Homeಅಂತರಾಷ್ಟ್ರೀಯಇಂಗ್ಲೆಂಡ್‌ : ಜನಾಂಗ ದ್ವೇಷದ ವಿರುದ್ಧ ಫುಟ್ಬಾಲ್‌ ಆಟಗಾರರ ಜೊತೆ ನಿಂತ ಜಗತ್ತು

ಇಂಗ್ಲೆಂಡ್‌ : ಜನಾಂಗ ದ್ವೇಷದ ವಿರುದ್ಧ ಫುಟ್ಬಾಲ್‌ ಆಟಗಾರರ ಜೊತೆ ನಿಂತ ಜಗತ್ತು

ನಿಲ್ಲದ ತಾರತಮ್ಯ. ಜನಾಂಗ ದ್ವೇಷದ ದಳ್ಳುರಿಗೆ ಇಂಗ್ಲೆಂಡ್‌ ಆಟಗಾರರು ಗುರಿ. ಯುರೋ ಸೋಲಿಗೆ ಭುಗಿಲೆದ್ದ ಆಕ್ರೋಶ. ಜನಾಂಗ ದ್ವೇಷ ಖಂಡಿಸಿ ಕಪ್ಪು ವರ್ಣೀಯ ಆಟಗಾರರ ಜೊತೆ ನಿಂತ ಜಗತ್ತು.

- Advertisement -
- Advertisement -

ಯುರೋ ಕಪ್ ಸೋಲಿನ ನಂತರ ಜನಾಂಗೀಯ ನಿಂದನೆಯ ದಳ್ಳುರಿಗೆ ಗುರಿಯಾಗಿದ್ದ ಇಂಗ್ಲೆಂಡ್‌ ತಂಡದ ಆಟಗಾರರ ಬೆಂಬಲಕ್ಕೆ ಇಡೀ ಜಗತ್ತು ಒಂದಾಗಿದೆ. ವಿಶ್ವ ಪ್ರಸಿದ್ಧ ಕ್ರೀಡಾಪಟುಗಳು, ಹೋರಾಟಗಾರರು, ರಾಜಕಾರಣಿಗಳು, ಸಿನೆಮಾ ನಟರು ಜನಾಂಗೀಯ ನಿಂದನೆಯ ಅಮಾನವೀಯ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಕಳೆದ ವರ್ಷದ ಬ್ಲಾಕ್‌ ಲೈವ್‌ ಮ್ಯಾಟರ್ಸ್‌ ಅಂದೋಲನ ಮತ್ತೆ ಮುನ್ನೆಲೆಗೆ ಬಂದಿದೆ.

ಯುರೊ ಕಪ್‌ ಫುಟ್ಬಾಲ್‌ ಟೂರ್ನಿ ಜುಲೈ 11ಕ್ಕೆ ತೆರೆ ಕಂಡಿದೆ. ಫೈನಲ್‌ನಲ್ಲಿ ಇಟಲಿ ತಂಡ ಇಂಗ್ಲೆಂಡ್‌ ಮಣಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತ್ತು. ರೋಚಕ ಪೆನಾಲ್ಟಿ ಶೂಟೌಟ್‌ನಲ್ಲಿ ಇಂಗ್ಲೆಂಡ್‌ ತನಗೆ ಸಿಕ್ಕ 5 ಅವಕಾಶಗಳಲ್ಲಿ 2 ಸಾರಿ ಮಾತ್ರ ಗೋಲುಗಳಿಸಲು ಯಶಸ್ವಿಯಾಗಿತ್ತು. ಇಂಗ್ಲೆಂಡ್‌ ಸೋಲಿನ ಬೆನ್ನಲ್ಲೇ ವಿವಾದವೊಂದು ಹುಟ್ಟಿಕೊಂಡಿದೆ. ಇಂಗ್ಲೆಂಡ್ ಸೋಲಿಗೆ 22 ಮಾರ್ಕಸ್‌ ರಷ್‌ಫೋರ್ಡ್‌, ಬುಕಾಯೊ ಸಾಕಾ ಮತ್ತು ಜೇಡೆನ್ ಸ್ಯಾಂಚೊ ಅವರನ್ನು ಹೊಣೆಗಾರನನ್ನಾಗಿ ಮಾಡಿ ಜನಾಂಗೀಯ ನಿಂದನೆಯ ಸಂದೇಶಗಳು ಫೇಸ್‌ಬುಕ್‌, ಟ್ವಿಟ್ಟರ್‌ಗಳಲ್ಲಿ ಹರಿದಾಡುತ್ತಿದೆ.

