Homeಕರ್ನಾಟಕಚಾನೆಲ್ ಚಿತ್ರಾನ್ನ : ಮೌಢ್ಯ ತುಂಬುವ ಚಾನೆಲ್ಲುಗಳು ಮತ್ತು ವಾಸ್ತು ಪೀಡೆ ಚಂದ್ರಶೇಖರ್

ಚಾನೆಲ್ ಚಿತ್ರಾನ್ನ : ಮೌಢ್ಯ ತುಂಬುವ ಚಾನೆಲ್ಲುಗಳು ಮತ್ತು ವಾಸ್ತು ಪೀಡೆ ಚಂದ್ರಶೇಖರ್

ಬಾಗಲಕೋಟೆಯ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ ಓದಿ ಕಂಟ್ರಾಕ್ಟರ್ ಆಗಿದ್ದ ಈ ಮನುಷ್ಯ, ಮನೆ ಕಟ್ಟಿಸುವಾಗ ಆ ಮೂಲೆ, ಈ ಮೂಲೆ ಎಂದು ಜನ ವಿಚಾರಿಸುವುದನ್ನು ನೋಡಿ, ಅದನ್ನೇ ಒಂದು ದಂಧೆ ಮಾಡಿಕೊಂಡಿದ್ದಾನೆ.

- Advertisement -
- Advertisement -

| ಪಿ.ಕೆ ಮಲ್ಲನಗೌಡರ್ |

ಹಳೆ ವಂಚನೆ, ಹೊಸ ವೇಷ!

‘ಸರಳ ವಾಸ್ತು’ವಿನ ಹೆಸರಲ್ಲಿ ಜನರನ್ನು ಮೌಢ್ಯಕ್ಕೆ ತಳ್ಳಿ, ಮನೆಗಳನ್ನೆಲ್ಲ ಮೂರಾಬಟ್ಟೆ ಮಾಡಿದ ವಾಸ್ತು ವಂಚಕ ಚಂದ್ರಶೇಖರ್ ‘ಗುರೂಜಿ’ ಈಗ ಹೊಸ ವೇಷ ತೊಟ್ಟು ಬಂದಿದ್ದಾನೆ. ಈಗಾತ ‘ಮಾನವಾಭಿವೃದ್ಧಿ ಗುರು’ ಅಂತೆ. ವೇಷವಷ್ಟೇ ಬದಲು, ಮತ್ತದೇ ವಂಚನೆ! ಈ ಸಲ ಸುವರ್ಣ ನ್ಯೂಸ್ ಎಂಬ ರಾಜೀವ್ ಚಂದ್ರಶೇಖರನ ಚಾನೆಲ್ಲು ಈ ವಂಚಕನ ಸಂಸ್ಥೆಯ ಪಾರ್ಟನರ್ ಎಂಬಂತೆ ಬೊಗಳೆ ಬಿಡುತ್ತ ಜನರನ್ನು ಬೋಳಿಸುತ್ತಲಿದೆ.

ಇವತ್ತು ರವಿವಾರ ಮುಂಜ್‍ಮುಂಜಾನೆ ಸುವರ್ಣ ನ್ಯೂಸ್ ಚಾನೆಲ್ಲಿನಲ್ಲಿ ಭೋಂಗು ಬಿಡುತ್ತಿದ್ದ ಸರಳ ವಾಸ್ತುವಿನ ಚಂದ್ರಶೇಖರ್ ಎಂಬ ಹೈಟೆಕ್ ವಂಚಕನನ್ನು ಕಂಡಾಗ ಆಶ್ಚರ್ಯವೇನೂ ಆಗಲಿಲ್ಲ. ಆದರೆ ಕೊಂಚ ಗಾಬರಿಯಾಗಿದ್ದು ಈತ ಹುಡುಕಿಕೊಂಡಿರುವ ಹೊಸ ವ್ಯಾಪಾರೀ ಮಾರ್ಗವನ್ನು ನೋಡಿದಾಗ….

