Homeಅಂತರಾಷ್ಟ್ರೀಯಪಾಕಿಸ್ತಾನದಲ್ಲಿ ಬಸ್‌ ಸ್ಫೋಟ : ಚೀನಾ ಪ್ರಜೆಗಳು ಸೇರಿ 10 ಜನರ ದುರ್ಮರಣ

ಪಾಕಿಸ್ತಾನದಲ್ಲಿ ಬಸ್‌ ಸ್ಫೋಟ : ಚೀನಾ ಪ್ರಜೆಗಳು ಸೇರಿ 10 ಜನರ ದುರ್ಮರಣ

- Advertisement -
- Advertisement -

ಪಾಕಿಸ್ತಾನದ ಉತ್ತರ ಪ್ರಾಂತ್ಯದಲ್ಲಿ ಚೀನಾ ಪ್ರಜೆಗಳನ್ನು ಸಾಗಿಸುತ್ತಿದ್ದ ಬಸ್‌ ಗುರಿಯಾಗಿಸಿಕೊಂಡು ನಡೆದ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ 10 ಜನರು ಮೃತಪಪಟ್ಟಿದ್ದಾರೆ. ಮೃತರಲ್ಲಿ ಕನಿಷ್ಠ 6 ಜನರು ಚೀನಾ ಇಂಜನೀಯರ್‌ಗಳು ಸೇರಿದ್ದಾರೆ ಎಂದು ತಿಳಿದುಬಂದಿದೆ. ಸ್ಫೋಟದಲ್ಲಿ ಇಬ್ಬರು ಪಾಕಿಸ್ತಾನಿ ಸೈನಿಕರು ಮೃತಪಟ್ಟಿರುವುದು ದೃಢಪಟ್ಟಿದೆ.

ಪಾಕಿಸ್ತಾನದಲ್ಲಿನ ಚೀನಾ ರಾಯಭಾರ ಕಚೇರಿಯು ತನ್ನ ಪ್ರಜೆಗಳ ಸಾವಿನ ವಿಷಯವನ್ನು ದೃಢಪಡಿಸಿದ್ದು ಘಟನೆಗೆ ಸಂಬಂಧಿಸಿ ತನಿಖೆ ನಡೆಸುವಂತೆ ಆಗ್ರಹಿಸಿದೆ. ಜೊತೆಗೆ ಧಾಳಿ ನಡೆಸಿದವರನ್ನು ಬಂಧಿಸಿ ಶಿಕ್ಷೆ ವಿಧಿಸುವಂತೆ ಪಾಕಿಸ್ತಾನ ಸರ್ಕಾರವನ್ನು ಒತ್ತಾಯಿಸಿದೆ.

ದಾಸು ಆಣೆಕಟ್ಟೆ ನಿರ್ಮಾಣದಲ್ಲಿ ತೊಡಗಿದ್ದ 37 ಚೀನಾ ಇಂಜಿನೀಯರ್‌ಗಳು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದು, ರಕ್ಷಣೆಗೆ ಇಬ್ಬರು ಪಾಕಿಸ್ತಾನಿ ಯೋಧರು ಜೊತೆಯಿದ್ದರು. ಪ್ರಬಲ IED ದಾಳಿಯ ಭೀಕರತೆಗೆ ಬಸ್‌ ಸ್ಫೋಟಗೊಂಡಿದ್ದು ಇದುವರೆಗೆ ಕನಿಷ್ಠ 10 ಜನರು ಮೃತಪಟ್ಟಿದ್ದಾರೆ. ಇನ್ನು ಹಲವರು ಗಂಭೀರ ಗಾಯಗಳಾಗಿವೆ. ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗುವ ಅತಂಕ ಮನೆಮಾಡಿದೆ ಎಂದು ರಾಯಿಟರ್ಸ್‌ ವರದಿ ಮಾಡಿದೆ.

