Homeಕರ್ನಾಟಕಕರಾಳ UAPA, NIA ರದ್ದಾಗಬೇಕು: ಫಾದರ್‌‌ ಸ್ಟಾನ್ ಸ್ವಾಮಿ ಶ್ರದ್ಧಾಂಜಲಿ ಸಭೆಯಲ್ಲಿ ಒತ್ತಾಯ

ಕರಾಳ UAPA, NIA ರದ್ದಾಗಬೇಕು: ಫಾದರ್‌‌ ಸ್ಟಾನ್ ಸ್ವಾಮಿ ಶ್ರದ್ಧಾಂಜಲಿ ಸಭೆಯಲ್ಲಿ ಒತ್ತಾಯ

- Advertisement -
- Advertisement -

“ಕರಾಳ ಯುಎಪಿಎ ವಿರೋಧಿ ಸಮಾನ ಮನಸ್ಕರ ವೇದಿಕೆ” ಆಶ್ರಯದಲ್ಲಿ ಹೋರಾಟಗಾರ ಫಾದರ್‌ ಸ್ಟಾನ್ ಸ್ವಾಮಿಯವರ ಶ್ರದ್ಧಾಂಜಲಿ ಹಾಗೂ ಸಾರ್ವಜನಿಕ ಹಕ್ಕೊತ್ತಾಯದ ಬಹಿರಂಗ ಸಭೆ ಬೆಂಗಳೂರಿನ ಮೌರ್ಯ ಸರ್ಕಲ್‌ ಬಳಿ ಬುಧವಾರ ನಡೆಯಿತು. ವಿವಿಧ ಸಂಘಟನೆಗಳ ಕಾರ್ಯಕರ್ತರು, ಮುಖಂಡರು ಹಾಗೂ ನೂರಾರು ಮಂದಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು, ಕರಾಳ UAPA, NIA ರದ್ದಾಗಬೇಕು ಮತ್ತು ಬಂಧಿತ ಹೋರಾಟಗಾರರ ಬಿಡುಗಡೆಯಾಗಬೇಕು ಎಂದು ಆಗ್ರಹಿಸಿದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಹಿರಿಯ ವಕೀಲ ಕೆ. ಬಾಲನ್, “ಯುಎಪಿಎ ಮತ್ತು ಎನ್‌ಐಎ ಕಾಂಗ್ರೆಸ್ ಸರ್ಕಾರಗಳ ಅವಧಿಯಲ್ಲಿಯೇ ಕಾಯ್ದೆಯಾಗಿ ಬಂದಿತ್ತು. ಅದರೊಳಗೆ ಜಗತ್ತಿನ ಎಲ್ಲೂ ಇಲ್ಲದ ಅತಿ ಕ್ರೂರವೂ, ಮಾನವೀಯತೆಗೆ ವಿರುದ್ಧವೂ ಆದ ಮತ್ತಷ್ಟು ಕಲಂಗಳನ್ನು ಕಾಲಕಾಲಕ್ಕೆ ಸೇರಿಸಿದ್ದಲ್ಲದೆ, ಅದರ ನಿರಾತಂಕ ಜಾರಿಗಾಗಿ ಎನ್‌ಐಎ ತನಿಖಾ ಸಂಸ್ಥೆಯನ್ನೂ ಸ್ಥಾಪಿಸಲಾಯಿತು. ನಂತರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಇವುಗಳ ವ್ಯಾಪ್ತಿ ಮತ್ತು ಅಧಿಕಾರಗಳನ್ನು ಮತ್ತಷ್ಟು ಹಿಗ್ಗಿಸಿ ಇವತ್ತಿನ ಅಕರಾಳ ವಿಕರಾಳ ಸ್ವರೂಪಕ್ಕೆ ತಂದಿಟ್ಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಫಾದರ್ ಸ್ಟಾನ್ ಸ್ವಾಮಿಯವರನ್ನು ಕೊಲ್ಲಲಾಗಿದೆ: ಶಿವಸೇನೆ ಸಂಸದ ಸಂಜಯ್ ರಾವತ್ ಆರೋಪ

