Homeಮುಖಪುಟನಕಲಿ ಶೈಕ್ಷಣಿಕ ದಾಖಲೆ ಪ್ರಕರಣದಲ್ಲಿ ಬಿಜೆಪಿ ಶಾಸಕನ ಬಂಧನ

ನಕಲಿ ಶೈಕ್ಷಣಿಕ ದಾಖಲೆ ಪ್ರಕರಣದಲ್ಲಿ ಬಿಜೆಪಿ ಶಾಸಕನ ಬಂಧನ

2015 ರಲ್ಲಿ ಗ್ರಾಮ ಪಂಚಾಯತ್‌ ಚುನಾವಣೆಯಲ್ಲಿ ಪತ್ನಿಯನ್ನು ಕಣಕ್ಕಿಳಿಸಲು ನಿರ್ಧರಿಸಿದ್ದ ಬಿಜೆಪಿ ಶಾಸಕ ಪತ್ನಿಯ ನಕಲಿ ಶೈಕ್ಷಣಿಕ ದಾಖಲೆಯನ್ನು ನೀಡಿದ್ದರು.

- Advertisement -
- Advertisement -

ರಾಜಸ್ಥಾನದ ಬಿಜೆಪಿ ಶಾಸಕ ಅಮೃತ್‌ ಲಾಲ್ ಮೀನಾ ಅವರನ್ನು ನಕಲಿ ಶೈಕ್ಷಣಿಕ ದಾಖಲೆ ನೀಡಿದ ಕಾರಣಕ್ಕೆ ಪೊಲೀಸರು ಬಂಧಿಸಿದ್ದಾರೆ. ಜುಲೈ 23 ರ ವರೆಗೆ ಮೀನಾ ಅವರನ್ನು ನ್ಯಾಯಂಗ ಬಂಧನಕ್ಕೆ ನೀಡಿ ಜೈಪುರ ನ್ಯಾಯಾಲಯ ಆದೇಶ ನೀಡಿದೆ.

2015ರಲ್ಲಿ ಗ್ರಾಮ ಪಂಚಾಯತ್‌ ಚುನಾವಣೆಯಲ್ಲಿ ಪತ್ನಿಯನ್ನು ಕಣಕ್ಕಿಳಿಸಲು ನಿರ್ಧರಿಸಿದ್ದ ಬಿಜೆಪಿ ಶಾಸಕ ನಕಲಿ ಶೈಕ್ಷಣಿಕ ದಾಖಲೆಯನ್ನು ನೀಡಿದ್ದರು. ಚುನಾವಣೆ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಪತ್ನಿ ಶಾಂತಾ ದೇವಿಗೆ ಶಾಸಕ ಮೀನಾ ಗಾರ್ಡಿಯನ್‌ ಆಗಿ ಸಹಿ ಹಾಕಿದ್ದರು.

ಪತ್ನಿ ಶಾಂತಾದೇವಿ ಅವರು 5ನೇ ತರಗತಿಯನ್ನು ಓದಿದ್ದಾರೆ ಎಂದು ಮೀನಾ ದಾಖಲಾತಿ ನೀಡಿದ್ದಾಗಿ ವಿಚಾರಣೆಯ ವೇಳೆ ತಿಳಿದುಬಂದಿದೆ. ಶಾಂತಾ ದೇವಿ ಅವರು 5ನೇ ತರಗತಿ ಶಿಕ್ಷಣವನ್ನು ಪಡೆದಿಲ್ಲ. ನಕಲಿ ಶೈಕ್ಷಣಿಕ ದಾಖಲಾತಿ ನೀಡಿರುವುದು ತನಿಖೆಯಿಂದ ಕಂಡು ಬಂದಿದೆ. ಆ ಸಂಬಂಧ ಜೈಪುರ ನ್ಯಾಯಾಲಯಕ್ಕೆ ಪೊಲೀಸರು ಚಾರ್ಜ್ ಶೀಟ್‌ ಕೂಡ ಸಲ್ಲಿಸಿದ್ದರು. ಪ್ರಕರಣದಲ್ಲಿ ಶಾಂತಾ ದೇವಿ ಅವರನ್ನು ಬಂಧಿಸಲಾಗಿತ್ತು. ನಂತರ ಅವರು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು.

