Homeಮುಖಪುಟಉತ್ತರ ಪ್ರದೇಶ ಜನಸಂಖ್ಯಾ ಮಸೂದೆ: ‘ಒನ್-ಚೈಲ್ಡ್‌‌’ ನೀತಿಯನ್ನು ತೆಗೆದು ಹಾಕುವಂತೆ ವಿಹೆಚ್‌‌ಪಿ ಒತ್ತಾಯ

ಉತ್ತರ ಪ್ರದೇಶ ಜನಸಂಖ್ಯಾ ಮಸೂದೆ: ‘ಒನ್-ಚೈಲ್ಡ್‌‌’ ನೀತಿಯನ್ನು ತೆಗೆದು ಹಾಕುವಂತೆ ವಿಹೆಚ್‌‌ಪಿ ಒತ್ತಾಯ

- Advertisement -
- Advertisement -

ತನ್ನ ಕರಡು ಜನಸಂಖ್ಯಾ ನಿಯಂತ್ರಣ ಮಸೂದೆಯಿಂದ ‘ಒನ್-ಚೈಲ್ಡ್‌‌’ ನೀತಿಯನ್ನು ತೆಗೆದುಹಾಕುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಸೂಚಿಸಿದೆ. ಇದು ವಿವಿಧ ಸಮುದಾಯಗಳ ನಡುವಿನ ಜನಸಂಖ್ಯೆಯ ಅಸಮತೋಲನ ಮತ್ತು ಕುಗ್ಗುವಿಕೆಯ ಹೆಚ್ಚಳಕ್ಕೆ ಕಾರಣವಾಗಬಹುದು ಎಂದು ಅದು ಹೇಳಿದೆ .

ಉತ್ತರ ಪ್ರದೇಶದ ಜನಸಂಖ್ಯೆ (ನಿಯಂತ್ರಣ, ಸ್ಥಿರೀಕರಣ ಮತ್ತು ಕಲ್ಯಾಣ) ಮಸೂದೆ-2021 ಯಲ್ಲಿನ ಪೋಷಕರ ಬದಲು ಮಗುವಿಗೆ ನೀಡಲಾಗುವ ಬಹುಮಾನ ಅಥವಾ ಶಿಕ್ಷೆಯ ಅಸಂಗತತೆಯನ್ನು ತೆಗೆದುಹಾಕುವಂತೆ ವಿಹೆಚ್‌ಪಿ ಆದಿತ್ಯನಾಥ್ ಸರ್ಕಾರವನ್ನು ಕೇಳಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಜನಸಂಖ್ಯಾ ನಿಯಂತ್ರಣ ಮಸೂದೆ ಕರಡು ಪ್ರಕಟ

“ಮಸೂದೆಯ ಮುನ್ನುಡಿಯಲ್ಲಿ ಇದು ಜನಸಂಖ್ಯೆಯನ್ನು ಸ್ಥಿರಗೊಳಿಸಲು ಮತ್ತು ಎರಡು ಮಕ್ಕಳ ನೀತಿಯನ್ನು ಉತ್ತೇಜಿಸುವ ಮಸೂದೆ ಎಂದು ಹೇಳುತ್ತದೆ. ವಿಶ್ವ ಹಿಂದೂ ಪರಿಷತ್ ಎರಡೂ ವಿಷಯಗಳನ್ನು ಒಪ್ಪುತ್ತದೆ” ಎಂದು ಸಂಘಟನೆಯ ಕಾರ್ಯಕಾರಿ ಅಧ್ಯಕ್ಷ ಅಲೋಕ್ ಕುಮಾರ್ ಸೋಮವಾರ ಉತ್ತರ ಪ್ರದೇಶ ರಾಜ್ಯ ಕಾನೂನು ಆಯೋಗಕ್ಕೆ (ಯುಪಿಎಸ್‌ಸಿಎಲ್) ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಆದರೂ, ಮಸೂದೆಯ ಸೆಕ್ಷನ್ 5, 6 (2) ಮತ್ತು 7 ರಲ್ಲಿ ಹೇಳುವ, ಸಾರ್ವಜನಿಕ ನೌಕರರು ಮತ್ತು ಇತರರನ್ನು ತಮ್ಮ ಕುಟುಂಬದಲ್ಲಿ ಒಂದೇ ಮಗುವನ್ನು ಹೊಂದಲು ಪ್ರೇರೇಪಿಸುವ ವಿಷಯವನ್ನು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.