ಫೈನಲ್‌ ಪಂದ್ಯದ ಅಂತಿಮ ಕ್ಷಣದಲ್ಲಿ ಮಾರ್ಕಸ್‌ ರಷ್‌ಫೋರ್ಡ್‌ ಒದ್ದ ಪೆನಾಲ್ಟಿ ಶೂಟೌಟ್‌ ಗೋಲು    ಗೋಲು ಪೆಟ್ಟಿಗೆಯ ಕಂಬಕ್ಕೆ ಬಡಿದು ಹೊರ ನಡೆದಿತ್ತು. ರಷ್‌ಫೋರ್ಡ್‌ ಸೇರಿದಂತೆ ಬುಕಾಯೊ ಸಾಕಾ ಮತ್ತು ಜೇಡೆನ್ ಸ್ಯಾಂಚೊ ಕೂಡ ಗೋಲುಗಳಿಸಲು ಸಾಧ್ಯವಾಗಿರಲಿಲ್ಲ. ಈ ಆಟಗಾರರನ್ನು ಜನಾಂಗೀಯ ಕಾರಣಕ್ಕೆ ಟೀಕಿಸುವ ಸಂದೇಶಗಳು ಇಂಗ್ಲೆಂಡ್‌ ದೇಶದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಮಾರ್ಕಸ್‌ ರಷ್‌ಫೋರ್ಡ್‌, ಬುಕಾಯೊ ಸಾಕಾ ಮತ್ತು ಜೇಡೆನ್ ಸ್ಯಾಂಚೊ

ಇದನ್ನೂ ಓದಿ: ಯುರೋ ಕಪ್‌ ಫೈನಲ್‌: ರೋಚಕ ಪೆನಾಲ್ಟಿ ಶೂಟೌಟ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಇಟಲಿ ತಂಡ

ರಷ್‌ಫೋರ್ಡ್‌ ಗೋಲು ಗಳಿಸಲು ವಿಫಲವಾಗಿದ್ದಕ್ಕೆ ಭಾವನಾತ್ಮಕ ಟ್ವೀಟ್‌ ಮಾಡಿ ಇಂಗ್ಲೆಂಡ್‌ ಜನತೆಯ ಕ್ಷಮೆ ಕೋರಿದ್ದಾರೆ. 55 ವರ್ಷಗಳ ನಂತರ ಫೈನಲ್ ಪ್ರವೇಶ. ಗೆಲುವಿಗೆ ಒಂದು ಪೆನಾಲ್ಟಿ ಗೆಲುವನ್ನು ನಮ್ಮಿಂದ ಕಸಿದುಕೊಂಡಿತು. ಇದಕ್ಕಾಗಿ ಕ್ಷಮೆ ಕೋರುತ್ತೇನೆ” ಎಂದು ರಾಷ್‌ಫೋರ್ಡ್‌ ಟ್ವೀಟ್‌ ಮಾಡಿದ್ದಾರೆ.