ಮಂಗಳವಾರ ಶಾಸಕ ಅಮೃತ್‌ ಲಾಲ್‌ ಮೀನಾ ಅವರು ಪೊಲೀಸರಿಗೆ ಶರಣಾಗಿದ್ದಾರೆ. ಅವರು ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ರಾಜಸ್ಥಾನ ಹೈಕೋರ್ಟ್‌ ವಜಾಗೊಳಿಸಿತ್ತು. ನಂತರ  ಸುಪ್ರೀಮ್‌ ಕೋರ್ಟ್‌ ಮೀನಾ ಅವರ ಬಂಧನಕ್ಕೆ 3 ವಾರಗಳ ತಡೆ ನಿಡಿ ಪೊಲೀಸರಿಗೆ ಶರಣಾಗುವಂತೆ ಆದೇಶ ನೀಡಿತ್ತು.

ಇದನ್ನೂ ಓದಿ: ಉತ್ತರಪ್ರದೇಶ: ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕನ ಬಂಧನ; ರಿಮ್ಯಾಂಡ್‌ಗೆ ಪಡೆದ ಪೊಲೀಸರು!

ಪ್ರಕರಣದ ತನಿಖೆ ನಡೆಸಿದ CB-CID ಶಾಂತಾ ದೇವಿ 5ನೇ ತರಗತಿ ಶಿಕ್ಷಣ ಪಡೆದಿಲ್ಲ ಎಂದು ಖಾತರಿ ಪಡಿಸಿದ್ದಲ್ಲದೇ ನ್ಯಾಯಲಯ ಅವರ ಚುನಾವಣಾ ಆಯ್ಕೆಯನ್ನು ರದ್ದುಗೊಳಿಸಿದೆ.

ಹಿಂದಿನ ವಸುಂಧರಾ ರಾಜೇ ನೇತೃತ್ವದ ಬಿಜೆಪಿ ಸರ್ಕಾರ ರಾಜಸ್ಥಾನದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕನಿಷ್ಠ ಶೈಕ್ಷಣಿಕ ಅರ್ಹತೆಯನ್ನು ನಿಗದಿ ಪಡಿಸಿತ್ತು. ಜಿಲ್ಲಾ ಪರಿಷತ್‌  ಚುನಾವಣೆಗೆ 10ನೇ ತರಗತಿಯನ್ನು ಕಡ್ಡಾಯಗೊಳಿಸಿದ್ದರೆ, ಸರಪಂಚ್ ಅಥವಾ ಗ್ರಾಮ ಪಂಚಾಯತ್‌ ಚುನಾವಣೆಗಳಿಗೆ ಅಭ್ಯರ್ಥಿಗಳು 8 ನೇ ತರಗತಿ ಶಿಕ್ಷಣ ಪಡೆಯುವುದು ಕಡ್ಡಾಯವಾಗಿಸಿ ಬಿಜೆಪಿ ಸರ್ಕಾರ ಆದೇಶ ಹೊರಡಿಸಿತ್ತು. ಎಸ್‌ಸಿ ಎಸ್‌ಟಿ ಅಭ್ಯರ್ಥಿಗಳಿಗೆ ಸರ್‌ ಪಂಚ್‌ ಚುನಾವಣೆಗೆ ಸ್ಪರ್ಧಿಸಲು 5 ತರಗತಿ ಶಿಕ್ಷಣವನ್ನು ಮಾನದಂಡವಾಗಿ ನಿರ್ಧರಿಸಲಾಗಿತ್ತು.

2018 ರಲ್ಲಿ ಅಶೋಕ್‌ ಗೆಹ್ಲೋಟ್‌ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಹಿಂದಿನ ಸರ್ಕಾರ ಜಾರಿಗೆ ತಂದಿರುವ ಶೈಕ್ಷಣಿಕ ವಿದ್ಯಾರ್ಹತೆ ಕಾನುನುಗಳನ್ನು ರದ್ದುಪಡಿಸಿ ಆದೇಶವನ್ನು ಹೊರಡಿಸಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ: ಲಾಕ್‌ಡೌನ್ ನಿಯಮ ಉಲ್ಲಂಘಿಸಿದ ಮೂವರು ಬಿಜೆಪಿ ಶಾಸಕರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...