ಒಂದು ಮಗುವಿನ ನೀತಿಯ ಅನಪೇಕ್ಷಿತ ಸಾಮಾಜಿಕ, ಆರ್ಥಿಕ ಪರಿಣಾಮಗಳು ಮತ್ತು ಹೆತ್ತವರ ಬದಲು ಮಗುವಿಗೆ ಬಹುಮಾನ ಅಥವಾ ಶಿಕ್ಷೆ ನೀಡುವ ಅಸಂಗತತೆಯನ್ನು ತೆಗೆದುಹಾಕಲು ನಾವು ಸೂಚಿಸುತ್ತೇವೆ ಎಂದು ಕುಮಾರ್ ಹೇಳಿದ್ದಾರೆ. ಆದರೆ ಜನಸಂಖ್ಯೆಯ ಸ್ಥಿರತೆಯನ್ನು ಸಾಧಿಸಲು ಎರಡು ಮಕ್ಕಳ ನೀತಿಯನ್ನು ನಾವು ಒಪ್ಪುತ್ತೇವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಜನಸಂಖ್ಯಾ ನೀತಿಯಲ್ಲಿ ಮತ್ತೆ ಬದಲಾವಣೆ ತಂದ ಚೀನಾ ಕಮ್ಯುನಿಸ್ಟ್‌‌ ಪಕ್ಷ!

ಉತ್ತರ ಪ್ರದೇಶದ ಒಟ್ಟು ಫಲವತ್ತತೆ ದರವನ್ನು (ಟಿಎಫ್‌ಆರ್) ನಿರ್ದಿಷ್ಟ ಸಮಯದೊಳಗೆ 1.7 ಕ್ಕೆ ಇಳಿಸಲು ಪ್ರಯತ್ನಿಸುವ ಮಸೂದೆಯ ಉದ್ದೇಶವನ್ನು ಮರುಪರಿಶೀಲಿಸುವಂತೆ ವಿಹೆಚ್‌‌ಪಿ ಯುಪಿಎಸ್‌ಸಿಎಲ್‌ಗೆ ಸೂಚಿಸಿದೆ.

ಜನಸಂಖ್ಯೆ (ನಿಯಂತ್ರಣ, ಸ್ಥಿರೀಕರಣ ಮತ್ತು ಕಲ್ಯಾಣ) ಮಸೂದೆ-2021 ರ ಕರಡನ್ನು ಇತ್ತೀಚೆಗೆ ಉತ್ತರ ಪ್ರದೇಶ ಸರ್ಕಾರ ಪ್ರಕಟಿಸಿದ್ದು, ಸಾರ್ವಜನಿಕರಿಂದ ಸಲಹೆಗಳನ್ನು ನೀಡುವಂತೆ ಆಹ್ವಾನ ನೀಡಿತ್ತು.

ಪ್ರಸ್ತುತ ಒಂದು ಮಗುವಿನ ನೀತಿಯಿಂದ, ದುಡಿಯುವ ವಯಸ್ಸಿನ ಜನಸಂಖ್ಯೆ ಮತ್ತು ಅವಲಂಬಿತ ಜನಸಂಖ್ಯೆಯ ನಡುವೆ ಅನುಪಾತದಲ್ಲಿ ಏರುಪೇರಾಗುತ್ತದೆ. ಇದು ಇಬ್ಬರು ಪೋಷಕರು ಮತ್ತು ನಾಲ್ಕು ಅಜ್ಜ ಅಜ್ಜಿಯರನ್ನು ನೋಡಿಕೊಳ್ಳಲು ಕೇವಲ ಒಬ್ಬ ದುಡಿಯುವ ವ್ಯಕ್ತಿಯಿರುವಂತಹ ಪರಿಸ್ಥಿತಿಗೆ ತಂದೊಡ್ಡುತ್ತದೆ ಎಂದು ವಿಹೆಚ್‌ಪಿ ಹೇಳಿದೆ.

1980 ರಲ್ಲಿ ಒನ್-ಚೈಲ್ಡ್ ನೀತಿಯನ್ನು ಅಳವಡಿಸಿಕೊಂಡಿದ್ದ ಚೀನಾ ಕೂಡಾ ಇಂತಹ ಪರಿಸ್ಥಿತಿಯನ್ನು ಎದುರಿಸಿದ್ದರಿಂದ ಮೂರು ದಶಕಗಳ ನಂತರ ಈ ನೀತಿಯನ್ನು ಹಿಂತೆಗೆದುಕೊಂಡಿತು ವಿಎಚ್‌ಪಿ ನಾಯಕ ಹೇಳಿದ್ದಾರೆ.

ಇದನ್ನೂ ಓದಿ: ‘ಕಷ್ಟಗಳಿದ್ದರೆ ಸುಖದ ಬೆಲೆ ತಿಳಿಯುತ್ತದೆ’ – ಪೆಟ್ರೋಲ್ ದರ ಏರಿಕೆಗೆ ಬಿಜೆಪಿ ಸಚಿವನ ಸಮರ್ಥನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...