Homeಕರ್ನಾಟಕಹಿರಿಯ ನಟ ಅನಂತ್‌ ನಾಗ್‌ಗೆ ಪದ್ಮ ಪ್ರಶಸ್ತಿ ಆಗ್ರಹಿಸಿ ಆನಲೈನ್‌ ಅಭಿಯಾನ

ಹಿರಿಯ ನಟ ಅನಂತ್‌ ನಾಗ್‌ಗೆ ಪದ್ಮ ಪ್ರಶಸ್ತಿ ಆಗ್ರಹಿಸಿ ಆನಲೈನ್‌ ಅಭಿಯಾನ

ಅನಂತ್‌ ನಾಗ್‌ ಅವರ 5 ದಶಕಗಳ ಸಿನಿ ಪ್ರಯಾಣದಲ್ಲಿ ಒಂದೇ ಒಂದು ರಾಷ್ಟ್ರ ಪ್ರಶಸ್ತಿ ಸಿಗದಿರುವುದು ಆಶ್ಚರ್ಯವನ್ನು ಹುಟ್ಟಿಸುತ್ತದೆ.

- Advertisement -
- Advertisement -

ಸೆಪ್ಟೆಂಬರ್‌ 15ರ ವರೆಗೆ ಪದ್ಮ ಪ್ರಶಸ್ತಿಗೆ ಸಾಧಕರ ಹೆಸರನ್ನು ಸೂಚಿಸುವಂತೆ ಪ್ರಧಾನಿ ಮೋದಿ ಭಾನುವಾರ ದೇಶವಾಸಿಗಳಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಕನ್ನಡದ ಹಿರಿಯ ನಟ ಅನಂತ್‌ ನಾಗ್‌ ಅವರಿಗೆ ಪದ್ಮಶ್ರಿ ಪ್ರಶಸ್ತಿ ನೀಡಬೇಕೆಂಬ ಆನ್‌ಲೈನ್‌ ಅಭಿಯಾನ ಆರಂಭವಾಗಿದೆ.

ಕನ್ನಡ ಚಿತ್ರರಂಗದ ಅನೇಕ ನಟ ನಟಿಯರು ಈ ಅಭಿಯಾನದಲ್ಲಿ ಭಾಗವಹಿಸಿದ್ದು ಅನಂತ್‌ ನಾಗ್‌ ಅವರಿಗೆ ಪದ್ಮ ಪುರಸ್ಕಾರವನ್ನು ನೀಡುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಆನ್‌ಸ್ಕ್ರೀನ್‌ನಲ್ಲಿ ಮಾತ್ರ ಪ್ರತಿಭಾವಂತ ನಟ; ಉಳಿದಂತೆ ಅಂತಃಕರಣವುಳ್ಳ ಸಾಮಾನ್ಯ ಮನುಷ್ಯನಾಗಿದ್ದ ಸಂಚಾರಿ ವಿಜಯ್

ಖ್ಯಾತ ನಟ ರಿಷಭ್‌ ಶೆಟ್ಟಿ ಈ ಸಂಬಂಧ ಟ್ವೀಟ್‌ ಮಾಡಿ ಅನಂತ ನಾಗ್ ಕನ್ನಡ ಮತ್ತು ಭಾರತ ಚಲನಚಿತ್ರರಂಗಕ್ಕೆ ಅಸಾಧಾರಣ ಕೊಡುಗೆ ನೀಡಿದ್ದಾರೆ, ಆದ್ದರಿಂದ ಅವರಿಗೆ ಪದ್ಮಾ ಪ್ರಶಸ್ತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ನಟ ರಕ್ಷಿತ್ ಸೆಟ್ಟಿ, ನಿರ್ದೇಶಕ ಹೇಮಂತ್ ರಾವ್ ಸಾರಿದಂತೆ ಅನೇಕ ನಟ, ನಿರ್ದೇಶಕರು ಅನಂತ್‌ ನಾಗ್‌ ಪದ್ಮ ಪ್ರಶಸ್ತಿಗೆ ಅತ್ಯಂತ ಅರ್ಹರಾಗಿದ್ದಾರೆ ಎಂದು ಹೇಳಿದ್ದು ಅಭಿಯಾನಕ್ಕೆ ಕೈಜೋಡಿಸಿದ್ದಾರೆ.

