Homeಕರ್ನಾಟಕಕರಾಳ UAPA, NIA ರದ್ದಾಗಬೇಕು: ಫಾದರ್‌‌ ಸ್ಟಾನ್ ಸ್ವಾಮಿ ಶ್ರದ್ಧಾಂಜಲಿ ಸಭೆಯಲ್ಲಿ ಒತ್ತಾಯ

ಕರಾಳ UAPA, NIA ರದ್ದಾಗಬೇಕು: ಫಾದರ್‌‌ ಸ್ಟಾನ್ ಸ್ವಾಮಿ ಶ್ರದ್ಧಾಂಜಲಿ ಸಭೆಯಲ್ಲಿ ಒತ್ತಾಯ

- Advertisement -
- Advertisement -

“ಕರಾಳ ಯುಎಪಿಎ ವಿರೋಧಿ ಸಮಾನ ಮನಸ್ಕರ ವೇದಿಕೆ” ಆಶ್ರಯದಲ್ಲಿ ಹೋರಾಟಗಾರ ಫಾದರ್‌ ಸ್ಟಾನ್ ಸ್ವಾಮಿಯವರ ಶ್ರದ್ಧಾಂಜಲಿ ಹಾಗೂ ಸಾರ್ವಜನಿಕ ಹಕ್ಕೊತ್ತಾಯದ ಬಹಿರಂಗ ಸಭೆ ಬೆಂಗಳೂರಿನ ಮೌರ್ಯ ಸರ್ಕಲ್‌ ಬಳಿ ಬುಧವಾರ ನಡೆಯಿತು. ವಿವಿಧ ಸಂಘಟನೆಗಳ ಕಾರ್ಯಕರ್ತರು, ಮುಖಂಡರು ಹಾಗೂ ನೂರಾರು ಮಂದಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು, ಕರಾಳ UAPA, NIA ರದ್ದಾಗಬೇಕು ಮತ್ತು ಬಂಧಿತ ಹೋರಾಟಗಾರರ ಬಿಡುಗಡೆಯಾಗಬೇಕು ಎಂದು ಆಗ್ರಹಿಸಿದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಹಿರಿಯ ವಕೀಲ ಕೆ. ಬಾಲನ್, “ಯುಎಪಿಎ ಮತ್ತು ಎನ್‌ಐಎ ಕಾಂಗ್ರೆಸ್ ಸರ್ಕಾರಗಳ ಅವಧಿಯಲ್ಲಿಯೇ ಕಾಯ್ದೆಯಾಗಿ ಬಂದಿತ್ತು. ಅದರೊಳಗೆ ಜಗತ್ತಿನ ಎಲ್ಲೂ ಇಲ್ಲದ ಅತಿ ಕ್ರೂರವೂ, ಮಾನವೀಯತೆಗೆ ವಿರುದ್ಧವೂ ಆದ ಮತ್ತಷ್ಟು ಕಲಂಗಳನ್ನು ಕಾಲಕಾಲಕ್ಕೆ ಸೇರಿಸಿದ್ದಲ್ಲದೆ, ಅದರ ನಿರಾತಂಕ ಜಾರಿಗಾಗಿ ಎನ್‌ಐಎ ತನಿಖಾ ಸಂಸ್ಥೆಯನ್ನೂ ಸ್ಥಾಪಿಸಲಾಯಿತು. ನಂತರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಇವುಗಳ ವ್ಯಾಪ್ತಿ ಮತ್ತು ಅಧಿಕಾರಗಳನ್ನು ಮತ್ತಷ್ಟು ಹಿಗ್ಗಿಸಿ ಇವತ್ತಿನ ಅಕರಾಳ ವಿಕರಾಳ ಸ್ವರೂಪಕ್ಕೆ ತಂದಿಟ್ಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಫಾದರ್ ಸ್ಟಾನ್ ಸ್ವಾಮಿಯವರನ್ನು ಕೊಲ್ಲಲಾಗಿದೆ: ಶಿವಸೇನೆ ಸಂಸದ ಸಂಜಯ್ ರಾವತ್ ಆರೋಪ

