Homeನಿಜವೋ ಸುಳ್ಳೋಮೋದಿಯವರು ಮೋಡದ ಮೇಲೆ ಪಾಕಿಸ್ತಾನಕ್ಕೆ ಹೋಗಿ ಬಂದ ಅಪೂರ್ವ ಕಥಾನಕ

ಮೋದಿಯವರು ಮೋಡದ ಮೇಲೆ ಪಾಕಿಸ್ತಾನಕ್ಕೆ ಹೋಗಿ ಬಂದ ಅಪೂರ್ವ ಕಥಾನಕ

ಪಾಕಿಸ್ತಾನದ ಮೇಲೆ ನಡೆಸಿದ ‘ವಾಯುದಾಳಿ’ ಮೋದಿ ಹೇಳಿಕೆಗೆ ಸೃಜನಾತ್ಮಕ ಪ್ರತಿಕ್ರಿಯೆಗಳು

- Advertisement -
- Advertisement -

ನಿಮಗೆ ಗೊತ್ತಿರಬೇಕಾದ ಎಲ್ಲಾ ಮಾಹಿತಿಗಳು

ನ್ಯೂಸ್ ನೇಷನ್ ಎಂಬ ಟಿವಿ ಚಾನೆಲ್‍ಗೆ ಪ್ರಧಾನಿ ನರೇಂದ್ರ ಮೋದಿಯವರು ನಿನ್ನೆ ನೀಡಿದ ಸಂದರ್ಶನವನ್ನು ಇನ್ನಾವುದಾದರೂ ಸಂದರ್ಶನದ ಜೊತೆ ಹೋಲಿಸಬೇಕೆಂದರೆ, ಅದನ್ನು 2018ರ ಜನವರಿ 22ರಂದು ಜೀ ಟಿವಿಗೆ ನೀಡಿದ ಸಂದರ್ಶನಕ್ಕೆ ಮಾತ್ರ ಹೋಲಿಸಬಹುದು. ಏಕೆಂದರೆ, ಅದರಲ್ಲಿ ಅವರ ಪ್ರಸಿದ್ಧ ‘ಪಕೋಡಾ ಹೇಳಿಕೆ’ ಹೊರಬಂದಿತ್ತು. ಇದೀಗ ನ್ಯೂಸ್ ನೇಷನ್‍ನಲ್ಲಿ ಅವರು ಪಾಕಿಸ್ತಾನದ ಮೇಲೆ ನಡೆಸಿದ ‘ವಾಯುದಾಳಿ’ಯ ಕುರಿತು ಮಾತನಾಡಿದ್ದಾರೆ. ಈ ಸುದ್ದಿ ಪ್ರಸಾರವಾದ ನಂತರ ಇಲ್ಲಿಯವರೆಗೂ ದೇಶಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಚರ್ಚೆಗೆ ಎಣೆಯೇ ಇಲ್ಲ. ದೇಶದ ಬೇರೆ ಬೇರೆ ಭಾಗಗಳ ಹಲವು ಜನರ ಸೃಜನಶೀಲತೆಯ ಅಭಿವ್ಯಕ್ತಿಯಾಗಿಯೂ ಅದನ್ನು ನೋಡಬಹುದಾಗಿದೆ. ಅದರ ಸಂಪೂರ್ಣ ವಿವರವನ್ನು ಇಲ್ಲಿ ಕೊಡಲಾಗಿದೆ.

ಮೊದಲಿಗೆ, ಮೋದಿಯವರು ಹೇಳಿದ್ದೇನು ನೋಡೋಣ.

ಇದೇ ಸಂದರ್ಭದಲ್ಲಿ ಮೋದಿಯವರ ಬಯೋಗ್ಯಾಸ್‍ಗೆ ಸಂಬಂಧಿಸಿದ ಇನ್ನೊಂದು ಹೇಳಿಕೆಯನ್ನೂ ಹಲವರು ನೆನಪಿಸಿಕೊಂಡಿದ್ದಾರೆ.