ಗಣರಾಜ್ಯೋತ್ಸವದ ಮುನ್ನಾದಿನದಂದು ಘೋಷಿಸಲಾಗುವ ಪದ್ಮ ಪ್ರಶಸ್ತಿಗಳು ಭಾರತದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾಗಿದೆ. ಸಾರ್ವಜನಿಕ ಸೇವೆಗಳನ್ನು ಒಳಗೊಂಡ ಅನೇಕ ವಿಭಾಗಗಳಲ್ಲಿ ವ್ಯಕ್ತಿಗಳ ಸಾಧನೆಗಳನ್ನು ಪರಿಗಣಿಸಿ ವಾರ್ಷಿಕ ಪ್ರಶಸ್ತಿಗಳನ್ನು ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ-ಪದ್ಮವಿಭೂಷಣ್ (ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ), ಪದ್ಮಭೂಷಣ್ (ಉನ್ನತ-ಶ್ರೇಣಿಯ ವಿಶಿಷ್ಟ ಸೇವೆ) ಮತ್ತು ಪದ್ಮಶ್ರೀ (ವಿಶಿಷ್ಟ ಸೇವೆ). ಸಾಮಾನ್ಯವಾಗಿ ಪದ್ಮ ಪ್ರಶಸ್ತಿಯನ್ನು ಸಮಿತಿಯಿಂದ ನಾಮನಿರ್ದೇಶನಗೊಂಡ ಸಾಧಕರಿಗೆ ನೀಡಲಾಗುತ್ತದೆ. ಈ ವರ್ಷ ಸರ್ಕಾರ ಸಾರ್ವಜನಿಕರಿಗೂ ಪ್ರಶಸ್ತಿಗೆ ಸಾಧಕರ ಹೆಸರನ್ನು ಸೂಚಿಸುವ ಅವಕಾಶ ನೀಡಿದೆ.

ಇದನ್ನೂ ಓದಿ: ನಟ ದರ್ಶನ್ ಹೆಸರಿನಲ್ಲಿ ವಂಚನೆ ಪ್ರಕರಣ: ಮಹಿಳೆಯನ್ನು ಬಂಧಿಸಿದ ಪೊಲೀಸರು

ಅನಂತ್ ನಾಗ್ ಕನ್ನಡ, ಮರಾಠಿ, ತೆಲುಗು, ತಮಿಳು, ಮಲಯಾಳಂ, ಮತ್ತು ಹಿಂದಿ ಭಾಷೆಗಳಲ್ಲಿ 300 ಕ್ಕೂ ಹೆಚ್ಚು ಚಿತ್ರಗಳಲ್ಲಿ ಪ್ರಮುಖ ಮತ್ತು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.

ಅನಂತ್ ನಾಗ್ ಕನ್ನಡ, ಮರಾಠಿ, ತೆಲುಗು, ತಮಿಳು, ಮಲಯಾಳಂ, ಮತ್ತು ಹಿಂದಿ ಭಾಷೆಗಳಲ್ಲಿ 300 ಕ್ಕೂ ಹೆಚ್ಚು ಚಿತ್ರಗಳಲ್ಲಿ ಪ್ರಮುಖ ಮತ್ತು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ. ಅವರು ಸ್ವತಂತ್ರ ಚಲನಚಿತ್ರಗಳು ಮತ್ತು ಮಾಲ್ಗುಡಿ ಡೇಸ್‌ನಂತಹ ದೂರದರ್ಶನ ಸರಣಿಯಲ್ಲೂ ಕಾಣಿಸಿಕೊಂಡಿದ್ದಾರೆ ಮತ್ತು ನಾಟಕಗಳಲ್ಲಿಯೂ ನಟಿಸಿದ್ದಾರೆ.