ಈ ಕಾರ್ಯಕ್ರಮದ ಹೆಸರೇ ‘ಮಾನವಾಭಿವೃದ್ಧಿ ಗುರು’! ವಾವ್, ಹುಮನ್ ಡೆವೆಲಪ್ ಮೆಂಟ್ ಗುರು! ಕಳ್ಳ ನನ್ಮಗ ಅಂತ ಪ್ರೊಗ್ರಾಂ ನೋಡಿದರೆ, ಚಾನೆಲ್ಲಿನ ನಿರೂಪಕಿ ಮತ್ತು ಈ ವಾಸ್ತು ವಿಷ ಚಂದ್ರಶೇಖರ್ ಇಬ್ಬರೂ ಸೇರಿ ಜನರನ್ನು ಬಣ್ಣದ ಮಾತುಗಳಿಂದ ಬುಟ್ಟಿಗೆ ಹಾಕಿಕೊಳ್ಳುತ್ತಿದ್ದರು.

3 ಸ್ಟೆಪ್ಪು, 180 ದಿನ, 22 ಸಾವಿರ ಮುಂಡಾಮೋಚಿಂಗ್!

19 ವರ್ಷಗಳ ಕಾಲ ವಾಸ್ತು, ಸರಳ ವಾಸ್ತು ಹೆಸರಲ್ಲಿ ಜನರ ಮನೆ, ಕಚೇರಿಗಳಿಗೆ ಗತಿ ಕಾಣಿಸಿರುವ, ಅವರ ದೌರ್ಬಲ್ಯಗಳನ್ನು ಬಳಸಿಕೊಂಡು ಅವರಿಂದ ವಸೂಲಿ ಮಾಡಿರುವ ಚಂದ್ರಶೇಖರ್ ಈಗ ಹೊಸ ದಾರಿ ಕಂಡುಹಿಡಿದಿದ್ದಾನೆ. ಅದರ ಹೆಸರು ಮಾನವಾಭಿವೃದ್ಧಿ! ಕೇವಲ ಮೂರೇ ಹಂತಗಳಲ್ಲಿ ಈತ ರೈತರ ಸಮಸ್ಯೆಗಳನ್ನು, ನೌಕರರ ಆರ್ಥಿಕ ಸಂಕಟಗಳನ್ನು ಅಷ್ಟೇ ಅಲ್ಲ ಕ್ಯಾನ್ಸರ್ ಸೇರಿದಂತೆ ಇತರೆಲ್ಲ ರೋಗಿಗಳ ಆರೋಗ್ಯದ ಸಮಸ್ಯೆಗಳನ್ನು ಬಗೆಹರಿಸುತ್ತಾನಂತೆ!
ಸ್ಟೆಪ್ 1: ಈ ‘ಗುರೂಜಿ’ಯನ್ನು ಸಂಪರ್ಕಿಸುವುದು.
ಸ್ಟೆಪ್ 2: ಈತ ಮತ್ತು ಈತನ ತಂಡ ಹೇಳಿದ ‘ಮಾರ್ಗ’ದಲ್ಲಿ ನಡೆಯುವುದು.
ಸ್ಟೆಪ್ 3: 7ರಿಂದ 180 ದಿನಗಳಲ್ಲಿ ಎಲ್ಲ ಸಮಸ್ಯೆ ಫಿನಿಷ್! ಅಲ್ಲಿಗೆ ಮಾನವಾಭಿವೃದ್ಧಿ ಸಕ್ಸಸ್!

ವಾಸ್ತು ವಸೂಲಿಯ ದರಪಟ್ಟಿ, ಬಲು ತುಟ್ಟಿ!

ಮನೆಯ ಸಮಸ್ಯೆ ಇದ್ದರೆ 14 ಸಾವಿರ, ಸಣ್ಣಪುಟ್ಟ ವ್ಯಾಪಾರದ ಸಮಸ್ಯೆ ಇದ್ದರೆ 22 ಸಾವಿರ, ಮನೆಯ ನಕ್ಷೆಯನ್ನೇ ರೆಡಿ ಮಾಡಿ ಪರಿಹಾರ ಪಡೆಯಲು 22 ಸಾವಿರ ರೂಪಾಯಿ! ವೈಯಾರದಿಂದ ನಿರೂಪಕಿ ಹೇಳುತ್ತಾಳೆ: ಬಡವರಿಗಾಗಿ ಮಾನವಾಭಿವೃದ್ಧಿ ಅಂತೆ! ಅಂದರೆ, ಎರಡು ಕಂತುಗಳಲ್ಲಿ ಪೇ ಮಾಡಬಹುದು ಅಂತೆ! ದರಪಟ್ಟಿಯನ್ನೇ ಹಾಗೆ ವಿನ್ಯಾಸ ಮಾಡಿಯೂ ಬಿಟ್ಟಿದ್ದಾರೆ ಖದೀಮರು.

