Homeಮುಖಪುಟವಿದ್ಯುತ್ ದೀಪ ಅಳವಡಿಸಲು ಕೋರಿದ ಗ್ರಾಮಸ್ಥ: ಬಿಜೆಪಿಗೆ ಮತ ನೀಡಿದ್ದೆ ಎಂದು ಪ್ರಮಾಣ ಮಾಡಲು ಹೇಳಿದ...

ವಿದ್ಯುತ್ ದೀಪ ಅಳವಡಿಸಲು ಕೋರಿದ ಗ್ರಾಮಸ್ಥ: ಬಿಜೆಪಿಗೆ ಮತ ನೀಡಿದ್ದೆ ಎಂದು ಪ್ರಮಾಣ ಮಾಡಲು ಹೇಳಿದ ಶಾಸಕ!

- Advertisement -
- Advertisement -

ತಮ್ಮ ಮನೆಯಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸುವಂತೆ ಕೇಳಿದ ಹಳ್ಳಿಯ ಗ್ರಾಮಸ್ಥರೊಬ್ಬರಿಗೆ, ಬಿಜೆಪಿ ಪಕ್ಷಕ್ಕೆ ಮತ ನೀಡಿದ್ದಾಗಿ ಪ್ರಮಾಣ ಮಾಡುವಂತೆ ಬಿಜೆಪಿ ಶಾಸಕರೊಬ್ಬರು ಕೇಳಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಉತ್ತರ ಪ್ರದೇಶದ ಶಹಜಹಾನ್‌ಪುರದ ಕತ್ರಾ ಅಸೆಂಬ್ಲಿ ಕ್ಷೇತ್ರದ ಬಿಜೆಪಿ ಶಾಸಕ ವೀರ್ ವಿಕ್ರಮ್ ಸಿಂಗ್ (ಪ್ರಿನ್ಸ್), ಹಳ್ಳಿಯೊಂದರಲ್ಲಿ ಮರ ನೆಡುವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ತಾವು ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಪಟ್ಟಿ ಮಾಡುತ್ತಿದ್ದ ಸಮಯದಲ್ಲಿ ಅಲ್ಲಿದ್ದ ಗ್ರಾಮಸ್ಥರೊಬ್ಬರು ತಮ್ಮ ಮನೆಯಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸುವಂತೆ ಕೋರಿದ್ದಾರೆ. ಆಗ, ಶಾಸಕ ವೀರ್ ವಿಕ್ರಮ್ ಸಿಂಗ್, ನೀವು ಬಿಜೆಪಿ ಪಕ್ಷಕ್ಕೆ ಮತ ಹಾಕಿದ್ದೆ ಎಂದು ಪ್ರಮಾಣ ಮಾಡಿ ಎಂದು ಕೇಳಿದ್ದಾರೆ. ಸೋಮವಾರ ಈ ವಿಡಿಯೊ ವೈರಲ್ ಆಗಿದೆ.

“ಗಂಗಾ ನದಿಯ ಕಡೆಗೆ ಮುಖ ಮಾಡಿ ಅಥವಾ ನಿಮ್ಮ ಮಗನ ಮೂಲಕ ಪ್ರಮಾಣ ಮಾಡಿ, ನೀವು ಬಿಜೆಪಿಗೆ ಮತ ಹಾಕಿದ್ದೀರಿ ಎಂದು ಹೇಳಿ. ಆಗ, ನಾನು ನಿಮ್ಮ ಮನೆಯಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸುತ್ತೇನೆ. ನೀವು ಏನನ್ನಾದರೂ ಕೊಟ್ಟ ವ್ಯಕ್ತಿಯಿಂದ ಮಾತ್ರ ಏನನ್ನಾದರೂ ನಿರೀಕ್ಷಿಸಲು ಸಾಧ್ಯ” ಎಂದಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಭಾರಿ ಮಳೆ, ಸಿಡಿಲಿಗೆ ಮಕ್ಕಳು , ಮಹಿಳೆಯರು ಸೇರಿ 40 ಮಂದಿ ಬಲಿ

