Homeಮುಖಪುಟನಕಲಿ ಶೈಕ್ಷಣಿಕ ದಾಖಲೆ ಪ್ರಕರಣದಲ್ಲಿ ಬಿಜೆಪಿ ಶಾಸಕನ ಬಂಧನ

ನಕಲಿ ಶೈಕ್ಷಣಿಕ ದಾಖಲೆ ಪ್ರಕರಣದಲ್ಲಿ ಬಿಜೆಪಿ ಶಾಸಕನ ಬಂಧನ

2015 ರಲ್ಲಿ ಗ್ರಾಮ ಪಂಚಾಯತ್‌ ಚುನಾವಣೆಯಲ್ಲಿ ಪತ್ನಿಯನ್ನು ಕಣಕ್ಕಿಳಿಸಲು ನಿರ್ಧರಿಸಿದ್ದ ಬಿಜೆಪಿ ಶಾಸಕ ಪತ್ನಿಯ ನಕಲಿ ಶೈಕ್ಷಣಿಕ ದಾಖಲೆಯನ್ನು ನೀಡಿದ್ದರು.

- Advertisement -
- Advertisement -

ರಾಜಸ್ಥಾನದ ಬಿಜೆಪಿ ಶಾಸಕ ಅಮೃತ್‌ ಲಾಲ್ ಮೀನಾ ಅವರನ್ನು ನಕಲಿ ಶೈಕ್ಷಣಿಕ ದಾಖಲೆ ನೀಡಿದ ಕಾರಣಕ್ಕೆ ಪೊಲೀಸರು ಬಂಧಿಸಿದ್ದಾರೆ. ಜುಲೈ 23 ರ ವರೆಗೆ ಮೀನಾ ಅವರನ್ನು ನ್ಯಾಯಂಗ ಬಂಧನಕ್ಕೆ ನೀಡಿ ಜೈಪುರ ನ್ಯಾಯಾಲಯ ಆದೇಶ ನೀಡಿದೆ.

2015ರಲ್ಲಿ ಗ್ರಾಮ ಪಂಚಾಯತ್‌ ಚುನಾವಣೆಯಲ್ಲಿ ಪತ್ನಿಯನ್ನು ಕಣಕ್ಕಿಳಿಸಲು ನಿರ್ಧರಿಸಿದ್ದ ಬಿಜೆಪಿ ಶಾಸಕ ನಕಲಿ ಶೈಕ್ಷಣಿಕ ದಾಖಲೆಯನ್ನು ನೀಡಿದ್ದರು. ಚುನಾವಣೆ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಪತ್ನಿ ಶಾಂತಾ ದೇವಿಗೆ ಶಾಸಕ ಮೀನಾ ಗಾರ್ಡಿಯನ್‌ ಆಗಿ ಸಹಿ ಹಾಕಿದ್ದರು.

ಪತ್ನಿ ಶಾಂತಾದೇವಿ ಅವರು 5ನೇ ತರಗತಿಯನ್ನು ಓದಿದ್ದಾರೆ ಎಂದು ಮೀನಾ ದಾಖಲಾತಿ ನೀಡಿದ್ದಾಗಿ ವಿಚಾರಣೆಯ ವೇಳೆ ತಿಳಿದುಬಂದಿದೆ. ಶಾಂತಾ ದೇವಿ ಅವರು 5ನೇ ತರಗತಿ ಶಿಕ್ಷಣವನ್ನು ಪಡೆದಿಲ್ಲ. ನಕಲಿ ಶೈಕ್ಷಣಿಕ ದಾಖಲಾತಿ ನೀಡಿರುವುದು ತನಿಖೆಯಿಂದ ಕಂಡು ಬಂದಿದೆ. ಆ ಸಂಬಂಧ ಜೈಪುರ ನ್ಯಾಯಾಲಯಕ್ಕೆ ಪೊಲೀಸರು ಚಾರ್ಜ್ ಶೀಟ್‌ ಕೂಡ ಸಲ್ಲಿಸಿದ್ದರು. ಪ್ರಕರಣದಲ್ಲಿ ಶಾಂತಾ ದೇವಿ ಅವರನ್ನು ಬಂಧಿಸಲಾಗಿತ್ತು. ನಂತರ ಅವರು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು.