ಪ್ರೊಗ್ರಾಂ ನಡುನಡುವೆ ಸಮಸ್ಯೆಗಳಲ್ಲಿರುವ ಜನರ ಫೋನ್ ಕಾಲ್‍ಗಳು. ಅವರು ಸಮಸ್ಯೆ ಹೇಳುವ ಮೊದಲೇ, ಈಗ ನೀವು ನನನ್ನು ಸಂಪರ್ಕಿಸಿದಿರಲ್ಲ, ನನ್ನ ಎನರ್ಜಿ ನಿಮಗೆ ಪಾಸ್ ಆಗಿತು, ನಮ್ಮ ಕಚೇರಿಯವರು ನಿಮ್ಮನ್ನು ಸಂಪರ್ಕಿಸಿ ‘ಎಲ್ಲ’ ಮಾಡುತ್ತಾರೆ, ಡೋಂಟ್ ವರಿ ಎನ್ನುತ್ತಾನೆ ಚಂದ್ರ!

ಜನರಿಗೆ ಈ ಮಾರ್ಗ ಗೊತ್ತಿಲ್ಲದ್ದರಿಂದ ಅದನ್ನು ಕಲಿಸಲು ದೇವರೇ ಈ ಕಳ್ ನನ್ಮಗನಿಗೆ ಆದೇಶ ನೀಡಿದ್ದಾನಂತೆ! ಪಾಪ, ಸಣ್ಣಪುಟ್ಟ ವ್ಯಾಪಾರದಲ್ಲಿ ನಷ್ಟ ಅನುಭವಿಸಿದವರು, ಮದುವೆ ಸಮಸ್ಯೆ ಆಗಿರುವ ಹೆಣ್ಣು ಮಕ್ಕಳು, ಗಂಭೀರ ಕಾಯಿಲೆ ಇರುವವರ ಸಂಬಂಧಿಕರು ಫೋನ್ ಮಾಡಿ ಈ ಮುಠ್ಠಾಳರ ಬಲೆಗೆ ಬೀಳುತ್ತಿದ್ದರು.

ಹೀಗೆ ಇಡೀ ಜಗತ್ತಿನ ಮಾನವರ ಅಭಿವೃದ್ಧಿ ಮಾಡುವುದೇ ಚಂದ್ರನ ವಂಚಕ ಟೀಮಿನ ಗುರಿಯಂತೆ! ಬಾಗಲಕೋಟೆಯ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ ಓದಿ ಕಂಟ್ರಾಕ್ಟರ್ ಆಗಿದ್ದ ಈ ಮನುಷ್ಯ, ಮನೆ ಕಟ್ಟಿಸುವಾಗ ಆ ಮೂಲೆ, ಈ ಮೂಲೆ ಎಂದು ಜನ ವಿಚಾರಿಸುವುದನ್ನು ನೋಡಿ, ಅದನ್ನೇ ಒಂದು ದಂಧೆ ಮಾಡಿಕೊಂಡಿದ್ದಾನೆ. ಇಷ್ಟು ದಿನ ಸರಳ ವಾಸ್ತು ಹೆಸರಲ್ಲಿ ಮೋಸ ಮಾಡಿದ್ದಾಯ್ತು, ಈಗ ಆ ಹಳೆ ಮೌಢ್ಯದ ಮದ್ಯವನ್ನು ‘ಮಾನವಾಭಿವೃದ್ಧಿ’ ಎಂಬ ಹೊಸ ಸೀಶೆಯಲ್ಲಿ ತುಂಬಿ ಮಾರ್ಕೆಟಿಂಗ್ ಮಾಡುತ್ತಿದ್ದಾನೆ!

ಈತ ಜನರಿಂದ ಯಾವ ಪರಿ ಕಿತ್ತಿದ್ದಾನೆಂದರೆ, ‘ಸರಳ ಜೀವನ’ ಎಂಬ ಚಾನೆಲ್ಲನ್ನೂ ಆರಂಭಿಸಿ, ಅದರ ಮೂಲಕವೂ ತನ್ನ ದಂಧೆಯನ್ನು ಪ್ರಮೋಟ್ ಮಾಡುತ್ತಾನೆ. ಜೊತೆಗೆ ರಾಜೀವ ಚಂದ್ರಶೇಖರನ ಸುವರ್ಣ ನ್ಯೂಸ್‍ನಂತಹ ಚಾನೆಲ್ಲುಗಳೂ ಈ ಜ್ಯೋತಿಷಿ, ವಾಸ್ತು ಪಂಡಿತರೊಂದಿಗೆ ಟೈಅಪ್ ಆಗಿವೆ!