“ಈ ಎಲ್ಲ ಪಕ್ಷಗಳಿಗೂ ನೆಲ-ಜಲ-ಖನಿಜ ಮೊದಲ್ಗೊಂಡು ದೇಶದ ಸಕಲ ಸಂಪತ್ತನ್ನೂ ದೊಡ್ಡ ಬಂಡವಾಳಿಗ ಕಾರ್ಪೊರೇಟ್ ಶಕ್ತಿಗಳಿಗೆ ಬಿಡಿಗಾಸಿಗೆ ಧಾರೆ ಎರೆಯುವುದು ಹಾಗೂ ಅದನ್ನು ವಿರೋಧಿಸುವ ಆದಿವಾಸಿ-ದಲಿತ-ಅಲ್ಪಸಂಖ್ಯಾತ ಮತ್ತಿತರ ಸಮುದಾಯಗಳು ಮತ್ತು ಪ್ರಜಾತಾಂತ್ರಿಕ ಸಂಘಟನೆಗಳನ್ನು ಬಗ್ಗುಬಡಿಯುವುದಕ್ಕಾಗಿ ಇಂತಹ ಘೋರ ಕಾಯಿದೆ ಅಗತ್ಯವಾಗಿದೆ” ಎಂದು ಬಾಲನ್‌ ಹೇಳಿದರು.

ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್‌ ಮಾತನಾಡಿ, ‘‘ಸ್ಟಾನ್ ಸ್ವಾಮಿಯಂತಹ ಧೀಮಂತ ಸಂತನ ಕ್ರೂರ ಕೊಲೆಗೆ ಶ್ರದ್ಧಾಂಜಲಿ ಸಲ್ಲಿಸುವುದು ಮತ್ತು ಇಂತಹ ಕಾಯ್ದೆಗಳ ವಿರುದ್ಧ ಮಾತನಾಡುವುದು ಕೂಡ ದೇಶದ್ರೋಹ ಎಂಬ ರೀತಿಯ ಪ್ರಚಾರವನ್ನು ವ್ಯವಸ್ಥಿತವಾಗಿ ನಡೆಸಲಾಗುತ್ತಿದೆ. ಈಗಾಗಲೇ ಅದರ ವಿವಿಧ ರೂಪಗಳಲ್ಲಿ ರದ್ದಾಗಿರುವ ಯುಎಪಿಎಯನ್ನು ಕೂಡಲೇ ರದ್ದು ಮಾಡುವಂತೆ ನಾವೆಲ್ಲರೂ ನಿರಂತರ ಹೋರಾಟ ಮಾಡದಿದ್ದರೆ ಈ ದೇಶದಲ್ಲಿ ಜನಸಾಮಾನ್ಯರಿಗೆ ಭವಿಷ್ಯವೇ ಇಲ್ಲದಂತಾಗುತ್ತದೆ. ನಮ್ಮ ಮುಂದಿನ ಪೀಳಿಗೆಗೆ ಈ ಲಾಭಬಡುಕರು ಏನನ್ನೂ ಉಳಿಸುವುದಿಲ್ಲ. ಯುಎಪಿಎ ಮತ್ತು ಎನ್‌ಐಎ ರದ್ದಾಗಲೇಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿ: ಸ್ಟಾನ್ ಸ್ವಾಮಿ ಬಂಧನ: ದಸ್ತಗಿರಿಯಾದದ್ದು ಆದಿವಾಸಿಗಳ ಕೊರಳ ದನಿ

