Homeಮುಖಪುಟಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ -ಸಿಡಿಲಿನ ಹೊಡೆತಕ್ಕೆ 75 ಸಾವು

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ -ಸಿಡಿಲಿನ ಹೊಡೆತಕ್ಕೆ 75 ಸಾವು

ಹಿಮಾಚಲ ಪ್ರದೇಶದಲ್ಲಿ, ಕಾಂಗ್ರಾ ಮತ್ತು ಡಾಲ್‌ಹೌಸಿ ಸೇರಿದಂತೆ ಹಲವಾರು ಜಿಲ್ಲೆಗಳು ಜಲಾವೃತವಾಗಿವೆ. ಧರ್ಮಶಾಲಾದಲ್ಲಿ ಮೋಡ ಸ್ಫೋಟಕ್ಕೆ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ.

- Advertisement -
- Advertisement -

ಕರ್ನಟಕ ಸೇರಿದಂತೆ ಭಾರತದ ಹಲವು ರಾಜ್ಯಗಳಲ್ಲಿ ಜೂನ್ 11 ರಿಂದ ಬಾರಿ ಮಳೆಯಾಗುತ್ತಿದ್ದು ಗುಡುಗು ಸಿಡಿಲಿನ ಆರ್ಭಟಕ್ಕೆ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ ಭಾನುವಾರ ರಾತ್ರಿ ಬಾರಿ ಮಿಂಚು ಮತ್ತು ಸಿಡಿಲಿನ ಆಘಾತಕ್ಕೆ ಜನರು ಮೃತಪಟ್ಟಿರುವ ಘಟನೆ ವರದಿಯಾಗಿತ್ತು. ಮಂಗಳವಾರದ ಹೊತ್ತಿಗೆ ಸಿಡಿಲಿನ ಹೊಡೆತಕ್ಕೆ ಮೃತಪಟ್ಟವರ ಸಂಖ್ಯೆ ಇನ್ನೂ ಹೆಚ್ಚಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಬಿಡುವು ನೀಡಿದ್ದ ಮಳೆ ಮಂಗಳವಾರ ಮುಂಜಾನೆಯಿಂದಲೇ ಮತ್ತೆ ಚುರುಕುಗೊಂಡಿದೆ. ನಗರದ ಹನುಮಂತ ನಗರ, ಬಸವನಗುಡಿ, ಕೆ.ಆರ್‌. ಮಾರ್ಕೆಟ್ ಸೇರಿದಂತೆ ಇಂದು ಮುಂಜಾನೆಯಿಂದಲೇ ಮಳೆ ಹೊಡೆಯುತ್ತಿದ್ದು ಕೆಲಸ ಕಾರ್ಯಗಳಿಗೆ ಹೊರಟಿದ್ದ ಜನರ ಓಡಾಟಕ್ಕೆ ಅಡಚಣೆಯಾಗಿರುವುದು ಕಂಡು ಬಂತು.

ಭಾರತದ ಬಹುತೇಕ ಕಡೆಗಳಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಮವಾರ ರಾತ್ರಿಯಿಂದ ಬಾರಿ ಮಳೆಯಾಗುತ್ತಿದೆ. ಹದಿನೈದು ದಿನ ತಡವಾಗಿ ಆಗಮಿಸದ ಮುಂಗಾರು ದೆಹಲಿ ಮತ್ತು ಸುತ್ತ ಮುತ್ತಲಿನ ಗುರುಗ್ರಾಮ, ಫರಿದಾಬಾದ್ ಪ್ರದೇಶಗಳಲ್ಲಿ ಅವಾಂತರಗಳನ್ನು ಸೃಷ್ಟಿಸಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ ಪರಿಣಾಮ ಅನೇಕರು ಮನೆ ಬಿಟ್ಟು ಎತ್ತರದ ಪ್ರದೇಶಗಳಲ್ಲಿ ರಕ್ಷಣೆ ಪಡೆದಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: ಸೆಲ್ಫಿ ತೆಗೆದುಕೊಳ್ಳುವಾಗ ಸಿಡಿಲು ಬಡಿದು 11 ಮಂದಿ ಸಾವು