ಇದನ್ನು ಓದಿ: ಮಾಧ್ಯಮ ಭಯೋತ್ಪಾನೆ

ಪಾಸಿಟಿವ್ ಎನರ್ಜಿ, ಕಾಸ್ಮೆಟಿಕ್ ಎನರ್ಜಿ ಅಂತೆಲ್ಲ ಮರುಳು ಮಾಡುವುದು ಇವರ ಟೆಕ್ನಿಕ್. ಇದಕ್ಕೆ ಮಾರು ಹೋಗುತ್ತಿರುವವರು ನಗರವಾಸಿ ವಿದ್ಯಾವಂತ ಜನರೇ ಎಂಬುದು ವಿಪರ್ಯಾಸ! ಮೋಡದ ಮರೆಯಲ್ಲಿ ರೇಡಾರ್‍ನಿಂದ ಬಚಾವ್ ಆಗಬಹುದು ಎನ್ನುವ ಪ್ರಧಾನಮಂತ್ರಿಯ ಮಾತನ್ನೂ ನಂಬುವ ಮೂಢ ಭಕ್ತರಲ್ಲಿ ಅದೇ ‘ಸುಶಿಕ್ಷಿತ’ರೇ ಜಾಸ್ತಿ ಇದ್ದಾರಲ್ಲ?

ನಮ್ಮ ಸಮಸ್ಯೆಗಳನ್ನು ಯಾವ ವಾಸ್ತುವೂ ಪರಿಹಾರ ಮಾಡದು. ಅದಕ್ಕೆ ನಾವೇ ಮಾರ್ಗ ಹುಡುಕಿಕೊಳ್ಳಬೇಕು. ಸತತ ಪ್ರಯತ್ನ ಮತ್ತು ಕಠಿಣ ಪರಿಶ್ರಮ ಇದಕ್ಕೆ ಅಗತ್ಯ. ನಿಮಗೆ ಪರಿಹರಿಸಲು ಸಾಧ್ಯವಾಗದಿದ್ದಲ್ಲಿ ಅದಕ್ಕೆ ಸಂಬಂಧಿಸಿದ ಜ್ಞಾನ ಇರುವವರ ಬಳಿ ಸಲಹೆ ಪಡೆದೋ, ಚಿಕಿತ್ಸೆ ಪಡೆದೋ ಪರಿಹಾರ ಕಂಡುಕೊಳ್ಳಬೇಕು. ಹಾಗಾಗಿ ಈ ಮೂಢ ಮಾಧ್ಯಮಗಳು ಬಿತ್ತರಿಸುವ ಇಂತಹ ಅವೈಜ್ಞಾನಿಕ ಪ್ರೊಗ್ರಾಂಗಳನ್ನು ನಂಬಬೇಡಿ. ಇದರಿಂದ ನಿಮ್ಮ ಸಮಸ್ಯೆ ಕಡಿಮೆಯಾಗುವ ಬದಲು ಹೆಚ್ಚಾಗುವುದರಲ್ಲಿ ಸಂದೇಹವೆ ಇಲ್ಲ. ಚಂದ್ರಶೇಖರರಂತಹ ವಂಚಕರಿಂದ ದೂರವಿರಿ. ಇಲ್ಲದಿದ್ದಲ್ಲಿ ನಿಮ್ಮ ಆರ್ಥಿಕ ಸಮಸ್ಯೆ ಮತ್ತು ಮಾನಸಿಕ ಮೌಢ್ಯ ಹೆಚ್ಚಾಗುತ್ತವೆ ಅಷ್ಟೇ!

(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‌ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)

ಚಾನೆಲ್ ಚಿತ್ರಾನ್ನ ಕಾಶಿಯ ಕೊತ್ವಾಲ, ಪ್ರತ್ಯಕ್ಷರಾದ ಸಾಧುಗಳು, ಖಬರ್ ದಾರ್ ಮೆಸೇಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...