ಗೋಲು ಗಳಿಸಲು ವಿಫಲವಾಗಿದ್ದಕ್ಕೆ ವಿಷಾದವಿದೆ. ನಾನು ನಾನಾಗಿರುವುದಕ್ಕೆ ಮತ್ತು ನಾನು ಬಂದಿರುವ ಪ್ರದೇಶದ ಬಗ್ಗೆ ನನಗೆ ಹೆಮ್ಮೆಯಿದೆ ಎಂದು ರಾಷ್‌ಫೋರ್ಡ್‌ ತಮ್ಮ ವಿರುದ್ಧ ಕೆಳಿಬರುತ್ತಿರುವ ಜನಾಂಗೀಯ ನಿಂದನೆಗೆ ಭಾವನಾತ್ಮಕ ಸಂದೇಶದ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಧರ್ಮದ ಹೆಸರಿನ ತಾರತಮ್ಯ ಕೂಡಾ ಜನಾಂಗೀಯ ನಿಂದನೆ ಆಗಿದೆ: ಇರ್ಫಾನ್ ಪಠಾಣ್

ಜಗತ್ತಿನ ಸುಪ್ರಸಿದ್ಧ ಕ್ರೀಡಾಪಟುಗಳು ಇಂಗ್ಲೆಂಡ್‌ ಆಟಗಾರರಿಗೆ ಬೆಂಬಲಿಸಿ ಜನಾಂಗೀಯ ನಿಂದನೆಯನ್ನು ಖಂಡಿಸಿದ್ದಾರೆ. ವರ್ಣ ತಾರತಮ್ಯದ ಮನೋಭಾವನೆ ಮನುಷ್ಯತ್ವಕ್ಕೆ ವಿರುದ್ಧವಾದದ್ದು ಎಂದು ಬೇಸರವನ್ನು ವ್ಯಕ್ತಪಡಿಸಿದ್ದಾರೆ.

ಜನಾಂಗೀಯ ನಿಂದನೆಯಿಂದಾಗಿ ಬ್ರಿಟನ್‌ ತಲೆ ತಗ್ಗಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರಾಜಕುಮಾರ ಪ್ರಿನ್ಸ್‌ ವಿಲಿಯಮ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಬ್ರಿಟನ್ ಅಧ್ಯಕ್ಷ ಬೋರಿಸ್‌ ಜಾನ್ಸನ್‌ ಜನಾಂಗೀಯ ನಿಂದನೆಯನ್ನು ಖಂಡಿಸಿದ್ದು ಬ್ರಿಟನ್ ನೆಲ ಜಗತ್ತಿನ ಎಲ್ಲಾ ಧರ್ಮ, ಜನಾಂಗಗಳನ್ನು ಒಳಗೊಂಡಿದ್ದು ಎಲ್ಲರ ಪರವಾಗಿ ನಿಲ್ಲುತ್ತದೆ. ರಷ್‌ಫೋರ್ಡ್ ವಿರುದ್ಧದ ನಿಂದನೆಯನ್ನು ಸಹಿಸಲು ಸಾಧ್ಯವಿಲ್ಲ. ಇಂತಹ ಘಟನೆಗಳಿಗೆ ಬ್ರಿಟನ್‌ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

ಬ್ರಿಟನ್‌ ಗೃಹ ಸಚಿವೆ ಪ್ರೀತಿ ಪಟೇಲ್ ಕೂಡ ಈ ಘಟನೆಯನ್ನು ಖಂಡಿಸಿದ್ದು, ತಾರತಮ್ಯವನ್ನು ಸಹಿಸಲು ಸಾಧ್ಯವಿಲ್ಲವೆಂದಿದ್ದಾರೆ.