ಇದನ್ನೂ ಓದಿ: ಅಫ್ಘಾನ್‌-ಪಾಕಿಸ್ತಾನದ ಪ್ರಮುಖ ಗಡಿ ಕ್ರಾಸಿಂಗ್‌‌‌ ತಾಲಿಬಾನ್ ವಶಕ್ಕೆ

“ಸ್ಫೋಟದ ನಂತರ ಬಸ್ ಆಳವಾದ ಪ್ರಪಾತಕ್ಕೆ ಬಿದ್ದಿದ್ದು, ಬಸ್‌ನಲ್ಲಿದ್ದ ಒಬ್ಬ ಚೀನಾದ ಎಂಜಿನಿಯರ್ ಮತ್ತು ಓರ್ವ ಸೈನಿಕರಿಗಾಗಿ ಶೋಧಕಾರ್ಯ ನಡೆಯುತ್ತಿದೆ. ಪಾಕಿಸ್ತಾನ ಸೇನೆ ಮತ್ತು ಇತರ ಇಲಾಖೆಗಳು  ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿವೆ. ಗಾಯಗೊಂಡವರನ್ನು ಏರ್ ಆಂಬುಲೆನ್ಸ್ ಮೂಲಕ ರಕ್ಷಿಸಲು ಇಡೀ ಸರ್ಕಾರಿ ವ್ಯವಸ್ಥೆ ತೊಡಗಿಸಿಕೊಂಡಿದೆ. ” ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ರಾಯಿಟರ್ಸ್‌ಗೆ ತಿಳಿಸಿದ್ದಾರೆ.

ಬಸ್‌ನೊಳಗೆ ಸ್ಪೋಟಕಗಳನ್ನು ಇಡಲಾಗಿತ್ತೊ ಅಥವಾ ರಸ್ತೆ ಪಕ್ಕದಲ್ಲಿ ಸ್ಪೋಟಕಗಳನ್ನಿಟ್ಟು ಬಸ್‌ ಸ್ಫೋಟಿಸಲಾಗಿದೆಯೇ ಎಂಬ ಕುರಿತು ಇದುವರೆಗೆ ಮಾಹಿತಿ ತಿಳಿದು ಬಂದಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸ್ಫೋಟ ಸಂಭವಿಸಿದ ಪ್ರದೇಶದಲ್ಲಿ ಚೀನಾದ ಎಂಜಿನಿಯರ್‌ಗಳು ಮತ್ತು ಪಾಕಿಸ್ತಾನದ ನಿರ್ಮಾಣ ಕಾರ್ಮಿಕರು ಹಲವಾರು ವರ್ಷಗಳಿಂದ ದಾಸು ಜಲವಿದ್ಯುತ್ ಯೋಜನೆಯ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಇದುವರೆಗೆ  ಅಲ್ಲಿಯಾವುದೇ ದಾಳಿ ಸಂಭವಿಸಿರಲಿಲ್ಲ.

ಪಾಕಿಸ್ತಾನದಲ್ಲಿ ಕಳೆದ ಒಂದು ವಾರದಿಂದ ಸೇನಾಪಡೆಗಳನ್ನು ಗುರಿಯಾಗಿಸಕೊಂಡು ಭಯೋತ್ಪಾದಕ ದಾಳಿಗಳು ನಡೆಯುತ್ತಿದ್ದು ಮಂಗಳವಾರ 11 ಜನ ಪಾಕಿಸ್ತಾನ ಆರ್ಮಿಯ ಯೋಧರನ್ನು ತೆಹ್ರಿಕ್‌ ಎ ತಾಲಿಬಾನ್‌ ಉಗ್ರರು ಹತ್ಯೆಗೈದಿದ್ದರು. ಕೆಲವು ಸೈನಿಕರನ್ನು ಒತ್ತೆಯಾಳುಗಳನ್ನಾಗಿ ಉಗ್ರರು ಹೊತ್ತೊಯ್ದಿದ್ದಾರೆ ಎಂದು ವರದಿಯಾಗಿದೆ.

ಪಾಕಿಸ್ತಾನದ ಉತ್ತರ ಪ್ರಾಂತ್ಯವು ಅಪಘಾನಿಸ್ಥಾನದೊಂದಿಗೆ ಗಡಿಯನ್ನು ಹಂಚಿಕೊಂಡಿದೆ. ಅಮೆರಿಕಾ ಸೇನಾಪಡೆಗಳು ಅಪಘಾನಿಸ್ತಾನವನ್ನು ತೊರೆಯುತ್ತಿರುವುದರಿಂದ ತಾಲಿಬಾನ್‌ ಪ್ರಾಬಲ್ಯ ಹೆಚ್ಚುತ್ತಿದ್ದು ಕಳೆದೊಂದು ತಿಂಗಳಿನಿಂದ ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿಗಳು ಅಧಿಕಗೊಂಡಿವೆ.

ಇದನ್ನೂ ಓದಿ: ಪಾಕಿಸ್ತಾನ: ಉಗ್ರರಿಂದ 11 ಜನ ಸೈನಿಕರ ಹತ್ಯೆ-ಯೋಧರ ಅಪಹರಣ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...