದಿದ್ದರು. ಆದರೆ, ಈಗ ಏನು ಮಾಡ್ತಿದ್ದಾರೆ..? ತಮಿಳುನಾಡಿಗೆ ಒಪ್ಪಂದದ ಪ್ರಕಾರ ನೀರು ಹರಿಯುತ್ತಿದೆ. ಇದರಲ್ಲಿ ನಮ್ಮದು ಯಾವ ತಕರಾರಿಲ್ಲ. ಯೋಜನೆಯಿಂದ ಯಾವ ಸಮಸ್ಯೆಯಿಲ್ಲ, ಕಂದಾಯ ಭೂಮಿ‌ ಹೆಚ್ಚು ಹೋಗಲ್ಲ. ಅರಣ್ಯದ ಸ್ವಲ್ಪ ಭಾಗ ಯೋಜನೆಗೆ ಹೋಗುತ್ತೆ. ಈ ಯೋಜನೆ ಕನಕಪುರಕ್ಕಾಗಿ ನಾವು ತಂದಿಲ್ಲ’ ಎಂದಿದ್ದಾರೆ.

’ತಮಿಳುನಾಡು ಬೇಕಾದರೆ ಒತ್ತಡ ಹಾಕಲಿ. ನಾಳೆಯೇ ಯೋಜನೆಗೆ ಅಡಿಗಲ್ಲು ಹಾಕಲಿ, ಕೆಲಸ ಆರಂಭಿಸಲಿ, ಭೂಮಿ ಪೂಜೆ ಮಾಡಿಬಿಡಲಿ. ಯಡಿಯೂರಪ್ಪ ತಮಿಳುನಾಡು ಸಿಎಂಗೆ ಪತ್ರ ಬರೆದಿದ್ದೇ ತಪ್ಪು. ನಮಗೆ ಯೋಜನೆ ಮಾಡಲು ಯಾರ ಒಪ್ಪಿಗೆ ಬೇಕಿಲ್ಲ’ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಕಿಡಿ ಕಾರಿದ್ದಾರೆ.


ಇದನ್ನೂ ಓದಿ: ಮೇಕೆದಾಟು ಯೋಜನೆ: ವಾರಾಂತ್ಯದಲ್ಲಿ ಪರಿಣಿತರ ಜೊತೆ ಸಿಎಂ ಸಭೆ- ಬಸವರಾಜ ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...