ಉದಾಹರಣೆಗೆ ವಿಜಯ ಕರ್ನಾಟಕದ ಅಂಕಣಕಾರರಾಗಿದ್ದ ಚಿಂತಕ ಕೆ.ಪಿ.ಸುರೇಶ್‍ರವರು ಹಳೆಯ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

https://m.facebook.com/story.php?story_fbid=1474653089338603&id=100003817783883

ಇದಕ್ಕೆ ಸಂಬಂಧಿಸಿದ ಹಳೆಯ ಕಾರ್ಟೂನ್ ಸಹಾ ಇಲ್ಲಿದೆ ನೋಡಿ

ಉದ್ಯಮಿ ರಾಜಾರಾಂ ತಲ್ಲೂರು ಅವರು ಮೋದಿಯವರ ಎಂಟೈಲ್ ಪೊಲಿಟಿಕಲ್ ಸೈನ್ಸ್ ಡಿಗ್ರಿಯನ್ನು ತಾವು ಪಡೆದುಕೊಂಡಿರದೇ ಇರುವುದಕ್ಕೆ ‘ಬೇಸರ ವ್ಯಕ್ತಪಡಿಸಿ’ ಈ ಪೋಸ್ಟ್ ಹಾಕಿದ್ದಾರೆ.

ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್‍ನ ಮುಖಂಡ ಓಮರ್ ಅಬ್ದುಲ್ಲಾರು ಟ್ವೀಟಿಸಿದ್ದು ಹೀಗೆ.

ವಾಯುಪಡೆಯಲ್ಲಿದ್ದ ಅಧಿಕಾರಿ (ಈಗ ಮೋದಿಯವರ ಟೀಕಾಕಾರ) ರಾಜೀವ್ ತ್ಯಾಗಿಯವರಿಗೆ ತುಂಬಾ ಸಿಟ್ಟು ಬಂದಿದ್ದರೂ, ವೈಜ್ಞಾನಿಕವಾಗಿ ಮೋಡಗಳಿಗೂ ವಾಯುದಾಳಿಗೂ ಇರುವ ಸಂಬಂಧದ ಬಗ್ಗೆ ವಿವರಿಸಿದ್ದಾರೆ. ಅವರ ಪ್ರಕಾರ ಬೇರೆ ಬೇರೆ ಬಗೆಯ ಮೋಡಗಳಿರುತ್ತವೆ ಮತ್ತು ಆ ಮೋಡಗಳಿದ್ದಾಗ ಒಂದೋ ಅವು ಏನೂ ಸಮಸ್ಯೆ ಮಾಡುವುದಿಲ್ಲ, ಇಲ್ಲವೇ ಶತ್ರುಪಡೆಯ ರಾಡಾರ್‍ನ ಅಗತ್ಯವೇ ಇಲ್ಲದೇ ಅವೇ ಧ್ವಂಸಗೊಳ್ಳುತ್ತವೆ. ಇವೆಲ್ಲಾ ವಾಯುಪಡೆಗಳಿಗೆ ಗೊತ್ತಿರುವ ಸಂಗತಿ. ಆದರೆ, ಇದಕ್ಕೆ ವಿರುದ್ಧವಾದ ಸಂಗತಿಯನ್ನು ಒಬ್ಬ ಅನಕ್ಷರಸ್ಥನಿಂದ ಕೇಳಬೇಕಾದ ದುರ್ಗತಿ ವಾಯುಪಡೆಗೆ ಬಂದಿತಲ್ಲಾ ಎಂದು ಕಿಡಿಕಾರಿದ್ದಾರೆ.

https://m.facebook.com/story.php?story_fbid=10161734759650176&id=817450175

ವೈದ್ಯರಾದ ಡಾ.ಅಶೋಕ್ ಕೆ.ಆರ್ ಅವರು ಮೊದಲು ಇದು ಯಾರೋ ಸುಳ್ಳೇ ಸೃಷ್ಟಿ ಮಾಡಿರುವುದು ಎಂದುಕೊಂಡರಂತೆ. ನಂತರ ನಿಜ ಎಂದು ಗೊತ್ತಾಯಿತು ಎಂದಿದ್ದಾರೆ. ಅವರಿಗೆ ಪ್ರತಿಕ್ರಿಯಿಸಿರುವ ಡಾ.ಸುಶಿ ಕಾಡನಕುಪ್ಪೆ ಸಹಾ ಅದೇ ಅಭಿಪ್ರಾಯವನ್ನು ಕಮೆಂಟಿಸಿದ್ದಾರೆ.