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟದಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಉತ್ತರಾಖಂಡ, ಜಮ್ಮು, ಪಂಜಾಬ್, ರಾಜಸ್ಥಾನದಂತಹ ಅನೇಕ ರಾಜ್ಯಗಳಲ್ಲಿ ನೈಸರ್ಗಿಕ ವಿಕೋಪಕ್ಕೆ ಇದುವರೆಗೆ 75 ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಬಾರಿ ಮಳೆ ಮತ್ತು ಗುಡುಗಿನ ಆರ್ಭಟಕ್ಕೆ ಉತ್ತರ ಭಾರತದ ಅನೇಕ ನಗರಗಳಲ್ಲಿ ಜನಜೀವನ ಅಸ್ಥವ್ಯಸ್ಥವಾಗಿದ್ದು ಮನೆಗಳು ನೀರಿನಲ್ಲಿ ಮುಳುಗಡೆಯಾಗಿವೆ . ಹಿಮಾಚಲ ಮತ್ತು ಉತ್ತರಾಖಂಡದ ಹಲವಾರು ಜಿಲ್ಲೆಗಳಲ್ಲಿ ವರುಣನ ಆರ್ಭಟಕ್ಕೆ ಪ್ರವಾಹದಂತಹ ಪರಿಸ್ಥಿತಿ ಉಂಟಾಗಿದೆ. ಉತ್ತರಪ್ರದೇಶದಲ್ಲಿ ಮಿಂಚಿನಿಂದ ಸುಮಾರು 40 ಜನರು ಸಾವನ್ನಪ್ಪಿದ್ದಾರೆ, ಮಧ್ಯಪ್ರದೇಶದಲ್ಲಿ ಸುಮಾರು 20 ಜನರು ಪ್ರಾಣ ಕಳೆದುಕೊಂಡಿದ್ದಾರೆ.

ಹಿಮಾಚಲದ ಕಾಂಗ್ರಾ ಮತ್ತು ಡಾಲ್‌ಹೌಸಿ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಸೋಮವಾರದಿಂದ ನಿರಂತರ ಮಳೆ ಸುರಿಯುತ್ತಿದೆ.  ಧರ್ಮಶಾಲಾ ನಗರವು ಸಂಪೂರ್ಣ ಜಲಾವೃತವಾಗಿದೆ. ಬೃಹತ್ ಮೋಡಗಳು ಸ್ಫೋಟಗೊಂಡು ಇದ್ದಕ್ಕಿದ್ದಂತೆ ಪ್ರವಾಹೋಪಾದಿಯಲ್ಲಿ ಮಳೆ ಸುರಿಯಲು ಆರಂಭಿಸಿದ ಕಾರಣ ಅನೇಕ ವಾಹನಗಳು ಕೊಚ್ಚಿಕೊಂಡು ಹೋಗಿವೆ. ಪ್ರವಾಹದಲ್ಲಿ ಇಬ್ಬರು ವ್ಯಕ್ತಿಗಳು ನಾಪತ್ತೆಯಾಗಿರುವುದು  ವರದಿಯಾಗಿದೆ.   

ಇದನ್ನೂ ಓದಿ: ರಾಜ್ಯದ ಹಲವೆಡೆ ಭಾರಿ ಮಳೆ: ನೆಲಕ್ಕುರುಳಿದ ವಿದ್ಯುತ್‌ ಕಂಬಗಳು-ನದಿ ನೀರಿನ ಮಟ್ಟದಲ್ಲಿ ಹೆಚ್ಚಳ

ನೈಸರ್ಗಿಕ ವಿಪತ್ತನ್ನು ಅರಿತುಕೊಂಡು ಕೇಂದ್ರ ಗೃಹ ಸಚಿವಾಲಯವು ಹಿಮಾಚಲ ಪ್ರದೇಶ  ರಾಜ್ಯ ಸರ್ಕಾರಕ್ಕೆ ಎಲ್ಲಾ ಸಹಾಯವನ್ನು ನೀಡಲು ಮುಂದಾಗಿರುವುದಾಗಿ ಹೇಳಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಎನ್‌ಡಿಆರ್‌ಎಫ್‌ ತಂಡಗಳನ್ನು ಪ್ರವಾಹ ಪೀಡಿತ ಪ್ರದೇಶಗಳಿಗೆ ಕಳುಹಿಸಿಕೊಟ್ಟಿರುವುದಾಗಿ ಕೇಂದ್ರ  ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

 ರಾಜಸ್ಥಾನದ ಕೆಲವು ಭಾಗಗಳಲ್ಲಿಮಿಂಚಿನಿಂದ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ಪ್ರಧಾನ ಮಂತ್ರಿಗಳ  ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ.ಗಳನ್ನು ನೀಡಲಾಗುವುದು ಎಂದು ಪ್ರಧಾನಿ ಮೋದಿ    ಘೋಷಿಸಿದ್ದಾರೆ. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ಪ್ರಧಾನಿ ಕಚೇರಿ ಮಾಹಿತಿ ನೀಡಿದೆ. 

   

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...