ಟೂರ್ನಿಮೆಂಟ್‌ ಆರಂಭದಲ್ಲಿ ತಂಡವನ್ನು ಪ್ರಕಟಿಸಿದಾಗ ಕಪ್ಪು ವರ್ಣೀಯರಿಗೆ ಅವಕಾಶ ನೀಡಿರುವುದು ತೋರಿಕೆಯ ರಾಜಕೀಯ ಎಂದು ನೀವು ಹೇಳಿದ್ದಿರಿ. ಟೂರ್ನಿಯ ಉದ್ದಕ್ಕೂ ಆಟಗಾರರ ವಿರುದ್ಧ ಪ್ರೇಕ್ಷಕರು ನಿಂದಿಸುತ್ತಿದ್ದಾಗ ಪ್ರಧಾನಿಗಳು ಯಾವುದೇ ಖಂಡನೆ ವ್ಯಕ್ತಪಡಿಸಲಿಲ್ಲ. ಎಂದು ಇಂಗ್ಲೆಂಡ್‌ನ ಪ್ರಸಿದ್ಧ ಫುಟ್ಬಾಲ್‌ ಆಟಗಾರ ಬ್ರಿಟನ್‌ ಸರ್ಕಾರದ ಇಬ್ಬಗೆಯ ನೀತಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂಗ್ಲೆಂಡ್‌ ಫುಟ್ಬಾಲ್‌ ಅಸೋಸಿಯೇಶನ್‌ ಘಟನೆಯನ್ನು ಖಂಡಿಸಿದ್ದು, ತಾರತಮ್ಯಕ್ಕೆ ಅವಕಾಶವಿಲ್ಲ ಎಂದಿದೆ.

ಈ ಕಷ್ಟದ ಗಳಿಗೆಯಲ್ಲಿ ಇಂಗ್ಲೆಂಡ್‌ ತಂಡ ರಾಷ್‌ಫೋರ್ಡ್‌ ಜೊತೆ ನಿಲ್ಲುತ್ತದೆ. ಇಂಗ್ಲೆಂಡ್‌ ತಂಡ ನಮ್ಮ ಎಲ್ಲಾ ಆಟಗಾರರ ಪರವಾಗಿಯೂ ನಿಲ್ಲುತ್ತದೆ. ಈ ಘಟನೆಯನ್ನು ಕ್ಷಮಿಸಲು ಸಾಧ್ಯವಿಲ್ಲ. ಕ್ರೀಡೆ ಎಲ್ಲರನ್ನು ಒಂದುಗೂಡಿಸುವ ಮಾಧ್ಯಮ. ಇಂಗ್ಲೆಂಡ್‌ ಫುಟ್ಬಾಲ್‌ ತಂಡ ಇದಕ್ಕೆ ಯಾವಾಗಲೂ ಬದ್ಧವಾಗಿರುತ್ತದೆ ಎಂದು ಸೌಥ್‌ಗೇಟ್‌ ಅಂತರ್ಜಾಲ ವಾಹಿನಿಯ ಸಂದರ್ಶನದಲ್ಲಿ ಹೇಳಿದ್ದಾರೆ.

ಫೇಸ್‌ಬುಕ್ ಮತ್ತು ಟ್ವಿಟ್ಟರ್‌ಗಳು ಜನಾಂಗೀಯ ನಿಂದನೆಗೆ ಸಂಬಂಧಿಸಿದ ಎಲ್ಲಾ ಪೋಸ್ಟ್‌ಗಳನ್ನು ಡಿಲಿಟ್‌ ಮಾಡುವುದಾಗಿ ಹೇಳಿದ್ದು ಈಗಾಗಲೇ ಸಾವಿರಾರು ಸಂದೇಶಗಳನ್ನು ಟ್ವಿಟ್ಟರ್‌ ಮತ್ತು ಫೇಸ್‌ಬುಕ್‌ಗಳು ಅಳಿಸಿ ಹಾಕಿದ್ದು, ಅಂತಹ ಖಾತೆಗಳನ್ನು ನಿಷ್ಕ್ರಿಯ ಗೊಳಿಸಿವೆ.

– ರಾಜೇಶ್‌ ಹೆಬ್ಬಾರ್‌

ಇದನ್ನೂ ಓದಿ: ಜನಾಂಗೀಯ ತಾರತಮ್ಯದ ಘೋಷಣೆ ಕೂಗುವ ವಿಡಿಯೋ ರಿಟ್ವೀಟ್ ಮಾಡಿದ ಟ್ರಂಪ್!

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...