ತಾನು ಕೇವಲ ಮನವಿ ಮಾಡುತ್ತಿದ್ದೇನೆ ಎಂದು ಗ್ರಾಮಸ್ಥ ಹೇಳುತ್ತಿದ್ದಂತೆ, ಬಿಜೆಪಿ ಶಾಸಕ, “ನೀವು ಮತ ನೀಡಿರುವ ವ್ಯಕ್ತಿಗೆ ಮನವಿ ಮಾಡಿ. ನೀವು ನನಗೆ ನಿಮ್ಮ ಮತ ನೀಡಿದ್ದರೆ, ನನ್ನನ್ನು ಪ್ರಶ್ನಿಸುವ ಹಕ್ಕು ನಿಮಗೆ ಇರುತ್ತದೆ. ನನ್ನನ್ನು ಯಾಮಾರಿಸಲು ಪ್ರಯತ್ನಿಸಬೇಡಿ. ನನ್ನ ತಂದೆ ನಾಲ್ಕು ಬಾರಿ ಶಾಸಕರಾಗಿದ್ದಾರೆ. ನಾನು ಕೂಡ ಒಬ್ಬ ಶಾಸಕ” ಎಂದು ಹೇಳಿದ್ದಾರೆ.

“ಪ್ರತಿ ಬೂತ್‌ನಲ್ಲಿ ನಾನು ಎಷ್ಟು ಮತಗಳನ್ನು ಪಡೆದಿದ್ದೇನೆ ಎಂಬುದು ನನಗೆ ತಿಳಿದಿಲ್ಲ ಎಂದು ನೀವು ಅಂದುಕೊಂಡಿದ್ದೀರಾ…?, ನೀವು ನನಗೆ ಮತ ಹಾಕಿದ್ದರೇ, ನಾನು ನಿಮ್ಮ ಮನೆಗೆ ದೀಪಗಳನ್ನು ಅಳವಡಿಸದಿದ್ದರೇ ನೀವು ದೂರು ನೀಡಬಹುದಿತ್ತು” ಎಂದು ಶಾಸಕರು ವೀಡಿಯೊದಲ್ಲಿ ಹೇಳಿದ್ದಾರೆ.

ಬಿಜೆಪಿ ಶಾಸಕ ವೀರ್ ವಿಕ್ರಮ್ ಸಿಂಗ್ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಎಸ್‌ಪಿ ಶಾಸಕ ರಾಜೇಶ್ ಯಾದವ್, “ಚುನಾವಣೆಯಲ್ಲಿ ಜಯಗಳಿಸಿದ ನಂತರ ಒಬ್ಬ ಶಾಸಕರು ಎಲ್ಲರ ಪ್ರತಿನಿಧಿಯಾಗಿರುತ್ತಾರೆ. ಅವರಿಗೆ ಯಾರು ಮತ ಹಾಕಿದ್ದಾರೆ, ಯಾರು ಮತ ಚಲಾಯಿಸಲಿಲ್ಲ ಎಂಬುದು ಲೆಕ್ಕಕ್ಕೆ ಬರುವುದಿಲ್ಲ. ಮತ ರಾಜಕಾರಣದಲ್ಲಿ ಪಾಲ್ಗೊಳ್ಳುವುದು ಮತ್ತು ಜನರು ಪ್ರಮಾಣ ಮಾಡಬೇಕೆಂದು ಕೇಳಿಕೊಳ್ಳುವುದು ಶಾಸಕರಾದವರಿಗೆ ಸರಿಹೊಂದುವುದಿಲ್ಲ” ಎಂದಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ ಜನಸಂಖ್ಯಾ ಮಸೂದೆ: ‘ಒನ್-ಚೈಲ್ಡ್‌‌’ ನೀತಿಯನ್ನು ತೆಗೆದು ಹಾಕುವಂತೆ ವಿಹೆಚ್‌‌ಪಿ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...