“ಈ ಎಲ್ಲ ಪಕ್ಷಗಳಿಗೂ ನೆಲ-ಜಲ-ಖನಿಜ ಮೊದಲ್ಗೊಂಡು ದೇಶದ ಸಕಲ ಸಂಪತ್ತನ್ನೂ ದೊಡ್ಡ ಬಂಡವಾಳಿಗ ಕಾರ್ಪೊರೇಟ್ ಶಕ್ತಿಗಳಿಗೆ ಬಿಡಿಗಾಸಿಗೆ ಧಾರೆ ಎರೆಯುವುದು ಹಾಗೂ ಅದನ್ನು ವಿರೋಧಿಸುವ ಆದಿವಾಸಿ-ದಲಿತ-ಅಲ್ಪಸಂಖ್ಯಾತ ಮತ್ತಿತರ ಸಮುದಾಯಗಳು ಮತ್ತು ಪ್ರಜಾತಾಂತ್ರಿಕ ಸಂಘಟನೆಗಳನ್ನು ಬಗ್ಗುಬಡಿಯುವುದಕ್ಕಾಗಿ ಇಂತಹ ಘೋರ ಕಾಯಿದೆ ಅಗತ್ಯವಾಗಿದೆ” ಎಂದು ಬಾಲನ್‌ ಹೇಳಿದರು.

ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್‌ ಮಾತನಾಡಿ, ‘‘ಸ್ಟಾನ್ ಸ್ವಾಮಿಯಂತಹ ಧೀಮಂತ ಸಂತನ ಕ್ರೂರ ಕೊಲೆಗೆ ಶ್ರದ್ಧಾಂಜಲಿ ಸಲ್ಲಿಸುವುದು ಮತ್ತು ಇಂತಹ ಕಾಯ್ದೆಗಳ ವಿರುದ್ಧ ಮಾತನಾಡುವುದು ಕೂಡ ದೇಶದ್ರೋಹ ಎಂಬ ರೀತಿಯ ಪ್ರಚಾರವನ್ನು ವ್ಯವಸ್ಥಿತವಾಗಿ ನಡೆಸಲಾಗುತ್ತಿದೆ. ಈಗಾಗಲೇ ಅದರ ವಿವಿಧ ರೂಪಗಳಲ್ಲಿ ರದ್ದಾಗಿರುವ ಯುಎಪಿಎಯನ್ನು ಕೂಡಲೇ ರದ್ದು ಮಾಡುವಂತೆ ನಾವೆಲ್ಲರೂ ನಿರಂತರ ಹೋರಾಟ ಮಾಡದಿದ್ದರೆ ಈ ದೇಶದಲ್ಲಿ ಜನಸಾಮಾನ್ಯರಿಗೆ ಭವಿಷ್ಯವೇ ಇಲ್ಲದಂತಾಗುತ್ತದೆ. ನಮ್ಮ ಮುಂದಿನ ಪೀಳಿಗೆಗೆ ಈ ಲಾಭಬಡುಕರು ಏನನ್ನೂ ಉಳಿಸುವುದಿಲ್ಲ. ಯುಎಪಿಎ ಮತ್ತು ಎನ್‌ಐಎ ರದ್ದಾಗಲೇಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿ: ಸ್ಟಾನ್ ಸ್ವಾಮಿ ಬಂಧನ: ದಸ್ತಗಿರಿಯಾದದ್ದು ಆದಿವಾಸಿಗಳ ಕೊರಳ ದನಿ