ಇದನ್ನೂ ಓದಿ: ವಂಚನೆ ಪ್ರಕರಣ: ವಿವಾದಕ್ಕೆ ತೆರೆ ಎಳೆದಿದ್ದೇವೆ ಎಂದ ನಟ ದರ್ಶನ್

ಅನಂತ್‌ ನಾಗ್‌ ಅವರ ಮನೋಜ್ಞ ಅಭಿನಯಕ್ಕೆ ಇದುವರೆಗೆ 7 ರಾಜ್ಯ ಪ್ರಶಸ್ತಿಗಳು ಒಲಿದು ಬಂದಿವೆ.  ಸಂಕಲ್ಪ (1973) ಎಂಬ ಚಲನಚಿತ್ರದೊಂದಿಗೆ ಪಾದಾರ್ಪಣೆ ಮಾಡಿದ ಹಿರಿಯ ನಟ ನಾಗ್‌ ನಂತರ ಶ್ಯಾಮ್ ಬೆನೆಗಲ್ ಅವರ ಅಂಕುರ್ ಚಿತ್ರದಲ್ಲಿ ಕಾಣಿಸಿಕೊಂಡರು. ಬೆನಗಲ್‌ ಅವರೊಂದಿಗೆ ಸ್ವತಂತ್ರ ಚಲನಚಿತ್ರಗಳ ಸಿನೆಮಾ ಜಗತ್ತಿನಲ್ಲಿ ತೊಡಗಿದರು. ಗೋಧಿ ಬಣ್ಣ ಸಾಧಾರಣ ಮೈಕಟ್ಟು (2016) ಚಿತ್ರದಲ್ಲಿನ ಅನಂತ್‌ ನಾಗ್‌  ಅವರ ಅಲ್‌ಜೈಮರ್‌ ರೋಗಿಯ ಪಾತ್ರ ದೇಶ ವಿದೇಶಗಳ ಚಿತ್ರೋತ್ಸವದಲ್ಲಿ ಮೆಚ್ಚುಗೆಯನ್ನು ಗಳಿಸಿತ್ತು.  

ವಯಸ್ಸು ಮಾಗಿದಂತೆಲ್ಲ ಅನಂತ್‌ ನಾಗ್ ನಟನೆಯಲ್ಲಿ ಮೊನಚು, ಸೂಕ್ಷತೆ ಕಾಣಿಸಿಕೊಳ್ಲುತ್ತಿದ್ದು ಅವರನ್ನು  ಭಾರತದ ಅತ್ಯುತ್ತಮ ನಟರಲ್ಲಿ ಒಬ್ಬರನ್ನಾಗಿ ಪರಿಗಣಿಸಲಾಗುತ್ತದೆ. ಅಮಿತಾಬ್‌ ಬಚ್ಚನ್‌, ಇರ್ಫಾನ್‌ ಖಾನ್‌, ನಾಸಿರುದ್ದೀನ್‌ ಶಾ, ಕಮಲ್ ಹಾಸನ್, ಪ್ರಕಾಶ್‌ ರಾಜ್‌ ಮುಂತಾದ ಹಿರಿಯ ನಟರಿಗೆ ನಟನೆಯಲ್ಲಿ ರಾಷ್ಟ್ರ ಪ್ರಶಸ್ತಿಗಳು ಲಭಿಸಿದೆ. ಅನಂತ್‌ ನಾಗ್‌ ಅವರ 5 ದಶಕಗಳ ಸಿನಿ ಪ್ರಯಾಣದಲ್ಲಿ ರಾಷ್ಟ್ರ ಪ್ರಶಸ್ತಿ ಸಿಗದಿರುವುದು ಆಶ್ಚರ್ಯವನ್ನು ಹುಟ್ಟಿಸುತ್ತದೆ.

ಇತ್ತೀಚಿನ ತಮ್ಮ ಕೆಲವು ಹೆಳಿಕೆಗಳಿಂದ ಅನಂತ್‌ ನಾಗ್‌ ಕೆಲವು ವಿವಾದಗಳನ್ನು ಮೈಮೇಲೆ ಎಳೆದು ಕೊಂಡಿದ್ದರು. ಅದರ ಹೊರತಾಗಿ ಅನಂತ್‌ ನಾಗ್‌ ಪದ್ಮ ಪ್ರಶಸ್ತಿಗೆ ಕನ್ನಡ ಚಿತ್ರರಂಗದಿಂದ ಸೂಕ್ತ ಆಯ್ಕೆ ಎಂದು ಹಲವರು ಅಭಿಪ್ರಾಪಟ್ಟಿದ್ದಾರೆ.

ಇದನ್ನೂ ಓದಿ:  ಪದ್ಮ ಪ್ರಶಸ್ತಿಗೆ ಸಾಧಕರ ಹೆಸರು ಸೂಚಿಸುವಂತೆ ದೇಶವಾಸಿಗಳಲ್ಲಿ ಪ್ರಧಾನಿ ಮನವಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...