ಹಾಗೆಯೇ ಇನ್ನೊಬ್ಬ ನೆಟ್ಟಿಗರು ಹೀಗೆ ಹೇಳುತ್ತಾರೆ.

‘ಇದರಲ್ಲಿ ತಮಾಶೆ ಏನೂ ಇಲ್ಲ. ನಮ್ಮ ಮೋದಿಜಿಗೆ ಮತ್ತೆ ಅಧಿಕಾರ ಸಿಕ್ಕರೆ ಸೂರ್ಯನಿಗೂ ಮನುಷ್ಯರನ್ನು ಕಳಿಸುತ್ತಾರೆ. ಮೊದಲ ಬಾರಿ ಸೂರ್ಯಯಾನಕ್ಕೆ ತನ್ನ ಶಿಷ್ಯಂದಿರಾದ ಸಂಬಿತ್ ಪಾತ್ರ ಮತ್ತು ತೇಜಸ್ವಿ ಸೂರ್ಯಗಳನ್ನು ಕಳಿಸಬಹುದು. ಪಬ್ಲಿಸಿಟಿ ಜಾಸ್ತಿ ಸಿಗೋದರಿಂದ ತಾನೇ ಹೋದರೂ ಹೋಗಬಹುದು.’

ಎಲ್ಲಕ್ಕಿಂತ ಸತೀಶ್ ಆಚಾರ್ಯ ಅವರ ಕಾರ್ಟೂನು ಮೋದಿಯವರನ್ನು ವ್ಯಂಗ್ಯ ಮಾಡುವುದರಲ್ಲಿ ಸಾಕಷ್ಟು ಮುಂದೆ ಹೋಗಿದೆ. ಇಸ್ರೋದ ವಿಜ್ಞಾನಿಗಳಿಗೆ ಸೂರ್ಯಯಾನಕ್ಕೆ ತಯಾರಿ ಮಾಡಲು ಸೂಚಿಸುವ ಮೋದಿ, ನಾವು ಸೂರ್ಯನಲ್ಲಿಗೆ ರಾತ್ರಿ ಹೋದರಾಯಿತು ಎನ್ನುತ್ತಿದ್ದಾರೆ.

ಇನ್ನು ಚಂದ್ರಯಾನವನ್ನೂ ನೆಟ್ಟಿಗರು ಬಿಟ್ಟಿಲ್ಲ. ಚಂದ್ರನ ಮೇಲೆ ಲ್ಯಾಂಡ್ ಆಗಲು ಕಡಿಮೆ ಜಾಗವಿದೆ ಎಂದು ಹೇಳುವ ವಿಜ್ಞಾನಿಗಳಿಗೆ, ‘ಹುಣ್ಣಿಮೆಯ ದಿನ ಹೋದರೆ ಚಂದ್ರ ದೊಡ್ಡದಾಗಿರುತ್ತಾನೆ’ ಎಂಬ ಸಲಹೆ ನೀಡುತ್ತಾರಂತೆ.

ಇದಲ್ಲದೇ ಮತ್ತೊಂದು ಪೋಸ್ಟ್ ಹೀಗೆ ಹೇಳುತ್ತದೆ.

‘ಮೋದಿಯವರು ವಿಮಾನಗಳಿಗೆ ರಿವರ್ಸ್ ಗೇರ್‍ನಲ್ಲಿ ಹೋಗಲು ಸೂಚಿಸಿದ್ದರಂತೆ. ಅದರಿಂದ ಪಾಕಿಸ್ತಾನಕ್ಕೆ ವಿಮಾನಗಳು ಬರುತ್ತಿವೆಯಾ, ಹೋಗುತ್ತಿವೆಯಾ ಎಂದು ಗೊತ್ತಾಗಲಿಲ್ಲ’

ಇನ್ನು ಮೋಡವೆಂದರೆ, ರಾಡಾರ್ ಎಂದರೆ ಮೋದಿಯವರು ಏನು ತಿಳಿದುಕೊಂಡಿರಬಹುದು ಎಂಬ ಕುರಿತೂ ಹಲವು ಕಾರ್ಟೂನ್‍ಗಳು ಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...