ಮಂಗಳವಾರ ಶಾಸಕ ಅಮೃತ್‌ ಲಾಲ್‌ ಮೀನಾ ಅವರು ಪೊಲೀಸರಿಗೆ ಶರಣಾಗಿದ್ದಾರೆ. ಅವರು ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ರಾಜಸ್ಥಾನ ಹೈಕೋರ್ಟ್‌ ವಜಾಗೊಳಿಸಿತ್ತು. ನಂತರ  ಸುಪ್ರೀಮ್‌ ಕೋರ್ಟ್‌ ಮೀನಾ ಅವರ ಬಂಧನಕ್ಕೆ 3 ವಾರಗಳ ತಡೆ ನಿಡಿ ಪೊಲೀಸರಿಗೆ ಶರಣಾಗುವಂತೆ ಆದೇಶ ನೀಡಿತ್ತು.

ಇದನ್ನೂ ಓದಿ: ಉತ್ತರಪ್ರದೇಶ: ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕನ ಬಂಧನ; ರಿಮ್ಯಾಂಡ್‌ಗೆ ಪಡೆದ ಪೊಲೀಸರು!

ಪ್ರಕರಣದ ತನಿಖೆ ನಡೆಸಿದ CB-CID ಶಾಂತಾ ದೇವಿ 5ನೇ ತರಗತಿ ಶಿಕ್ಷಣ ಪಡೆದಿಲ್ಲ ಎಂದು ಖಾತರಿ ಪಡಿಸಿದ್ದಲ್ಲದೇ ನ್ಯಾಯಲಯ ಅವರ ಚುನಾವಣಾ ಆಯ್ಕೆಯನ್ನು ರದ್ದುಗೊಳಿಸಿದೆ.

ಹಿಂದಿನ ವಸುಂಧರಾ ರಾಜೇ ನೇತೃತ್ವದ ಬಿಜೆಪಿ ಸರ್ಕಾರ ರಾಜಸ್ಥಾನದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕನಿಷ್ಠ ಶೈಕ್ಷಣಿಕ ಅರ್ಹತೆಯನ್ನು ನಿಗದಿ ಪಡಿಸಿತ್ತು. ಜಿಲ್ಲಾ ಪರಿಷತ್‌  ಚುನಾವಣೆಗೆ 10ನೇ ತರಗತಿಯನ್ನು ಕಡ್ಡಾಯಗೊಳಿಸಿದ್ದರೆ, ಸರಪಂಚ್ ಅಥವಾ ಗ್ರಾಮ ಪಂಚಾಯತ್‌ ಚುನಾವಣೆಗಳಿಗೆ ಅಭ್ಯರ್ಥಿಗಳು 8 ನೇ ತರಗತಿ ಶಿಕ್ಷಣ ಪಡೆಯುವುದು ಕಡ್ಡಾಯವಾಗಿಸಿ ಬಿಜೆಪಿ ಸರ್ಕಾರ ಆದೇಶ ಹೊರಡಿಸಿತ್ತು. ಎಸ್‌ಸಿ ಎಸ್‌ಟಿ ಅಭ್ಯರ್ಥಿಗಳಿಗೆ ಸರ್‌ ಪಂಚ್‌ ಚುನಾವಣೆಗೆ ಸ್ಪರ್ಧಿಸಲು 5 ತರಗತಿ ಶಿಕ್ಷಣವನ್ನು ಮಾನದಂಡವಾಗಿ ನಿರ್ಧರಿಸಲಾಗಿತ್ತು.

2018 ರಲ್ಲಿ ಅಶೋಕ್‌ ಗೆಹ್ಲೋಟ್‌ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಹಿಂದಿನ ಸರ್ಕಾರ ಜಾರಿಗೆ ತಂದಿರುವ ಶೈಕ್ಷಣಿಕ ವಿದ್ಯಾರ್ಹತೆ ಕಾನುನುಗಳನ್ನು ರದ್ದುಪಡಿಸಿ ಆದೇಶವನ್ನು ಹೊರಡಿಸಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ: ಲಾಕ್‌ಡೌನ್ ನಿಯಮ ಉಲ್ಲಂಘಿಸಿದ ಮೂವರು ಬಿಜೆಪಿ ಶಾಸಕರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...