Homeಅಂತರಾಷ್ಟ್ರೀಯಮಧ್ಯಪ್ರದೇಶದಲ್ಲಿ ಕೊರೊನಾ ಸಾವುಗಳಲ್ಲಿ ಏರಿಕೆ: ದೈನಂದಿನ ಪ್ರಕರಣಗಳು ಇಳಿಕೆ

ಮಧ್ಯಪ್ರದೇಶದಲ್ಲಿ ಕೊರೊನಾ ಸಾವುಗಳಲ್ಲಿ ಏರಿಕೆ: ದೈನಂದಿನ ಪ್ರಕರಣಗಳು ಇಳಿಕೆ

- Advertisement -
- Advertisement -

ಕೊರೊನಾ ಮೂರನೇ ಅಲೆ ಎಚ್ಚರಿಕೆಗಳ ಮಧ್ಯೆಯೇ, ಮಧ್ಯಪ್ರದೇಶದಲ್ಲಿ ಒಂದೇ ದಿನ 1,478 ಸಾವುಗಳನ್ನು ದಾಖಲಿಸಿದೆ. ಇದರಿಂದ ದೇಶದಲ್ಲಿ 24 ಗಂಟೆಯಲ್ಲಿ ಉಂಟಾದ ಕೋವಿಡ್ ಸಾವುಗಳಲ್ಲಿ ಭಾರಿ ಏರಿಕೆ ಕಂಡಿದ್ದು, ಸಾವಿನ ಸಂಖ್ಯೆ 2,020 ಕ್ಕೆ ಏರಿಕೆಯಾಗಿದೆ.

3ನೇ ಅಲೆ ಸನಿಹದಲ್ಲಿದೆ. ಎರಡನೇ ಅಲೆಯನ್ನು ಗೆದ್ದಿದ್ದೇವೆ ಎಂಬ ಸಂಭ್ರಮದಲ್ಲಿ ಎಚ್ಚರಿಕೆ ಮರೆಯಬೇಡಿ ಎಂದು ಭಾರತೀಯ ವೈದ್ಯಕೀಯ ಸಂಘ ಸೋಮವಾರವಷ್ಟೇ ಎಚ್ಚರಿಕೆ ನೀಡಿತ್ತು. ಸಾವಿನ ಸಂಖ್ಯೆಯಲ್ಲಿ ಏರಿಕೆ ಕಂಡಿದ್ದರೂ ಸಮಾಧಾನದ ಸಂಗತಿಯೆಂದರೆ, ಕಳೆದ ನಾಲ್ಕು ತಿಂಗಳಲ್ಲಿ ಅತ್ಯಂತ ಕಡಿಮೆ ದೈನಂದಿನ ಪ್ರಕರಣಗಳನ್ನು ವರದಿ ಮಾಡಿದೆ.

ಮಹಾರಾಷ್ಟ್ರ ಮತ್ತು ಬಿಹಾರದ ನಂತರ ಕೋವಿಡ್ ಸಾವಿನ ಸಂಖ್ಯೆ ಹೆಚ್ಚಿರುವ ಮೂರನೇ ರಾಜ್ಯ ಮಧ್ಯಪ್ರದೇಶವಾಗಿದೆ. ಸುಮಾರು ಮೂರು ವಾರಗಳಿಂದ ಭಾರತವು ಪ್ರತಿದಿನ 2,000 ಕ್ಕಿಂತ ಕಡಿಮೆ ಕೊರೊನಾ ಸಾವುಗಳನ್ನು ದಾಖಲಿಸುತ್ತಿದೆ.

ಇದನ್ನೂ ಓದಿ: ಕೊರೊನಾ 3ನೇ ಅಲೆ: ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳಿಗೆ ಐಎಂಎ ಎಚ್ಚರಿಕೆ

ಕಳೆದ 24 ಗಂಟೆಗಳಲ್ಲಿ ಭಾರತವು 31,443 ಹೊಸ ಕೊರೊನಾ ಪ್ರಕರಣಗಳನ್ನು ದಾಖಲಿಸಿದೆ. ಇದು 118 ದಿನಗಳಲ್ಲಿ ಅತ್ಯಂತ ಕಡಿಮೆ ದೈನಂದಿನ ಪ್ರಕರಣಗಳಾಗಿವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ದೇಶದ ಸಕ್ರಿಯ ಪ್ರಕರಣಗಳು ಪ್ರಸ್ತುತ 4,31,315 ದಷ್ಟಿದೆ, ಇದು 109 ದಿನಗಳಲ್ಲಿ ಅತ್ಯಂತ ಕಡಿಮೆ ಸಕ್ರಿಯ ಪ್ರಕರಣಗಳಾಗಿವೆ. ಈವರೆಗೆ ಸುಮಾರು 4.10 ಲಕ್ಷ ಜನರು ಸಾವನ್ನಪ್ಪಿದ್ದಾರೆ.

“ವಿಶ್ವದಲ್ಲಿ ಈಗಾಗಲೇ ಕೊರೊನಾ 3ನೇ ಅಲೆ ಬಂದಿರುವ ಪುರಾವೆಗಳು ಮತ್ತು ಸಾಂಕ್ರಾಮಿಕ ರೋಗಗಳ ಇತಿಹಾಸ ಗಮನಿಸಿದರೆ, ಮೂರನೇ ಅಲೆಯನ್ನು ಎದುರಿಸುವುದು ಅನಿವಾರ್ಯವಾಗಿದೆ. ಇಷ್ಟೇ ಅಲ್ಲದೆ ಮೂರನೇ ಅಲೆ ಸನಿಹದಲ್ಲಿದೆ. ಆತಂಕದ ಸಂಗತಿಯೆಂದರೆ, ದೇಶದ ಅನೇಕ ಭಾಗಗಳಲ್ಲಿ ಸರ್ಕಾರ ಮತ್ತು ಸಾರ್ವಜನಿಕರು ಎರಡನೇ ಅಲೆಯನ್ನು ಗೆದ್ದ ಸಂತಸದಲ್ಲಿದ್ದಾರೆ. ಸಾಮೂಹಿಕವಾಗಿ ಕೊರೊನಾ ನಿಯಮಾವಳಿಗಳನ್ನು ನಿರ್ಲಕ್ಷಿಸಿ ಸಾರ್ವಜನಿಕ ಕೆಲಸಗಳಲ್ಲಿ, ಸಭೆಗಳಲ್ಲಿ ತೊಡಗಿಸಿಕೊಂಡಿದ್ದಾರೆ” ಎಂದು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಭಾನುವಾರ ಎಚ್ಚರಿಕೆ ನೀಡಿತ್ತು.

ದೇಶದಲ್ಲಿ ಇದುವರೆಗೆ 39.46 ಕೋಟಿ ಜನರಿಗೆ ಲಸಿಕೆ ನೀಡಲಾಗಿದ್ದು, ಈ ವರ್ಷದ ಅಂತ್ಯದ ವೇಳೆಗೆ 108 ಕೋಟಿ ವಯಸ್ಕರಿಗೆ ಲಸಿಕೆ ಹಾಕುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.


ಇದನ್ನೂ ಓದಿ: ಕೊರೊನಾ ಸಮಯದಲ್ಲಿ ಮಹಿಳೆಯರ ಸ್ಥಿತಿ; ಬಾಣಲೆಯಿಂದ ಬೆಂಕಿಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...