ಪಿಯುಸಿಎಲ್‌ನ ಪ್ರೊ.ವೈ.ಜೆ.ರಾಜೇಂದ್ರ ಮಾತನಾಡಿ, “ವಿಚಾರಣೆಯಾಗಲಿ ಜಾಮೀನಾಗಲಿ ಇಲ್ಲದೆ, ಚಿಕಿತ್ಸೆಗೆ ಅವಕಾಶವನ್ನೂ ನೀಡದೆ, ಸ್ಟಾನ್ ಸ್ವಾಮಿ ಅವರನ್ನು ಅಮಾನುಷ ಹಿಂಸೆಗೆ ಈಡುಮಾಡಿ ಕೊಂದಿದ್ದರಲ್ಲಿ, ಎನ್‌ಐಎ ಅಧಿಕಾರಿಗಳು ಮತ್ತು ಸ್ಥಳೀಯ ಕೋರ್ಟುಗಳು ಮಾತ್ರವಲ್ಲ, ಹೈಕೋರ್ಟಿನಂತಹ ಉನ್ನತ ನ್ಯಾಯಾಲಯ ಕೂಡ ಭಾಗೀದಾರನಾಗಿದೆ. ಹೀಗಾಗಿ ಈ ಕುರಿತು ಉನ್ನತ ವಿಚಾರಣೆ ನಡೆದು ಎಲ್ಲ ತಪ್ಪಿತಸ್ಥರಿಗೂ ಶಿಕ್ಷೆಯಾಗಬೇಕು. ಯುಎಪಿಎ ಮತ್ತು ಎನ್‌ಐಎ ರದ್ದಾಗಬೇಕು, ಎಲ್ಲ ರಾಜಕೀಯ ಕೈದಿಗಳನ್ನೂ ಬೇಷರತ್ ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಿದರು.

“ನಮ್ಮ ಹಕ್ಕೊತ್ತಾಯಗಳು ಈಡೇರುವವರೆಗೂ ಹೋರಾಟ ರಾಜ್ಯದಾದ್ಯಂತ ನಡೆಯಬೇಕಿದೆ. ಅದಕ್ಕಾಗಿ ಇನ್ನೂ ವಿಸ್ತೃತವಾದ ಸಮಾಲೋಚನಾ ಸಭೆ ನಡೆಸಿ, ಬೃಹತ್ ಪ್ರತಿಭಟನಾ ಹೋರಾಟ ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಎಲ್ಲ ಸಮಾನ ಮನಸ್ಕ ಸಂಘಟನೆಗಳೂ ಒಗ್ಗೂಡಬೇಕಿದೆ. ಜನಸಾಮಾನ್ಯರೂ ಸ್ವಯಂಪ್ರೇರಿತವಾಗಿ ಹೋರಾಟದಲ್ಲಿ ಭಾಗವಹಿಸಬೇಕಿದೆ” ಎಂದು ಹೋರಾಟಗಾರ ಸಿರಿಮನೆ ನಾಗರಾಜ್ ಮನವಿ ಮಾಡಿದರು.

ದಲಿತ ಹಕ್ಕುಗಳ ಹೋರಾಟಗಾರ ಎಸ್. ಗೋಪಾಲ್, ಪ್ರೊ. ಎನ್.ವಿ. ನರಸಿಂಹಯ್ಯ ಮಾತನಾಡಿ ಸ್ಟಾನ್ ಸ್ವಾಮಿಯವರ ಹತ್ಯೆಯನ್ನು ಖಂಡಿಸಿ, ಯುಎಪಿಎ ಮತ್ತು ಎನ್‌ಐಎ ರದ್ದತಿಗಾಗಿ ಒತ್ತಾಯಿಸಿದರು. ಮಾನವ ಹಕ್ಕು ಕಾರ್ಯಕರ್ತ ಟಿ. ನರಸಿಂಹ ಮೂರ್ತಿ ಸ್ವಾಗತಿಸಿ ವಂದಿಸಿದರು.

ಇದನ್ನೂ ಓದಿ: ಸ್ಟ್ಯಾನ್ ಸ್ವಾಮಿ ಶ್ರದ್ಧಾಂಜಲಿ; ವಿಚಾರಣಾಧೀನ ಕೈದಿಯಾಗಿ ಭಾರತರತ್ನವೊಂದರ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...