ಪಿಯುಸಿಎಲ್‌ನ ಪ್ರೊ.ವೈ.ಜೆ.ರಾಜೇಂದ್ರ ಮಾತನಾಡಿ, “ವಿಚಾರಣೆಯಾಗಲಿ ಜಾಮೀನಾಗಲಿ ಇಲ್ಲದೆ, ಚಿಕಿತ್ಸೆಗೆ ಅವಕಾಶವನ್ನೂ ನೀಡದೆ, ಸ್ಟಾನ್ ಸ್ವಾಮಿ ಅವರನ್ನು ಅಮಾನುಷ ಹಿಂಸೆಗೆ ಈಡುಮಾಡಿ ಕೊಂದಿದ್ದರಲ್ಲಿ, ಎನ್‌ಐಎ ಅಧಿಕಾರಿಗಳು ಮತ್ತು ಸ್ಥಳೀಯ ಕೋರ್ಟುಗಳು ಮಾತ್ರವಲ್ಲ, ಹೈಕೋರ್ಟಿನಂತಹ ಉನ್ನತ ನ್ಯಾಯಾಲಯ ಕೂಡ ಭಾಗೀದಾರನಾಗಿದೆ. ಹೀಗಾಗಿ ಈ ಕುರಿತು ಉನ್ನತ ವಿಚಾರಣೆ ನಡೆದು ಎಲ್ಲ ತಪ್ಪಿತಸ್ಥರಿಗೂ ಶಿಕ್ಷೆಯಾಗಬೇಕು. ಯುಎಪಿಎ ಮತ್ತು ಎನ್‌ಐಎ ರದ್ದಾಗಬೇಕು, ಎಲ್ಲ ರಾಜಕೀಯ ಕೈದಿಗಳನ್ನೂ ಬೇಷರತ್ ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಿದರು.

“ನಮ್ಮ ಹಕ್ಕೊತ್ತಾಯಗಳು ಈಡೇರುವವರೆಗೂ ಹೋರಾಟ ರಾಜ್ಯದಾದ್ಯಂತ ನಡೆಯಬೇಕಿದೆ. ಅದಕ್ಕಾಗಿ ಇನ್ನೂ ವಿಸ್ತೃತವಾದ ಸಮಾಲೋಚನಾ ಸಭೆ ನಡೆಸಿ, ಬೃಹತ್ ಪ್ರತಿಭಟನಾ ಹೋರಾಟ ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಎಲ್ಲ ಸಮಾನ ಮನಸ್ಕ ಸಂಘಟನೆಗಳೂ ಒಗ್ಗೂಡಬೇಕಿದೆ. ಜನಸಾಮಾನ್ಯರೂ ಸ್ವಯಂಪ್ರೇರಿತವಾಗಿ ಹೋರಾಟದಲ್ಲಿ ಭಾಗವಹಿಸಬೇಕಿದೆ” ಎಂದು ಹೋರಾಟಗಾರ ಸಿರಿಮನೆ ನಾಗರಾಜ್ ಮನವಿ ಮಾಡಿದರು.

ದಲಿತ ಹಕ್ಕುಗಳ ಹೋರಾಟಗಾರ ಎಸ್. ಗೋಪಾಲ್, ಪ್ರೊ. ಎನ್.ವಿ. ನರಸಿಂಹಯ್ಯ ಮಾತನಾಡಿ ಸ್ಟಾನ್ ಸ್ವಾಮಿಯವರ ಹತ್ಯೆಯನ್ನು ಖಂಡಿಸಿ, ಯುಎಪಿಎ ಮತ್ತು ಎನ್‌ಐಎ ರದ್ದತಿಗಾಗಿ ಒತ್ತಾಯಿಸಿದರು. ಮಾನವ ಹಕ್ಕು ಕಾರ್ಯಕರ್ತ ಟಿ. ನರಸಿಂಹ ಮೂರ್ತಿ ಸ್ವಾಗತಿಸಿ ವಂದಿಸಿದರು.

ಇದನ್ನೂ ಓದಿ: ಸ್ಟ್ಯಾನ್ ಸ್ವಾಮಿ ಶ್ರದ್ಧಾಂಜಲಿ; ವಿಚಾರಣಾಧೀನ ಕೈದಿಯಾಗಿ ಭಾರತರತ್ನವೊಂದರ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...